Homeಮುಖಪುಟತೆಲಂಗಾಣ ಸುರಂಗ ಕುಸಿತ; 200 ಮೀಟರ್ ಅವಶೇಷಗಳ ಹಿಂದೆ ಸಿಲುಕಿರುವ 8 ಜನರು

ತೆಲಂಗಾಣ ಸುರಂಗ ಕುಸಿತ; 200 ಮೀಟರ್ ಅವಶೇಷಗಳ ಹಿಂದೆ ಸಿಲುಕಿರುವ 8 ಜನರು

- Advertisement -
- Advertisement -

ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಶನಿವಾರ ಸುರಂಗದ ಮೇಲ್ಛಾವಣಿ ಕುಸಿದ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಯಲ್ಲಿ ಸೇರಿಕೊಂಡಿದ್ದು, ಎಂಟು ಕಾರ್ಮಿಕರು ಇನ್ನೂ ಅದರೊಳಗೆ ಸಿಲುಕಿಕೊಂಡಿದ್ದಾರೆ.

ಸೇನೆಯು ತನ್ನ ಎಂಜಿನಿಯರ್ ಟಾಸ್ಕ್ ಫೋರ್ಸ್ (ಇಟಿಎಫ್) ಅನ್ನು ರಕ್ಷಣಾ ಕಾರ್ಯಾಚರಣೆಗಾಗಿ ತ್ವರಿತವಾಗಿ ಸಜ್ಜುಗೊಳಿಸಿದೆ. ಆಧುನಿಕ ತಂತ್ರಜ್ಞಾನದೊಂದಿಗೆ ಸಜ್ಜುಗೊಂಡಿರುವ ಇಟಿಎಫ್ ಅಪಘಾತ ಸ್ಥಳದಲ್ಲಿ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (ಎಚ್‌ಎಡಿಆರ್) ಕಾರ್ಯಾಚರಣೆಗಳನ್ನು ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

200 ಮೀಟರ್‌ಗಳಷ್ಟು ಅವಶೇಷಗಳಿಂದ ತುಂಬಿದ ಪ್ಯಾಚ್ ಇದೆ ಎಂದು ರಕ್ಷಣಾ ಪಡೆ ತಿಳಿಸಿದೆ. ಈ ಅವಶೇಷಗಳನ್ನು ಸ್ವಚ್ಛಗೊಳಿಸುವವರೆಗೆ, ಸಿಲುಕಿರುವ ಕಾರ್ಮಿಕರ ನಿಖರವಾದ ಸ್ಥಳವನ್ನು ಕಂಡುಹಿಡಿಯಲು ಹಾಗೂ ಅವರನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ.

“ಸುರಂಗದ 11-13 ಕಿಮೀ ನಡುವಿನ ಪ್ಯಾಚ್‌ನಲ್ಲಿ ನೀರು ತುಂಬಿರುತ್ತದೆ, ನೀರನ್ನು ತೆಗೆದುಹಾಕುವವರೆಗೆ, ಅವಶೇಷಗಳ ಶುಚಿಗೊಳಿಸುವ ಕೆಲಸ ಪ್ರಾರಂಭವಾಗುವುದಿಲ್ಲ” ಎಂದು ಎನ್‌ಡಿಆರ್‌ಎಫ್ ಉಪ ಕಮಾಂಡರ್ ಸುಖೇಂದು ಹೇಳಿದರು.

ಶ್ರೀಶೈಲಂನಿಂದ ದೇವರಕೊಂಡ ಕಡೆಗೆ ಸಾಗುವ ಶ್ರೀಶೈಲಂ ಎಡದಂಡೆ ಕಾಲುವೆಯ 14 ಕಿ.ಮೀ ಒಳಹರಿವಿನಲ್ಲಿ ಸೋರಿಕೆಯನ್ನು ಮುಚ್ಚಲು ಬಳಸಲಾಗಿದ್ದ ಕಾಂಕ್ರೀಟ್ ಭಾಗದ ಕುಸಿತದಿಂದ ಈ ಅವಘಡ ಸಂಭವಿಸಿದೆ.

ನಾಗರ್ಕರ್ನೂಲ್‌ನಲ್ಲಿ ಅಪಘಾತ ನಡೆದ ಸ್ಥಳದಲ್ಲಿದ್ದ ತೆಲಂಗಾಣ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ ಮಾತನಾಡಿ, ಕಳೆದ ವರ್ಷ ಉತ್ತರಾಖಂಡದಲ್ಲಿ ಇದೇ ರೀತಿಯ ಘಟನೆ ನಡೆದಾಗ ರಕ್ಷಣಾ ಕಾರ್ಯಾಚರಣೆ ನಡೆಸಿದವರು ಸೇರಿದಂತೆ ರಾಜ್ಯ ಸರ್ಕಾರ ತಜ್ಞರನ್ನು ಕರೆಸಿಕೊಂಡಿದೆ ಎಂದು ಹೇಳಿದರು.

ಸಿಲುಕಿರುವ ಎಂಟು ಜನರಲ್ಲಿ ಮೂಲಸೌಕರ್ಯದ ಇಬ್ಬರು ಎಂಜಿನಿಯರ್‌ಗಳು, ಅಮೇರಿಕನ್ ಕಂಪನಿಯ ಇಬ್ಬರು ನಿರ್ವಾಹಕರು ಸೇರಿದ್ದಾರೆ. ಉಳಿದ ನಾಲ್ವರು ಕಾರ್ಮಿಕರು ಉತ್ತರ ಪ್ರದೇಶ, ಜಾರ್ಖಂಡ್, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಮೂಲದವರು.

ಪ್ರಧಾನಿ ನರೇಂದ್ರ ಮೋದಿ ಶನಿವಾರ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಕರೆ ಮಾಡಿ ಘಟನೆ ಮತ್ತು ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ವಿಚಾರಿಸಿದರು. ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಮತ್ತು ಸಿಕ್ಕಿಬಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಮರಳಿ ತರಲು ಕೇಂದ್ರದಿಂದ ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಪ್ರಧಾನಿ ಮೋದಿ ಭರವಸೆ ನೀಡಿದರು.

ಶನಿವಾರ ಬೆಳಿಗ್ಗೆ, ಸುರಂಗದ ನಿರ್ಮಾಣ ಕಾರ್ಯ ಇತ್ತೀಚೆಗೆ ಪುನರಾರಂಭವಾದ ನಂತರ ಸುಮಾರು 50 ಜನರು 200 ಮೀಟರ್ ಉದ್ದದ ಬೋರಿಂಗ್ ಯಂತ್ರದೊಂದಿಗೆ ಸುರಂಗವನ್ನು ಪ್ರವೇಶಿಸಿದರು. ಸುರಂಗದೊಳಗೆ ಕಾರ್ಮಿಕರು 14 ಕಿಲೋಮೀಟರ್ ಒಳಗೆ ಸಿಲುಕಿಕೊಂಡಿದ್ದಾರೆ.

ಅಪಘಾತದ ಸ್ಥಳದಲ್ಲಿ ದೊಡ್ಡ ಪ್ರಮಾಣದ ಮಣ್ಣು ಸಂಗ್ರಹವಾಗಿರುವುದರಿಂದ ರಕ್ಷಣಾ ತಂಡಗಳು ಡ್ರೋನ್‌ಗಳನ್ನು ಬಳಸಿಕೊಂಡು ಮುಂದೆ ಸಾಗುತ್ತಿವೆ, ಸುರಂಗದಲ್ಲಿ ಸಂಭಾವ್ಯ ಅಪಾಯಗಳನ್ನು ಗುರುತಿಸುತ್ತಿವೆ.

ಕಲ್ಲಿದ್ದಲು ಗಣಿಗಾರಿಕಾ ಘಟಕದ 19 ತಜ್ಞರ ತಂಡವು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಲು ಸ್ಥಳಕ್ಕೆ ತೆರಳಿದೆ ಎಂದು ಸರ್ಕಾರಿ ಸ್ವಾಮ್ಯದ ಸಿಂಗರೇಣಿ ಕಾಲೀರೀಸ್ ಕಂಪನಿ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎನ್ ಬಲರಾಮ್ ತಿಳಿಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಬೆಳಿಗ್ಗೆ ಎಸ್‌ಎಲ್‌ಬಿಸಿ ಸುರಂಗದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ಕುರಿತು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಕರೆ ಮಾಡಿ ಮಾತನಾಡಿದರು. ತೆಗೆದುಕೊಂಡ ಕ್ರಮಗಳು ಮತ್ತು ನಿರಂತರ ಜಾಗರೂಕತೆ, ಮೇಲ್ವಿಚಾರಣೆಯನ್ನು ಶ್ಲಾಘಿಸಿದರು; ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಲು ಯಾವುದೇ ಅವಕಾಶವನ್ನು ಬಿಡದಂತೆ ಸರ್ಕಾರಕ್ಕೆ ಮವಿ ಮಾಡಿದ್ದಾರೆ.

ಇದನ್ನೂ ಓದಿ; ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡುವುದನ್ನು ವಿರೋಧಿಸಿ ಹಿಂದುತ್ವ ಸಂಘಟನೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...