Homeಮುಖಪುಟತೆಲಂಗಾಣ | ಸುರಂಗ ಕುಸಿತ ಸ್ಥಳಕ್ಕೆ ರಕ್ಷಣಾ ತಂಡ ತಲುಪಿದರೂ, ಅವಶೇಷಗಳಡಿ ಸಿಲುಕಿದವರನ್ನು ಪತ್ತೆ ಹಚ್ಚುವಲ್ಲಿ...

ತೆಲಂಗಾಣ | ಸುರಂಗ ಕುಸಿತ ಸ್ಥಳಕ್ಕೆ ರಕ್ಷಣಾ ತಂಡ ತಲುಪಿದರೂ, ಅವಶೇಷಗಳಡಿ ಸಿಲುಕಿದವರನ್ನು ಪತ್ತೆ ಹಚ್ಚುವಲ್ಲಿ ವಿಫಲ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾಗಶಃ ಕುಸಿದಿರುವ ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗದಲ್ಲಿ ಕಳೆದ ಐದು ದಿನಗಳಿಂದ ಸಿಲುಕಿಕೊಂಡಿರುವ ಎಂಟು ಮಂದಿಯನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿರುವ ತಜ್ಞರ ತಂಡವು, ಸುರಂಗ ಕುಸಿದಲ್ಲಿಗೆ ತಲುಪಿ ಹಿಂದಿರುಗುವಲ್ಲಿ ಯಶಸ್ವಿಯಾಗಿದೆ ಎಂದು ವರದಿಯಾಗಿದೆ.

ಸುರಂಗದ ಕೊನೆ ಭಾಗಕ್ಕೆ 50 ಮೀಟರ್ ದೂರದವರೆಗೆ ರಕ್ಷಣಾ ತಂಡಗಳು ಹೋಗಿ ಬಂದಿವೆ. ಅದಕ್ಕಿಂತ ಮುಂದೆ ಕೆಸರು ಮತ್ತು ಅವಶೇಷಗಳು ಇರುವುದರಿಂದ ಹೋಗಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

“ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮತ್ತು ರ‍್ಯಾಟ್ ಮೈನರ್ಸ್ ಒಳಗೊಂಡ 20 ಸದಸ್ಯರ ತಂಡ ಸುರಂಗದ ಕೊನೆಯ ಹಂತ ತಲುಪಲು ಸಾಧ್ಯವಾಗಿದೆ. ಆದರೆ, ಅಲ್ಲಿ ಬಹಳಷ್ಟು ಅವಶೇಷಗಳು ಇವೆ. ಅಲ್ಲಿಂದ ಹೇಗೆ ಮುಂದುವರಿಯಬೇಕೆಂದು ಯೋಚಿಸುತ್ತಿದ್ದಾರೆ” ಎಂದು ನಾಗರ್ಕರ್ನೂಲ್ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಗಾಯಕ್ವಾಡ್ ತಿಳಿಸಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ಹೇಳಿದೆ.

“ನಿನ್ನೆ ರಕ್ಷಣಾ ತಂಡಗಳು ಸುರಂಗ ಕೊನೆಯಾಗುವ 40 ಮೀಟರ್ ದೂರಕ್ಕೆ ತಲುಪಿದ್ದರು. ಅಲ್ಲಿ ರಾತ್ರಿ ಹುಡುಕಾಟ ನಡೆಸಲಾಗಿದೆ ಏನು ಸಿಕ್ಕಿಲ್ಲ” ಎಂದು ಗಾಯಕ್ವಾಡ್ ಹೇಳಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮಾದರಿಗಳನ್ನು ಸಂಗ್ರಹಿಸಿರುವ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ತಂಡವು ಮಣ್ಣಿನ ಬಲ ಮತ್ತು ಇತರ ವಿಷಯದ ಬಗ್ಗೆ ಇನ್ನೂ ವರದಿಗಳನ್ನು ಸಲ್ಲಿಸಿಲ್ಲ ಎಂದಿದ್ದಾರೆ.

ಕುಸಿದ ಎಸ್‌ಎಲ್‌ಬಿಸಿ ಸುರಂಗದ ರಕ್ಷಣಾ ಕಾರ್ಯದಲ್ಲಿ ಪ್ರಗತಿ ಸಾಧಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿರುವ ಭಾರತೀಯ ಸೇನೆ, ನೌಕಾಪಡೆ, ಎನ್‌ಡಿಆರ್‌ಎಫ್, ಜಿಎಸ್‌ಐ ಮತ್ತು ಇತರ ಏಜೆನ್ಸಿಗಳ ಉನ್ನತ ತಜ್ಞರು, ಹೂಳು ಮತ್ತು ನೀರಿನ ನಿರಂತರ ಹರಿವಿನಿಂದ ರಕ್ಷಣಾ ಸಿಬ್ಬಂದಿಯ ಜೀವಕ್ಕೆ ಅಪಾಯವಿದ್ದು, ಆದರೂ, ಬುಧವಾರ ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ನೀರಾವರಿ ಸಚಿವ ಉತ್ತಮ್ ಕುಮಾರ್ ರೆಡ್ಡಿ, ಎಸ್‌ಎಲ್‌ಬಿಸಿ ಸುರಂಗಕ್ಕೆ ಒಂದೇ ಪ್ರವೇಶ ಮತ್ತು ನಿರ್ಗಮನ ಇರುವುದರಿಂದ ಇದು ವಿಶ್ವದ ಅಥವಾ ಕನಿಷ್ಠ ಭಾರತದಲ್ಲಿ ಅತ್ಯಂತ ಸಂಕೀರ್ಣ ಮತ್ತು ಕಷ್ಟಕರವಾದ ಸುರಂಗ ರಕ್ಷಣಾ ಕಾರ್ಯಾಚರಣೆ ಎಂಬುವುದಾಗಿ ತಜ್ಞರು ಬಣ್ಣಿಸಿದ್ದಾರೆ ಎಂದಿದ್ದರು.

ಸುರಂಗದೊಳಗೆ ಆಮ್ಲಜನಕವನ್ನು ನಿರಂತರವಾಗಿ ಪಂಪ್ ಮಾಡಲಾಗುತ್ತಿದೆಯಾದರೂ, ಸಿಲುಕಿರುವ ವ್ಯಕ್ತಿಗಳೊಂದಿಗೆ ಯಾವುದೇ ಸಂಪರ್ಕ ಸಾಧಿಸು ಸಾಧ್ಯವಾಗಿಲ್ಲ ಎಂದು ಸಚಿವರು ಹೇಳಿದ್ದಾರೆ.

ದೆಹಲಿ ಗಲಭೆಯ 120 ಪ್ರಕರಣಗಳಲ್ಲಿ ಶೇ. 80 ರಷ್ಟು ಆರೋಪಿಗಳು ಖುಲಾಸೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...