Homeಮುಖಪುಟ'ತೆಲಂಗಾಣದ ಬಿ.ಸಿ. ಕೋಟಾ ಹೆಚ್ಚಳ ಕ್ರಾಂತಿಕಾರಿ ಹೆಜ್ಜೆ..'; ರಾಹುಲ್- ಪ್ರಿಯಾಂಕಾ ಶ್ಲಾಘನೆ

‘ತೆಲಂಗಾಣದ ಬಿ.ಸಿ. ಕೋಟಾ ಹೆಚ್ಚಳ ಕ್ರಾಂತಿಕಾರಿ ಹೆಜ್ಜೆ..’; ರಾಹುಲ್- ಪ್ರಿಯಾಂಕಾ ಶ್ಲಾಘನೆ

- Advertisement -
- Advertisement -

ತೆಲಂಗಾಣ ಸರ್ಕಾರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಿಸುವ ಭರವಸೆಯನ್ನು ಈಡೇರಿಸಿದೆ ಎಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. “ಸಾಮಾಜಿಕ ನ್ಯಾಯದ ಕಡೆಗೆ ಒಂದು ಕ್ರಾಂತಿಕಾರಿ ಹೆಜ್ಜೆ” ಎಂದು ಇಬ್ಬರೂ ನಾಯಕರು ಕರೆದಿದ್ದಾರೆ.

ಶಿಕ್ಷಣ, ಉದ್ಯೋಗ ಮತ್ತು ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ (ಬಿ.ಸಿ.) ಮೀಸಲಾತಿಯನ್ನು ಶೇಕಡಾ 42 ಕ್ಕೆ ಹೆಚ್ಚಿಸಲು ತೆಲಂಗಾಣ ವಿಧಾನಸಭೆ ಎರಡು ಮಸೂದೆಗಳನ್ನು ಅಂಗೀಕರಿಸಿದ ಮರುದಿನ, ಅವರು ತೆಲಂಗಾಣ ಸರ್ಕಾರವನ್ನು ಅಭಿನಂದಿಸಿದರು.

ರಾಜ್ಯದಲ್ಲಿ ವೈಜ್ಞಾನಿಕ ಜಾತಿ ಜನಗಣತಿಯ ಮೂಲಕ ಪಡೆದ ಒಬಿಸಿ ಸಮುದಾಯದ ನಿಜವಾದ ಸಂಖ್ಯೆಯನ್ನು ಅಂಗೀಕರಿಸಲಾಗಿದೆ. ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಅವರ ಸಮಾನ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ವಿಧಾನಸಭೆಯಲ್ಲಿ ಶೇಕಡಾ 42 ರಷ್ಟು ಮೀಸಲಾತಿಗಾಗಿ ಮಸೂದೆಯನ್ನು ಅಂಗೀಕರಿಸಲಾಗಿದೆ ಎಂದು ರಾಹುಲ್ ಗಾಂಧಿ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಇದು ನಿಜಕ್ಕೂ ಸಾಮಾಜಿಕ ನ್ಯಾಯದ ಕಡೆಗೆ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದ್ದು, ಇದರ ಮೂಲಕ ರಾಜ್ಯದಲ್ಲಿ ಶೇ. 50 ಮೀಸಲಾತಿಯ ಗೋಡೆಯನ್ನು ಸಹ ಕೆಡವಲಾಗಿದೆ” ಎಂದು ರಾಹುಲ್ ಗಾಂಧಿ ಬರೆದಿದ್ದಾರೆ.

ಜಾತಿ ಸಮೀಕ್ಷೆಯ ಡೇಟಾವನ್ನು ಬಳಸಿಕೊಂಡು ಪ್ರತಿಯೊಂದು ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗಳನ್ನು ವಿಶ್ಲೇಷಿಸುವ ಮೂಲಕ, ಎಲ್ಲರ ಯೋಗಕ್ಷೇಮವನ್ನು ಖಚಿತಪಡಿಸುವ ನೀತಿಗಳನ್ನು ರೂಪಿಸಲಾಗುವುದು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದರು. ತೆಲಂಗಾಣ ಸರ್ಕಾರವು ಇದಕ್ಕಾಗಿ ಸ್ವತಂತ್ರ ತಜ್ಞರ ಗುಂಪನ್ನು ಸಹ ರಚಿಸಿದೆ ಎಂದು ಅವರು ಗಮನಿಸಿದರು.

“ಎಕ್ಸ್-ರೇ, ಅಂದರೆ ಜಾತಿ ಜನಗಣತಿ ಮೂಲಕ ಮಾತ್ರ ಹಿಂದುಳಿದ ಮತ್ತು ವಂಚಿತ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆಯಬಹುದು ಎಂದು ನಾನು ನಿರಂತರವಾಗಿ ಹೇಳುತ್ತಿದ್ದೇನೆ. ತೆಲಂಗಾಣವು ದಾರಿ ತೋರಿಸಿದೆ, ಇಡೀ ದೇಶಕ್ಕೆ ಬೇಕಾಗಿರುವುದು ಇದೇ. ಭಾರತದಲ್ಲಿ ಜಾತಿ ಜನಗಣತಿ ಖಂಡಿತವಾಗಿಯೂ ನಡೆಯುತ್ತದೆ, ನಾವು ಅದನ್ನು ಪೂರ್ಣಗೊಳಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಪ್ರಿಯಾಂಕಾ ಗಾಂಧಿ, ತೆಲಂಗಾಣದ ಜನರನ್ನು ಅಭಿನಂದಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಮತ್ತೊಂದು ಭರವಸೆಯನ್ನು ಈಡೇರಿಸಿದೆ ಎಂದು ಹೇಳಿದರು.

“ಹಿಂದುಳಿದ ವರ್ಗಗಳ ನಮ್ಮ ಜನರು ಈಗ ಶೇಕರಡ 42 ಮೀಸಲಾತಿಯನ್ನು ಪಡೆಯಲು ಸಾಧ್ಯವಾಗುತ್ತದೆ. ವಿಧಾನಸಭಾ ಚುನಾವಣೆಯ ಸಮಯದಲ್ಲಿ ನಾವು ನಿಮಗೆ ಈ ಭರವಸೆಯನ್ನು ನೀಡಿದ್ದೆವು, ಈಗ ನಾವು ಅದನ್ನು ಈಡೇರಿಸಿದ್ದೇವೆ. ಇದು ಸಾಮಾಜಿಕ ನ್ಯಾಯಕ್ಕಾಗಿ ತೆಗೆದುಕೊಂಡ ಬಹಳ ಮುಖ್ಯವಾದ ಹೆಜ್ಜೆಯಾಗಿದೆ, ಇದು ನಿಮ್ಮನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲೀಕರಣಗೊಳಿಸುತ್ತದೆ. ನಾವು ಯಾವಾಗಲೂ ನಿಮ್ಮೊಂದಿಗೆ, ನಿಮಗಾಗಿ ಇದ್ದೇವೆ” ಎಂದು ಅವರು ಬರೆದಿದ್ದಾರೆ.

ತೆಲಂಗಾಣ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ಶಿಕ್ಷಣ ಸಂಸ್ಥೆಗಳಲ್ಲಿ ಸ್ಥಾನಗಳು ಮತ್ತು ರಾಜ್ಯದ ಅಡಿಯಲ್ಲಿ ನೇಮಕಾತಿಗಳು ಅಥವಾ ಸೇವೆಗಳಲ್ಲಿನ ಹುದ್ದೆಗಳ ಮೀಸಲಾತಿ) ಮಸೂದೆ 2025 ಮತ್ತು ತೆಲಂಗಾಣ ಹಿಂದುಳಿದ ವರ್ಗಗಳ (ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ಥಾನಗಳ ಮೀಸಲಾತಿ) ಮಸೂದೆ 2025 ಅನ್ನು ವಿಧಾನಸಭೆ ಸೋಮವಾರ ಅಂಗೀಕರಿಸಿತು.

ಬಿಸಿ ಮೀಸಲಾತಿಯನ್ನು ಶೇಕಡಾ 42 ಕ್ಕೆ ಹೆಚ್ಚಿಸುವುದರಿಂದ ಎಲ್ಲ ವರ್ಗಗಳಿಗೆ ಒಟ್ಟಾರೆ ಕೋಟಾಕ್ಕಾಗಿ ಸುಪ್ರೀಂ ಕೋರ್ಟ್ ವಿಧಿಸಿರುವ ಶೇಕಡಾ 50 ರ ಮಿತಿಯನ್ನು ಉಲ್ಲಂಘಿಸುತ್ತದೆ, ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಕೇಂದ್ರದ ಅನುಮೋದನೆ ಅಗತ್ಯವಿದೆ.

ವಿಧಾನಸಭೆಯು ಎರಡು ಮಸೂದೆಗಳನ್ನು ಅಂಗೀಕರಿಸಿದ ನಂತರ, ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ರಾಜಕೀಯ ಪಕ್ಷಗಳ ನಾಯಕರೊಂದಿಗೆ ಅವರನ್ನು ಭೇಟಿ ಮಾಡಲು ಸಮಯ ಕೋರಿದರು.

ಕಾಂಗ್ರೆಸ್, ಬಿಜೆಪಿ, ಎಐಎಂಐಎಂ ಮತ್ತು ಸಿಪಿಐ ನಾಯಕರೊಂದಿಗೆ ಪ್ರಧಾನಿಯನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಮಯಾವಕಾಶ ಕೋರಿದರು.

ನವಭಾರತದಲ್ಲಿ ವಿಪಕ್ಷಗಳ ಧ್ವನಿಯನ್ನು ಮೌನಗೊಳಿಸಲಾಗಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...