Homeಮುಖಪುಟ'ತೆಲಂಗಾಣದ ಬಿ.ಸಿ. ಕೋಟಾ ಹೆಚ್ಚಳ ಕ್ರಾಂತಿಕಾರಿ ಹೆಜ್ಜೆ..'; ರಾಹುಲ್- ಪ್ರಿಯಾಂಕಾ ಶ್ಲಾಘನೆ

‘ತೆಲಂಗಾಣದ ಬಿ.ಸಿ. ಕೋಟಾ ಹೆಚ್ಚಳ ಕ್ರಾಂತಿಕಾರಿ ಹೆಜ್ಜೆ..’; ರಾಹುಲ್- ಪ್ರಿಯಾಂಕಾ ಶ್ಲಾಘನೆ

- Advertisement -
- Advertisement -

ತೆಲಂಗಾಣ ಸರ್ಕಾರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಿಸುವ ಭರವಸೆಯನ್ನು ಈಡೇರಿಸಿದೆ ಎಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. “ಸಾಮಾಜಿಕ ನ್ಯಾಯದ ಕಡೆಗೆ ಒಂದು ಕ್ರಾಂತಿಕಾರಿ ಹೆಜ್ಜೆ” ಎಂದು ಇಬ್ಬರೂ ನಾಯಕರು ಕರೆದಿದ್ದಾರೆ.

ಶಿಕ್ಷಣ, ಉದ್ಯೋಗ ಮತ್ತು ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ (ಬಿ.ಸಿ.) ಮೀಸಲಾತಿಯನ್ನು ಶೇಕಡಾ 42 ಕ್ಕೆ ಹೆಚ್ಚಿಸಲು ತೆಲಂಗಾಣ ವಿಧಾನಸಭೆ ಎರಡು ಮಸೂದೆಗಳನ್ನು ಅಂಗೀಕರಿಸಿದ ಮರುದಿನ, ಅವರು ತೆಲಂಗಾಣ ಸರ್ಕಾರವನ್ನು ಅಭಿನಂದಿಸಿದರು.

ರಾಜ್ಯದಲ್ಲಿ ವೈಜ್ಞಾನಿಕ ಜಾತಿ ಜನಗಣತಿಯ ಮೂಲಕ ಪಡೆದ ಒಬಿಸಿ ಸಮುದಾಯದ ನಿಜವಾದ ಸಂಖ್ಯೆಯನ್ನು ಅಂಗೀಕರಿಸಲಾಗಿದೆ. ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಅವರ ಸಮಾನ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ವಿಧಾನಸಭೆಯಲ್ಲಿ ಶೇಕಡಾ 42 ರಷ್ಟು ಮೀಸಲಾತಿಗಾಗಿ ಮಸೂದೆಯನ್ನು ಅಂಗೀಕರಿಸಲಾಗಿದೆ ಎಂದು ರಾಹುಲ್ ಗಾಂಧಿ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಇದು ನಿಜಕ್ಕೂ ಸಾಮಾಜಿಕ ನ್ಯಾಯದ ಕಡೆಗೆ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದ್ದು, ಇದರ ಮೂಲಕ ರಾಜ್ಯದಲ್ಲಿ ಶೇ. 50 ಮೀಸಲಾತಿಯ ಗೋಡೆಯನ್ನು ಸಹ ಕೆಡವಲಾಗಿದೆ” ಎಂದು ರಾಹುಲ್ ಗಾಂಧಿ ಬರೆದಿದ್ದಾರೆ.

ಜಾತಿ ಸಮೀಕ್ಷೆಯ ಡೇಟಾವನ್ನು ಬಳಸಿಕೊಂಡು ಪ್ರತಿಯೊಂದು ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗಳನ್ನು ವಿಶ್ಲೇಷಿಸುವ ಮೂಲಕ, ಎಲ್ಲರ ಯೋಗಕ್ಷೇಮವನ್ನು ಖಚಿತಪಡಿಸುವ ನೀತಿಗಳನ್ನು ರೂಪಿಸಲಾಗುವುದು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದರು. ತೆಲಂಗಾಣ ಸರ್ಕಾರವು ಇದಕ್ಕಾಗಿ ಸ್ವತಂತ್ರ ತಜ್ಞರ ಗುಂಪನ್ನು ಸಹ ರಚಿಸಿದೆ ಎಂದು ಅವರು ಗಮನಿಸಿದರು.

“ಎಕ್ಸ್-ರೇ, ಅಂದರೆ ಜಾತಿ ಜನಗಣತಿ ಮೂಲಕ ಮಾತ್ರ ಹಿಂದುಳಿದ ಮತ್ತು ವಂಚಿತ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆಯಬಹುದು ಎಂದು ನಾನು ನಿರಂತರವಾಗಿ ಹೇಳುತ್ತಿದ್ದೇನೆ. ತೆಲಂಗಾಣವು ದಾರಿ ತೋರಿಸಿದೆ, ಇಡೀ ದೇಶಕ್ಕೆ ಬೇಕಾಗಿರುವುದು ಇದೇ. ಭಾರತದಲ್ಲಿ ಜಾತಿ ಜನಗಣತಿ ಖಂಡಿತವಾಗಿಯೂ ನಡೆಯುತ್ತದೆ, ನಾವು ಅದನ್ನು ಪೂರ್ಣಗೊಳಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಪ್ರಿಯಾಂಕಾ ಗಾಂಧಿ, ತೆಲಂಗಾಣದ ಜನರನ್ನು ಅಭಿನಂದಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಮತ್ತೊಂದು ಭರವಸೆಯನ್ನು ಈಡೇರಿಸಿದೆ ಎಂದು ಹೇಳಿದರು.

“ಹಿಂದುಳಿದ ವರ್ಗಗಳ ನಮ್ಮ ಜನರು ಈಗ ಶೇಕರಡ 42 ಮೀಸಲಾತಿಯನ್ನು ಪಡೆಯಲು ಸಾಧ್ಯವಾಗುತ್ತದೆ. ವಿಧಾನಸಭಾ ಚುನಾವಣೆಯ ಸಮಯದಲ್ಲಿ ನಾವು ನಿಮಗೆ ಈ ಭರವಸೆಯನ್ನು ನೀಡಿದ್ದೆವು, ಈಗ ನಾವು ಅದನ್ನು ಈಡೇರಿಸಿದ್ದೇವೆ. ಇದು ಸಾಮಾಜಿಕ ನ್ಯಾಯಕ್ಕಾಗಿ ತೆಗೆದುಕೊಂಡ ಬಹಳ ಮುಖ್ಯವಾದ ಹೆಜ್ಜೆಯಾಗಿದೆ, ಇದು ನಿಮ್ಮನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲೀಕರಣಗೊಳಿಸುತ್ತದೆ. ನಾವು ಯಾವಾಗಲೂ ನಿಮ್ಮೊಂದಿಗೆ, ನಿಮಗಾಗಿ ಇದ್ದೇವೆ” ಎಂದು ಅವರು ಬರೆದಿದ್ದಾರೆ.

ತೆಲಂಗಾಣ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ಶಿಕ್ಷಣ ಸಂಸ್ಥೆಗಳಲ್ಲಿ ಸ್ಥಾನಗಳು ಮತ್ತು ರಾಜ್ಯದ ಅಡಿಯಲ್ಲಿ ನೇಮಕಾತಿಗಳು ಅಥವಾ ಸೇವೆಗಳಲ್ಲಿನ ಹುದ್ದೆಗಳ ಮೀಸಲಾತಿ) ಮಸೂದೆ 2025 ಮತ್ತು ತೆಲಂಗಾಣ ಹಿಂದುಳಿದ ವರ್ಗಗಳ (ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ಥಾನಗಳ ಮೀಸಲಾತಿ) ಮಸೂದೆ 2025 ಅನ್ನು ವಿಧಾನಸಭೆ ಸೋಮವಾರ ಅಂಗೀಕರಿಸಿತು.

ಬಿಸಿ ಮೀಸಲಾತಿಯನ್ನು ಶೇಕಡಾ 42 ಕ್ಕೆ ಹೆಚ್ಚಿಸುವುದರಿಂದ ಎಲ್ಲ ವರ್ಗಗಳಿಗೆ ಒಟ್ಟಾರೆ ಕೋಟಾಕ್ಕಾಗಿ ಸುಪ್ರೀಂ ಕೋರ್ಟ್ ವಿಧಿಸಿರುವ ಶೇಕಡಾ 50 ರ ಮಿತಿಯನ್ನು ಉಲ್ಲಂಘಿಸುತ್ತದೆ, ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಕೇಂದ್ರದ ಅನುಮೋದನೆ ಅಗತ್ಯವಿದೆ.

ವಿಧಾನಸಭೆಯು ಎರಡು ಮಸೂದೆಗಳನ್ನು ಅಂಗೀಕರಿಸಿದ ನಂತರ, ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ರಾಜಕೀಯ ಪಕ್ಷಗಳ ನಾಯಕರೊಂದಿಗೆ ಅವರನ್ನು ಭೇಟಿ ಮಾಡಲು ಸಮಯ ಕೋರಿದರು.

ಕಾಂಗ್ರೆಸ್, ಬಿಜೆಪಿ, ಎಐಎಂಐಎಂ ಮತ್ತು ಸಿಪಿಐ ನಾಯಕರೊಂದಿಗೆ ಪ್ರಧಾನಿಯನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಮಯಾವಕಾಶ ಕೋರಿದರು.

ನವಭಾರತದಲ್ಲಿ ವಿಪಕ್ಷಗಳ ಧ್ವನಿಯನ್ನು ಮೌನಗೊಳಿಸಲಾಗಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...