Homeಮುಖಪುಟದೂರಸಂಪರ್ಕ ಮಸೂದೆ ಅಂತರ್ಜಾಲದ ಮೇಲಿನ ಸರ್ಕಾರದ ನಿಯಂತ್ರಣ ಹೆಚ್ಚಿಸಲಿದೆ: ತಜ್ಞರ ಎಚ್ಚರಿಕೆ

ದೂರಸಂಪರ್ಕ ಮಸೂದೆ ಅಂತರ್ಜಾಲದ ಮೇಲಿನ ಸರ್ಕಾರದ ನಿಯಂತ್ರಣ ಹೆಚ್ಚಿಸಲಿದೆ: ತಜ್ಞರ ಎಚ್ಚರಿಕೆ

- Advertisement -
- Advertisement -

ಭಾರತೀಯ ದೂರ ಸಂಪರ್ಕ ಮಸೂದೆ-2023 (Telecommunication Bill-2023) ಗುರುವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗಿತ್ತು. ಚರ್ಚೆಯ ಬಳಿಕ ಗುರುವಾರ ಅನುಮೋದನೆ ಪಡೆದಿದೆ. ಈ ಮಸೂದೆಯು ಭಾರತೀಯ ಟೆಲಿಗ್ರಾಫ್ ಕಾಯ್ದೆ-1885 (Indian Telegraph Act-1885) ಮತ್ತು ಭಾರತೀಯ ವೈರ್‌ಲೆಸ್ ಟೆಲಿಗ್ರಫಿ ಕಾಯ್ದೆ- 1933(Indian Wireless Telegraphy Act-1933)ರನ್ನು ತೆಗೆದು ಹಾಕಲಾಗಿದೆ.

ಹೊಸ ಮಸೂದೆಯು ಇಂಟರ್‌ನೆಟ್ ಮೇಲಿನ ಕೇಂದ್ರ ಸರ್ಕಾರದ ಹಿಡಿತ ವಿಸ್ತರಣೆ ಮತ್ತು ದೇಶದ ಜನರ ಇಂಟರ್‌ನೆಟ್ ಸ್ವಾತಂತ್ರ್ಯದ ಮೇಲೆ ಬೀರಲಿರುವ ಪರಿಣಾಮಗಳ ಬಗ್ಗೆ ಚರ್ಚೆ ಹುಟ್ಟು ಹಾಕಿದೆ.

ಈ ಮಸೂದೆಯು ದೂರ ಸಂಪರ್ಕ ಸೇವೆಗಳ ಮೇಲೆ ವಸಾಹತುಶಾಹಿ ಯುಗದದಂತೆ ಸರ್ಕಾರ ಕಣ್ಗಾವಲಿಡಲು ಮತ್ತು ಯಾವುದೇ ಸುರಕ್ಷತೆಗಳಿಲ್ಲದೆ ಟೆಲಿಕಾಂ ಸೇವೆಗಳ ಮೇಲೆ ನಿಯಂತ್ರಣ ಸಾಧಿಸಲು ಸಹಕಾರಿಯಾಗಲಿದೆ ಎಂದು ಡಿಜಿಟಲ್ ಮತ್ತು ಮಾಧ್ಯಮ ಹಕ್ಕುಗಳ ತಜ್ಞರು ಹೇಳಿದ್ದಾರೆ. ಆದರೆ, ದೂರ ಸಂಪರ್ಕ ಉದ್ಯಮದ ಪ್ರತಿನಿಧಿಗಳು ಮಸೂದೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ.

ಈ ಮಸೂದೆಯು ದೂರಸಂಪರ್ಕ ಸೇವೆಗಳ ಬಗ್ಗೆ ನಿಗೂಢ ವ್ಯಾಖ್ಯಾನಗಳನ್ನು ಒಳಗೊಂಡಿದೆ ಎಂದು ಡಿಜಿಟಲ್ ತಜ್ಞರು ಸ್ಕ್ರಾಲ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಇದರ ಪರಿಣಾಮವಾಗಿ, ಈವರೆಗೆ ದೂರಸಂಪರ್ಕ ಸೇವೆಗಳು ಎಂದು ಸಾಂಪ್ರದಾಯಿಕವಾಗಿ ಪರಿಗಣಿತವಾಗಿರದಿದ್ದ ಇಮೇಲ್ ಹಾಗೂ ಸಂದೇಶ ವೇದಿಕೆಗಳ ಮೇಲಿನ ನಿಯಂತ್ರಣ ವಿಸ್ತರಿಸಲಿದೆ ಎಂದಿದ್ದಾರೆ.

‘ಸಂದೇಶ, ದೂರಸಂಪರ್ಕ ಹಾಗೂ ದೂರಸಂಪರ್ಕ ಸೇವೆಗಳು’ ಎಂಬ ವ್ಯಾಖ್ಯಾನದಡಿ ಇಮೇಲ್, ಕ್ಲೌಡ್ ಸೇವೆಗಳು, ಪ್ರಸರಣ ಹಾಗೂ ತಂತ್ರಾಂಶ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಭಾರತದಲ್ಲಿನ ತಾಂತ್ರಿಕ ನೀತಿಗಳ ಕುರಿತು ವರದಿ ಮಾಡುವ ಮೀಡಿಯಾನಾಮ ಎಂಬ ಡಿಜಿಟಲ್ ಮಾಧ್ಯಮ ವೇದಿಕೆಯ ಸಂಸ್ಥಾಪಕ ನಿಖಿಲ್ ಪಹ್ವಾ ಹೇಳಿದ್ದಾರೆ.

ದೂರಸಂಪರ್ಕ ಸೇವೆಗಳ ಬಳಕೆದಾರರು ಬಯೋಮೆಟ್ರಿಕ್ ಪರಿಶೀಲನೆಗೆ ಒಳಗಾಗಬೇಕಿರುವುದರಿಂದ ಅದರ ಪರಿಣಾಮವು ಎಂಡ್‌ ಟು ಎಂಡ್ ಎನ್‌ಕ್ರಿಪ್ಶನ್( end-to-end encryption) ಸೇವೆಗಳನ್ನು ಒದಗಿಸುವ ಸಂದೇಶ ವೇದಿಕೆಗಳ ಮೇಲಾಗಲಿದೆ. ಇದರಿಂದ ಬಳಕೆದಾರರ ಖಾಸಗಿತನಕ್ಕೆ ಧಕ್ಕೆಯಾಗಲಿದೆ ಎನ್ನುತ್ತಾರೆ ತಜ್ಞರು.

ಹೊಸ ಮಸೂದೆಯ ವ್ಯಾಪ್ತಿಯಲ್ಲಿ ದೂರ ಸಂಪರ್ಕ ಮತ್ತು ಇಂಟರ್‌ನೆಟ್‌ ಸೇವೆಗಳನ್ನು ಪಡೆಯಲು ಜನರು ಬಯೋಮೆಟ್ರಿಕ್ ಪರಿಶೀನೆಗೆ ಒಳಗಾಗಬೇಕಾಗುತ್ತದೆ. ಇಂಟರ್‌ನೆಟ್ ಬಳಸುವುದಕ್ಕಾಗಿ ಬಯೋಮೆಟ್ರಿಕ್ ಪರಿಶೀಲನೆಯನ್ನು ಕಡ್ಡಾಯಗೊಳಿಸುವ ಸಾಮರ್ಥ್ಯವನ್ನು ಸರ್ಕಾರ ಹೊಂದಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಇಂಟರ್‌ನೆಟ್ ಸಂಪರ್ಕವು ಭಾರತೀಯ ಸಂವಿಧಾನದಡಿಯಲ್ಲಿ ಮೂಲಭೂತ ಹಕ್ಕುಗಳ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಸ್ತುತ ಕಾನೂನಿನ ಪ್ರಕಾರ ಇಂಟರ್‌ನೆಟ್ ಬಳಕೆದಾರರು ಗೌಪ್ಯತೆ ಕಾಪಾಡಿಕೊಳ್ಳಬಹುದು. ಇಂಟರ್‌ನೆಟ್ ಬಳಕೆಗೂ ಬಯೋಮೆಟ್ರಿಕ್ ಕಡ್ಡಾಯಗೊಳಿಸುವುದು ಮತ್ತು ಬಳಕೆದಾರರಿಗೆ ಮಾಹಿತಿಯಿಲ್ಲದೆ ಇಂಟರ್‌ನೆಟ್ ಬಳಕೆಯನ್ನು ನಿಯಂತ್ರಿಸುವುದು ಕಳವಳಕಾರಿ ಎಂದು ಏಷ್ಯಾ ಪೆಸಿಫಿಕ್ ನೀತಿ ಸಲಹೆಗಾರ್ತಿ ನಮ್ರತಾ ಮಹೇಶ್ವರಿ ಹೇಳಿದ್ದಾರೆ.

ಹೊಸ ಮಸೂದೆಯನ್ನು ಹಲವರು ಹಲವು ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಕೆಲ ತಜ್ಞರು ಇದು ಬಳಕೆದಾರರ ಗೌಪ್ಯತಾ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡುತ್ತದೆ ಎಂದಿದ್ದಾರೆ. ಇನ್ನೂ ಕೆಲವರು ಹೊಸ ಮಸೂದೆ ದೂರಸಂಪರ್ಕ ಸೇವೆಗಳನ್ನು ಸುಲಭವಾಗಿ ಬಳಸಿಕೊಳ್ಳಲು ಜನರಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಟೆಲಿಕಾಂ ಸೇವೆ ಒದಗಿಸುವ ಕಾರ್ಪೋರೇಟ್ ವಲಯ ಮಸೂದೆಯನ್ನು ಒಪ್ಪಿಕೊಂಡಿರುವುದು ಜನ ಸಾಮಾನ್ಯರು ಆತಂಕಪಡುವ ವಿಚಾರ. ವ್ಯಾವಹಾರಿಕವಾಗಿ ಲಾಭವಿಲ್ಲದೆ ಯಾವುದೇ ಉದ್ಯಮ ವಲಯ ಹೊಸ ನೀತಿಯನ್ನು ಕಣ್ಣುಮುಚ್ಚಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ಕೊನೆಯದಾಗಿ ಹೇಳುವುದಾದರೆ, ದೂರ ಸಂಪರ್ಕ, ಇಂಟರ್‌ನೆಟ್‌ ಸೇವೆಗಳು ಜನರಿಗೆ ಸುಲಭವಾಗಿ ದೊರೆಯಬೇಕು ಎಂಬುವುದು ನಿಜ. ಇದು ಅಭಿವೃದ್ದಿಯ ಒಂದು ಭಾಗವೂ ಹೌದು. ಆದರೆ, ಆಳುವ ಸರ್ಕಾರ ನಮ್ಮ ದೂರ ಸಂಪರ್ಕ, ಇಂಟರ್‌ನೆಟ್ ಬಳಕೆಯ ಮೇಲೆ ಕಣ್ಣಿಡುತ್ತದೆ ಎಂದರೆ ಅಪಾಯಕಾರಿ.

ಇದನ್ನೂ ಓದಿ : ಏಕರೂಪ ನಾಗರಿಕ ಸಂಹಿತೆ: ಕರಡು ಸಮಿತಿಯ ನಿರ್ಧಾರಕ್ಕೆ ಅನುಮೋದನೆ ನೀಡಿದ ಉತ್ತರಾಖಂಡ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...