Homeಮುಖಪುಟದೂರಸಂಪರ್ಕ ಮಸೂದೆ ಅಂತರ್ಜಾಲದ ಮೇಲಿನ ಸರ್ಕಾರದ ನಿಯಂತ್ರಣ ಹೆಚ್ಚಿಸಲಿದೆ: ತಜ್ಞರ ಎಚ್ಚರಿಕೆ

ದೂರಸಂಪರ್ಕ ಮಸೂದೆ ಅಂತರ್ಜಾಲದ ಮೇಲಿನ ಸರ್ಕಾರದ ನಿಯಂತ್ರಣ ಹೆಚ್ಚಿಸಲಿದೆ: ತಜ್ಞರ ಎಚ್ಚರಿಕೆ

- Advertisement -
- Advertisement -

ಭಾರತೀಯ ದೂರ ಸಂಪರ್ಕ ಮಸೂದೆ-2023 (Telecommunication Bill-2023) ಗುರುವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗಿತ್ತು. ಚರ್ಚೆಯ ಬಳಿಕ ಗುರುವಾರ ಅನುಮೋದನೆ ಪಡೆದಿದೆ. ಈ ಮಸೂದೆಯು ಭಾರತೀಯ ಟೆಲಿಗ್ರಾಫ್ ಕಾಯ್ದೆ-1885 (Indian Telegraph Act-1885) ಮತ್ತು ಭಾರತೀಯ ವೈರ್‌ಲೆಸ್ ಟೆಲಿಗ್ರಫಿ ಕಾಯ್ದೆ- 1933(Indian Wireless Telegraphy Act-1933)ರನ್ನು ತೆಗೆದು ಹಾಕಲಾಗಿದೆ.

ಹೊಸ ಮಸೂದೆಯು ಇಂಟರ್‌ನೆಟ್ ಮೇಲಿನ ಕೇಂದ್ರ ಸರ್ಕಾರದ ಹಿಡಿತ ವಿಸ್ತರಣೆ ಮತ್ತು ದೇಶದ ಜನರ ಇಂಟರ್‌ನೆಟ್ ಸ್ವಾತಂತ್ರ್ಯದ ಮೇಲೆ ಬೀರಲಿರುವ ಪರಿಣಾಮಗಳ ಬಗ್ಗೆ ಚರ್ಚೆ ಹುಟ್ಟು ಹಾಕಿದೆ.

ಈ ಮಸೂದೆಯು ದೂರ ಸಂಪರ್ಕ ಸೇವೆಗಳ ಮೇಲೆ ವಸಾಹತುಶಾಹಿ ಯುಗದದಂತೆ ಸರ್ಕಾರ ಕಣ್ಗಾವಲಿಡಲು ಮತ್ತು ಯಾವುದೇ ಸುರಕ್ಷತೆಗಳಿಲ್ಲದೆ ಟೆಲಿಕಾಂ ಸೇವೆಗಳ ಮೇಲೆ ನಿಯಂತ್ರಣ ಸಾಧಿಸಲು ಸಹಕಾರಿಯಾಗಲಿದೆ ಎಂದು ಡಿಜಿಟಲ್ ಮತ್ತು ಮಾಧ್ಯಮ ಹಕ್ಕುಗಳ ತಜ್ಞರು ಹೇಳಿದ್ದಾರೆ. ಆದರೆ, ದೂರ ಸಂಪರ್ಕ ಉದ್ಯಮದ ಪ್ರತಿನಿಧಿಗಳು ಮಸೂದೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ.

ಈ ಮಸೂದೆಯು ದೂರಸಂಪರ್ಕ ಸೇವೆಗಳ ಬಗ್ಗೆ ನಿಗೂಢ ವ್ಯಾಖ್ಯಾನಗಳನ್ನು ಒಳಗೊಂಡಿದೆ ಎಂದು ಡಿಜಿಟಲ್ ತಜ್ಞರು ಸ್ಕ್ರಾಲ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಇದರ ಪರಿಣಾಮವಾಗಿ, ಈವರೆಗೆ ದೂರಸಂಪರ್ಕ ಸೇವೆಗಳು ಎಂದು ಸಾಂಪ್ರದಾಯಿಕವಾಗಿ ಪರಿಗಣಿತವಾಗಿರದಿದ್ದ ಇಮೇಲ್ ಹಾಗೂ ಸಂದೇಶ ವೇದಿಕೆಗಳ ಮೇಲಿನ ನಿಯಂತ್ರಣ ವಿಸ್ತರಿಸಲಿದೆ ಎಂದಿದ್ದಾರೆ.

‘ಸಂದೇಶ, ದೂರಸಂಪರ್ಕ ಹಾಗೂ ದೂರಸಂಪರ್ಕ ಸೇವೆಗಳು’ ಎಂಬ ವ್ಯಾಖ್ಯಾನದಡಿ ಇಮೇಲ್, ಕ್ಲೌಡ್ ಸೇವೆಗಳು, ಪ್ರಸರಣ ಹಾಗೂ ತಂತ್ರಾಂಶ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಭಾರತದಲ್ಲಿನ ತಾಂತ್ರಿಕ ನೀತಿಗಳ ಕುರಿತು ವರದಿ ಮಾಡುವ ಮೀಡಿಯಾನಾಮ ಎಂಬ ಡಿಜಿಟಲ್ ಮಾಧ್ಯಮ ವೇದಿಕೆಯ ಸಂಸ್ಥಾಪಕ ನಿಖಿಲ್ ಪಹ್ವಾ ಹೇಳಿದ್ದಾರೆ.

ದೂರಸಂಪರ್ಕ ಸೇವೆಗಳ ಬಳಕೆದಾರರು ಬಯೋಮೆಟ್ರಿಕ್ ಪರಿಶೀಲನೆಗೆ ಒಳಗಾಗಬೇಕಿರುವುದರಿಂದ ಅದರ ಪರಿಣಾಮವು ಎಂಡ್‌ ಟು ಎಂಡ್ ಎನ್‌ಕ್ರಿಪ್ಶನ್( end-to-end encryption) ಸೇವೆಗಳನ್ನು ಒದಗಿಸುವ ಸಂದೇಶ ವೇದಿಕೆಗಳ ಮೇಲಾಗಲಿದೆ. ಇದರಿಂದ ಬಳಕೆದಾರರ ಖಾಸಗಿತನಕ್ಕೆ ಧಕ್ಕೆಯಾಗಲಿದೆ ಎನ್ನುತ್ತಾರೆ ತಜ್ಞರು.

ಹೊಸ ಮಸೂದೆಯ ವ್ಯಾಪ್ತಿಯಲ್ಲಿ ದೂರ ಸಂಪರ್ಕ ಮತ್ತು ಇಂಟರ್‌ನೆಟ್‌ ಸೇವೆಗಳನ್ನು ಪಡೆಯಲು ಜನರು ಬಯೋಮೆಟ್ರಿಕ್ ಪರಿಶೀನೆಗೆ ಒಳಗಾಗಬೇಕಾಗುತ್ತದೆ. ಇಂಟರ್‌ನೆಟ್ ಬಳಸುವುದಕ್ಕಾಗಿ ಬಯೋಮೆಟ್ರಿಕ್ ಪರಿಶೀಲನೆಯನ್ನು ಕಡ್ಡಾಯಗೊಳಿಸುವ ಸಾಮರ್ಥ್ಯವನ್ನು ಸರ್ಕಾರ ಹೊಂದಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಇಂಟರ್‌ನೆಟ್ ಸಂಪರ್ಕವು ಭಾರತೀಯ ಸಂವಿಧಾನದಡಿಯಲ್ಲಿ ಮೂಲಭೂತ ಹಕ್ಕುಗಳ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಸ್ತುತ ಕಾನೂನಿನ ಪ್ರಕಾರ ಇಂಟರ್‌ನೆಟ್ ಬಳಕೆದಾರರು ಗೌಪ್ಯತೆ ಕಾಪಾಡಿಕೊಳ್ಳಬಹುದು. ಇಂಟರ್‌ನೆಟ್ ಬಳಕೆಗೂ ಬಯೋಮೆಟ್ರಿಕ್ ಕಡ್ಡಾಯಗೊಳಿಸುವುದು ಮತ್ತು ಬಳಕೆದಾರರಿಗೆ ಮಾಹಿತಿಯಿಲ್ಲದೆ ಇಂಟರ್‌ನೆಟ್ ಬಳಕೆಯನ್ನು ನಿಯಂತ್ರಿಸುವುದು ಕಳವಳಕಾರಿ ಎಂದು ಏಷ್ಯಾ ಪೆಸಿಫಿಕ್ ನೀತಿ ಸಲಹೆಗಾರ್ತಿ ನಮ್ರತಾ ಮಹೇಶ್ವರಿ ಹೇಳಿದ್ದಾರೆ.

ಹೊಸ ಮಸೂದೆಯನ್ನು ಹಲವರು ಹಲವು ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಕೆಲ ತಜ್ಞರು ಇದು ಬಳಕೆದಾರರ ಗೌಪ್ಯತಾ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡುತ್ತದೆ ಎಂದಿದ್ದಾರೆ. ಇನ್ನೂ ಕೆಲವರು ಹೊಸ ಮಸೂದೆ ದೂರಸಂಪರ್ಕ ಸೇವೆಗಳನ್ನು ಸುಲಭವಾಗಿ ಬಳಸಿಕೊಳ್ಳಲು ಜನರಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಟೆಲಿಕಾಂ ಸೇವೆ ಒದಗಿಸುವ ಕಾರ್ಪೋರೇಟ್ ವಲಯ ಮಸೂದೆಯನ್ನು ಒಪ್ಪಿಕೊಂಡಿರುವುದು ಜನ ಸಾಮಾನ್ಯರು ಆತಂಕಪಡುವ ವಿಚಾರ. ವ್ಯಾವಹಾರಿಕವಾಗಿ ಲಾಭವಿಲ್ಲದೆ ಯಾವುದೇ ಉದ್ಯಮ ವಲಯ ಹೊಸ ನೀತಿಯನ್ನು ಕಣ್ಣುಮುಚ್ಚಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ಕೊನೆಯದಾಗಿ ಹೇಳುವುದಾದರೆ, ದೂರ ಸಂಪರ್ಕ, ಇಂಟರ್‌ನೆಟ್‌ ಸೇವೆಗಳು ಜನರಿಗೆ ಸುಲಭವಾಗಿ ದೊರೆಯಬೇಕು ಎಂಬುವುದು ನಿಜ. ಇದು ಅಭಿವೃದ್ದಿಯ ಒಂದು ಭಾಗವೂ ಹೌದು. ಆದರೆ, ಆಳುವ ಸರ್ಕಾರ ನಮ್ಮ ದೂರ ಸಂಪರ್ಕ, ಇಂಟರ್‌ನೆಟ್ ಬಳಕೆಯ ಮೇಲೆ ಕಣ್ಣಿಡುತ್ತದೆ ಎಂದರೆ ಅಪಾಯಕಾರಿ.

ಇದನ್ನೂ ಓದಿ : ಏಕರೂಪ ನಾಗರಿಕ ಸಂಹಿತೆ: ಕರಡು ಸಮಿತಿಯ ನಿರ್ಧಾರಕ್ಕೆ ಅನುಮೋದನೆ ನೀಡಿದ ಉತ್ತರಾಖಂಡ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...