Homeಮುಖಪುಟದೂರಸಂಪರ್ಕ ಮಸೂದೆ ಅಂತರ್ಜಾಲದ ಮೇಲಿನ ಸರ್ಕಾರದ ನಿಯಂತ್ರಣ ಹೆಚ್ಚಿಸಲಿದೆ: ತಜ್ಞರ ಎಚ್ಚರಿಕೆ

ದೂರಸಂಪರ್ಕ ಮಸೂದೆ ಅಂತರ್ಜಾಲದ ಮೇಲಿನ ಸರ್ಕಾರದ ನಿಯಂತ್ರಣ ಹೆಚ್ಚಿಸಲಿದೆ: ತಜ್ಞರ ಎಚ್ಚರಿಕೆ

- Advertisement -
- Advertisement -

ಭಾರತೀಯ ದೂರ ಸಂಪರ್ಕ ಮಸೂದೆ-2023 (Telecommunication Bill-2023) ಗುರುವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗಿತ್ತು. ಚರ್ಚೆಯ ಬಳಿಕ ಗುರುವಾರ ಅನುಮೋದನೆ ಪಡೆದಿದೆ. ಈ ಮಸೂದೆಯು ಭಾರತೀಯ ಟೆಲಿಗ್ರಾಫ್ ಕಾಯ್ದೆ-1885 (Indian Telegraph Act-1885) ಮತ್ತು ಭಾರತೀಯ ವೈರ್‌ಲೆಸ್ ಟೆಲಿಗ್ರಫಿ ಕಾಯ್ದೆ- 1933(Indian Wireless Telegraphy Act-1933)ರನ್ನು ತೆಗೆದು ಹಾಕಲಾಗಿದೆ.

ಹೊಸ ಮಸೂದೆಯು ಇಂಟರ್‌ನೆಟ್ ಮೇಲಿನ ಕೇಂದ್ರ ಸರ್ಕಾರದ ಹಿಡಿತ ವಿಸ್ತರಣೆ ಮತ್ತು ದೇಶದ ಜನರ ಇಂಟರ್‌ನೆಟ್ ಸ್ವಾತಂತ್ರ್ಯದ ಮೇಲೆ ಬೀರಲಿರುವ ಪರಿಣಾಮಗಳ ಬಗ್ಗೆ ಚರ್ಚೆ ಹುಟ್ಟು ಹಾಕಿದೆ.

ಈ ಮಸೂದೆಯು ದೂರ ಸಂಪರ್ಕ ಸೇವೆಗಳ ಮೇಲೆ ವಸಾಹತುಶಾಹಿ ಯುಗದದಂತೆ ಸರ್ಕಾರ ಕಣ್ಗಾವಲಿಡಲು ಮತ್ತು ಯಾವುದೇ ಸುರಕ್ಷತೆಗಳಿಲ್ಲದೆ ಟೆಲಿಕಾಂ ಸೇವೆಗಳ ಮೇಲೆ ನಿಯಂತ್ರಣ ಸಾಧಿಸಲು ಸಹಕಾರಿಯಾಗಲಿದೆ ಎಂದು ಡಿಜಿಟಲ್ ಮತ್ತು ಮಾಧ್ಯಮ ಹಕ್ಕುಗಳ ತಜ್ಞರು ಹೇಳಿದ್ದಾರೆ. ಆದರೆ, ದೂರ ಸಂಪರ್ಕ ಉದ್ಯಮದ ಪ್ರತಿನಿಧಿಗಳು ಮಸೂದೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ.

ಈ ಮಸೂದೆಯು ದೂರಸಂಪರ್ಕ ಸೇವೆಗಳ ಬಗ್ಗೆ ನಿಗೂಢ ವ್ಯಾಖ್ಯಾನಗಳನ್ನು ಒಳಗೊಂಡಿದೆ ಎಂದು ಡಿಜಿಟಲ್ ತಜ್ಞರು ಸ್ಕ್ರಾಲ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಇದರ ಪರಿಣಾಮವಾಗಿ, ಈವರೆಗೆ ದೂರಸಂಪರ್ಕ ಸೇವೆಗಳು ಎಂದು ಸಾಂಪ್ರದಾಯಿಕವಾಗಿ ಪರಿಗಣಿತವಾಗಿರದಿದ್ದ ಇಮೇಲ್ ಹಾಗೂ ಸಂದೇಶ ವೇದಿಕೆಗಳ ಮೇಲಿನ ನಿಯಂತ್ರಣ ವಿಸ್ತರಿಸಲಿದೆ ಎಂದಿದ್ದಾರೆ.

‘ಸಂದೇಶ, ದೂರಸಂಪರ್ಕ ಹಾಗೂ ದೂರಸಂಪರ್ಕ ಸೇವೆಗಳು’ ಎಂಬ ವ್ಯಾಖ್ಯಾನದಡಿ ಇಮೇಲ್, ಕ್ಲೌಡ್ ಸೇವೆಗಳು, ಪ್ರಸರಣ ಹಾಗೂ ತಂತ್ರಾಂಶ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಭಾರತದಲ್ಲಿನ ತಾಂತ್ರಿಕ ನೀತಿಗಳ ಕುರಿತು ವರದಿ ಮಾಡುವ ಮೀಡಿಯಾನಾಮ ಎಂಬ ಡಿಜಿಟಲ್ ಮಾಧ್ಯಮ ವೇದಿಕೆಯ ಸಂಸ್ಥಾಪಕ ನಿಖಿಲ್ ಪಹ್ವಾ ಹೇಳಿದ್ದಾರೆ.

ದೂರಸಂಪರ್ಕ ಸೇವೆಗಳ ಬಳಕೆದಾರರು ಬಯೋಮೆಟ್ರಿಕ್ ಪರಿಶೀಲನೆಗೆ ಒಳಗಾಗಬೇಕಿರುವುದರಿಂದ ಅದರ ಪರಿಣಾಮವು ಎಂಡ್‌ ಟು ಎಂಡ್ ಎನ್‌ಕ್ರಿಪ್ಶನ್( end-to-end encryption) ಸೇವೆಗಳನ್ನು ಒದಗಿಸುವ ಸಂದೇಶ ವೇದಿಕೆಗಳ ಮೇಲಾಗಲಿದೆ. ಇದರಿಂದ ಬಳಕೆದಾರರ ಖಾಸಗಿತನಕ್ಕೆ ಧಕ್ಕೆಯಾಗಲಿದೆ ಎನ್ನುತ್ತಾರೆ ತಜ್ಞರು.

ಹೊಸ ಮಸೂದೆಯ ವ್ಯಾಪ್ತಿಯಲ್ಲಿ ದೂರ ಸಂಪರ್ಕ ಮತ್ತು ಇಂಟರ್‌ನೆಟ್‌ ಸೇವೆಗಳನ್ನು ಪಡೆಯಲು ಜನರು ಬಯೋಮೆಟ್ರಿಕ್ ಪರಿಶೀನೆಗೆ ಒಳಗಾಗಬೇಕಾಗುತ್ತದೆ. ಇಂಟರ್‌ನೆಟ್ ಬಳಸುವುದಕ್ಕಾಗಿ ಬಯೋಮೆಟ್ರಿಕ್ ಪರಿಶೀಲನೆಯನ್ನು ಕಡ್ಡಾಯಗೊಳಿಸುವ ಸಾಮರ್ಥ್ಯವನ್ನು ಸರ್ಕಾರ ಹೊಂದಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಇಂಟರ್‌ನೆಟ್ ಸಂಪರ್ಕವು ಭಾರತೀಯ ಸಂವಿಧಾನದಡಿಯಲ್ಲಿ ಮೂಲಭೂತ ಹಕ್ಕುಗಳ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಸ್ತುತ ಕಾನೂನಿನ ಪ್ರಕಾರ ಇಂಟರ್‌ನೆಟ್ ಬಳಕೆದಾರರು ಗೌಪ್ಯತೆ ಕಾಪಾಡಿಕೊಳ್ಳಬಹುದು. ಇಂಟರ್‌ನೆಟ್ ಬಳಕೆಗೂ ಬಯೋಮೆಟ್ರಿಕ್ ಕಡ್ಡಾಯಗೊಳಿಸುವುದು ಮತ್ತು ಬಳಕೆದಾರರಿಗೆ ಮಾಹಿತಿಯಿಲ್ಲದೆ ಇಂಟರ್‌ನೆಟ್ ಬಳಕೆಯನ್ನು ನಿಯಂತ್ರಿಸುವುದು ಕಳವಳಕಾರಿ ಎಂದು ಏಷ್ಯಾ ಪೆಸಿಫಿಕ್ ನೀತಿ ಸಲಹೆಗಾರ್ತಿ ನಮ್ರತಾ ಮಹೇಶ್ವರಿ ಹೇಳಿದ್ದಾರೆ.

ಹೊಸ ಮಸೂದೆಯನ್ನು ಹಲವರು ಹಲವು ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಕೆಲ ತಜ್ಞರು ಇದು ಬಳಕೆದಾರರ ಗೌಪ್ಯತಾ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡುತ್ತದೆ ಎಂದಿದ್ದಾರೆ. ಇನ್ನೂ ಕೆಲವರು ಹೊಸ ಮಸೂದೆ ದೂರಸಂಪರ್ಕ ಸೇವೆಗಳನ್ನು ಸುಲಭವಾಗಿ ಬಳಸಿಕೊಳ್ಳಲು ಜನರಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಟೆಲಿಕಾಂ ಸೇವೆ ಒದಗಿಸುವ ಕಾರ್ಪೋರೇಟ್ ವಲಯ ಮಸೂದೆಯನ್ನು ಒಪ್ಪಿಕೊಂಡಿರುವುದು ಜನ ಸಾಮಾನ್ಯರು ಆತಂಕಪಡುವ ವಿಚಾರ. ವ್ಯಾವಹಾರಿಕವಾಗಿ ಲಾಭವಿಲ್ಲದೆ ಯಾವುದೇ ಉದ್ಯಮ ವಲಯ ಹೊಸ ನೀತಿಯನ್ನು ಕಣ್ಣುಮುಚ್ಚಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ಕೊನೆಯದಾಗಿ ಹೇಳುವುದಾದರೆ, ದೂರ ಸಂಪರ್ಕ, ಇಂಟರ್‌ನೆಟ್‌ ಸೇವೆಗಳು ಜನರಿಗೆ ಸುಲಭವಾಗಿ ದೊರೆಯಬೇಕು ಎಂಬುವುದು ನಿಜ. ಇದು ಅಭಿವೃದ್ದಿಯ ಒಂದು ಭಾಗವೂ ಹೌದು. ಆದರೆ, ಆಳುವ ಸರ್ಕಾರ ನಮ್ಮ ದೂರ ಸಂಪರ್ಕ, ಇಂಟರ್‌ನೆಟ್ ಬಳಕೆಯ ಮೇಲೆ ಕಣ್ಣಿಡುತ್ತದೆ ಎಂದರೆ ಅಪಾಯಕಾರಿ.

ಇದನ್ನೂ ಓದಿ : ಏಕರೂಪ ನಾಗರಿಕ ಸಂಹಿತೆ: ಕರಡು ಸಮಿತಿಯ ನಿರ್ಧಾರಕ್ಕೆ ಅನುಮೋದನೆ ನೀಡಿದ ಉತ್ತರಾಖಂಡ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...