Homeಕರ್ನಾಟಕಜ್ಯೋತಿಷಿಗಳಿಗೆ ನಿಖರ ಚುನಾವಣಾ ಫಲಿತಾಂಶ ಹೇಳುವಂತೆ ಸವಾಲು ಹಾಕಿದ ವಿಚಾರವಾದಿಗಳು

ಜ್ಯೋತಿಷಿಗಳಿಗೆ ನಿಖರ ಚುನಾವಣಾ ಫಲಿತಾಂಶ ಹೇಳುವಂತೆ ಸವಾಲು ಹಾಕಿದ ವಿಚಾರವಾದಿಗಳು

"ವಿವಿಧ ಪಕ್ಷಗಳು ಗೆಲ್ಲುವ ಸ್ಥಾನ ಗಳಸಂಖ್ಯೆ ಹಾಗು ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳು ಅವುಗಳ ಸಂಖ್ಯೆಗಳ ನಿಖರ ಲೆಕ್ಕ ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ" ಎಂದು ತಿಳಿಸಬೇಕು.

- Advertisement -
ಚುನಾವಣೆಯ ಸಂದರ್ಭದಲ್ಲಿ ಯಾರ್ಯಾರೋ ಹಣ ಮಾಡಿಕೊಳ್ಳಲ್ಲಿಕ್ಕೆ ಮುಗಿಬೀಳುತ್ತಾರೆ. ಅದರಲ್ಲಿ ಜ್ಯೋತಿಷ್ಯ ಹೇಳುವವರ ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದು ಮನಸ್ಸಿಗೆ ಬಂದ ಲೆಕ್ಕ ಹೇಳಿ ಕೆಲವು ಜನರಿಂದ ಹಣ ಕೀಳುತ್ತಿದ್ದಾರೆ. ರಾಜಕಾರಣಿಗಳು ಸೇರಿದಂತೆ ಹಲವು ಜ್ಯೋತಿಷಿಗಳ ಮೊರೆ ಹೋಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಜ್ಯೋತಿಷಿಗಳು ಚುನಾವಣೆಗೂ ಮುನ್ನವೇ ಕೆಲವು ಅಂಕಿ ಸಂಖ್ಯೆಗಳನ್ನು ಹೇಳುವ ಮೂಲಕ ಪ್ರಭಾವ ಬೀರಲು, ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳಲು ಹವಣಿಸುತ್ತಾರೆ. ಇದರ ವಿರುದ್ಧ ಜನಜಾಗೃತಿ ಮೂಡಿಸಲು ಹಲವು ಪ್ರಜ್ಞಾವಂತರು ದಶಕಗಳ ಕಾಲದಿಂದಲೇ ಪ್ರಯತ್ನಿಸುತ್ತಿದ್ದಾರೆ. ಸರಿಯಾದ ಜ್ಯೋತಿಷ್ಯ ಹೇಳುವಂತೆ ಸವಾಲು ಹಾಕಿ ಬಹುಮಾನ ಘೋಷಿಸುವುದು ಸಹ ಒಂದು ವಿಧಾನ.
ಅಖಿಲ ಕರ್ನಾಟಕ ವಿಚಾರವಾದಿ ಸಂಘ (ರಿ) ಬೆಂಗಳೂರು. ಇವರಿಂದ ಚುನಾವಣಾ ಭವಿಷ್ಯ ಹೇಳುವ  ಜ್ಯೋತಿಷಿಗಳ ಭವಿಷ್ಯ ವಾಣಿಗಳ ಸತ್ಯಾ ಸತ್ಯತೆಗಳ ಬಗ್ಗೆ  ಜ್ಯೋತಿಷ್ಯ ಶಾಸ್ತ್ರ ಕಲಿತು ಭವಿಷ್ಯ ಹೇಳುವವರಿಗೆ ಒಂದು ಕೋಟಿ ರೂ ಬಹುಮಾನದ ಸವಾಲು ಹಾಕಲಾಗಿದೆ. ಪ್ರತಿ ವರ್ಷ ಪ್ರೊ ನರೇಂದ್ರ ನಾಯಕ್ ರವರು ಜ್ಯೋತಿಷ್ಯ ಹೇಳುವವರ ಬಣ್ಣ ಬಯಲು ಮಾಡುವ ಉದ್ದೇಶದಿಂದ ಈ ರೀತಿಯ ಸವಾಲುಗಳನ್ನು ಹಾಕುತ್ತಿದ್ದರು. ಈ ಬಾರಿ ಹಲವು ಜನರು ಸವಾಲು ಹಾಕಿದ್ದಾರೆ. ಈಗಾಗಲೇ ವಾಟ್ಸಾಪ್,  ಫೇಸ್ ಬುಕ್ ಗಳಲ್ಲಿ ಈ ವಿವರಗಳು ಹರಿದಾಡುತ್ತಿದ್ದು ಸಾರ್ವಜನಿಕರ ಕುತೂಹಲ ಕೆರಳಿಸಿವೆ.
ಸವಾಲುಗಳ ವಿವರ
ವಿಚಾರವಾದಿ ಸಂಘ ಬೆಂಗಳೂರು
ಒಂದು ಕೋಟಿ ರೂ ಬಹುಮಾನದ ಸವಾಲು ಇದು – “ವಿವಿಧ ಪಕ್ಷಗಳು ಗೆಲ್ಲುವ ಸ್ಥಾನ ಗಳಸಂಖ್ಯೆ ಹಾಗು ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳು ಅವುಗಳ ಸಂಖ್ಯೆಗಳ ನಿಖರ ಲೆಕ್ಕ ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ” ಎಂದು ತಿಳಿಸಬೇಕು.
ವಿವರ- 2019 ರ ಲೋಕಸಭೆ ಚುನಾವಣೆಯಲ್ಲಿ  ಚುನಾವಣಾ ಆಯೋಗದಿಂದ  ಅಂಗೀಕೃತವಾದ ರಾಜಕೀಯ ಪಕ್ಷಗಳು ಇಡೀ ಭಾರತದಲ್ಲಿ ಈಗ ಲೋಕಸಭೆಗೆ ನಡೆದ, ನಡೆಯುತ್ತಿರುವ ಚುನಾವಣೆಯ ಎಲ್ಲಾ ಒಟ್ಟು ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಪಕ್ಷಾವಾರು ಎಷ್ಟೆಷ್ಟು  ಸ್ಥಾನಗಳನ್ನು ಗೆಲ್ಲುತ್ತಾರೆ ಎಂಬ ಸಂಖ್ಯೆಗಳು  ಮತ್ತು ಅಂಗೀಕೃತ ಅಲ್ಲದ ಪಕ್ಷ ಇಲ್ಲವೇ ಪಕ್ಷೇತರ ಸ್ವತಂತ್ರ ಅಭ್ಯರ್ಥಿ ಗಳಾಗಿ ಸ್ಪರ್ಧಿಸಿದವರು  ಯಾವ ಯಾವ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ  ಎಂದು ಮುಂಚಿತ ಭವಿಷ್ಯ  ಹೇಳಬೇಕು. ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ ಎಂದು ತಿಳಿಸ ಬೇಕು.
ಈ ಸವಾಲಿಗೆ ಇರುವ ಕೆಲ ನಿಯಮಗಳು
ದೇಶದ ಯಾವ ಜ್ಯೋತಿಷಿಯಾದರೂ ಭಾಗವಹಿಸಬಹುದು. ಆದರೆ ಭಾಗವಹಿಸುವವರು ಗಣಿತ ನೈಪುಣ್ಯದ ಮೇಲೆ ಹಾಗು ಊಹೆಯ ಮೇಲೆ ಹಲವು ವಿವಿಧ ಸಂಯೋಜನೆಗಳ ಮೇಲೆ ಲೆಕ್ಕಹಾಕಿ (multiple combinations) ಮಾಡಿ ಬಹುಮುಖ ಉತ್ತರಗಳನ್ನು, ಒಬ್ಬರೇ ಬೇರೆ ಬೇರೆ ಹೆಸರಿನಿಂದ ಹಲವಾರು ಉತ್ತರಗಳನ್ನು ಕಳುಹಿಸ ಬಾರದೆಂಬ ಕಾರಣಕ್ಕಾಗಿ ಹಾಗೂ ಈ ಸ್ಪರ್ಧೆಗೆ  ಒಂದು ಗಂಭೀರತೆ ಹಾಗು ಸತ್ಯದ ದೃಢತೆಯ ಮನಸಾಕ್ಷಿಗಾಗಿ, ಕಳುಹಿಸುವ ಪ್ರತೀ ಉತ್ತರದ ಅರ್ಜಿಗೆ ತಲಾ  ಹತ್ತು ಸಾವಿರ ರೂ. ನ್ನು  ಭದ್ರತಾ ಠೇವಣಿಯಾಗಿ ನೀಡ ಬೇಕಾಗುತ್ತದೆ. ಠೇವಣಿಯನ್ನು “ವಿಚಾರವಾದಿ ಸಂಘ ಬೆಂಗಳೂರು” – ಈ ಹೆಸರಿಗೆ ಡಿ.ಡಿ. ಕಳುಹಿಸ ಬೇಕು. ಗೆದ್ದವರಿಗೆ ಮಾತ್ರ ಠೇವಣಿ ಹಣ ಹಿಂತಿರುಗಿಸ ಲಾಗುವುದು ಮತ್ತು ಜೊತೆಗೆ ಒಂದು ಕೋಟಿ ರೂ. ಬಹುಮಾನವನ್ನು  ನೀಡಲಾಗುವುದು. ಒಂದಕ್ಕಿಂತ ಹೆಚ್ಚು ಸ್ಪರ್ಧಿಗಳು ಸರಿ ಉತ್ತರ ಕೊಟ್ಟರೆ ಬಹುಮಾನ ಹಣವನ್ನು ಗೆದ್ದವರಿಗೆ ಸಮನಾಗಿ ಹಂಚಲಾಗುತ್ತದೆ.
ಮೇ 20ನೇ ತಾರೀಖಿನ ಒಳಗೆ ಈ ಕೆಳಗಿನ ಬೆಂಗಳೂರಿನ ವಿಚಾರವಾದಿಗಳ ಸಂಘದ ಕಛೇರಿಗೆ ಉತ್ತರವನ್ನು ದಾಖಲಾತಿ ಮೂಲಕ ತಲುಪಿಸತಕ್ಕದ್ದು.
ವಿಳಾಸ- ಅಖಿಲ ಕರ್ನಾಟಕ ವಿಚಾರವಾದಿ ಸಂಘ (ರಿ ) 43. ರೋಹಿಣಿ   5ನೇ ಮೇನ್ ಪದ್ಮನಾಭನಗರ, ಬೆಂಗಳೂರು- 560070. ಕಾರ್ಯದರ್ಶಿ-
ಮೊ: 9342176030
ನಾಗೇಶ್ ಅರಳಕುಪ್ಪೆ
ಸ್ಪರ್ಧೆ ಹಾಗು ಉತ್ತರ ಮತ್ತು ಭದ್ರತಾ ಠೇವಣಿಯ ಹಾಗು ಸ್ಪರ್ಧೆ ನಡೆಸುವ ಜವಾಬ್ದಾರಿಗಾಗಿ ಸಂಘವು ನೇಮಿಸಿದ ಒಂದು ತಜ್ಞರ ಸಮಿತಿಯು ನಿರ್ವಹಿಸುತ್ತದೆ. ಸಂಘದ ಕಡೆಯಿಂದ ಒಂದು ಕೋಟಿ ರೂ.ಗಳಿಗೆ ಭದ್ರತೆಗಾಗಿ ಠೇವಣಿ ಪತ್ರ, ಶೇರು ಪತ್ರ, ಸ್ಥಿರಾಸ್ತಿ ಪತ್ರ ಇವುಗಳಲ್ಲಿ ಯಾವುದನ್ನು ಸಂಘದಿಂದ  ನೇಮಕಗೊಂಡ ಅದೇ ಸಮಿತಿಯ ವಶ ಕೊಡಲಾಗುತ್ತದೆ. ಆದರೆ ಯಾವುದೇ ಸ್ಪರ್ಧಿಗಳ ಕೈಗೆ ಕೊಡಲಾಗುವುದಿಲ್ಲ. ಸ್ಪರ್ಧೆಯ ಫಲಿತಾಂಶವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಗೆದ್ದ ಸ್ಪರ್ಧಿಯನ್ನು ಮಾತ್ರ ಸಂಪರ್ಕಿಸಲಾಗುವುದು. ಚುನಾವಣಾ ಫಲಿತಾಂಶ ಪತ್ರಿಕೆಗಳಲ್ಲಿ ಬರುವುದರಿಂದ ಸ್ಪರ್ಧಿಗಳು ಏನು ಉತ್ತರ ಕೊಟ್ಟಿದ್ದಾರೆ ಅದು ಹೇಗೆ ತಪ್ಪಾಗಿದೆ ಎನ್ನುವುದು  ಸೋತವರಿಗೆ ಸ್ವತಃ ತಿಳಿಯುವುದರಿಂದ ಅವರಿಗೆ ನಾವು ಮತ್ತೆ ತಿಳಿಸಬೇಕಾಗಿಲ್ಲ ಎಂದು ವಿಚಾರವಾದಿ ಸಂಘದ ಕಾರ್ಯದರ್ಶಿಗಳಾದ ನಾಗೇಶ್ ಅರಳಕುಪ್ಪೆ ತಿಳಿಸಿದ್ದಾರೆ.
ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿರುವ ವಿಚಾರವಾದಿ ಡಾ. ನರೇಂದ್ರ ನಾಯಕರ ರವರು ಸಹ 10ಲಕ್ಷ ರೂ. ಬಹುಮಾನದ ಸವಾಲು ಒಡ್ಡಿದ್ದಾರೆ. ಈ ಬಾರಿಯ ಚುನಾವಣೆ ಸಂಬಂಧಿತ 20 ಪ್ರಶ್ನೆಗಳನ್ನು ನೀಡಿರುವ ಅವರು ಅದರಲ್ಲಿ 18 ಅಥವಾ ಅದಕ್ಕಿಂತ ಹೆಚ್ಚು ಪ್ರಶ್ನೆಗಳಿಗೆ ಸರಿ ಉತ್ತರ ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ವಿವರಗಳಿಗೆ ಅವರ ಮೊ. 9448216343 ಸಂಪರ್ಕಿಸಿರಿ‌.

ಪ್ರೊ.ನರೇಂದ್ರ ನಾಯಕ್
ಅದೇ ರೀತಿ ಡಾ‌ ಲಲಿತಾ ನಾಯಕ್ ರವರ  ರೂ10,000/ ಬಹುಮಾನ ಸವಾಲು ಹಾಕಿದ್ದು ವಿವರಗಳಿಗೆ ಅವರ  ಮೊ. 9448067193. ಸಂಪರ್ಕಿಸಿ. ಮತ್ತು ಒಂದು ಲಕ್ಷ ರೂ ಹಾಗು ಚಿನ್ನದ ಉಂಗುರ ಬಹುಮಾನ ಸವಾಲು ಹಾಕಿರುವ ಶ್ರೀ ನರಸಿಂಹಮೂರ್ತಿಯವರ ವಿವರಗಳಿಗೆ ಅವರ  ಮೊ: 9980627609 ಸಂಪರ್ಕಿಸಿಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....