Homeಕರ್ನಾಟಕಜ್ಯೋತಿಷಿಗಳಿಗೆ ನಿಖರ ಚುನಾವಣಾ ಫಲಿತಾಂಶ ಹೇಳುವಂತೆ ಸವಾಲು ಹಾಕಿದ ವಿಚಾರವಾದಿಗಳು

ಜ್ಯೋತಿಷಿಗಳಿಗೆ ನಿಖರ ಚುನಾವಣಾ ಫಲಿತಾಂಶ ಹೇಳುವಂತೆ ಸವಾಲು ಹಾಕಿದ ವಿಚಾರವಾದಿಗಳು

"ವಿವಿಧ ಪಕ್ಷಗಳು ಗೆಲ್ಲುವ ಸ್ಥಾನ ಗಳಸಂಖ್ಯೆ ಹಾಗು ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳು ಅವುಗಳ ಸಂಖ್ಯೆಗಳ ನಿಖರ ಲೆಕ್ಕ ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ" ಎಂದು ತಿಳಿಸಬೇಕು.

- Advertisement -
ಚುನಾವಣೆಯ ಸಂದರ್ಭದಲ್ಲಿ ಯಾರ್ಯಾರೋ ಹಣ ಮಾಡಿಕೊಳ್ಳಲ್ಲಿಕ್ಕೆ ಮುಗಿಬೀಳುತ್ತಾರೆ. ಅದರಲ್ಲಿ ಜ್ಯೋತಿಷ್ಯ ಹೇಳುವವರ ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದು ಮನಸ್ಸಿಗೆ ಬಂದ ಲೆಕ್ಕ ಹೇಳಿ ಕೆಲವು ಜನರಿಂದ ಹಣ ಕೀಳುತ್ತಿದ್ದಾರೆ. ರಾಜಕಾರಣಿಗಳು ಸೇರಿದಂತೆ ಹಲವು ಜ್ಯೋತಿಷಿಗಳ ಮೊರೆ ಹೋಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಜ್ಯೋತಿಷಿಗಳು ಚುನಾವಣೆಗೂ ಮುನ್ನವೇ ಕೆಲವು ಅಂಕಿ ಸಂಖ್ಯೆಗಳನ್ನು ಹೇಳುವ ಮೂಲಕ ಪ್ರಭಾವ ಬೀರಲು, ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳಲು ಹವಣಿಸುತ್ತಾರೆ. ಇದರ ವಿರುದ್ಧ ಜನಜಾಗೃತಿ ಮೂಡಿಸಲು ಹಲವು ಪ್ರಜ್ಞಾವಂತರು ದಶಕಗಳ ಕಾಲದಿಂದಲೇ ಪ್ರಯತ್ನಿಸುತ್ತಿದ್ದಾರೆ. ಸರಿಯಾದ ಜ್ಯೋತಿಷ್ಯ ಹೇಳುವಂತೆ ಸವಾಲು ಹಾಕಿ ಬಹುಮಾನ ಘೋಷಿಸುವುದು ಸಹ ಒಂದು ವಿಧಾನ.
ಅಖಿಲ ಕರ್ನಾಟಕ ವಿಚಾರವಾದಿ ಸಂಘ (ರಿ) ಬೆಂಗಳೂರು. ಇವರಿಂದ ಚುನಾವಣಾ ಭವಿಷ್ಯ ಹೇಳುವ  ಜ್ಯೋತಿಷಿಗಳ ಭವಿಷ್ಯ ವಾಣಿಗಳ ಸತ್ಯಾ ಸತ್ಯತೆಗಳ ಬಗ್ಗೆ  ಜ್ಯೋತಿಷ್ಯ ಶಾಸ್ತ್ರ ಕಲಿತು ಭವಿಷ್ಯ ಹೇಳುವವರಿಗೆ ಒಂದು ಕೋಟಿ ರೂ ಬಹುಮಾನದ ಸವಾಲು ಹಾಕಲಾಗಿದೆ. ಪ್ರತಿ ವರ್ಷ ಪ್ರೊ ನರೇಂದ್ರ ನಾಯಕ್ ರವರು ಜ್ಯೋತಿಷ್ಯ ಹೇಳುವವರ ಬಣ್ಣ ಬಯಲು ಮಾಡುವ ಉದ್ದೇಶದಿಂದ ಈ ರೀತಿಯ ಸವಾಲುಗಳನ್ನು ಹಾಕುತ್ತಿದ್ದರು. ಈ ಬಾರಿ ಹಲವು ಜನರು ಸವಾಲು ಹಾಕಿದ್ದಾರೆ. ಈಗಾಗಲೇ ವಾಟ್ಸಾಪ್,  ಫೇಸ್ ಬುಕ್ ಗಳಲ್ಲಿ ಈ ವಿವರಗಳು ಹರಿದಾಡುತ್ತಿದ್ದು ಸಾರ್ವಜನಿಕರ ಕುತೂಹಲ ಕೆರಳಿಸಿವೆ.
ಸವಾಲುಗಳ ವಿವರ
ವಿಚಾರವಾದಿ ಸಂಘ ಬೆಂಗಳೂರು
ಒಂದು ಕೋಟಿ ರೂ ಬಹುಮಾನದ ಸವಾಲು ಇದು – “ವಿವಿಧ ಪಕ್ಷಗಳು ಗೆಲ್ಲುವ ಸ್ಥಾನ ಗಳಸಂಖ್ಯೆ ಹಾಗು ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳು ಅವುಗಳ ಸಂಖ್ಯೆಗಳ ನಿಖರ ಲೆಕ್ಕ ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ” ಎಂದು ತಿಳಿಸಬೇಕು.
ವಿವರ- 2019 ರ ಲೋಕಸಭೆ ಚುನಾವಣೆಯಲ್ಲಿ  ಚುನಾವಣಾ ಆಯೋಗದಿಂದ  ಅಂಗೀಕೃತವಾದ ರಾಜಕೀಯ ಪಕ್ಷಗಳು ಇಡೀ ಭಾರತದಲ್ಲಿ ಈಗ ಲೋಕಸಭೆಗೆ ನಡೆದ, ನಡೆಯುತ್ತಿರುವ ಚುನಾವಣೆಯ ಎಲ್ಲಾ ಒಟ್ಟು ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಪಕ್ಷಾವಾರು ಎಷ್ಟೆಷ್ಟು  ಸ್ಥಾನಗಳನ್ನು ಗೆಲ್ಲುತ್ತಾರೆ ಎಂಬ ಸಂಖ್ಯೆಗಳು  ಮತ್ತು ಅಂಗೀಕೃತ ಅಲ್ಲದ ಪಕ್ಷ ಇಲ್ಲವೇ ಪಕ್ಷೇತರ ಸ್ವತಂತ್ರ ಅಭ್ಯರ್ಥಿ ಗಳಾಗಿ ಸ್ಪರ್ಧಿಸಿದವರು  ಯಾವ ಯಾವ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ  ಎಂದು ಮುಂಚಿತ ಭವಿಷ್ಯ  ಹೇಳಬೇಕು. ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ ಎಂದು ತಿಳಿಸ ಬೇಕು.
ಈ ಸವಾಲಿಗೆ ಇರುವ ಕೆಲ ನಿಯಮಗಳು
ದೇಶದ ಯಾವ ಜ್ಯೋತಿಷಿಯಾದರೂ ಭಾಗವಹಿಸಬಹುದು. ಆದರೆ ಭಾಗವಹಿಸುವವರು ಗಣಿತ ನೈಪುಣ್ಯದ ಮೇಲೆ ಹಾಗು ಊಹೆಯ ಮೇಲೆ ಹಲವು ವಿವಿಧ ಸಂಯೋಜನೆಗಳ ಮೇಲೆ ಲೆಕ್ಕಹಾಕಿ (multiple combinations) ಮಾಡಿ ಬಹುಮುಖ ಉತ್ತರಗಳನ್ನು, ಒಬ್ಬರೇ ಬೇರೆ ಬೇರೆ ಹೆಸರಿನಿಂದ ಹಲವಾರು ಉತ್ತರಗಳನ್ನು ಕಳುಹಿಸ ಬಾರದೆಂಬ ಕಾರಣಕ್ಕಾಗಿ ಹಾಗೂ ಈ ಸ್ಪರ್ಧೆಗೆ  ಒಂದು ಗಂಭೀರತೆ ಹಾಗು ಸತ್ಯದ ದೃಢತೆಯ ಮನಸಾಕ್ಷಿಗಾಗಿ, ಕಳುಹಿಸುವ ಪ್ರತೀ ಉತ್ತರದ ಅರ್ಜಿಗೆ ತಲಾ  ಹತ್ತು ಸಾವಿರ ರೂ. ನ್ನು  ಭದ್ರತಾ ಠೇವಣಿಯಾಗಿ ನೀಡ ಬೇಕಾಗುತ್ತದೆ. ಠೇವಣಿಯನ್ನು “ವಿಚಾರವಾದಿ ಸಂಘ ಬೆಂಗಳೂರು” – ಈ ಹೆಸರಿಗೆ ಡಿ.ಡಿ. ಕಳುಹಿಸ ಬೇಕು. ಗೆದ್ದವರಿಗೆ ಮಾತ್ರ ಠೇವಣಿ ಹಣ ಹಿಂತಿರುಗಿಸ ಲಾಗುವುದು ಮತ್ತು ಜೊತೆಗೆ ಒಂದು ಕೋಟಿ ರೂ. ಬಹುಮಾನವನ್ನು  ನೀಡಲಾಗುವುದು. ಒಂದಕ್ಕಿಂತ ಹೆಚ್ಚು ಸ್ಪರ್ಧಿಗಳು ಸರಿ ಉತ್ತರ ಕೊಟ್ಟರೆ ಬಹುಮಾನ ಹಣವನ್ನು ಗೆದ್ದವರಿಗೆ ಸಮನಾಗಿ ಹಂಚಲಾಗುತ್ತದೆ.
ಮೇ 20ನೇ ತಾರೀಖಿನ ಒಳಗೆ ಈ ಕೆಳಗಿನ ಬೆಂಗಳೂರಿನ ವಿಚಾರವಾದಿಗಳ ಸಂಘದ ಕಛೇರಿಗೆ ಉತ್ತರವನ್ನು ದಾಖಲಾತಿ ಮೂಲಕ ತಲುಪಿಸತಕ್ಕದ್ದು.
ವಿಳಾಸ- ಅಖಿಲ ಕರ್ನಾಟಕ ವಿಚಾರವಾದಿ ಸಂಘ (ರಿ ) 43. ರೋಹಿಣಿ   5ನೇ ಮೇನ್ ಪದ್ಮನಾಭನಗರ, ಬೆಂಗಳೂರು- 560070. ಕಾರ್ಯದರ್ಶಿ-
ಮೊ: 9342176030
ನಾಗೇಶ್ ಅರಳಕುಪ್ಪೆ
ಸ್ಪರ್ಧೆ ಹಾಗು ಉತ್ತರ ಮತ್ತು ಭದ್ರತಾ ಠೇವಣಿಯ ಹಾಗು ಸ್ಪರ್ಧೆ ನಡೆಸುವ ಜವಾಬ್ದಾರಿಗಾಗಿ ಸಂಘವು ನೇಮಿಸಿದ ಒಂದು ತಜ್ಞರ ಸಮಿತಿಯು ನಿರ್ವಹಿಸುತ್ತದೆ. ಸಂಘದ ಕಡೆಯಿಂದ ಒಂದು ಕೋಟಿ ರೂ.ಗಳಿಗೆ ಭದ್ರತೆಗಾಗಿ ಠೇವಣಿ ಪತ್ರ, ಶೇರು ಪತ್ರ, ಸ್ಥಿರಾಸ್ತಿ ಪತ್ರ ಇವುಗಳಲ್ಲಿ ಯಾವುದನ್ನು ಸಂಘದಿಂದ  ನೇಮಕಗೊಂಡ ಅದೇ ಸಮಿತಿಯ ವಶ ಕೊಡಲಾಗುತ್ತದೆ. ಆದರೆ ಯಾವುದೇ ಸ್ಪರ್ಧಿಗಳ ಕೈಗೆ ಕೊಡಲಾಗುವುದಿಲ್ಲ. ಸ್ಪರ್ಧೆಯ ಫಲಿತಾಂಶವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಗೆದ್ದ ಸ್ಪರ್ಧಿಯನ್ನು ಮಾತ್ರ ಸಂಪರ್ಕಿಸಲಾಗುವುದು. ಚುನಾವಣಾ ಫಲಿತಾಂಶ ಪತ್ರಿಕೆಗಳಲ್ಲಿ ಬರುವುದರಿಂದ ಸ್ಪರ್ಧಿಗಳು ಏನು ಉತ್ತರ ಕೊಟ್ಟಿದ್ದಾರೆ ಅದು ಹೇಗೆ ತಪ್ಪಾಗಿದೆ ಎನ್ನುವುದು  ಸೋತವರಿಗೆ ಸ್ವತಃ ತಿಳಿಯುವುದರಿಂದ ಅವರಿಗೆ ನಾವು ಮತ್ತೆ ತಿಳಿಸಬೇಕಾಗಿಲ್ಲ ಎಂದು ವಿಚಾರವಾದಿ ಸಂಘದ ಕಾರ್ಯದರ್ಶಿಗಳಾದ ನಾಗೇಶ್ ಅರಳಕುಪ್ಪೆ ತಿಳಿಸಿದ್ದಾರೆ.
ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿರುವ ವಿಚಾರವಾದಿ ಡಾ. ನರೇಂದ್ರ ನಾಯಕರ ರವರು ಸಹ 10ಲಕ್ಷ ರೂ. ಬಹುಮಾನದ ಸವಾಲು ಒಡ್ಡಿದ್ದಾರೆ. ಈ ಬಾರಿಯ ಚುನಾವಣೆ ಸಂಬಂಧಿತ 20 ಪ್ರಶ್ನೆಗಳನ್ನು ನೀಡಿರುವ ಅವರು ಅದರಲ್ಲಿ 18 ಅಥವಾ ಅದಕ್ಕಿಂತ ಹೆಚ್ಚು ಪ್ರಶ್ನೆಗಳಿಗೆ ಸರಿ ಉತ್ತರ ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ವಿವರಗಳಿಗೆ ಅವರ ಮೊ. 9448216343 ಸಂಪರ್ಕಿಸಿರಿ‌.

ಪ್ರೊ.ನರೇಂದ್ರ ನಾಯಕ್
ಅದೇ ರೀತಿ ಡಾ‌ ಲಲಿತಾ ನಾಯಕ್ ರವರ  ರೂ10,000/ ಬಹುಮಾನ ಸವಾಲು ಹಾಕಿದ್ದು ವಿವರಗಳಿಗೆ ಅವರ  ಮೊ. 9448067193. ಸಂಪರ್ಕಿಸಿ. ಮತ್ತು ಒಂದು ಲಕ್ಷ ರೂ ಹಾಗು ಚಿನ್ನದ ಉಂಗುರ ಬಹುಮಾನ ಸವಾಲು ಹಾಕಿರುವ ಶ್ರೀ ನರಸಿಂಹಮೂರ್ತಿಯವರ ವಿವರಗಳಿಗೆ ಅವರ  ಮೊ: 9980627609 ಸಂಪರ್ಕಿಸಿಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...

ಆಂಧ್ರ ಪ್ರದೇಶ| ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕರ ಬಂಧನ; ಭುಗಿಲೆದ್ದ ಪ್ರತಿಭಟನೆ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿ.ಇಡಿ ದಲಿತ ವಿದ್ಯಾರ್ಥಿನಿಯೊಬ್ಬಳು ಇಬ್ಬರು ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ್ ಕುಮಾರ್ ಮತ್ತು ಶೇಖರ್ ರೆಡ್ಡಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ...

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ...

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...