Homeಕರ್ನಾಟಕಜ್ಯೋತಿಷಿಗಳಿಗೆ ನಿಖರ ಚುನಾವಣಾ ಫಲಿತಾಂಶ ಹೇಳುವಂತೆ ಸವಾಲು ಹಾಕಿದ ವಿಚಾರವಾದಿಗಳು

ಜ್ಯೋತಿಷಿಗಳಿಗೆ ನಿಖರ ಚುನಾವಣಾ ಫಲಿತಾಂಶ ಹೇಳುವಂತೆ ಸವಾಲು ಹಾಕಿದ ವಿಚಾರವಾದಿಗಳು

"ವಿವಿಧ ಪಕ್ಷಗಳು ಗೆಲ್ಲುವ ಸ್ಥಾನ ಗಳಸಂಖ್ಯೆ ಹಾಗು ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳು ಅವುಗಳ ಸಂಖ್ಯೆಗಳ ನಿಖರ ಲೆಕ್ಕ ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ" ಎಂದು ತಿಳಿಸಬೇಕು.

- Advertisement -
ಚುನಾವಣೆಯ ಸಂದರ್ಭದಲ್ಲಿ ಯಾರ್ಯಾರೋ ಹಣ ಮಾಡಿಕೊಳ್ಳಲ್ಲಿಕ್ಕೆ ಮುಗಿಬೀಳುತ್ತಾರೆ. ಅದರಲ್ಲಿ ಜ್ಯೋತಿಷ್ಯ ಹೇಳುವವರ ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದು ಮನಸ್ಸಿಗೆ ಬಂದ ಲೆಕ್ಕ ಹೇಳಿ ಕೆಲವು ಜನರಿಂದ ಹಣ ಕೀಳುತ್ತಿದ್ದಾರೆ. ರಾಜಕಾರಣಿಗಳು ಸೇರಿದಂತೆ ಹಲವು ಜ್ಯೋತಿಷಿಗಳ ಮೊರೆ ಹೋಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಜ್ಯೋತಿಷಿಗಳು ಚುನಾವಣೆಗೂ ಮುನ್ನವೇ ಕೆಲವು ಅಂಕಿ ಸಂಖ್ಯೆಗಳನ್ನು ಹೇಳುವ ಮೂಲಕ ಪ್ರಭಾವ ಬೀರಲು, ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳಲು ಹವಣಿಸುತ್ತಾರೆ. ಇದರ ವಿರುದ್ಧ ಜನಜಾಗೃತಿ ಮೂಡಿಸಲು ಹಲವು ಪ್ರಜ್ಞಾವಂತರು ದಶಕಗಳ ಕಾಲದಿಂದಲೇ ಪ್ರಯತ್ನಿಸುತ್ತಿದ್ದಾರೆ. ಸರಿಯಾದ ಜ್ಯೋತಿಷ್ಯ ಹೇಳುವಂತೆ ಸವಾಲು ಹಾಕಿ ಬಹುಮಾನ ಘೋಷಿಸುವುದು ಸಹ ಒಂದು ವಿಧಾನ.
ಅಖಿಲ ಕರ್ನಾಟಕ ವಿಚಾರವಾದಿ ಸಂಘ (ರಿ) ಬೆಂಗಳೂರು. ಇವರಿಂದ ಚುನಾವಣಾ ಭವಿಷ್ಯ ಹೇಳುವ  ಜ್ಯೋತಿಷಿಗಳ ಭವಿಷ್ಯ ವಾಣಿಗಳ ಸತ್ಯಾ ಸತ್ಯತೆಗಳ ಬಗ್ಗೆ  ಜ್ಯೋತಿಷ್ಯ ಶಾಸ್ತ್ರ ಕಲಿತು ಭವಿಷ್ಯ ಹೇಳುವವರಿಗೆ ಒಂದು ಕೋಟಿ ರೂ ಬಹುಮಾನದ ಸವಾಲು ಹಾಕಲಾಗಿದೆ. ಪ್ರತಿ ವರ್ಷ ಪ್ರೊ ನರೇಂದ್ರ ನಾಯಕ್ ರವರು ಜ್ಯೋತಿಷ್ಯ ಹೇಳುವವರ ಬಣ್ಣ ಬಯಲು ಮಾಡುವ ಉದ್ದೇಶದಿಂದ ಈ ರೀತಿಯ ಸವಾಲುಗಳನ್ನು ಹಾಕುತ್ತಿದ್ದರು. ಈ ಬಾರಿ ಹಲವು ಜನರು ಸವಾಲು ಹಾಕಿದ್ದಾರೆ. ಈಗಾಗಲೇ ವಾಟ್ಸಾಪ್,  ಫೇಸ್ ಬುಕ್ ಗಳಲ್ಲಿ ಈ ವಿವರಗಳು ಹರಿದಾಡುತ್ತಿದ್ದು ಸಾರ್ವಜನಿಕರ ಕುತೂಹಲ ಕೆರಳಿಸಿವೆ.
ಸವಾಲುಗಳ ವಿವರ
ವಿಚಾರವಾದಿ ಸಂಘ ಬೆಂಗಳೂರು
ಒಂದು ಕೋಟಿ ರೂ ಬಹುಮಾನದ ಸವಾಲು ಇದು – “ವಿವಿಧ ಪಕ್ಷಗಳು ಗೆಲ್ಲುವ ಸ್ಥಾನ ಗಳಸಂಖ್ಯೆ ಹಾಗು ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳು ಅವುಗಳ ಸಂಖ್ಯೆಗಳ ನಿಖರ ಲೆಕ್ಕ ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ” ಎಂದು ತಿಳಿಸಬೇಕು.
ವಿವರ- 2019 ರ ಲೋಕಸಭೆ ಚುನಾವಣೆಯಲ್ಲಿ  ಚುನಾವಣಾ ಆಯೋಗದಿಂದ  ಅಂಗೀಕೃತವಾದ ರಾಜಕೀಯ ಪಕ್ಷಗಳು ಇಡೀ ಭಾರತದಲ್ಲಿ ಈಗ ಲೋಕಸಭೆಗೆ ನಡೆದ, ನಡೆಯುತ್ತಿರುವ ಚುನಾವಣೆಯ ಎಲ್ಲಾ ಒಟ್ಟು ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಪಕ್ಷಾವಾರು ಎಷ್ಟೆಷ್ಟು  ಸ್ಥಾನಗಳನ್ನು ಗೆಲ್ಲುತ್ತಾರೆ ಎಂಬ ಸಂಖ್ಯೆಗಳು  ಮತ್ತು ಅಂಗೀಕೃತ ಅಲ್ಲದ ಪಕ್ಷ ಇಲ್ಲವೇ ಪಕ್ಷೇತರ ಸ್ವತಂತ್ರ ಅಭ್ಯರ್ಥಿ ಗಳಾಗಿ ಸ್ಪರ್ಧಿಸಿದವರು  ಯಾವ ಯಾವ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ  ಎಂದು ಮುಂಚಿತ ಭವಿಷ್ಯ  ಹೇಳಬೇಕು. ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ ಎಂದು ತಿಳಿಸ ಬೇಕು.
ಈ ಸವಾಲಿಗೆ ಇರುವ ಕೆಲ ನಿಯಮಗಳು
ದೇಶದ ಯಾವ ಜ್ಯೋತಿಷಿಯಾದರೂ ಭಾಗವಹಿಸಬಹುದು. ಆದರೆ ಭಾಗವಹಿಸುವವರು ಗಣಿತ ನೈಪುಣ್ಯದ ಮೇಲೆ ಹಾಗು ಊಹೆಯ ಮೇಲೆ ಹಲವು ವಿವಿಧ ಸಂಯೋಜನೆಗಳ ಮೇಲೆ ಲೆಕ್ಕಹಾಕಿ (multiple combinations) ಮಾಡಿ ಬಹುಮುಖ ಉತ್ತರಗಳನ್ನು, ಒಬ್ಬರೇ ಬೇರೆ ಬೇರೆ ಹೆಸರಿನಿಂದ ಹಲವಾರು ಉತ್ತರಗಳನ್ನು ಕಳುಹಿಸ ಬಾರದೆಂಬ ಕಾರಣಕ್ಕಾಗಿ ಹಾಗೂ ಈ ಸ್ಪರ್ಧೆಗೆ  ಒಂದು ಗಂಭೀರತೆ ಹಾಗು ಸತ್ಯದ ದೃಢತೆಯ ಮನಸಾಕ್ಷಿಗಾಗಿ, ಕಳುಹಿಸುವ ಪ್ರತೀ ಉತ್ತರದ ಅರ್ಜಿಗೆ ತಲಾ  ಹತ್ತು ಸಾವಿರ ರೂ. ನ್ನು  ಭದ್ರತಾ ಠೇವಣಿಯಾಗಿ ನೀಡ ಬೇಕಾಗುತ್ತದೆ. ಠೇವಣಿಯನ್ನು “ವಿಚಾರವಾದಿ ಸಂಘ ಬೆಂಗಳೂರು” – ಈ ಹೆಸರಿಗೆ ಡಿ.ಡಿ. ಕಳುಹಿಸ ಬೇಕು. ಗೆದ್ದವರಿಗೆ ಮಾತ್ರ ಠೇವಣಿ ಹಣ ಹಿಂತಿರುಗಿಸ ಲಾಗುವುದು ಮತ್ತು ಜೊತೆಗೆ ಒಂದು ಕೋಟಿ ರೂ. ಬಹುಮಾನವನ್ನು  ನೀಡಲಾಗುವುದು. ಒಂದಕ್ಕಿಂತ ಹೆಚ್ಚು ಸ್ಪರ್ಧಿಗಳು ಸರಿ ಉತ್ತರ ಕೊಟ್ಟರೆ ಬಹುಮಾನ ಹಣವನ್ನು ಗೆದ್ದವರಿಗೆ ಸಮನಾಗಿ ಹಂಚಲಾಗುತ್ತದೆ.
ಮೇ 20ನೇ ತಾರೀಖಿನ ಒಳಗೆ ಈ ಕೆಳಗಿನ ಬೆಂಗಳೂರಿನ ವಿಚಾರವಾದಿಗಳ ಸಂಘದ ಕಛೇರಿಗೆ ಉತ್ತರವನ್ನು ದಾಖಲಾತಿ ಮೂಲಕ ತಲುಪಿಸತಕ್ಕದ್ದು.
ವಿಳಾಸ- ಅಖಿಲ ಕರ್ನಾಟಕ ವಿಚಾರವಾದಿ ಸಂಘ (ರಿ ) 43. ರೋಹಿಣಿ   5ನೇ ಮೇನ್ ಪದ್ಮನಾಭನಗರ, ಬೆಂಗಳೂರು- 560070. ಕಾರ್ಯದರ್ಶಿ-
ಮೊ: 9342176030
ನಾಗೇಶ್ ಅರಳಕುಪ್ಪೆ
ಸ್ಪರ್ಧೆ ಹಾಗು ಉತ್ತರ ಮತ್ತು ಭದ್ರತಾ ಠೇವಣಿಯ ಹಾಗು ಸ್ಪರ್ಧೆ ನಡೆಸುವ ಜವಾಬ್ದಾರಿಗಾಗಿ ಸಂಘವು ನೇಮಿಸಿದ ಒಂದು ತಜ್ಞರ ಸಮಿತಿಯು ನಿರ್ವಹಿಸುತ್ತದೆ. ಸಂಘದ ಕಡೆಯಿಂದ ಒಂದು ಕೋಟಿ ರೂ.ಗಳಿಗೆ ಭದ್ರತೆಗಾಗಿ ಠೇವಣಿ ಪತ್ರ, ಶೇರು ಪತ್ರ, ಸ್ಥಿರಾಸ್ತಿ ಪತ್ರ ಇವುಗಳಲ್ಲಿ ಯಾವುದನ್ನು ಸಂಘದಿಂದ  ನೇಮಕಗೊಂಡ ಅದೇ ಸಮಿತಿಯ ವಶ ಕೊಡಲಾಗುತ್ತದೆ. ಆದರೆ ಯಾವುದೇ ಸ್ಪರ್ಧಿಗಳ ಕೈಗೆ ಕೊಡಲಾಗುವುದಿಲ್ಲ. ಸ್ಪರ್ಧೆಯ ಫಲಿತಾಂಶವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಗೆದ್ದ ಸ್ಪರ್ಧಿಯನ್ನು ಮಾತ್ರ ಸಂಪರ್ಕಿಸಲಾಗುವುದು. ಚುನಾವಣಾ ಫಲಿತಾಂಶ ಪತ್ರಿಕೆಗಳಲ್ಲಿ ಬರುವುದರಿಂದ ಸ್ಪರ್ಧಿಗಳು ಏನು ಉತ್ತರ ಕೊಟ್ಟಿದ್ದಾರೆ ಅದು ಹೇಗೆ ತಪ್ಪಾಗಿದೆ ಎನ್ನುವುದು  ಸೋತವರಿಗೆ ಸ್ವತಃ ತಿಳಿಯುವುದರಿಂದ ಅವರಿಗೆ ನಾವು ಮತ್ತೆ ತಿಳಿಸಬೇಕಾಗಿಲ್ಲ ಎಂದು ವಿಚಾರವಾದಿ ಸಂಘದ ಕಾರ್ಯದರ್ಶಿಗಳಾದ ನಾಗೇಶ್ ಅರಳಕುಪ್ಪೆ ತಿಳಿಸಿದ್ದಾರೆ.
ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿರುವ ವಿಚಾರವಾದಿ ಡಾ. ನರೇಂದ್ರ ನಾಯಕರ ರವರು ಸಹ 10ಲಕ್ಷ ರೂ. ಬಹುಮಾನದ ಸವಾಲು ಒಡ್ಡಿದ್ದಾರೆ. ಈ ಬಾರಿಯ ಚುನಾವಣೆ ಸಂಬಂಧಿತ 20 ಪ್ರಶ್ನೆಗಳನ್ನು ನೀಡಿರುವ ಅವರು ಅದರಲ್ಲಿ 18 ಅಥವಾ ಅದಕ್ಕಿಂತ ಹೆಚ್ಚು ಪ್ರಶ್ನೆಗಳಿಗೆ ಸರಿ ಉತ್ತರ ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ವಿವರಗಳಿಗೆ ಅವರ ಮೊ. 9448216343 ಸಂಪರ್ಕಿಸಿರಿ‌.

ಪ್ರೊ.ನರೇಂದ್ರ ನಾಯಕ್
ಅದೇ ರೀತಿ ಡಾ‌ ಲಲಿತಾ ನಾಯಕ್ ರವರ  ರೂ10,000/ ಬಹುಮಾನ ಸವಾಲು ಹಾಕಿದ್ದು ವಿವರಗಳಿಗೆ ಅವರ  ಮೊ. 9448067193. ಸಂಪರ್ಕಿಸಿ. ಮತ್ತು ಒಂದು ಲಕ್ಷ ರೂ ಹಾಗು ಚಿನ್ನದ ಉಂಗುರ ಬಹುಮಾನ ಸವಾಲು ಹಾಕಿರುವ ಶ್ರೀ ನರಸಿಂಹಮೂರ್ತಿಯವರ ವಿವರಗಳಿಗೆ ಅವರ  ಮೊ: 9980627609 ಸಂಪರ್ಕಿಸಿಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...