ಜ್ಯೋತಿಷಿಗಳಿಗೆ ನಿಖರ ಚುನಾವಣಾ ಫಲಿತಾಂಶ ಹೇಳುವಂತೆ ಸವಾಲು ಹಾಕಿದ ವಿಚಾರವಾದಿಗಳು
"ವಿವಿಧ ಪಕ್ಷಗಳು ಗೆಲ್ಲುವ ಸ್ಥಾನ ಗಳಸಂಖ್ಯೆ ಹಾಗು ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳು ಅವುಗಳ ಸಂಖ್ಯೆಗಳ ನಿಖರ ಲೆಕ್ಕ ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ" ಎಂದು ತಿಳಿಸಬೇಕು.
ಚುನಾವಣೆಯ ಸಂದರ್ಭದಲ್ಲಿ ಯಾರ್ಯಾರೋ ಹಣ ಮಾಡಿಕೊಳ್ಳಲ್ಲಿಕ್ಕೆ ಮುಗಿಬೀಳುತ್ತಾರೆ. ಅದರಲ್ಲಿ ಜ್ಯೋತಿಷ್ಯ ಹೇಳುವವರ ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದು ಮನಸ್ಸಿಗೆ ಬಂದ ಲೆಕ್ಕ ಹೇಳಿ ಕೆಲವು ಜನರಿಂದ ಹಣ ಕೀಳುತ್ತಿದ್ದಾರೆ. ರಾಜಕಾರಣಿಗಳು ಸೇರಿದಂತೆ ಹಲವು ಜ್ಯೋತಿಷಿಗಳ ಮೊರೆ ಹೋಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಜ್ಯೋತಿಷಿಗಳು ಚುನಾವಣೆಗೂ ಮುನ್ನವೇ ಕೆಲವು ಅಂಕಿ ಸಂಖ್ಯೆಗಳನ್ನು ಹೇಳುವ ಮೂಲಕ ಪ್ರಭಾವ ಬೀರಲು, ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳಲು ಹವಣಿಸುತ್ತಾರೆ. ಇದರ ವಿರುದ್ಧ ಜನಜಾಗೃತಿ ಮೂಡಿಸಲು ಹಲವು ಪ್ರಜ್ಞಾವಂತರು ದಶಕಗಳ ಕಾಲದಿಂದಲೇ ಪ್ರಯತ್ನಿಸುತ್ತಿದ್ದಾರೆ. ಸರಿಯಾದ ಜ್ಯೋತಿಷ್ಯ ಹೇಳುವಂತೆ ಸವಾಲು ಹಾಕಿ ಬಹುಮಾನ ಘೋಷಿಸುವುದು ಸಹ ಒಂದು ವಿಧಾನ.
ಅಖಿಲ ಕರ್ನಾಟಕ ವಿಚಾರವಾದಿ ಸಂಘ (ರಿ) ಬೆಂಗಳೂರು. ಇವರಿಂದ ಚುನಾವಣಾ ಭವಿಷ್ಯ ಹೇಳುವ ಜ್ಯೋತಿಷಿಗಳ ಭವಿಷ್ಯ ವಾಣಿಗಳ ಸತ್ಯಾ ಸತ್ಯತೆಗಳ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಕಲಿತು ಭವಿಷ್ಯ ಹೇಳುವವರಿಗೆ ಒಂದು ಕೋಟಿ ರೂ ಬಹುಮಾನದ ಸವಾಲು ಹಾಕಲಾಗಿದೆ. ಪ್ರತಿ ವರ್ಷ ಪ್ರೊ ನರೇಂದ್ರ ನಾಯಕ್ ರವರು ಜ್ಯೋತಿಷ್ಯ ಹೇಳುವವರ ಬಣ್ಣ ಬಯಲು ಮಾಡುವ ಉದ್ದೇಶದಿಂದ ಈ ರೀತಿಯ ಸವಾಲುಗಳನ್ನು ಹಾಕುತ್ತಿದ್ದರು. ಈ ಬಾರಿ ಹಲವು ಜನರು ಸವಾಲು ಹಾಕಿದ್ದಾರೆ. ಈಗಾಗಲೇ ವಾಟ್ಸಾಪ್, ಫೇಸ್ ಬುಕ್ ಗಳಲ್ಲಿ ಈ ವಿವರಗಳು ಹರಿದಾಡುತ್ತಿದ್ದು ಸಾರ್ವಜನಿಕರ ಕುತೂಹಲ ಕೆರಳಿಸಿವೆ.
ಸವಾಲುಗಳ ವಿವರ
ವಿಚಾರವಾದಿ ಸಂಘ ಬೆಂಗಳೂರು
ಒಂದು ಕೋಟಿ ರೂ ಬಹುಮಾನದ ಸವಾಲು ಇದು – “ವಿವಿಧ ಪಕ್ಷಗಳು ಗೆಲ್ಲುವ ಸ್ಥಾನ ಗಳಸಂಖ್ಯೆ ಹಾಗು ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳು ಅವುಗಳ ಸಂಖ್ಯೆಗಳ ನಿಖರ ಲೆಕ್ಕ ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ” ಎಂದು ತಿಳಿಸಬೇಕು.
ವಿವರ- 2019 ರ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಅಂಗೀಕೃತವಾದ ರಾಜಕೀಯ ಪಕ್ಷಗಳು ಇಡೀ ಭಾರತದಲ್ಲಿ ಈಗ ಲೋಕಸಭೆಗೆ ನಡೆದ, ನಡೆಯುತ್ತಿರುವ ಚುನಾವಣೆಯ ಎಲ್ಲಾ ಒಟ್ಟು ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಪಕ್ಷಾವಾರು ಎಷ್ಟೆಷ್ಟು ಸ್ಥಾನಗಳನ್ನು ಗೆಲ್ಲುತ್ತಾರೆ ಎಂಬ ಸಂಖ್ಯೆಗಳು ಮತ್ತು ಅಂಗೀಕೃತ ಅಲ್ಲದ ಪಕ್ಷ ಇಲ್ಲವೇ ಪಕ್ಷೇತರ ಸ್ವತಂತ್ರ ಅಭ್ಯರ್ಥಿ ಗಳಾಗಿ ಸ್ಪರ್ಧಿಸಿದವರು ಯಾವ ಯಾವ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ ಎಂದು ಮುಂಚಿತ ಭವಿಷ್ಯ ಹೇಳಬೇಕು. ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ ಎಂದು ತಿಳಿಸ ಬೇಕು.
ಈ ಸವಾಲಿಗೆ ಇರುವ ಕೆಲ ನಿಯಮಗಳು
ದೇಶದ ಯಾವ ಜ್ಯೋತಿಷಿಯಾದರೂ ಭಾಗವಹಿಸಬಹುದು. ಆದರೆ ಭಾಗವಹಿಸುವವರು ಗಣಿತ ನೈಪುಣ್ಯದ ಮೇಲೆ ಹಾಗು ಊಹೆಯ ಮೇಲೆ ಹಲವು ವಿವಿಧ ಸಂಯೋಜನೆಗಳ ಮೇಲೆ ಲೆಕ್ಕಹಾಕಿ (multiple combinations) ಮಾಡಿ ಬಹುಮುಖ ಉತ್ತರಗಳನ್ನು, ಒಬ್ಬರೇ ಬೇರೆ ಬೇರೆ ಹೆಸರಿನಿಂದ ಹಲವಾರು ಉತ್ತರಗಳನ್ನು ಕಳುಹಿಸ ಬಾರದೆಂಬ ಕಾರಣಕ್ಕಾಗಿ ಹಾಗೂ ಈ ಸ್ಪರ್ಧೆಗೆ ಒಂದು ಗಂಭೀರತೆ ಹಾಗು ಸತ್ಯದ ದೃಢತೆಯ ಮನಸಾಕ್ಷಿಗಾಗಿ, ಕಳುಹಿಸುವ ಪ್ರತೀ ಉತ್ತರದ ಅರ್ಜಿಗೆ ತಲಾ ಹತ್ತು ಸಾವಿರ ರೂ. ನ್ನು ಭದ್ರತಾ ಠೇವಣಿಯಾಗಿ ನೀಡ ಬೇಕಾಗುತ್ತದೆ. ಠೇವಣಿಯನ್ನು “ವಿಚಾರವಾದಿ ಸಂಘ ಬೆಂಗಳೂರು” – ಈ ಹೆಸರಿಗೆ ಡಿ.ಡಿ. ಕಳುಹಿಸ ಬೇಕು. ಗೆದ್ದವರಿಗೆ ಮಾತ್ರ ಠೇವಣಿ ಹಣ ಹಿಂತಿರುಗಿಸ ಲಾಗುವುದು ಮತ್ತು ಜೊತೆಗೆ ಒಂದು ಕೋಟಿ ರೂ. ಬಹುಮಾನವನ್ನು ನೀಡಲಾಗುವುದು. ಒಂದಕ್ಕಿಂತ ಹೆಚ್ಚು ಸ್ಪರ್ಧಿಗಳು ಸರಿ ಉತ್ತರ ಕೊಟ್ಟರೆ ಬಹುಮಾನ ಹಣವನ್ನು ಗೆದ್ದವರಿಗೆ ಸಮನಾಗಿ ಹಂಚಲಾಗುತ್ತದೆ.
ಮೇ 20ನೇ ತಾರೀಖಿನ ಒಳಗೆ ಈ ಕೆಳಗಿನ ಬೆಂಗಳೂರಿನ ವಿಚಾರವಾದಿಗಳ ಸಂಘದ ಕಛೇರಿಗೆ ಉತ್ತರವನ್ನು ದಾಖಲಾತಿ ಮೂಲಕ ತಲುಪಿಸತಕ್ಕದ್ದು.
ವಿಳಾಸ- ಅಖಿಲ ಕರ್ನಾಟಕ ವಿಚಾರವಾದಿ ಸಂಘ (ರಿ ) 43. ರೋಹಿಣಿ 5ನೇ ಮೇನ್ ಪದ್ಮನಾಭನಗರ, ಬೆಂಗಳೂರು- 560070. ಕಾರ್ಯದರ್ಶಿ-
ಮೊ: 9342176030
ನಾಗೇಶ್ ಅರಳಕುಪ್ಪೆ
ಸ್ಪರ್ಧೆ ಹಾಗು ಉತ್ತರ ಮತ್ತು ಭದ್ರತಾ ಠೇವಣಿಯ ಹಾಗು ಸ್ಪರ್ಧೆ ನಡೆಸುವ ಜವಾಬ್ದಾರಿಗಾಗಿ ಸಂಘವು ನೇಮಿಸಿದ ಒಂದು ತಜ್ಞರ ಸಮಿತಿಯು ನಿರ್ವಹಿಸುತ್ತದೆ. ಸಂಘದ ಕಡೆಯಿಂದ ಒಂದು ಕೋಟಿ ರೂ.ಗಳಿಗೆ ಭದ್ರತೆಗಾಗಿ ಠೇವಣಿ ಪತ್ರ, ಶೇರು ಪತ್ರ, ಸ್ಥಿರಾಸ್ತಿ ಪತ್ರ ಇವುಗಳಲ್ಲಿ ಯಾವುದನ್ನು ಸಂಘದಿಂದ ನೇಮಕಗೊಂಡ ಅದೇ ಸಮಿತಿಯ ವಶ ಕೊಡಲಾಗುತ್ತದೆ. ಆದರೆ ಯಾವುದೇ ಸ್ಪರ್ಧಿಗಳ ಕೈಗೆ ಕೊಡಲಾಗುವುದಿಲ್ಲ. ಸ್ಪರ್ಧೆಯ ಫಲಿತಾಂಶವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಗೆದ್ದ ಸ್ಪರ್ಧಿಯನ್ನು ಮಾತ್ರ ಸಂಪರ್ಕಿಸಲಾಗುವುದು. ಚುನಾವಣಾ ಫಲಿತಾಂಶ ಪತ್ರಿಕೆಗಳಲ್ಲಿ ಬರುವುದರಿಂದ ಸ್ಪರ್ಧಿಗಳು ಏನು ಉತ್ತರ ಕೊಟ್ಟಿದ್ದಾರೆ ಅದು ಹೇಗೆ ತಪ್ಪಾಗಿದೆ ಎನ್ನುವುದು ಸೋತವರಿಗೆ ಸ್ವತಃ ತಿಳಿಯುವುದರಿಂದ ಅವರಿಗೆ ನಾವು ಮತ್ತೆ ತಿಳಿಸಬೇಕಾಗಿಲ್ಲ ಎಂದು ವಿಚಾರವಾದಿ ಸಂಘದ ಕಾರ್ಯದರ್ಶಿಗಳಾದ ನಾಗೇಶ್ ಅರಳಕುಪ್ಪೆ ತಿಳಿಸಿದ್ದಾರೆ.
ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿರುವ ವಿಚಾರವಾದಿ ಡಾ. ನರೇಂದ್ರ ನಾಯಕರ ರವರು ಸಹ 10ಲಕ್ಷ ರೂ. ಬಹುಮಾನದ ಸವಾಲು ಒಡ್ಡಿದ್ದಾರೆ. ಈ ಬಾರಿಯ ಚುನಾವಣೆ ಸಂಬಂಧಿತ 20 ಪ್ರಶ್ನೆಗಳನ್ನು ನೀಡಿರುವ ಅವರು ಅದರಲ್ಲಿ 18 ಅಥವಾ ಅದಕ್ಕಿಂತ ಹೆಚ್ಚು ಪ್ರಶ್ನೆಗಳಿಗೆ ಸರಿ ಉತ್ತರ ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ವಿವರಗಳಿಗೆ ಅವರ ಮೊ. 9448216343 ಸಂಪರ್ಕಿಸಿರಿ.
ಪ್ರೊ.ನರೇಂದ್ರ ನಾಯಕ್
ಅದೇ ರೀತಿ ಡಾ ಲಲಿತಾ ನಾಯಕ್ ರವರ ರೂ10,000/ ಬಹುಮಾನ ಸವಾಲು ಹಾಕಿದ್ದು ವಿವರಗಳಿಗೆ ಅವರ ಮೊ. 9448067193. ಸಂಪರ್ಕಿಸಿ. ಮತ್ತು ಒಂದು ಲಕ್ಷ ರೂ ಹಾಗು ಚಿನ್ನದ ಉಂಗುರ ಬಹುಮಾನ ಸವಾಲು ಹಾಕಿರುವ ಶ್ರೀ ನರಸಿಂಹಮೂರ್ತಿಯವರ ವಿವರಗಳಿಗೆ ಅವರ ಮೊ: 9980627609 ಸಂಪರ್ಕಿಸಿಬಹುದಾಗಿದೆ.
ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್ಸಿಪಿ (NCP)...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...
ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್ಐಆರ್ ದಾಖಲಿಸಿದೆ.
ಶಿವಸೇನೆ...
ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...
ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...
ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....
ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...
ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...
ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...