Homeಕರ್ನಾಟಕಜ್ಯೋತಿಷಿಗಳಿಗೆ ನಿಖರ ಚುನಾವಣಾ ಫಲಿತಾಂಶ ಹೇಳುವಂತೆ ಸವಾಲು ಹಾಕಿದ ವಿಚಾರವಾದಿಗಳು

ಜ್ಯೋತಿಷಿಗಳಿಗೆ ನಿಖರ ಚುನಾವಣಾ ಫಲಿತಾಂಶ ಹೇಳುವಂತೆ ಸವಾಲು ಹಾಕಿದ ವಿಚಾರವಾದಿಗಳು

"ವಿವಿಧ ಪಕ್ಷಗಳು ಗೆಲ್ಲುವ ಸ್ಥಾನ ಗಳಸಂಖ್ಯೆ ಹಾಗು ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳು ಅವುಗಳ ಸಂಖ್ಯೆಗಳ ನಿಖರ ಲೆಕ್ಕ ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ" ಎಂದು ತಿಳಿಸಬೇಕು.

- Advertisement -
ಚುನಾವಣೆಯ ಸಂದರ್ಭದಲ್ಲಿ ಯಾರ್ಯಾರೋ ಹಣ ಮಾಡಿಕೊಳ್ಳಲ್ಲಿಕ್ಕೆ ಮುಗಿಬೀಳುತ್ತಾರೆ. ಅದರಲ್ಲಿ ಜ್ಯೋತಿಷ್ಯ ಹೇಳುವವರ ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದು ಮನಸ್ಸಿಗೆ ಬಂದ ಲೆಕ್ಕ ಹೇಳಿ ಕೆಲವು ಜನರಿಂದ ಹಣ ಕೀಳುತ್ತಿದ್ದಾರೆ. ರಾಜಕಾರಣಿಗಳು ಸೇರಿದಂತೆ ಹಲವು ಜ್ಯೋತಿಷಿಗಳ ಮೊರೆ ಹೋಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಜ್ಯೋತಿಷಿಗಳು ಚುನಾವಣೆಗೂ ಮುನ್ನವೇ ಕೆಲವು ಅಂಕಿ ಸಂಖ್ಯೆಗಳನ್ನು ಹೇಳುವ ಮೂಲಕ ಪ್ರಭಾವ ಬೀರಲು, ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳಲು ಹವಣಿಸುತ್ತಾರೆ. ಇದರ ವಿರುದ್ಧ ಜನಜಾಗೃತಿ ಮೂಡಿಸಲು ಹಲವು ಪ್ರಜ್ಞಾವಂತರು ದಶಕಗಳ ಕಾಲದಿಂದಲೇ ಪ್ರಯತ್ನಿಸುತ್ತಿದ್ದಾರೆ. ಸರಿಯಾದ ಜ್ಯೋತಿಷ್ಯ ಹೇಳುವಂತೆ ಸವಾಲು ಹಾಕಿ ಬಹುಮಾನ ಘೋಷಿಸುವುದು ಸಹ ಒಂದು ವಿಧಾನ.
ಅಖಿಲ ಕರ್ನಾಟಕ ವಿಚಾರವಾದಿ ಸಂಘ (ರಿ) ಬೆಂಗಳೂರು. ಇವರಿಂದ ಚುನಾವಣಾ ಭವಿಷ್ಯ ಹೇಳುವ  ಜ್ಯೋತಿಷಿಗಳ ಭವಿಷ್ಯ ವಾಣಿಗಳ ಸತ್ಯಾ ಸತ್ಯತೆಗಳ ಬಗ್ಗೆ  ಜ್ಯೋತಿಷ್ಯ ಶಾಸ್ತ್ರ ಕಲಿತು ಭವಿಷ್ಯ ಹೇಳುವವರಿಗೆ ಒಂದು ಕೋಟಿ ರೂ ಬಹುಮಾನದ ಸವಾಲು ಹಾಕಲಾಗಿದೆ. ಪ್ರತಿ ವರ್ಷ ಪ್ರೊ ನರೇಂದ್ರ ನಾಯಕ್ ರವರು ಜ್ಯೋತಿಷ್ಯ ಹೇಳುವವರ ಬಣ್ಣ ಬಯಲು ಮಾಡುವ ಉದ್ದೇಶದಿಂದ ಈ ರೀತಿಯ ಸವಾಲುಗಳನ್ನು ಹಾಕುತ್ತಿದ್ದರು. ಈ ಬಾರಿ ಹಲವು ಜನರು ಸವಾಲು ಹಾಕಿದ್ದಾರೆ. ಈಗಾಗಲೇ ವಾಟ್ಸಾಪ್,  ಫೇಸ್ ಬುಕ್ ಗಳಲ್ಲಿ ಈ ವಿವರಗಳು ಹರಿದಾಡುತ್ತಿದ್ದು ಸಾರ್ವಜನಿಕರ ಕುತೂಹಲ ಕೆರಳಿಸಿವೆ.
ಸವಾಲುಗಳ ವಿವರ
ವಿಚಾರವಾದಿ ಸಂಘ ಬೆಂಗಳೂರು
ಒಂದು ಕೋಟಿ ರೂ ಬಹುಮಾನದ ಸವಾಲು ಇದು – “ವಿವಿಧ ಪಕ್ಷಗಳು ಗೆಲ್ಲುವ ಸ್ಥಾನ ಗಳಸಂಖ್ಯೆ ಹಾಗು ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳು ಅವುಗಳ ಸಂಖ್ಯೆಗಳ ನಿಖರ ಲೆಕ್ಕ ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ” ಎಂದು ತಿಳಿಸಬೇಕು.
ವಿವರ- 2019 ರ ಲೋಕಸಭೆ ಚುನಾವಣೆಯಲ್ಲಿ  ಚುನಾವಣಾ ಆಯೋಗದಿಂದ  ಅಂಗೀಕೃತವಾದ ರಾಜಕೀಯ ಪಕ್ಷಗಳು ಇಡೀ ಭಾರತದಲ್ಲಿ ಈಗ ಲೋಕಸಭೆಗೆ ನಡೆದ, ನಡೆಯುತ್ತಿರುವ ಚುನಾವಣೆಯ ಎಲ್ಲಾ ಒಟ್ಟು ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಪಕ್ಷಾವಾರು ಎಷ್ಟೆಷ್ಟು  ಸ್ಥಾನಗಳನ್ನು ಗೆಲ್ಲುತ್ತಾರೆ ಎಂಬ ಸಂಖ್ಯೆಗಳು  ಮತ್ತು ಅಂಗೀಕೃತ ಅಲ್ಲದ ಪಕ್ಷ ಇಲ್ಲವೇ ಪಕ್ಷೇತರ ಸ್ವತಂತ್ರ ಅಭ್ಯರ್ಥಿ ಗಳಾಗಿ ಸ್ಪರ್ಧಿಸಿದವರು  ಯಾವ ಯಾವ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ  ಎಂದು ಮುಂಚಿತ ಭವಿಷ್ಯ  ಹೇಳಬೇಕು. ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ ಎಂದು ತಿಳಿಸ ಬೇಕು.
ಈ ಸವಾಲಿಗೆ ಇರುವ ಕೆಲ ನಿಯಮಗಳು
ದೇಶದ ಯಾವ ಜ್ಯೋತಿಷಿಯಾದರೂ ಭಾಗವಹಿಸಬಹುದು. ಆದರೆ ಭಾಗವಹಿಸುವವರು ಗಣಿತ ನೈಪುಣ್ಯದ ಮೇಲೆ ಹಾಗು ಊಹೆಯ ಮೇಲೆ ಹಲವು ವಿವಿಧ ಸಂಯೋಜನೆಗಳ ಮೇಲೆ ಲೆಕ್ಕಹಾಕಿ (multiple combinations) ಮಾಡಿ ಬಹುಮುಖ ಉತ್ತರಗಳನ್ನು, ಒಬ್ಬರೇ ಬೇರೆ ಬೇರೆ ಹೆಸರಿನಿಂದ ಹಲವಾರು ಉತ್ತರಗಳನ್ನು ಕಳುಹಿಸ ಬಾರದೆಂಬ ಕಾರಣಕ್ಕಾಗಿ ಹಾಗೂ ಈ ಸ್ಪರ್ಧೆಗೆ  ಒಂದು ಗಂಭೀರತೆ ಹಾಗು ಸತ್ಯದ ದೃಢತೆಯ ಮನಸಾಕ್ಷಿಗಾಗಿ, ಕಳುಹಿಸುವ ಪ್ರತೀ ಉತ್ತರದ ಅರ್ಜಿಗೆ ತಲಾ  ಹತ್ತು ಸಾವಿರ ರೂ. ನ್ನು  ಭದ್ರತಾ ಠೇವಣಿಯಾಗಿ ನೀಡ ಬೇಕಾಗುತ್ತದೆ. ಠೇವಣಿಯನ್ನು “ವಿಚಾರವಾದಿ ಸಂಘ ಬೆಂಗಳೂರು” – ಈ ಹೆಸರಿಗೆ ಡಿ.ಡಿ. ಕಳುಹಿಸ ಬೇಕು. ಗೆದ್ದವರಿಗೆ ಮಾತ್ರ ಠೇವಣಿ ಹಣ ಹಿಂತಿರುಗಿಸ ಲಾಗುವುದು ಮತ್ತು ಜೊತೆಗೆ ಒಂದು ಕೋಟಿ ರೂ. ಬಹುಮಾನವನ್ನು  ನೀಡಲಾಗುವುದು. ಒಂದಕ್ಕಿಂತ ಹೆಚ್ಚು ಸ್ಪರ್ಧಿಗಳು ಸರಿ ಉತ್ತರ ಕೊಟ್ಟರೆ ಬಹುಮಾನ ಹಣವನ್ನು ಗೆದ್ದವರಿಗೆ ಸಮನಾಗಿ ಹಂಚಲಾಗುತ್ತದೆ.
ಮೇ 20ನೇ ತಾರೀಖಿನ ಒಳಗೆ ಈ ಕೆಳಗಿನ ಬೆಂಗಳೂರಿನ ವಿಚಾರವಾದಿಗಳ ಸಂಘದ ಕಛೇರಿಗೆ ಉತ್ತರವನ್ನು ದಾಖಲಾತಿ ಮೂಲಕ ತಲುಪಿಸತಕ್ಕದ್ದು.
ವಿಳಾಸ- ಅಖಿಲ ಕರ್ನಾಟಕ ವಿಚಾರವಾದಿ ಸಂಘ (ರಿ ) 43. ರೋಹಿಣಿ   5ನೇ ಮೇನ್ ಪದ್ಮನಾಭನಗರ, ಬೆಂಗಳೂರು- 560070. ಕಾರ್ಯದರ್ಶಿ-
ಮೊ: 9342176030
ನಾಗೇಶ್ ಅರಳಕುಪ್ಪೆ
ಸ್ಪರ್ಧೆ ಹಾಗು ಉತ್ತರ ಮತ್ತು ಭದ್ರತಾ ಠೇವಣಿಯ ಹಾಗು ಸ್ಪರ್ಧೆ ನಡೆಸುವ ಜವಾಬ್ದಾರಿಗಾಗಿ ಸಂಘವು ನೇಮಿಸಿದ ಒಂದು ತಜ್ಞರ ಸಮಿತಿಯು ನಿರ್ವಹಿಸುತ್ತದೆ. ಸಂಘದ ಕಡೆಯಿಂದ ಒಂದು ಕೋಟಿ ರೂ.ಗಳಿಗೆ ಭದ್ರತೆಗಾಗಿ ಠೇವಣಿ ಪತ್ರ, ಶೇರು ಪತ್ರ, ಸ್ಥಿರಾಸ್ತಿ ಪತ್ರ ಇವುಗಳಲ್ಲಿ ಯಾವುದನ್ನು ಸಂಘದಿಂದ  ನೇಮಕಗೊಂಡ ಅದೇ ಸಮಿತಿಯ ವಶ ಕೊಡಲಾಗುತ್ತದೆ. ಆದರೆ ಯಾವುದೇ ಸ್ಪರ್ಧಿಗಳ ಕೈಗೆ ಕೊಡಲಾಗುವುದಿಲ್ಲ. ಸ್ಪರ್ಧೆಯ ಫಲಿತಾಂಶವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಗೆದ್ದ ಸ್ಪರ್ಧಿಯನ್ನು ಮಾತ್ರ ಸಂಪರ್ಕಿಸಲಾಗುವುದು. ಚುನಾವಣಾ ಫಲಿತಾಂಶ ಪತ್ರಿಕೆಗಳಲ್ಲಿ ಬರುವುದರಿಂದ ಸ್ಪರ್ಧಿಗಳು ಏನು ಉತ್ತರ ಕೊಟ್ಟಿದ್ದಾರೆ ಅದು ಹೇಗೆ ತಪ್ಪಾಗಿದೆ ಎನ್ನುವುದು  ಸೋತವರಿಗೆ ಸ್ವತಃ ತಿಳಿಯುವುದರಿಂದ ಅವರಿಗೆ ನಾವು ಮತ್ತೆ ತಿಳಿಸಬೇಕಾಗಿಲ್ಲ ಎಂದು ವಿಚಾರವಾದಿ ಸಂಘದ ಕಾರ್ಯದರ್ಶಿಗಳಾದ ನಾಗೇಶ್ ಅರಳಕುಪ್ಪೆ ತಿಳಿಸಿದ್ದಾರೆ.
ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿರುವ ವಿಚಾರವಾದಿ ಡಾ. ನರೇಂದ್ರ ನಾಯಕರ ರವರು ಸಹ 10ಲಕ್ಷ ರೂ. ಬಹುಮಾನದ ಸವಾಲು ಒಡ್ಡಿದ್ದಾರೆ. ಈ ಬಾರಿಯ ಚುನಾವಣೆ ಸಂಬಂಧಿತ 20 ಪ್ರಶ್ನೆಗಳನ್ನು ನೀಡಿರುವ ಅವರು ಅದರಲ್ಲಿ 18 ಅಥವಾ ಅದಕ್ಕಿಂತ ಹೆಚ್ಚು ಪ್ರಶ್ನೆಗಳಿಗೆ ಸರಿ ಉತ್ತರ ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ವಿವರಗಳಿಗೆ ಅವರ ಮೊ. 9448216343 ಸಂಪರ್ಕಿಸಿರಿ‌.

ಪ್ರೊ.ನರೇಂದ್ರ ನಾಯಕ್
ಅದೇ ರೀತಿ ಡಾ‌ ಲಲಿತಾ ನಾಯಕ್ ರವರ  ರೂ10,000/ ಬಹುಮಾನ ಸವಾಲು ಹಾಕಿದ್ದು ವಿವರಗಳಿಗೆ ಅವರ  ಮೊ. 9448067193. ಸಂಪರ್ಕಿಸಿ. ಮತ್ತು ಒಂದು ಲಕ್ಷ ರೂ ಹಾಗು ಚಿನ್ನದ ಉಂಗುರ ಬಹುಮಾನ ಸವಾಲು ಹಾಕಿರುವ ಶ್ರೀ ನರಸಿಂಹಮೂರ್ತಿಯವರ ವಿವರಗಳಿಗೆ ಅವರ  ಮೊ: 9980627609 ಸಂಪರ್ಕಿಸಿಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...