Homeಮುಖಪುಟಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಹೇಳಿ: ಮೋದಿ ತಾಯಿಗೆ ಪತ್ರ ಬರೆದ ಪಂಜಾಬ್ ರೈತ!

ಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಹೇಳಿ: ಮೋದಿ ತಾಯಿಗೆ ಪತ್ರ ಬರೆದ ಪಂಜಾಬ್ ರೈತ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿಯವರಿಗೆ ಪಂಜಾಬ್‌ನ ರೈತರೊಬ್ಬರು ಭಾವನಾತ್ಮಕ ಪತ್ರ ಬರೆದಿದ್ದು, ಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ನಿಮ್ಮ ಮಗನಿಗೆ ಹೇಳಿ ಎಂದು ಮನವಿ ಮಾಡಿದ್ದಾರೆ.

ಪಂಜಾಬ್‌ನ ಫೀರೋಜ್‌ಪುರ್‌ನವರಾದ ಹರ್‌ಪ್ರೀತ್‌ ಸಿಂಗ್‌ ಎಂಬುವವರು ಪತ್ರ ಬರೆದವರಾಗಿದ್ದಾರೆ. ಅವರು ಶಿಮ್ಲಾದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಮೋದಿ ತಾಯಿಯವರಿಗೆ ಬರೆದ ಪತ್ರದಲ್ಲಿ “ಪ್ರಧಾನಿ ಮೋದಿಯವರು ನಿಮ್ಮ ಮಾತನ್ನು ತೆಗೆದುಹಾಕುವುದಿಲ್ಲ ಎಂಬ ನಂಬಿಕೆಯೊಂದಿಗೆ ಈ ಪತ್ರ ಬರೆಯುತ್ತಿದ್ದೇನೆ. ಕಳೆದ ಎರಡು ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ, ಕೊರೆಯುವ ಚಳಿಯಲ್ಲಿ ಲಕ್ಷಾಂತರ ರೈತರು ಕೃಷಿ ಕಾನೂನುಗಳ ವಿರುದ್ಧ ಹೋರಾಡುತ್ತಿದ್ದಾರೆ. ದಯವಿಟ್ಟು ಅವುಗಳನ್ನು ವಾಪಸ್ ಪಡೆಯುವಂತೆ ನಿಮ್ಮ ಮಗನಿಗೆ ಹೇಳುವ ಮೂಲಕ ರೈತರಿಗೆ ಸಹಾಯ ಮಾಡುವಂತೆ ಕೇಳಿಕೊಳ್ಳುತ್ತಿದ್ದೇನೆ” ಎಂದಿದ್ದಾರೆ.

Photo Courtesy: The Times Of India

ಯಾವ ವ್ಯಕ್ತಿಯೂ ಕೂಡ ತನ್ನ ತಾಯಿಯ ಮನವಿಯನ್ನು ನಿರ್ಲಕ್ಷಿಸುವುದಿಲ್ಲ. ಭಾರತದ ಜನರು ತಮ್ಮ ತಾಯಿಯನ್ನು ದೇವರಂತೆ ಕಾಣುತ್ತಾರೆ. “ಪ್ರಿಯ ಅಮ್ಮ, ನಮ್ಮ ಪ್ರಧಾನಿ ನಿಮ್ಮ ಮಾತನ್ನು ತೆಗೆದುಹಾಕುವುದಿಲ್ಲ. ಹಾಗಾಗಿ ದಯವಿಟ್ಟು ರೈತರ ಕಷ್ಟವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು, ಈ ಕಾಯ್ದೆಗಳು ಹಿಂಪಡೆಯುವಂತೆ ಮಾಡಿ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ಪತ್ರವನ್ನು ಆದಷ್ಟು ಬೇಗ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿಯವರಿಗೆ ಕಳಿಸುವುದಾಗಿ ಹರ್‌ಪ್ರೀತ್‌ ಸಿಂಗ್ ಹೇಳಿದ್ದಾರೆ. ಇತ್ತೀಚೆಗೆ ಅವರೊಂದಿಗೆ ಕರಣ್‌ದೀಪ್ ಸಂಧು, ಗುರುಪ್ರೀತ್ ಸಿಂಗ್‌ರನ್ನು ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 107 ಮತ್ತು 151ರ ಅಡಿಯಲ್ಲಿ ಬಂಧಿಲಾಗಿತ್ತು. ಪ್ರತಿಭಟನೆಗೆ ಅನುಮತಿ ಪಡೆದಿರಲಿಲ್ಲ ಎಂಬ ಆರೋಪ ಅವರ ಮೇಲಿತ್ತು.  ಬಿಡುಗಡೆಯಾದ ನಂತರ ಫೀರೋಜ್‌ಪುರ್ ನಲ್ಲಿ ಅವರಿಗೆ ಅಭೂತಪೂರ್ವ ಸ್ವಾಗತ ಕೋರಲಾಗಿತ್ತು.


ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...