Homeಮುಖಪುಟಸಾರಿಗೆ ಸಿಬ್ಬಂದಿಗಳ ಪ್ರತಿಭಟನೆಯಿಂದ ಕಂಗೆಟ್ಟಿದ್ದ ತೆಲಂಗಾಣಕ್ಕೆ ಈಗ ಓಲಾ, ಉಬರ್ ಶಾಕ್!

ಸಾರಿಗೆ ಸಿಬ್ಬಂದಿಗಳ ಪ್ರತಿಭಟನೆಯಿಂದ ಕಂಗೆಟ್ಟಿದ್ದ ತೆಲಂಗಾಣಕ್ಕೆ ಈಗ ಓಲಾ, ಉಬರ್ ಶಾಕ್!

- Advertisement -
- Advertisement -

ಈಗಾಗಲೇ ರಾಜ್ಯದ ಸಾರಿಗೆ ಸಿಬ್ಬಂದಿಗಳ ಪ್ರತಿಭಟನೆಯಿಂದ ಪರದಾಡುತ್ತಿರುವ ತೆಲಂಗಾಣ ರಾಜ್ಯಕ್ಕೆ ಮತ್ತೊಂದು ಆಘಾರ ಎದುರಾಗಿದೆ. ತೆಲಂಗಾಣದಲ್ಲಿ ಅಕ್ಟೋಬರ್ 19ರಂದು ಓಲಾ, ಊಬರ್ ಕ್ಯಾಬ್ ಗಳು ಸೇವೆ ಬಂದ್ ಮಾಡಿ, ಪ್ರತಿಭಟನೆ ನಡೆಸಲು ಕರೆ ನೀಡಿವೆ. ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮವು ಓಲಾ, ಊಬರ್ ಕ್ಯಾಬ್ ಗಳ ಬೇಡಿಕೆಗೆ ಸ್ಪಂದಿಸಿಲ್ಲ. ಹೀಗಾಗಿ ಅಕ್ಟೋಬರ್ 19 ರಂದು ಎಲ್ಲಾ ಚಾಲಕರು ಮತ್ತು ಕಂಪನಿಯವರು ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿವೆ. ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಲಾಗಿದೆ.

ತೆಲಂಗಾಣ ರಾಜ್ಯ ಟ್ಯಾಕ್ಸಿ ಮತ್ತು ಡ್ರೈವರುಗಳ ಸಂಘಟನೆಯ (ಟಿಎಸ್ ಟಿಡಿ ಜೆಎಸಿ) ಪ್ರತಿಭಟನೆಗೆ ವಿಪಕ್ಷಗಳು ಮತ್ತು ವಿವಿಧ ಸಂಸ್ಥೆಗಳು ಬೆಂಬಲ ಸೂಚಿಸುವುದಾಗಿ ಹೇಳಿವೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಓಲಾ, ಊಬರ್ ಗಳು ಸಂಪೂರ್ಣ ಬಂದ್ ಆಚರಿಸಲಿವೆ. ಸುಮಾರು 50 ಸಾವಿರ ಕ್ಯಾಬ್ ಗಳ ಸಂಚಾರ ಬಂದ್ ಆಗಲಿದೆ. ಈಗಾಗಲೇ ವಿವಿಧ ಕಂಪನಿಗಳ ನೌಕರರಿಗೆ, ಸಂದೇಶ ನೀಡಲಾಗಿದ್ದು, ಕಚೇರಿಗಳಿಗೆ ತೆರಳಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

ಟ್ಯಾಕ್ಸಿಗಳ ಸಂಚಾರದಲ್ಲಿ ಪ್ರತಿ ಕಿ.ಮೀ ಗೆ ಕನಿಷ್ಠ 22 ರೂ. ನಿಗದಿಪಡಿಸಬೇಕು, ಕರ್ತವ್ಯದಿಂದ ತೆಗೆದು ಹಾಕಲಾದ ನೌಕರರನ್ನು ಮತ್ತೆ ನೇಮಕ ಮಾಡಿಕೊಳ್ಳಲು ವ್ಯವಸ್ಥೆ ಕಲ್ಪಿಸಬೇಕು, ಚಾಲಕರಿಗೆ ಕನಿಷ್ಠ ಉದ್ಯೋಗ ಖಾತರಿ, ಓಲಾ-ಊಬರ್ ಚಾಲಕರ ಕಲ್ಯಾಣ ಮತ್ತು ಸುರಕ್ಷತೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬುದು ಸೇರಿದಂತೆ ಇನ್ನೂ ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ. ತಮ್ಮ ಬೇಡಿಕೆಗಳ ಬಗ್ಗೆ ಸಾರಿಗೆ ಸಚಿವಾಲಯಕ್ಕೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಆದರೆ ಸಾರಿಗೆ ಸಚಿವಾಲಯ ಮನವಿಗೆ ಸ್ಪಂದಿಸಿಲ್ಲ ಎಂದು ಟಿಎಸ್ ಟಿಡಿ ಜೆಎಸಿ ಆರೋಪಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ಉತ್ತಮ್ ಕುಮಾರ್ ರೆಡ್ಡಿ ಮಾತನಾಡಿ, ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಾಗುವುದು. ಕಾಂಗ್ರೆಸ್, ಟಿಜೆಸ್, ಸಿಪಿಐ, ಸಿಪಿಎಂ ಸೇರಿದಂತೆ ಅನೇಕ ಪಕ್ಷಗಳು ಮತ್ತು ಸಂಘಟನೆಗಳು ಬೆಂಬಲ ಸೂಚಿಸಲಿವೆ ಎಂದು ತಿಳಿಸಿದರು.

ಅಂದಹಾಗೆ, ತೆಲಂಗಾಣ ಸಾರಿಗೆ ಸಂಸ್ಥೆಯ (ಟಿಎಸ್ ಆರ್ ಟಿಸಿ) ಸಿಬ್ಬಂದಿಗಳು, ಟಿಎಸ್ ಆರ್ ಟಿಸಿಯನ್ನು ಸರ್ಕಾರದೊಂದಿಗೆ ವಿಲೀನಗೊಳಿಸುವುದೂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ  ಅಕ್ಟೋಬರ್ 5ರಿಂದಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಶುರುವಾಗಿ ಹನ್ನೆರಡು ದಿನವಾದರೂ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಸರ್ಕಾರ ಪ್ರತಿಭಟನಾ ನಿರತರ ಜೊತೆಗೆ ಮಾತುಕತೆಗೆ ಮುಂದಾಗಿಯೇ ಇಲ್ಲ. ಬದಲಿಗೆ ಪ್ರತಿಭಟನಾ ನಿರತ 48,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿದೆ. ಈಗಾಗಲೇ ಇಬ್ಬರು ಪ್ರತಿಭಟನಾಕಾರರು ಆತ್ಮಾಹುತಿ ಮಾಡಿಕೊಂಡಿದ್ದರೂ ತೆಲಂಗಾಣ ಸರ್ಕಾರ ಯಾವ ಕಾರಣಕ್ಕು ಅವರ ಬೇಡಿಕೆಗಳಿಗೆ ಮಣಿಯುವುದಿಲ್ಲ, ವಜಾ ಮಾಡಿರುವ ನೌಕರರನ್ನು ವಾಪಾಸ್ ಕೆಲಸಕ್ಕೆ ತೆಗೆದುಕೊಳ್ಳುವುದೂ ಇಲ್ಲ ಎಂಬ ಹಠ ಹಿಡಿದು ಕೂತಿದೆ.

ಈಗ ಓಲಾ, ಉಬರ್ ಚಾಲಕರೂ ಪ್ರತಿಭಟನೆಗೆ ಮುಂದಾಗಿರೋದ್ರಿಂದ ತೆಲಂಗಾಣದ ಜನ ಸಾರಿಗೆಗೆ ಪರದಾಡುವ ಪರಿಸ್ಥಿತಿ ಎದುರಾಗುವ ಸಂಭವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...