Homeಮುಖಪುಟಸಾರಿಗೆ ಸಿಬ್ಬಂದಿಗಳ ಪ್ರತಿಭಟನೆಯಿಂದ ಕಂಗೆಟ್ಟಿದ್ದ ತೆಲಂಗಾಣಕ್ಕೆ ಈಗ ಓಲಾ, ಉಬರ್ ಶಾಕ್!

ಸಾರಿಗೆ ಸಿಬ್ಬಂದಿಗಳ ಪ್ರತಿಭಟನೆಯಿಂದ ಕಂಗೆಟ್ಟಿದ್ದ ತೆಲಂಗಾಣಕ್ಕೆ ಈಗ ಓಲಾ, ಉಬರ್ ಶಾಕ್!

- Advertisement -
- Advertisement -

ಈಗಾಗಲೇ ರಾಜ್ಯದ ಸಾರಿಗೆ ಸಿಬ್ಬಂದಿಗಳ ಪ್ರತಿಭಟನೆಯಿಂದ ಪರದಾಡುತ್ತಿರುವ ತೆಲಂಗಾಣ ರಾಜ್ಯಕ್ಕೆ ಮತ್ತೊಂದು ಆಘಾರ ಎದುರಾಗಿದೆ. ತೆಲಂಗಾಣದಲ್ಲಿ ಅಕ್ಟೋಬರ್ 19ರಂದು ಓಲಾ, ಊಬರ್ ಕ್ಯಾಬ್ ಗಳು ಸೇವೆ ಬಂದ್ ಮಾಡಿ, ಪ್ರತಿಭಟನೆ ನಡೆಸಲು ಕರೆ ನೀಡಿವೆ. ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮವು ಓಲಾ, ಊಬರ್ ಕ್ಯಾಬ್ ಗಳ ಬೇಡಿಕೆಗೆ ಸ್ಪಂದಿಸಿಲ್ಲ. ಹೀಗಾಗಿ ಅಕ್ಟೋಬರ್ 19 ರಂದು ಎಲ್ಲಾ ಚಾಲಕರು ಮತ್ತು ಕಂಪನಿಯವರು ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿವೆ. ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಲಾಗಿದೆ.

ತೆಲಂಗಾಣ ರಾಜ್ಯ ಟ್ಯಾಕ್ಸಿ ಮತ್ತು ಡ್ರೈವರುಗಳ ಸಂಘಟನೆಯ (ಟಿಎಸ್ ಟಿಡಿ ಜೆಎಸಿ) ಪ್ರತಿಭಟನೆಗೆ ವಿಪಕ್ಷಗಳು ಮತ್ತು ವಿವಿಧ ಸಂಸ್ಥೆಗಳು ಬೆಂಬಲ ಸೂಚಿಸುವುದಾಗಿ ಹೇಳಿವೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಓಲಾ, ಊಬರ್ ಗಳು ಸಂಪೂರ್ಣ ಬಂದ್ ಆಚರಿಸಲಿವೆ. ಸುಮಾರು 50 ಸಾವಿರ ಕ್ಯಾಬ್ ಗಳ ಸಂಚಾರ ಬಂದ್ ಆಗಲಿದೆ. ಈಗಾಗಲೇ ವಿವಿಧ ಕಂಪನಿಗಳ ನೌಕರರಿಗೆ, ಸಂದೇಶ ನೀಡಲಾಗಿದ್ದು, ಕಚೇರಿಗಳಿಗೆ ತೆರಳಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

ಟ್ಯಾಕ್ಸಿಗಳ ಸಂಚಾರದಲ್ಲಿ ಪ್ರತಿ ಕಿ.ಮೀ ಗೆ ಕನಿಷ್ಠ 22 ರೂ. ನಿಗದಿಪಡಿಸಬೇಕು, ಕರ್ತವ್ಯದಿಂದ ತೆಗೆದು ಹಾಕಲಾದ ನೌಕರರನ್ನು ಮತ್ತೆ ನೇಮಕ ಮಾಡಿಕೊಳ್ಳಲು ವ್ಯವಸ್ಥೆ ಕಲ್ಪಿಸಬೇಕು, ಚಾಲಕರಿಗೆ ಕನಿಷ್ಠ ಉದ್ಯೋಗ ಖಾತರಿ, ಓಲಾ-ಊಬರ್ ಚಾಲಕರ ಕಲ್ಯಾಣ ಮತ್ತು ಸುರಕ್ಷತೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬುದು ಸೇರಿದಂತೆ ಇನ್ನೂ ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ. ತಮ್ಮ ಬೇಡಿಕೆಗಳ ಬಗ್ಗೆ ಸಾರಿಗೆ ಸಚಿವಾಲಯಕ್ಕೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಆದರೆ ಸಾರಿಗೆ ಸಚಿವಾಲಯ ಮನವಿಗೆ ಸ್ಪಂದಿಸಿಲ್ಲ ಎಂದು ಟಿಎಸ್ ಟಿಡಿ ಜೆಎಸಿ ಆರೋಪಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ಉತ್ತಮ್ ಕುಮಾರ್ ರೆಡ್ಡಿ ಮಾತನಾಡಿ, ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಾಗುವುದು. ಕಾಂಗ್ರೆಸ್, ಟಿಜೆಸ್, ಸಿಪಿಐ, ಸಿಪಿಎಂ ಸೇರಿದಂತೆ ಅನೇಕ ಪಕ್ಷಗಳು ಮತ್ತು ಸಂಘಟನೆಗಳು ಬೆಂಬಲ ಸೂಚಿಸಲಿವೆ ಎಂದು ತಿಳಿಸಿದರು.

ಅಂದಹಾಗೆ, ತೆಲಂಗಾಣ ಸಾರಿಗೆ ಸಂಸ್ಥೆಯ (ಟಿಎಸ್ ಆರ್ ಟಿಸಿ) ಸಿಬ್ಬಂದಿಗಳು, ಟಿಎಸ್ ಆರ್ ಟಿಸಿಯನ್ನು ಸರ್ಕಾರದೊಂದಿಗೆ ವಿಲೀನಗೊಳಿಸುವುದೂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ  ಅಕ್ಟೋಬರ್ 5ರಿಂದಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಶುರುವಾಗಿ ಹನ್ನೆರಡು ದಿನವಾದರೂ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಸರ್ಕಾರ ಪ್ರತಿಭಟನಾ ನಿರತರ ಜೊತೆಗೆ ಮಾತುಕತೆಗೆ ಮುಂದಾಗಿಯೇ ಇಲ್ಲ. ಬದಲಿಗೆ ಪ್ರತಿಭಟನಾ ನಿರತ 48,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿದೆ. ಈಗಾಗಲೇ ಇಬ್ಬರು ಪ್ರತಿಭಟನಾಕಾರರು ಆತ್ಮಾಹುತಿ ಮಾಡಿಕೊಂಡಿದ್ದರೂ ತೆಲಂಗಾಣ ಸರ್ಕಾರ ಯಾವ ಕಾರಣಕ್ಕು ಅವರ ಬೇಡಿಕೆಗಳಿಗೆ ಮಣಿಯುವುದಿಲ್ಲ, ವಜಾ ಮಾಡಿರುವ ನೌಕರರನ್ನು ವಾಪಾಸ್ ಕೆಲಸಕ್ಕೆ ತೆಗೆದುಕೊಳ್ಳುವುದೂ ಇಲ್ಲ ಎಂಬ ಹಠ ಹಿಡಿದು ಕೂತಿದೆ.

ಈಗ ಓಲಾ, ಉಬರ್ ಚಾಲಕರೂ ಪ್ರತಿಭಟನೆಗೆ ಮುಂದಾಗಿರೋದ್ರಿಂದ ತೆಲಂಗಾಣದ ಜನ ಸಾರಿಗೆಗೆ ಪರದಾಡುವ ಪರಿಸ್ಥಿತಿ ಎದುರಾಗುವ ಸಂಭವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...