Homeಮುಖಪುಟಸಾರಿಗೆ ಸಿಬ್ಬಂದಿಗಳ ಪ್ರತಿಭಟನೆಯಿಂದ ಕಂಗೆಟ್ಟಿದ್ದ ತೆಲಂಗಾಣಕ್ಕೆ ಈಗ ಓಲಾ, ಉಬರ್ ಶಾಕ್!

ಸಾರಿಗೆ ಸಿಬ್ಬಂದಿಗಳ ಪ್ರತಿಭಟನೆಯಿಂದ ಕಂಗೆಟ್ಟಿದ್ದ ತೆಲಂಗಾಣಕ್ಕೆ ಈಗ ಓಲಾ, ಉಬರ್ ಶಾಕ್!

- Advertisement -
- Advertisement -

ಈಗಾಗಲೇ ರಾಜ್ಯದ ಸಾರಿಗೆ ಸಿಬ್ಬಂದಿಗಳ ಪ್ರತಿಭಟನೆಯಿಂದ ಪರದಾಡುತ್ತಿರುವ ತೆಲಂಗಾಣ ರಾಜ್ಯಕ್ಕೆ ಮತ್ತೊಂದು ಆಘಾರ ಎದುರಾಗಿದೆ. ತೆಲಂಗಾಣದಲ್ಲಿ ಅಕ್ಟೋಬರ್ 19ರಂದು ಓಲಾ, ಊಬರ್ ಕ್ಯಾಬ್ ಗಳು ಸೇವೆ ಬಂದ್ ಮಾಡಿ, ಪ್ರತಿಭಟನೆ ನಡೆಸಲು ಕರೆ ನೀಡಿವೆ. ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮವು ಓಲಾ, ಊಬರ್ ಕ್ಯಾಬ್ ಗಳ ಬೇಡಿಕೆಗೆ ಸ್ಪಂದಿಸಿಲ್ಲ. ಹೀಗಾಗಿ ಅಕ್ಟೋಬರ್ 19 ರಂದು ಎಲ್ಲಾ ಚಾಲಕರು ಮತ್ತು ಕಂಪನಿಯವರು ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿವೆ. ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಲಾಗಿದೆ.

ತೆಲಂಗಾಣ ರಾಜ್ಯ ಟ್ಯಾಕ್ಸಿ ಮತ್ತು ಡ್ರೈವರುಗಳ ಸಂಘಟನೆಯ (ಟಿಎಸ್ ಟಿಡಿ ಜೆಎಸಿ) ಪ್ರತಿಭಟನೆಗೆ ವಿಪಕ್ಷಗಳು ಮತ್ತು ವಿವಿಧ ಸಂಸ್ಥೆಗಳು ಬೆಂಬಲ ಸೂಚಿಸುವುದಾಗಿ ಹೇಳಿವೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಓಲಾ, ಊಬರ್ ಗಳು ಸಂಪೂರ್ಣ ಬಂದ್ ಆಚರಿಸಲಿವೆ. ಸುಮಾರು 50 ಸಾವಿರ ಕ್ಯಾಬ್ ಗಳ ಸಂಚಾರ ಬಂದ್ ಆಗಲಿದೆ. ಈಗಾಗಲೇ ವಿವಿಧ ಕಂಪನಿಗಳ ನೌಕರರಿಗೆ, ಸಂದೇಶ ನೀಡಲಾಗಿದ್ದು, ಕಚೇರಿಗಳಿಗೆ ತೆರಳಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

ಟ್ಯಾಕ್ಸಿಗಳ ಸಂಚಾರದಲ್ಲಿ ಪ್ರತಿ ಕಿ.ಮೀ ಗೆ ಕನಿಷ್ಠ 22 ರೂ. ನಿಗದಿಪಡಿಸಬೇಕು, ಕರ್ತವ್ಯದಿಂದ ತೆಗೆದು ಹಾಕಲಾದ ನೌಕರರನ್ನು ಮತ್ತೆ ನೇಮಕ ಮಾಡಿಕೊಳ್ಳಲು ವ್ಯವಸ್ಥೆ ಕಲ್ಪಿಸಬೇಕು, ಚಾಲಕರಿಗೆ ಕನಿಷ್ಠ ಉದ್ಯೋಗ ಖಾತರಿ, ಓಲಾ-ಊಬರ್ ಚಾಲಕರ ಕಲ್ಯಾಣ ಮತ್ತು ಸುರಕ್ಷತೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬುದು ಸೇರಿದಂತೆ ಇನ್ನೂ ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ. ತಮ್ಮ ಬೇಡಿಕೆಗಳ ಬಗ್ಗೆ ಸಾರಿಗೆ ಸಚಿವಾಲಯಕ್ಕೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಆದರೆ ಸಾರಿಗೆ ಸಚಿವಾಲಯ ಮನವಿಗೆ ಸ್ಪಂದಿಸಿಲ್ಲ ಎಂದು ಟಿಎಸ್ ಟಿಡಿ ಜೆಎಸಿ ಆರೋಪಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ಉತ್ತಮ್ ಕುಮಾರ್ ರೆಡ್ಡಿ ಮಾತನಾಡಿ, ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಾಗುವುದು. ಕಾಂಗ್ರೆಸ್, ಟಿಜೆಸ್, ಸಿಪಿಐ, ಸಿಪಿಎಂ ಸೇರಿದಂತೆ ಅನೇಕ ಪಕ್ಷಗಳು ಮತ್ತು ಸಂಘಟನೆಗಳು ಬೆಂಬಲ ಸೂಚಿಸಲಿವೆ ಎಂದು ತಿಳಿಸಿದರು.

ಅಂದಹಾಗೆ, ತೆಲಂಗಾಣ ಸಾರಿಗೆ ಸಂಸ್ಥೆಯ (ಟಿಎಸ್ ಆರ್ ಟಿಸಿ) ಸಿಬ್ಬಂದಿಗಳು, ಟಿಎಸ್ ಆರ್ ಟಿಸಿಯನ್ನು ಸರ್ಕಾರದೊಂದಿಗೆ ವಿಲೀನಗೊಳಿಸುವುದೂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ  ಅಕ್ಟೋಬರ್ 5ರಿಂದಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಶುರುವಾಗಿ ಹನ್ನೆರಡು ದಿನವಾದರೂ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಸರ್ಕಾರ ಪ್ರತಿಭಟನಾ ನಿರತರ ಜೊತೆಗೆ ಮಾತುಕತೆಗೆ ಮುಂದಾಗಿಯೇ ಇಲ್ಲ. ಬದಲಿಗೆ ಪ್ರತಿಭಟನಾ ನಿರತ 48,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿದೆ. ಈಗಾಗಲೇ ಇಬ್ಬರು ಪ್ರತಿಭಟನಾಕಾರರು ಆತ್ಮಾಹುತಿ ಮಾಡಿಕೊಂಡಿದ್ದರೂ ತೆಲಂಗಾಣ ಸರ್ಕಾರ ಯಾವ ಕಾರಣಕ್ಕು ಅವರ ಬೇಡಿಕೆಗಳಿಗೆ ಮಣಿಯುವುದಿಲ್ಲ, ವಜಾ ಮಾಡಿರುವ ನೌಕರರನ್ನು ವಾಪಾಸ್ ಕೆಲಸಕ್ಕೆ ತೆಗೆದುಕೊಳ್ಳುವುದೂ ಇಲ್ಲ ಎಂಬ ಹಠ ಹಿಡಿದು ಕೂತಿದೆ.

ಈಗ ಓಲಾ, ಉಬರ್ ಚಾಲಕರೂ ಪ್ರತಿಭಟನೆಗೆ ಮುಂದಾಗಿರೋದ್ರಿಂದ ತೆಲಂಗಾಣದ ಜನ ಸಾರಿಗೆಗೆ ಪರದಾಡುವ ಪರಿಸ್ಥಿತಿ ಎದುರಾಗುವ ಸಂಭವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...