Homeಮುಖಪುಟತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

ತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

- Advertisement -
- Advertisement -

ದಕ್ಷಿಣ ಭಾರತದಲ್ಲಿ ಫ್ಯಾಂಟಸಿ ಸಿನಿಮಾಗಳ ಟ್ರೆಂಡ್ ಆರಂಭಿಸಿದ ನಿರ್ದೇಶಕರು ಬಿ.ವಿಠಲಾಚಾರ್ಯ. ಕನ್ನಡಿಗರಾದ ಅವರು ಯಶಸ್ಸು ಕಂಡದ್ದು ತೆಲುಗು, ತಮಿಳು ಚಿತ್ರರಂಗದಲ್ಲಿ ಎನ್ನುವುದು ಸೋಜಿಗ. ಅವರು ಕಾಲವಾಗಿ ಇಂದಿಗೆ (21) ಇಪ್ಪತ್ತೊಂದು ವರ್ಷ.

***

ರಾಜಮೌಳಿ ನಿರ್ದೇಶನದಲ್ಲಿ ತೆರೆಗೆ ಬಂದ ‘ಬಾಹುಬಲಿ’ ಫ್ಯಾಂಟಸಿ ಸಿನಿಮಾ ಸರಣಿಗಳು ಭಾರತದಾದ್ಯಂತ ಮಾತ್ರವಲ್ಲದೆ ಜಾಗತಿಕ ಮಾರುಕಟ್ಟೆಯಲ್ಲೂ ಸದ್ದುಮಾಡಿದವು. ಅತ್ಯಾಧುನಿಕ ತಂತ್ರಜ್ಞಾನವನ್ನು ಅಚ್ಚುಕಟ್ಟಾಗಿ ಬಳಕೆ ಮಾಡಿಕೊಂಡ ನಿರ್ದೇಶಕ ರಾಜಮೌಳಿ ತೆರೆಯ ಮೇಲೆ ಅದ್ಭುತವನ್ನೇ ಸೃಷ್ಟಿಸಿದ್ದರು. ಆದರೆ 50ರ ದಶಕದಲ್ಲಿ ಆಗಿದ್ದ ಅಲ್ಪ ತಂತ್ರಜ್ಞಾನವನ್ನೇ ಸೂಕ್ತವಾಗಿ ಬಳಸಿಕೊಂಡು ಬೆಳ್ಳೆತೆರೆಯಲ್ಲಿ ಇಂಥ ಅಚ್ಚರಿಗಳನ್ನು ಸೃಷ್ಟಿಸಿ ಯಶಸ್ಸು ಕಂಡವರು ಬಿ.ವಿಠಲಾಚಾರ್ಯ. 1954ರಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ ಜಾನಪದ ಶೈಲಿಯ ಫ್ಯಾಂಟಸಿ ಕನ್ನಡ ಸಿನಿಮಾ “ರಾಜಲಕ್ಷ್ಮಿ’ ಚಿತ್ರೋದ್ಯಮದವರ ಗಮನ ಸೆಳೆದಿತ್ತು. ತಮಿಳು ಮತ್ತು ತೆಲುಗು ಚಿತ್ರೋದ್ಯಮಿಗಳೂ ಈ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮುಂದಿನ ದಿನಗಳಲ್ಲಿ ಇವರು ನಿರ್ಮಿಸಿದ “ಪಾಲಾಳಮೋಹಿನಿ’, “ಮೋಹಿನಿ ಭಸ್ಮಾಸುರ’ ತೆಲುಗು ಫ್ಯಾಂಟಸಿ ಸಿನಿಮಾಗಳು ಭರ್ಜರಿ ಯಶಸ್ಸು ಕಂಡಿದ್ದವು. ದಕ್ಷಿಣ ಭಾರತ ಮಾತ್ರವಲ್ಲ ಹಿಂದಿ ಚಿತ್ರರಂಗದವರೂ ಅವರ ಸಿನಿಮಾ ತಂತ್ರಗಳನ್ನು ಹೊಗಳಿದ್ದರು.

ಮೂಲತಃ ಉಡುಪಿಯವರಾದ ವಿಠಲಾಚಾರ್ಯರು ಕೆಲಸದ ನಿಮಿತ್ತ ಚಿಕ್ಕ ವಯಸ್ಸಿನಲ್ಲೇ ಊರು ಬಿಟ್ಟು ಅರಸೀಕೆರೆ ಸೇರಿದರು. ಅವರು ಓದಿದ್ದು ಏಳನೇ ತರಗತಿಯಷ್ಟೆ. ಶಾಲೆ ಬಿಟ್ಟು ಹೋಟೆಲ್ ಸೇರಿದ ಅವರು ಕೆಲವು ವರ್ಷಗಳ ನಂತರ ಮೈಸೂರಿನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದರು. ಹೋಟೆಲ್ ಉದ್ಯಮಿಯಾದರೂ ಅವರ ಆಸಕ್ತಿ ಇದ್ದುದು ಸಿನಿಮಾರಂಗದೆಡೆ. ಮೊದಲ ಪ್ರಯತ್ನವಾಗಿ ಸಿ.ವಿ.ರಾಜು ನಿರ್ದೇಶನದ “ಶ್ರೀಕೃಷ್ಣಲೀಲಾ” ಸಿನಿಮಾದ ಸಹನಿರ್ಮಾಪಕರಾದರು. ಮುಂದೆ ಡಿ.ಶಂಕರ್‌ಸಿಂಗ್ ಅವರ ಮಹಾತ್ಮಾ ಪಿಕ್ಚರ್ಸ್‍ನೊಂದಿಗೆ ವಿಠಲಾಚಾರ್ಯರು ಗುರುತಿಸಿಕೊಂಡರು. 1952ರಲ್ಲಿ ತಯಾರಾದ ಮಹಾತ್ಮಾ ಪಿಕ್ಚರ್ಸ್‍ನ “ಸೌಭಾಗ್ಯ ಲಕ್ಷ್ಮಿ” ಸಿನಿಮಾ ನಿರ್ದೇಶಿಸುವ ಮೂಲಕ ಸ್ವತಂತ್ರ್ಯ ನಿರ್ಮಾಪಕರಾದರು. ಮರುವರ್ಷ 1953ರಲ್ಲಿ ತಮ್ಮದೇ ವಿಠಲ್ ಪ್ರೊಡಕ್ಷನ್ಸ್ ಆರಂಭಿಸಿದರು. ಈ ಸಂಸ್ಥೆಯಡಿ ವಿಠಲಾಚಾರ್ಯರು “ಕನ್ಯಾದಾನ’ (1954) ನಿರ್ಮಿಸಿ, ನಿರ್ದೇಶಿಸಿದರು. ಫ್ಯಾಂಟಸಿ ಸಿನಮಾ ಮಾಡಬೇಕೆನ್ನುವ ಅವರ ಮಹದಾಸೆ ಕೈಗೂಡಿದ್ದು “ರಾಜಲಕ್ಷ್ಮಿ’ ಚಿತ್ರದ ಮೂಲಕ.

ಇದಾದ ನಂತರ “ಮುತ್ತೈದೆ ಭಾಗ್ಯ” (1956), “ಮನೆ ತುಂಬಿದ ಹೆಣ್ಣು” (1958) ಚಿತ್ರಗಳನ್ನು ಮಾಡಿದರು. “ಮುತ್ತೈದು ಭಾಗ್ಯ” ಚಿತ್ರದಲ್ಲಿ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ನಾಯಕರಾಗಿದ್ದರು ಎನ್ನುವುದು ವಿಶೇಷ. ಅದೇಕೋ ಈ ಸಿನಿಮಾಗಳು ಗೆಲ್ಲಲಿಲ್ಲ. ಇದರಿಂದ ತೆಲುಗು ಸಿನಿಮಾರಂಗದತ್ತ ಮುಖಮಾಡಿದ ವಿಠಲಾಚಾರ್ಯರು ಅಲ್ಲಿ ಫ್ಯಾಂಟಸಿ ಸಿನಿಮಾಗಳ ಮೂಲಕವೇ ದೊಡ್ಡ ಹೆಸರು ಮಾಡಿದರು. ತಮಿಳಿನಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ “ಪೆಣ್‍ಕುಲತ್ತಿನ್”, “ತೇನ್‍ವಿಳಕ್ಕು” ಸಿನಿಮಾಗಳು ದೊಡ್ಡ ಯಶಸ್ಸು ಕಂಡವು. ಕನ್ನಡ, ತೆಲುಗು ಮತ್ತು ತಮಿಳಿನ 80ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿದ ವಿಠಲಾಚಾರ್ಯರು 1996, ಮೇ 28ರಂದು ತಮ್ಮ 80ನೇ ವಯಸ್ಸಿನಲ್ಲಿ ನಿಧನರಾದರು.

ಚಿತ್ರನಿರ್ಮಾಣ, ನಿರ್ದೇಶನದ ಜೊತೆ ಹಲವಾರು ತಂತ್ರಜ್ಞರು ಮತ್ತು ಕಲಾವಿದರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಹೆಗ್ಗಳಿಕೆಯೂ ವಿಠಲಾಚಾರ್ಯರಿಗೆ ಸಲ್ಲಬೇಕು. ಆಗ ಸಿನಿಮಾ ಸೇರುವ ಆಸೆಯಿಂದ ಕನ್ನಡ ನಾಡಿನಿಂದ ಮದರಾಸಿಗೆ ಆಗಮಿಸುವವರಿಗೆ ಅವರು ನೆರವಾಗುತ್ತಿದ್ದರು. ಕನ್ನಡ ಚಿತ್ರರಂಗ ಕಂಡ ಮೇರು ನಿರ್ದೇಶಕ ಸಿದ್ದಲಿಂಗಯ್ಯನವರು ಮೊದಲು ತರಬೇತಿ ಪಡೆದದ್ದೇ ವಿಠಲಾಚಾರ್ಯರಲ್ಲಿ. ಹೀಗೆ, ಪರೋಕ್ಷವಾಗಿಯೂ ಅವರು ಕನ್ನಡ ಚಿತ್ರರಂಗದ ಬೆಳವಣಿಗೆಗಳಲ್ಲಿ ಪ್ರೇರಕ ಶಕ್ತಿಯಾಗಿದ್ದರು. ಐವತ್ತು, ಅರವತ್ತರ ದಶಕದಲ್ಲಿ ಅವರು ತಯಾರಿಸಿದ ಫ್ಯಾಂಟಸಿ ಸಿನಿಮಾಗಳು ಮುಂದಿನ ದಿನಗಳಲ್ಲಿ ಅಂತಹ ಸಿನಿಮಾಗಳನ್ನು ನಿರ್ಮಿಸುವವರಿಗೆ ಸ್ಫೂರ್ತಿಯಾದವು. ಇಂದಿಗೂ ದಕ್ಷಿಣ ಭಾರತದ ಫ್ಯಾಂಟಸಿ ಸಿನಿಮಾಗಳ ಬಗ್ಗೆ ಮಾತನಾಡುವಾಗ ವಿಠಲಾಚಾರ್ಯರ (20/01/1920 – 28/05/1999) ಹೆಸರು ಕಡ್ಡಾಯವಾಗಿ ಪ್ರಸ್ತಾಪವಾಗುತ್ತದೆ.


ಇದನ್ನೂ ಓದಿ: ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...