Homeಮುಖಪುಟತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

ತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

- Advertisement -
- Advertisement -

ದಕ್ಷಿಣ ಭಾರತದಲ್ಲಿ ಫ್ಯಾಂಟಸಿ ಸಿನಿಮಾಗಳ ಟ್ರೆಂಡ್ ಆರಂಭಿಸಿದ ನಿರ್ದೇಶಕರು ಬಿ.ವಿಠಲಾಚಾರ್ಯ. ಕನ್ನಡಿಗರಾದ ಅವರು ಯಶಸ್ಸು ಕಂಡದ್ದು ತೆಲುಗು, ತಮಿಳು ಚಿತ್ರರಂಗದಲ್ಲಿ ಎನ್ನುವುದು ಸೋಜಿಗ. ಅವರು ಕಾಲವಾಗಿ ಇಂದಿಗೆ (21) ಇಪ್ಪತ್ತೊಂದು ವರ್ಷ.

***

ರಾಜಮೌಳಿ ನಿರ್ದೇಶನದಲ್ಲಿ ತೆರೆಗೆ ಬಂದ ‘ಬಾಹುಬಲಿ’ ಫ್ಯಾಂಟಸಿ ಸಿನಿಮಾ ಸರಣಿಗಳು ಭಾರತದಾದ್ಯಂತ ಮಾತ್ರವಲ್ಲದೆ ಜಾಗತಿಕ ಮಾರುಕಟ್ಟೆಯಲ್ಲೂ ಸದ್ದುಮಾಡಿದವು. ಅತ್ಯಾಧುನಿಕ ತಂತ್ರಜ್ಞಾನವನ್ನು ಅಚ್ಚುಕಟ್ಟಾಗಿ ಬಳಕೆ ಮಾಡಿಕೊಂಡ ನಿರ್ದೇಶಕ ರಾಜಮೌಳಿ ತೆರೆಯ ಮೇಲೆ ಅದ್ಭುತವನ್ನೇ ಸೃಷ್ಟಿಸಿದ್ದರು. ಆದರೆ 50ರ ದಶಕದಲ್ಲಿ ಆಗಿದ್ದ ಅಲ್ಪ ತಂತ್ರಜ್ಞಾನವನ್ನೇ ಸೂಕ್ತವಾಗಿ ಬಳಸಿಕೊಂಡು ಬೆಳ್ಳೆತೆರೆಯಲ್ಲಿ ಇಂಥ ಅಚ್ಚರಿಗಳನ್ನು ಸೃಷ್ಟಿಸಿ ಯಶಸ್ಸು ಕಂಡವರು ಬಿ.ವಿಠಲಾಚಾರ್ಯ. 1954ರಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ ಜಾನಪದ ಶೈಲಿಯ ಫ್ಯಾಂಟಸಿ ಕನ್ನಡ ಸಿನಿಮಾ “ರಾಜಲಕ್ಷ್ಮಿ’ ಚಿತ್ರೋದ್ಯಮದವರ ಗಮನ ಸೆಳೆದಿತ್ತು. ತಮಿಳು ಮತ್ತು ತೆಲುಗು ಚಿತ್ರೋದ್ಯಮಿಗಳೂ ಈ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮುಂದಿನ ದಿನಗಳಲ್ಲಿ ಇವರು ನಿರ್ಮಿಸಿದ “ಪಾಲಾಳಮೋಹಿನಿ’, “ಮೋಹಿನಿ ಭಸ್ಮಾಸುರ’ ತೆಲುಗು ಫ್ಯಾಂಟಸಿ ಸಿನಿಮಾಗಳು ಭರ್ಜರಿ ಯಶಸ್ಸು ಕಂಡಿದ್ದವು. ದಕ್ಷಿಣ ಭಾರತ ಮಾತ್ರವಲ್ಲ ಹಿಂದಿ ಚಿತ್ರರಂಗದವರೂ ಅವರ ಸಿನಿಮಾ ತಂತ್ರಗಳನ್ನು ಹೊಗಳಿದ್ದರು.

ಮೂಲತಃ ಉಡುಪಿಯವರಾದ ವಿಠಲಾಚಾರ್ಯರು ಕೆಲಸದ ನಿಮಿತ್ತ ಚಿಕ್ಕ ವಯಸ್ಸಿನಲ್ಲೇ ಊರು ಬಿಟ್ಟು ಅರಸೀಕೆರೆ ಸೇರಿದರು. ಅವರು ಓದಿದ್ದು ಏಳನೇ ತರಗತಿಯಷ್ಟೆ. ಶಾಲೆ ಬಿಟ್ಟು ಹೋಟೆಲ್ ಸೇರಿದ ಅವರು ಕೆಲವು ವರ್ಷಗಳ ನಂತರ ಮೈಸೂರಿನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದರು. ಹೋಟೆಲ್ ಉದ್ಯಮಿಯಾದರೂ ಅವರ ಆಸಕ್ತಿ ಇದ್ದುದು ಸಿನಿಮಾರಂಗದೆಡೆ. ಮೊದಲ ಪ್ರಯತ್ನವಾಗಿ ಸಿ.ವಿ.ರಾಜು ನಿರ್ದೇಶನದ “ಶ್ರೀಕೃಷ್ಣಲೀಲಾ” ಸಿನಿಮಾದ ಸಹನಿರ್ಮಾಪಕರಾದರು. ಮುಂದೆ ಡಿ.ಶಂಕರ್‌ಸಿಂಗ್ ಅವರ ಮಹಾತ್ಮಾ ಪಿಕ್ಚರ್ಸ್‍ನೊಂದಿಗೆ ವಿಠಲಾಚಾರ್ಯರು ಗುರುತಿಸಿಕೊಂಡರು. 1952ರಲ್ಲಿ ತಯಾರಾದ ಮಹಾತ್ಮಾ ಪಿಕ್ಚರ್ಸ್‍ನ “ಸೌಭಾಗ್ಯ ಲಕ್ಷ್ಮಿ” ಸಿನಿಮಾ ನಿರ್ದೇಶಿಸುವ ಮೂಲಕ ಸ್ವತಂತ್ರ್ಯ ನಿರ್ಮಾಪಕರಾದರು. ಮರುವರ್ಷ 1953ರಲ್ಲಿ ತಮ್ಮದೇ ವಿಠಲ್ ಪ್ರೊಡಕ್ಷನ್ಸ್ ಆರಂಭಿಸಿದರು. ಈ ಸಂಸ್ಥೆಯಡಿ ವಿಠಲಾಚಾರ್ಯರು “ಕನ್ಯಾದಾನ’ (1954) ನಿರ್ಮಿಸಿ, ನಿರ್ದೇಶಿಸಿದರು. ಫ್ಯಾಂಟಸಿ ಸಿನಮಾ ಮಾಡಬೇಕೆನ್ನುವ ಅವರ ಮಹದಾಸೆ ಕೈಗೂಡಿದ್ದು “ರಾಜಲಕ್ಷ್ಮಿ’ ಚಿತ್ರದ ಮೂಲಕ.

ಇದಾದ ನಂತರ “ಮುತ್ತೈದೆ ಭಾಗ್ಯ” (1956), “ಮನೆ ತುಂಬಿದ ಹೆಣ್ಣು” (1958) ಚಿತ್ರಗಳನ್ನು ಮಾಡಿದರು. “ಮುತ್ತೈದು ಭಾಗ್ಯ” ಚಿತ್ರದಲ್ಲಿ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ನಾಯಕರಾಗಿದ್ದರು ಎನ್ನುವುದು ವಿಶೇಷ. ಅದೇಕೋ ಈ ಸಿನಿಮಾಗಳು ಗೆಲ್ಲಲಿಲ್ಲ. ಇದರಿಂದ ತೆಲುಗು ಸಿನಿಮಾರಂಗದತ್ತ ಮುಖಮಾಡಿದ ವಿಠಲಾಚಾರ್ಯರು ಅಲ್ಲಿ ಫ್ಯಾಂಟಸಿ ಸಿನಿಮಾಗಳ ಮೂಲಕವೇ ದೊಡ್ಡ ಹೆಸರು ಮಾಡಿದರು. ತಮಿಳಿನಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ “ಪೆಣ್‍ಕುಲತ್ತಿನ್”, “ತೇನ್‍ವಿಳಕ್ಕು” ಸಿನಿಮಾಗಳು ದೊಡ್ಡ ಯಶಸ್ಸು ಕಂಡವು. ಕನ್ನಡ, ತೆಲುಗು ಮತ್ತು ತಮಿಳಿನ 80ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿದ ವಿಠಲಾಚಾರ್ಯರು 1996, ಮೇ 28ರಂದು ತಮ್ಮ 80ನೇ ವಯಸ್ಸಿನಲ್ಲಿ ನಿಧನರಾದರು.

ಚಿತ್ರನಿರ್ಮಾಣ, ನಿರ್ದೇಶನದ ಜೊತೆ ಹಲವಾರು ತಂತ್ರಜ್ಞರು ಮತ್ತು ಕಲಾವಿದರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಹೆಗ್ಗಳಿಕೆಯೂ ವಿಠಲಾಚಾರ್ಯರಿಗೆ ಸಲ್ಲಬೇಕು. ಆಗ ಸಿನಿಮಾ ಸೇರುವ ಆಸೆಯಿಂದ ಕನ್ನಡ ನಾಡಿನಿಂದ ಮದರಾಸಿಗೆ ಆಗಮಿಸುವವರಿಗೆ ಅವರು ನೆರವಾಗುತ್ತಿದ್ದರು. ಕನ್ನಡ ಚಿತ್ರರಂಗ ಕಂಡ ಮೇರು ನಿರ್ದೇಶಕ ಸಿದ್ದಲಿಂಗಯ್ಯನವರು ಮೊದಲು ತರಬೇತಿ ಪಡೆದದ್ದೇ ವಿಠಲಾಚಾರ್ಯರಲ್ಲಿ. ಹೀಗೆ, ಪರೋಕ್ಷವಾಗಿಯೂ ಅವರು ಕನ್ನಡ ಚಿತ್ರರಂಗದ ಬೆಳವಣಿಗೆಗಳಲ್ಲಿ ಪ್ರೇರಕ ಶಕ್ತಿಯಾಗಿದ್ದರು. ಐವತ್ತು, ಅರವತ್ತರ ದಶಕದಲ್ಲಿ ಅವರು ತಯಾರಿಸಿದ ಫ್ಯಾಂಟಸಿ ಸಿನಿಮಾಗಳು ಮುಂದಿನ ದಿನಗಳಲ್ಲಿ ಅಂತಹ ಸಿನಿಮಾಗಳನ್ನು ನಿರ್ಮಿಸುವವರಿಗೆ ಸ್ಫೂರ್ತಿಯಾದವು. ಇಂದಿಗೂ ದಕ್ಷಿಣ ಭಾರತದ ಫ್ಯಾಂಟಸಿ ಸಿನಿಮಾಗಳ ಬಗ್ಗೆ ಮಾತನಾಡುವಾಗ ವಿಠಲಾಚಾರ್ಯರ (20/01/1920 – 28/05/1999) ಹೆಸರು ಕಡ್ಡಾಯವಾಗಿ ಪ್ರಸ್ತಾಪವಾಗುತ್ತದೆ.


ಇದನ್ನೂ ಓದಿ: ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...