Homeಮುಖಪುಟತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

ತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

- Advertisement -
- Advertisement -

ದಕ್ಷಿಣ ಭಾರತದಲ್ಲಿ ಫ್ಯಾಂಟಸಿ ಸಿನಿಮಾಗಳ ಟ್ರೆಂಡ್ ಆರಂಭಿಸಿದ ನಿರ್ದೇಶಕರು ಬಿ.ವಿಠಲಾಚಾರ್ಯ. ಕನ್ನಡಿಗರಾದ ಅವರು ಯಶಸ್ಸು ಕಂಡದ್ದು ತೆಲುಗು, ತಮಿಳು ಚಿತ್ರರಂಗದಲ್ಲಿ ಎನ್ನುವುದು ಸೋಜಿಗ. ಅವರು ಕಾಲವಾಗಿ ಇಂದಿಗೆ (21) ಇಪ್ಪತ್ತೊಂದು ವರ್ಷ.

***

ರಾಜಮೌಳಿ ನಿರ್ದೇಶನದಲ್ಲಿ ತೆರೆಗೆ ಬಂದ ‘ಬಾಹುಬಲಿ’ ಫ್ಯಾಂಟಸಿ ಸಿನಿಮಾ ಸರಣಿಗಳು ಭಾರತದಾದ್ಯಂತ ಮಾತ್ರವಲ್ಲದೆ ಜಾಗತಿಕ ಮಾರುಕಟ್ಟೆಯಲ್ಲೂ ಸದ್ದುಮಾಡಿದವು. ಅತ್ಯಾಧುನಿಕ ತಂತ್ರಜ್ಞಾನವನ್ನು ಅಚ್ಚುಕಟ್ಟಾಗಿ ಬಳಕೆ ಮಾಡಿಕೊಂಡ ನಿರ್ದೇಶಕ ರಾಜಮೌಳಿ ತೆರೆಯ ಮೇಲೆ ಅದ್ಭುತವನ್ನೇ ಸೃಷ್ಟಿಸಿದ್ದರು. ಆದರೆ 50ರ ದಶಕದಲ್ಲಿ ಆಗಿದ್ದ ಅಲ್ಪ ತಂತ್ರಜ್ಞಾನವನ್ನೇ ಸೂಕ್ತವಾಗಿ ಬಳಸಿಕೊಂಡು ಬೆಳ್ಳೆತೆರೆಯಲ್ಲಿ ಇಂಥ ಅಚ್ಚರಿಗಳನ್ನು ಸೃಷ್ಟಿಸಿ ಯಶಸ್ಸು ಕಂಡವರು ಬಿ.ವಿಠಲಾಚಾರ್ಯ. 1954ರಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ ಜಾನಪದ ಶೈಲಿಯ ಫ್ಯಾಂಟಸಿ ಕನ್ನಡ ಸಿನಿಮಾ “ರಾಜಲಕ್ಷ್ಮಿ’ ಚಿತ್ರೋದ್ಯಮದವರ ಗಮನ ಸೆಳೆದಿತ್ತು. ತಮಿಳು ಮತ್ತು ತೆಲುಗು ಚಿತ್ರೋದ್ಯಮಿಗಳೂ ಈ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮುಂದಿನ ದಿನಗಳಲ್ಲಿ ಇವರು ನಿರ್ಮಿಸಿದ “ಪಾಲಾಳಮೋಹಿನಿ’, “ಮೋಹಿನಿ ಭಸ್ಮಾಸುರ’ ತೆಲುಗು ಫ್ಯಾಂಟಸಿ ಸಿನಿಮಾಗಳು ಭರ್ಜರಿ ಯಶಸ್ಸು ಕಂಡಿದ್ದವು. ದಕ್ಷಿಣ ಭಾರತ ಮಾತ್ರವಲ್ಲ ಹಿಂದಿ ಚಿತ್ರರಂಗದವರೂ ಅವರ ಸಿನಿಮಾ ತಂತ್ರಗಳನ್ನು ಹೊಗಳಿದ್ದರು.

ಮೂಲತಃ ಉಡುಪಿಯವರಾದ ವಿಠಲಾಚಾರ್ಯರು ಕೆಲಸದ ನಿಮಿತ್ತ ಚಿಕ್ಕ ವಯಸ್ಸಿನಲ್ಲೇ ಊರು ಬಿಟ್ಟು ಅರಸೀಕೆರೆ ಸೇರಿದರು. ಅವರು ಓದಿದ್ದು ಏಳನೇ ತರಗತಿಯಷ್ಟೆ. ಶಾಲೆ ಬಿಟ್ಟು ಹೋಟೆಲ್ ಸೇರಿದ ಅವರು ಕೆಲವು ವರ್ಷಗಳ ನಂತರ ಮೈಸೂರಿನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದರು. ಹೋಟೆಲ್ ಉದ್ಯಮಿಯಾದರೂ ಅವರ ಆಸಕ್ತಿ ಇದ್ದುದು ಸಿನಿಮಾರಂಗದೆಡೆ. ಮೊದಲ ಪ್ರಯತ್ನವಾಗಿ ಸಿ.ವಿ.ರಾಜು ನಿರ್ದೇಶನದ “ಶ್ರೀಕೃಷ್ಣಲೀಲಾ” ಸಿನಿಮಾದ ಸಹನಿರ್ಮಾಪಕರಾದರು. ಮುಂದೆ ಡಿ.ಶಂಕರ್‌ಸಿಂಗ್ ಅವರ ಮಹಾತ್ಮಾ ಪಿಕ್ಚರ್ಸ್‍ನೊಂದಿಗೆ ವಿಠಲಾಚಾರ್ಯರು ಗುರುತಿಸಿಕೊಂಡರು. 1952ರಲ್ಲಿ ತಯಾರಾದ ಮಹಾತ್ಮಾ ಪಿಕ್ಚರ್ಸ್‍ನ “ಸೌಭಾಗ್ಯ ಲಕ್ಷ್ಮಿ” ಸಿನಿಮಾ ನಿರ್ದೇಶಿಸುವ ಮೂಲಕ ಸ್ವತಂತ್ರ್ಯ ನಿರ್ಮಾಪಕರಾದರು. ಮರುವರ್ಷ 1953ರಲ್ಲಿ ತಮ್ಮದೇ ವಿಠಲ್ ಪ್ರೊಡಕ್ಷನ್ಸ್ ಆರಂಭಿಸಿದರು. ಈ ಸಂಸ್ಥೆಯಡಿ ವಿಠಲಾಚಾರ್ಯರು “ಕನ್ಯಾದಾನ’ (1954) ನಿರ್ಮಿಸಿ, ನಿರ್ದೇಶಿಸಿದರು. ಫ್ಯಾಂಟಸಿ ಸಿನಮಾ ಮಾಡಬೇಕೆನ್ನುವ ಅವರ ಮಹದಾಸೆ ಕೈಗೂಡಿದ್ದು “ರಾಜಲಕ್ಷ್ಮಿ’ ಚಿತ್ರದ ಮೂಲಕ.

ಇದಾದ ನಂತರ “ಮುತ್ತೈದೆ ಭಾಗ್ಯ” (1956), “ಮನೆ ತುಂಬಿದ ಹೆಣ್ಣು” (1958) ಚಿತ್ರಗಳನ್ನು ಮಾಡಿದರು. “ಮುತ್ತೈದು ಭಾಗ್ಯ” ಚಿತ್ರದಲ್ಲಿ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ನಾಯಕರಾಗಿದ್ದರು ಎನ್ನುವುದು ವಿಶೇಷ. ಅದೇಕೋ ಈ ಸಿನಿಮಾಗಳು ಗೆಲ್ಲಲಿಲ್ಲ. ಇದರಿಂದ ತೆಲುಗು ಸಿನಿಮಾರಂಗದತ್ತ ಮುಖಮಾಡಿದ ವಿಠಲಾಚಾರ್ಯರು ಅಲ್ಲಿ ಫ್ಯಾಂಟಸಿ ಸಿನಿಮಾಗಳ ಮೂಲಕವೇ ದೊಡ್ಡ ಹೆಸರು ಮಾಡಿದರು. ತಮಿಳಿನಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ “ಪೆಣ್‍ಕುಲತ್ತಿನ್”, “ತೇನ್‍ವಿಳಕ್ಕು” ಸಿನಿಮಾಗಳು ದೊಡ್ಡ ಯಶಸ್ಸು ಕಂಡವು. ಕನ್ನಡ, ತೆಲುಗು ಮತ್ತು ತಮಿಳಿನ 80ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿದ ವಿಠಲಾಚಾರ್ಯರು 1996, ಮೇ 28ರಂದು ತಮ್ಮ 80ನೇ ವಯಸ್ಸಿನಲ್ಲಿ ನಿಧನರಾದರು.

ಚಿತ್ರನಿರ್ಮಾಣ, ನಿರ್ದೇಶನದ ಜೊತೆ ಹಲವಾರು ತಂತ್ರಜ್ಞರು ಮತ್ತು ಕಲಾವಿದರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಹೆಗ್ಗಳಿಕೆಯೂ ವಿಠಲಾಚಾರ್ಯರಿಗೆ ಸಲ್ಲಬೇಕು. ಆಗ ಸಿನಿಮಾ ಸೇರುವ ಆಸೆಯಿಂದ ಕನ್ನಡ ನಾಡಿನಿಂದ ಮದರಾಸಿಗೆ ಆಗಮಿಸುವವರಿಗೆ ಅವರು ನೆರವಾಗುತ್ತಿದ್ದರು. ಕನ್ನಡ ಚಿತ್ರರಂಗ ಕಂಡ ಮೇರು ನಿರ್ದೇಶಕ ಸಿದ್ದಲಿಂಗಯ್ಯನವರು ಮೊದಲು ತರಬೇತಿ ಪಡೆದದ್ದೇ ವಿಠಲಾಚಾರ್ಯರಲ್ಲಿ. ಹೀಗೆ, ಪರೋಕ್ಷವಾಗಿಯೂ ಅವರು ಕನ್ನಡ ಚಿತ್ರರಂಗದ ಬೆಳವಣಿಗೆಗಳಲ್ಲಿ ಪ್ರೇರಕ ಶಕ್ತಿಯಾಗಿದ್ದರು. ಐವತ್ತು, ಅರವತ್ತರ ದಶಕದಲ್ಲಿ ಅವರು ತಯಾರಿಸಿದ ಫ್ಯಾಂಟಸಿ ಸಿನಿಮಾಗಳು ಮುಂದಿನ ದಿನಗಳಲ್ಲಿ ಅಂತಹ ಸಿನಿಮಾಗಳನ್ನು ನಿರ್ಮಿಸುವವರಿಗೆ ಸ್ಫೂರ್ತಿಯಾದವು. ಇಂದಿಗೂ ದಕ್ಷಿಣ ಭಾರತದ ಫ್ಯಾಂಟಸಿ ಸಿನಿಮಾಗಳ ಬಗ್ಗೆ ಮಾತನಾಡುವಾಗ ವಿಠಲಾಚಾರ್ಯರ (20/01/1920 – 28/05/1999) ಹೆಸರು ಕಡ್ಡಾಯವಾಗಿ ಪ್ರಸ್ತಾಪವಾಗುತ್ತದೆ.


ಇದನ್ನೂ ಓದಿ: ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...