Homeಮುಖಪುಟತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

ತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

- Advertisement -
- Advertisement -

ದಕ್ಷಿಣ ಭಾರತದಲ್ಲಿ ಫ್ಯಾಂಟಸಿ ಸಿನಿಮಾಗಳ ಟ್ರೆಂಡ್ ಆರಂಭಿಸಿದ ನಿರ್ದೇಶಕರು ಬಿ.ವಿಠಲಾಚಾರ್ಯ. ಕನ್ನಡಿಗರಾದ ಅವರು ಯಶಸ್ಸು ಕಂಡದ್ದು ತೆಲುಗು, ತಮಿಳು ಚಿತ್ರರಂಗದಲ್ಲಿ ಎನ್ನುವುದು ಸೋಜಿಗ. ಅವರು ಕಾಲವಾಗಿ ಇಂದಿಗೆ (21) ಇಪ್ಪತ್ತೊಂದು ವರ್ಷ.

***

ರಾಜಮೌಳಿ ನಿರ್ದೇಶನದಲ್ಲಿ ತೆರೆಗೆ ಬಂದ ‘ಬಾಹುಬಲಿ’ ಫ್ಯಾಂಟಸಿ ಸಿನಿಮಾ ಸರಣಿಗಳು ಭಾರತದಾದ್ಯಂತ ಮಾತ್ರವಲ್ಲದೆ ಜಾಗತಿಕ ಮಾರುಕಟ್ಟೆಯಲ್ಲೂ ಸದ್ದುಮಾಡಿದವು. ಅತ್ಯಾಧುನಿಕ ತಂತ್ರಜ್ಞಾನವನ್ನು ಅಚ್ಚುಕಟ್ಟಾಗಿ ಬಳಕೆ ಮಾಡಿಕೊಂಡ ನಿರ್ದೇಶಕ ರಾಜಮೌಳಿ ತೆರೆಯ ಮೇಲೆ ಅದ್ಭುತವನ್ನೇ ಸೃಷ್ಟಿಸಿದ್ದರು. ಆದರೆ 50ರ ದಶಕದಲ್ಲಿ ಆಗಿದ್ದ ಅಲ್ಪ ತಂತ್ರಜ್ಞಾನವನ್ನೇ ಸೂಕ್ತವಾಗಿ ಬಳಸಿಕೊಂಡು ಬೆಳ್ಳೆತೆರೆಯಲ್ಲಿ ಇಂಥ ಅಚ್ಚರಿಗಳನ್ನು ಸೃಷ್ಟಿಸಿ ಯಶಸ್ಸು ಕಂಡವರು ಬಿ.ವಿಠಲಾಚಾರ್ಯ. 1954ರಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ ಜಾನಪದ ಶೈಲಿಯ ಫ್ಯಾಂಟಸಿ ಕನ್ನಡ ಸಿನಿಮಾ “ರಾಜಲಕ್ಷ್ಮಿ’ ಚಿತ್ರೋದ್ಯಮದವರ ಗಮನ ಸೆಳೆದಿತ್ತು. ತಮಿಳು ಮತ್ತು ತೆಲುಗು ಚಿತ್ರೋದ್ಯಮಿಗಳೂ ಈ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮುಂದಿನ ದಿನಗಳಲ್ಲಿ ಇವರು ನಿರ್ಮಿಸಿದ “ಪಾಲಾಳಮೋಹಿನಿ’, “ಮೋಹಿನಿ ಭಸ್ಮಾಸುರ’ ತೆಲುಗು ಫ್ಯಾಂಟಸಿ ಸಿನಿಮಾಗಳು ಭರ್ಜರಿ ಯಶಸ್ಸು ಕಂಡಿದ್ದವು. ದಕ್ಷಿಣ ಭಾರತ ಮಾತ್ರವಲ್ಲ ಹಿಂದಿ ಚಿತ್ರರಂಗದವರೂ ಅವರ ಸಿನಿಮಾ ತಂತ್ರಗಳನ್ನು ಹೊಗಳಿದ್ದರು.

ಮೂಲತಃ ಉಡುಪಿಯವರಾದ ವಿಠಲಾಚಾರ್ಯರು ಕೆಲಸದ ನಿಮಿತ್ತ ಚಿಕ್ಕ ವಯಸ್ಸಿನಲ್ಲೇ ಊರು ಬಿಟ್ಟು ಅರಸೀಕೆರೆ ಸೇರಿದರು. ಅವರು ಓದಿದ್ದು ಏಳನೇ ತರಗತಿಯಷ್ಟೆ. ಶಾಲೆ ಬಿಟ್ಟು ಹೋಟೆಲ್ ಸೇರಿದ ಅವರು ಕೆಲವು ವರ್ಷಗಳ ನಂತರ ಮೈಸೂರಿನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದರು. ಹೋಟೆಲ್ ಉದ್ಯಮಿಯಾದರೂ ಅವರ ಆಸಕ್ತಿ ಇದ್ದುದು ಸಿನಿಮಾರಂಗದೆಡೆ. ಮೊದಲ ಪ್ರಯತ್ನವಾಗಿ ಸಿ.ವಿ.ರಾಜು ನಿರ್ದೇಶನದ “ಶ್ರೀಕೃಷ್ಣಲೀಲಾ” ಸಿನಿಮಾದ ಸಹನಿರ್ಮಾಪಕರಾದರು. ಮುಂದೆ ಡಿ.ಶಂಕರ್‌ಸಿಂಗ್ ಅವರ ಮಹಾತ್ಮಾ ಪಿಕ್ಚರ್ಸ್‍ನೊಂದಿಗೆ ವಿಠಲಾಚಾರ್ಯರು ಗುರುತಿಸಿಕೊಂಡರು. 1952ರಲ್ಲಿ ತಯಾರಾದ ಮಹಾತ್ಮಾ ಪಿಕ್ಚರ್ಸ್‍ನ “ಸೌಭಾಗ್ಯ ಲಕ್ಷ್ಮಿ” ಸಿನಿಮಾ ನಿರ್ದೇಶಿಸುವ ಮೂಲಕ ಸ್ವತಂತ್ರ್ಯ ನಿರ್ಮಾಪಕರಾದರು. ಮರುವರ್ಷ 1953ರಲ್ಲಿ ತಮ್ಮದೇ ವಿಠಲ್ ಪ್ರೊಡಕ್ಷನ್ಸ್ ಆರಂಭಿಸಿದರು. ಈ ಸಂಸ್ಥೆಯಡಿ ವಿಠಲಾಚಾರ್ಯರು “ಕನ್ಯಾದಾನ’ (1954) ನಿರ್ಮಿಸಿ, ನಿರ್ದೇಶಿಸಿದರು. ಫ್ಯಾಂಟಸಿ ಸಿನಮಾ ಮಾಡಬೇಕೆನ್ನುವ ಅವರ ಮಹದಾಸೆ ಕೈಗೂಡಿದ್ದು “ರಾಜಲಕ್ಷ್ಮಿ’ ಚಿತ್ರದ ಮೂಲಕ.

ಇದಾದ ನಂತರ “ಮುತ್ತೈದೆ ಭಾಗ್ಯ” (1956), “ಮನೆ ತುಂಬಿದ ಹೆಣ್ಣು” (1958) ಚಿತ್ರಗಳನ್ನು ಮಾಡಿದರು. “ಮುತ್ತೈದು ಭಾಗ್ಯ” ಚಿತ್ರದಲ್ಲಿ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ನಾಯಕರಾಗಿದ್ದರು ಎನ್ನುವುದು ವಿಶೇಷ. ಅದೇಕೋ ಈ ಸಿನಿಮಾಗಳು ಗೆಲ್ಲಲಿಲ್ಲ. ಇದರಿಂದ ತೆಲುಗು ಸಿನಿಮಾರಂಗದತ್ತ ಮುಖಮಾಡಿದ ವಿಠಲಾಚಾರ್ಯರು ಅಲ್ಲಿ ಫ್ಯಾಂಟಸಿ ಸಿನಿಮಾಗಳ ಮೂಲಕವೇ ದೊಡ್ಡ ಹೆಸರು ಮಾಡಿದರು. ತಮಿಳಿನಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ “ಪೆಣ್‍ಕುಲತ್ತಿನ್”, “ತೇನ್‍ವಿಳಕ್ಕು” ಸಿನಿಮಾಗಳು ದೊಡ್ಡ ಯಶಸ್ಸು ಕಂಡವು. ಕನ್ನಡ, ತೆಲುಗು ಮತ್ತು ತಮಿಳಿನ 80ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿದ ವಿಠಲಾಚಾರ್ಯರು 1996, ಮೇ 28ರಂದು ತಮ್ಮ 80ನೇ ವಯಸ್ಸಿನಲ್ಲಿ ನಿಧನರಾದರು.

ಚಿತ್ರನಿರ್ಮಾಣ, ನಿರ್ದೇಶನದ ಜೊತೆ ಹಲವಾರು ತಂತ್ರಜ್ಞರು ಮತ್ತು ಕಲಾವಿದರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಹೆಗ್ಗಳಿಕೆಯೂ ವಿಠಲಾಚಾರ್ಯರಿಗೆ ಸಲ್ಲಬೇಕು. ಆಗ ಸಿನಿಮಾ ಸೇರುವ ಆಸೆಯಿಂದ ಕನ್ನಡ ನಾಡಿನಿಂದ ಮದರಾಸಿಗೆ ಆಗಮಿಸುವವರಿಗೆ ಅವರು ನೆರವಾಗುತ್ತಿದ್ದರು. ಕನ್ನಡ ಚಿತ್ರರಂಗ ಕಂಡ ಮೇರು ನಿರ್ದೇಶಕ ಸಿದ್ದಲಿಂಗಯ್ಯನವರು ಮೊದಲು ತರಬೇತಿ ಪಡೆದದ್ದೇ ವಿಠಲಾಚಾರ್ಯರಲ್ಲಿ. ಹೀಗೆ, ಪರೋಕ್ಷವಾಗಿಯೂ ಅವರು ಕನ್ನಡ ಚಿತ್ರರಂಗದ ಬೆಳವಣಿಗೆಗಳಲ್ಲಿ ಪ್ರೇರಕ ಶಕ್ತಿಯಾಗಿದ್ದರು. ಐವತ್ತು, ಅರವತ್ತರ ದಶಕದಲ್ಲಿ ಅವರು ತಯಾರಿಸಿದ ಫ್ಯಾಂಟಸಿ ಸಿನಿಮಾಗಳು ಮುಂದಿನ ದಿನಗಳಲ್ಲಿ ಅಂತಹ ಸಿನಿಮಾಗಳನ್ನು ನಿರ್ಮಿಸುವವರಿಗೆ ಸ್ಫೂರ್ತಿಯಾದವು. ಇಂದಿಗೂ ದಕ್ಷಿಣ ಭಾರತದ ಫ್ಯಾಂಟಸಿ ಸಿನಿಮಾಗಳ ಬಗ್ಗೆ ಮಾತನಾಡುವಾಗ ವಿಠಲಾಚಾರ್ಯರ (20/01/1920 – 28/05/1999) ಹೆಸರು ಕಡ್ಡಾಯವಾಗಿ ಪ್ರಸ್ತಾಪವಾಗುತ್ತದೆ.


ಇದನ್ನೂ ಓದಿ: ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...