Homeಮುಖಪುಟತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

ತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

- Advertisement -
- Advertisement -

ದಕ್ಷಿಣ ಭಾರತದಲ್ಲಿ ಫ್ಯಾಂಟಸಿ ಸಿನಿಮಾಗಳ ಟ್ರೆಂಡ್ ಆರಂಭಿಸಿದ ನಿರ್ದೇಶಕರು ಬಿ.ವಿಠಲಾಚಾರ್ಯ. ಕನ್ನಡಿಗರಾದ ಅವರು ಯಶಸ್ಸು ಕಂಡದ್ದು ತೆಲುಗು, ತಮಿಳು ಚಿತ್ರರಂಗದಲ್ಲಿ ಎನ್ನುವುದು ಸೋಜಿಗ. ಅವರು ಕಾಲವಾಗಿ ಇಂದಿಗೆ (21) ಇಪ್ಪತ್ತೊಂದು ವರ್ಷ.

***

ರಾಜಮೌಳಿ ನಿರ್ದೇಶನದಲ್ಲಿ ತೆರೆಗೆ ಬಂದ ‘ಬಾಹುಬಲಿ’ ಫ್ಯಾಂಟಸಿ ಸಿನಿಮಾ ಸರಣಿಗಳು ಭಾರತದಾದ್ಯಂತ ಮಾತ್ರವಲ್ಲದೆ ಜಾಗತಿಕ ಮಾರುಕಟ್ಟೆಯಲ್ಲೂ ಸದ್ದುಮಾಡಿದವು. ಅತ್ಯಾಧುನಿಕ ತಂತ್ರಜ್ಞಾನವನ್ನು ಅಚ್ಚುಕಟ್ಟಾಗಿ ಬಳಕೆ ಮಾಡಿಕೊಂಡ ನಿರ್ದೇಶಕ ರಾಜಮೌಳಿ ತೆರೆಯ ಮೇಲೆ ಅದ್ಭುತವನ್ನೇ ಸೃಷ್ಟಿಸಿದ್ದರು. ಆದರೆ 50ರ ದಶಕದಲ್ಲಿ ಆಗಿದ್ದ ಅಲ್ಪ ತಂತ್ರಜ್ಞಾನವನ್ನೇ ಸೂಕ್ತವಾಗಿ ಬಳಸಿಕೊಂಡು ಬೆಳ್ಳೆತೆರೆಯಲ್ಲಿ ಇಂಥ ಅಚ್ಚರಿಗಳನ್ನು ಸೃಷ್ಟಿಸಿ ಯಶಸ್ಸು ಕಂಡವರು ಬಿ.ವಿಠಲಾಚಾರ್ಯ. 1954ರಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ ಜಾನಪದ ಶೈಲಿಯ ಫ್ಯಾಂಟಸಿ ಕನ್ನಡ ಸಿನಿಮಾ “ರಾಜಲಕ್ಷ್ಮಿ’ ಚಿತ್ರೋದ್ಯಮದವರ ಗಮನ ಸೆಳೆದಿತ್ತು. ತಮಿಳು ಮತ್ತು ತೆಲುಗು ಚಿತ್ರೋದ್ಯಮಿಗಳೂ ಈ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮುಂದಿನ ದಿನಗಳಲ್ಲಿ ಇವರು ನಿರ್ಮಿಸಿದ “ಪಾಲಾಳಮೋಹಿನಿ’, “ಮೋಹಿನಿ ಭಸ್ಮಾಸುರ’ ತೆಲುಗು ಫ್ಯಾಂಟಸಿ ಸಿನಿಮಾಗಳು ಭರ್ಜರಿ ಯಶಸ್ಸು ಕಂಡಿದ್ದವು. ದಕ್ಷಿಣ ಭಾರತ ಮಾತ್ರವಲ್ಲ ಹಿಂದಿ ಚಿತ್ರರಂಗದವರೂ ಅವರ ಸಿನಿಮಾ ತಂತ್ರಗಳನ್ನು ಹೊಗಳಿದ್ದರು.

ಮೂಲತಃ ಉಡುಪಿಯವರಾದ ವಿಠಲಾಚಾರ್ಯರು ಕೆಲಸದ ನಿಮಿತ್ತ ಚಿಕ್ಕ ವಯಸ್ಸಿನಲ್ಲೇ ಊರು ಬಿಟ್ಟು ಅರಸೀಕೆರೆ ಸೇರಿದರು. ಅವರು ಓದಿದ್ದು ಏಳನೇ ತರಗತಿಯಷ್ಟೆ. ಶಾಲೆ ಬಿಟ್ಟು ಹೋಟೆಲ್ ಸೇರಿದ ಅವರು ಕೆಲವು ವರ್ಷಗಳ ನಂತರ ಮೈಸೂರಿನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದರು. ಹೋಟೆಲ್ ಉದ್ಯಮಿಯಾದರೂ ಅವರ ಆಸಕ್ತಿ ಇದ್ದುದು ಸಿನಿಮಾರಂಗದೆಡೆ. ಮೊದಲ ಪ್ರಯತ್ನವಾಗಿ ಸಿ.ವಿ.ರಾಜು ನಿರ್ದೇಶನದ “ಶ್ರೀಕೃಷ್ಣಲೀಲಾ” ಸಿನಿಮಾದ ಸಹನಿರ್ಮಾಪಕರಾದರು. ಮುಂದೆ ಡಿ.ಶಂಕರ್‌ಸಿಂಗ್ ಅವರ ಮಹಾತ್ಮಾ ಪಿಕ್ಚರ್ಸ್‍ನೊಂದಿಗೆ ವಿಠಲಾಚಾರ್ಯರು ಗುರುತಿಸಿಕೊಂಡರು. 1952ರಲ್ಲಿ ತಯಾರಾದ ಮಹಾತ್ಮಾ ಪಿಕ್ಚರ್ಸ್‍ನ “ಸೌಭಾಗ್ಯ ಲಕ್ಷ್ಮಿ” ಸಿನಿಮಾ ನಿರ್ದೇಶಿಸುವ ಮೂಲಕ ಸ್ವತಂತ್ರ್ಯ ನಿರ್ಮಾಪಕರಾದರು. ಮರುವರ್ಷ 1953ರಲ್ಲಿ ತಮ್ಮದೇ ವಿಠಲ್ ಪ್ರೊಡಕ್ಷನ್ಸ್ ಆರಂಭಿಸಿದರು. ಈ ಸಂಸ್ಥೆಯಡಿ ವಿಠಲಾಚಾರ್ಯರು “ಕನ್ಯಾದಾನ’ (1954) ನಿರ್ಮಿಸಿ, ನಿರ್ದೇಶಿಸಿದರು. ಫ್ಯಾಂಟಸಿ ಸಿನಮಾ ಮಾಡಬೇಕೆನ್ನುವ ಅವರ ಮಹದಾಸೆ ಕೈಗೂಡಿದ್ದು “ರಾಜಲಕ್ಷ್ಮಿ’ ಚಿತ್ರದ ಮೂಲಕ.

ಇದಾದ ನಂತರ “ಮುತ್ತೈದೆ ಭಾಗ್ಯ” (1956), “ಮನೆ ತುಂಬಿದ ಹೆಣ್ಣು” (1958) ಚಿತ್ರಗಳನ್ನು ಮಾಡಿದರು. “ಮುತ್ತೈದು ಭಾಗ್ಯ” ಚಿತ್ರದಲ್ಲಿ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ನಾಯಕರಾಗಿದ್ದರು ಎನ್ನುವುದು ವಿಶೇಷ. ಅದೇಕೋ ಈ ಸಿನಿಮಾಗಳು ಗೆಲ್ಲಲಿಲ್ಲ. ಇದರಿಂದ ತೆಲುಗು ಸಿನಿಮಾರಂಗದತ್ತ ಮುಖಮಾಡಿದ ವಿಠಲಾಚಾರ್ಯರು ಅಲ್ಲಿ ಫ್ಯಾಂಟಸಿ ಸಿನಿಮಾಗಳ ಮೂಲಕವೇ ದೊಡ್ಡ ಹೆಸರು ಮಾಡಿದರು. ತಮಿಳಿನಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ “ಪೆಣ್‍ಕುಲತ್ತಿನ್”, “ತೇನ್‍ವಿಳಕ್ಕು” ಸಿನಿಮಾಗಳು ದೊಡ್ಡ ಯಶಸ್ಸು ಕಂಡವು. ಕನ್ನಡ, ತೆಲುಗು ಮತ್ತು ತಮಿಳಿನ 80ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿದ ವಿಠಲಾಚಾರ್ಯರು 1996, ಮೇ 28ರಂದು ತಮ್ಮ 80ನೇ ವಯಸ್ಸಿನಲ್ಲಿ ನಿಧನರಾದರು.

ಚಿತ್ರನಿರ್ಮಾಣ, ನಿರ್ದೇಶನದ ಜೊತೆ ಹಲವಾರು ತಂತ್ರಜ್ಞರು ಮತ್ತು ಕಲಾವಿದರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಹೆಗ್ಗಳಿಕೆಯೂ ವಿಠಲಾಚಾರ್ಯರಿಗೆ ಸಲ್ಲಬೇಕು. ಆಗ ಸಿನಿಮಾ ಸೇರುವ ಆಸೆಯಿಂದ ಕನ್ನಡ ನಾಡಿನಿಂದ ಮದರಾಸಿಗೆ ಆಗಮಿಸುವವರಿಗೆ ಅವರು ನೆರವಾಗುತ್ತಿದ್ದರು. ಕನ್ನಡ ಚಿತ್ರರಂಗ ಕಂಡ ಮೇರು ನಿರ್ದೇಶಕ ಸಿದ್ದಲಿಂಗಯ್ಯನವರು ಮೊದಲು ತರಬೇತಿ ಪಡೆದದ್ದೇ ವಿಠಲಾಚಾರ್ಯರಲ್ಲಿ. ಹೀಗೆ, ಪರೋಕ್ಷವಾಗಿಯೂ ಅವರು ಕನ್ನಡ ಚಿತ್ರರಂಗದ ಬೆಳವಣಿಗೆಗಳಲ್ಲಿ ಪ್ರೇರಕ ಶಕ್ತಿಯಾಗಿದ್ದರು. ಐವತ್ತು, ಅರವತ್ತರ ದಶಕದಲ್ಲಿ ಅವರು ತಯಾರಿಸಿದ ಫ್ಯಾಂಟಸಿ ಸಿನಿಮಾಗಳು ಮುಂದಿನ ದಿನಗಳಲ್ಲಿ ಅಂತಹ ಸಿನಿಮಾಗಳನ್ನು ನಿರ್ಮಿಸುವವರಿಗೆ ಸ್ಫೂರ್ತಿಯಾದವು. ಇಂದಿಗೂ ದಕ್ಷಿಣ ಭಾರತದ ಫ್ಯಾಂಟಸಿ ಸಿನಿಮಾಗಳ ಬಗ್ಗೆ ಮಾತನಾಡುವಾಗ ವಿಠಲಾಚಾರ್ಯರ (20/01/1920 – 28/05/1999) ಹೆಸರು ಕಡ್ಡಾಯವಾಗಿ ಪ್ರಸ್ತಾಪವಾಗುತ್ತದೆ.


ಇದನ್ನೂ ಓದಿ: ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...