Homeಮುಖಪುಟತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

ತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

- Advertisement -
- Advertisement -

ದಕ್ಷಿಣ ಭಾರತದಲ್ಲಿ ಫ್ಯಾಂಟಸಿ ಸಿನಿಮಾಗಳ ಟ್ರೆಂಡ್ ಆರಂಭಿಸಿದ ನಿರ್ದೇಶಕರು ಬಿ.ವಿಠಲಾಚಾರ್ಯ. ಕನ್ನಡಿಗರಾದ ಅವರು ಯಶಸ್ಸು ಕಂಡದ್ದು ತೆಲುಗು, ತಮಿಳು ಚಿತ್ರರಂಗದಲ್ಲಿ ಎನ್ನುವುದು ಸೋಜಿಗ. ಅವರು ಕಾಲವಾಗಿ ಇಂದಿಗೆ (21) ಇಪ್ಪತ್ತೊಂದು ವರ್ಷ.

***

ರಾಜಮೌಳಿ ನಿರ್ದೇಶನದಲ್ಲಿ ತೆರೆಗೆ ಬಂದ ‘ಬಾಹುಬಲಿ’ ಫ್ಯಾಂಟಸಿ ಸಿನಿಮಾ ಸರಣಿಗಳು ಭಾರತದಾದ್ಯಂತ ಮಾತ್ರವಲ್ಲದೆ ಜಾಗತಿಕ ಮಾರುಕಟ್ಟೆಯಲ್ಲೂ ಸದ್ದುಮಾಡಿದವು. ಅತ್ಯಾಧುನಿಕ ತಂತ್ರಜ್ಞಾನವನ್ನು ಅಚ್ಚುಕಟ್ಟಾಗಿ ಬಳಕೆ ಮಾಡಿಕೊಂಡ ನಿರ್ದೇಶಕ ರಾಜಮೌಳಿ ತೆರೆಯ ಮೇಲೆ ಅದ್ಭುತವನ್ನೇ ಸೃಷ್ಟಿಸಿದ್ದರು. ಆದರೆ 50ರ ದಶಕದಲ್ಲಿ ಆಗಿದ್ದ ಅಲ್ಪ ತಂತ್ರಜ್ಞಾನವನ್ನೇ ಸೂಕ್ತವಾಗಿ ಬಳಸಿಕೊಂಡು ಬೆಳ್ಳೆತೆರೆಯಲ್ಲಿ ಇಂಥ ಅಚ್ಚರಿಗಳನ್ನು ಸೃಷ್ಟಿಸಿ ಯಶಸ್ಸು ಕಂಡವರು ಬಿ.ವಿಠಲಾಚಾರ್ಯ. 1954ರಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ ಜಾನಪದ ಶೈಲಿಯ ಫ್ಯಾಂಟಸಿ ಕನ್ನಡ ಸಿನಿಮಾ “ರಾಜಲಕ್ಷ್ಮಿ’ ಚಿತ್ರೋದ್ಯಮದವರ ಗಮನ ಸೆಳೆದಿತ್ತು. ತಮಿಳು ಮತ್ತು ತೆಲುಗು ಚಿತ್ರೋದ್ಯಮಿಗಳೂ ಈ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮುಂದಿನ ದಿನಗಳಲ್ಲಿ ಇವರು ನಿರ್ಮಿಸಿದ “ಪಾಲಾಳಮೋಹಿನಿ’, “ಮೋಹಿನಿ ಭಸ್ಮಾಸುರ’ ತೆಲುಗು ಫ್ಯಾಂಟಸಿ ಸಿನಿಮಾಗಳು ಭರ್ಜರಿ ಯಶಸ್ಸು ಕಂಡಿದ್ದವು. ದಕ್ಷಿಣ ಭಾರತ ಮಾತ್ರವಲ್ಲ ಹಿಂದಿ ಚಿತ್ರರಂಗದವರೂ ಅವರ ಸಿನಿಮಾ ತಂತ್ರಗಳನ್ನು ಹೊಗಳಿದ್ದರು.

ಮೂಲತಃ ಉಡುಪಿಯವರಾದ ವಿಠಲಾಚಾರ್ಯರು ಕೆಲಸದ ನಿಮಿತ್ತ ಚಿಕ್ಕ ವಯಸ್ಸಿನಲ್ಲೇ ಊರು ಬಿಟ್ಟು ಅರಸೀಕೆರೆ ಸೇರಿದರು. ಅವರು ಓದಿದ್ದು ಏಳನೇ ತರಗತಿಯಷ್ಟೆ. ಶಾಲೆ ಬಿಟ್ಟು ಹೋಟೆಲ್ ಸೇರಿದ ಅವರು ಕೆಲವು ವರ್ಷಗಳ ನಂತರ ಮೈಸೂರಿನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದರು. ಹೋಟೆಲ್ ಉದ್ಯಮಿಯಾದರೂ ಅವರ ಆಸಕ್ತಿ ಇದ್ದುದು ಸಿನಿಮಾರಂಗದೆಡೆ. ಮೊದಲ ಪ್ರಯತ್ನವಾಗಿ ಸಿ.ವಿ.ರಾಜು ನಿರ್ದೇಶನದ “ಶ್ರೀಕೃಷ್ಣಲೀಲಾ” ಸಿನಿಮಾದ ಸಹನಿರ್ಮಾಪಕರಾದರು. ಮುಂದೆ ಡಿ.ಶಂಕರ್‌ಸಿಂಗ್ ಅವರ ಮಹಾತ್ಮಾ ಪಿಕ್ಚರ್ಸ್‍ನೊಂದಿಗೆ ವಿಠಲಾಚಾರ್ಯರು ಗುರುತಿಸಿಕೊಂಡರು. 1952ರಲ್ಲಿ ತಯಾರಾದ ಮಹಾತ್ಮಾ ಪಿಕ್ಚರ್ಸ್‍ನ “ಸೌಭಾಗ್ಯ ಲಕ್ಷ್ಮಿ” ಸಿನಿಮಾ ನಿರ್ದೇಶಿಸುವ ಮೂಲಕ ಸ್ವತಂತ್ರ್ಯ ನಿರ್ಮಾಪಕರಾದರು. ಮರುವರ್ಷ 1953ರಲ್ಲಿ ತಮ್ಮದೇ ವಿಠಲ್ ಪ್ರೊಡಕ್ಷನ್ಸ್ ಆರಂಭಿಸಿದರು. ಈ ಸಂಸ್ಥೆಯಡಿ ವಿಠಲಾಚಾರ್ಯರು “ಕನ್ಯಾದಾನ’ (1954) ನಿರ್ಮಿಸಿ, ನಿರ್ದೇಶಿಸಿದರು. ಫ್ಯಾಂಟಸಿ ಸಿನಮಾ ಮಾಡಬೇಕೆನ್ನುವ ಅವರ ಮಹದಾಸೆ ಕೈಗೂಡಿದ್ದು “ರಾಜಲಕ್ಷ್ಮಿ’ ಚಿತ್ರದ ಮೂಲಕ.

ಇದಾದ ನಂತರ “ಮುತ್ತೈದೆ ಭಾಗ್ಯ” (1956), “ಮನೆ ತುಂಬಿದ ಹೆಣ್ಣು” (1958) ಚಿತ್ರಗಳನ್ನು ಮಾಡಿದರು. “ಮುತ್ತೈದು ಭಾಗ್ಯ” ಚಿತ್ರದಲ್ಲಿ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ನಾಯಕರಾಗಿದ್ದರು ಎನ್ನುವುದು ವಿಶೇಷ. ಅದೇಕೋ ಈ ಸಿನಿಮಾಗಳು ಗೆಲ್ಲಲಿಲ್ಲ. ಇದರಿಂದ ತೆಲುಗು ಸಿನಿಮಾರಂಗದತ್ತ ಮುಖಮಾಡಿದ ವಿಠಲಾಚಾರ್ಯರು ಅಲ್ಲಿ ಫ್ಯಾಂಟಸಿ ಸಿನಿಮಾಗಳ ಮೂಲಕವೇ ದೊಡ್ಡ ಹೆಸರು ಮಾಡಿದರು. ತಮಿಳಿನಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ “ಪೆಣ್‍ಕುಲತ್ತಿನ್”, “ತೇನ್‍ವಿಳಕ್ಕು” ಸಿನಿಮಾಗಳು ದೊಡ್ಡ ಯಶಸ್ಸು ಕಂಡವು. ಕನ್ನಡ, ತೆಲುಗು ಮತ್ತು ತಮಿಳಿನ 80ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿದ ವಿಠಲಾಚಾರ್ಯರು 1996, ಮೇ 28ರಂದು ತಮ್ಮ 80ನೇ ವಯಸ್ಸಿನಲ್ಲಿ ನಿಧನರಾದರು.

ಚಿತ್ರನಿರ್ಮಾಣ, ನಿರ್ದೇಶನದ ಜೊತೆ ಹಲವಾರು ತಂತ್ರಜ್ಞರು ಮತ್ತು ಕಲಾವಿದರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಹೆಗ್ಗಳಿಕೆಯೂ ವಿಠಲಾಚಾರ್ಯರಿಗೆ ಸಲ್ಲಬೇಕು. ಆಗ ಸಿನಿಮಾ ಸೇರುವ ಆಸೆಯಿಂದ ಕನ್ನಡ ನಾಡಿನಿಂದ ಮದರಾಸಿಗೆ ಆಗಮಿಸುವವರಿಗೆ ಅವರು ನೆರವಾಗುತ್ತಿದ್ದರು. ಕನ್ನಡ ಚಿತ್ರರಂಗ ಕಂಡ ಮೇರು ನಿರ್ದೇಶಕ ಸಿದ್ದಲಿಂಗಯ್ಯನವರು ಮೊದಲು ತರಬೇತಿ ಪಡೆದದ್ದೇ ವಿಠಲಾಚಾರ್ಯರಲ್ಲಿ. ಹೀಗೆ, ಪರೋಕ್ಷವಾಗಿಯೂ ಅವರು ಕನ್ನಡ ಚಿತ್ರರಂಗದ ಬೆಳವಣಿಗೆಗಳಲ್ಲಿ ಪ್ರೇರಕ ಶಕ್ತಿಯಾಗಿದ್ದರು. ಐವತ್ತು, ಅರವತ್ತರ ದಶಕದಲ್ಲಿ ಅವರು ತಯಾರಿಸಿದ ಫ್ಯಾಂಟಸಿ ಸಿನಿಮಾಗಳು ಮುಂದಿನ ದಿನಗಳಲ್ಲಿ ಅಂತಹ ಸಿನಿಮಾಗಳನ್ನು ನಿರ್ಮಿಸುವವರಿಗೆ ಸ್ಫೂರ್ತಿಯಾದವು. ಇಂದಿಗೂ ದಕ್ಷಿಣ ಭಾರತದ ಫ್ಯಾಂಟಸಿ ಸಿನಿಮಾಗಳ ಬಗ್ಗೆ ಮಾತನಾಡುವಾಗ ವಿಠಲಾಚಾರ್ಯರ (20/01/1920 – 28/05/1999) ಹೆಸರು ಕಡ್ಡಾಯವಾಗಿ ಪ್ರಸ್ತಾಪವಾಗುತ್ತದೆ.


ಇದನ್ನೂ ಓದಿ: ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...