Homeಮುಖಪುಟತೆಲುಗು ಟಿವಿ ನಟಿ ಕೊಂಡಪಲ್ಲಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ!: ಪೊಲೀಸರ ಹೇಳಿಕೆ

ತೆಲುಗು ಟಿವಿ ನಟಿ ಕೊಂಡಪಲ್ಲಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ!: ಪೊಲೀಸರ ಹೇಳಿಕೆ

"ನಟಿ ಈ ಹಿಂದೆ ದೇವರಾಜ್ ಎಂಬ ವ್ಯಕ್ತಿಯೊಂದಿಗೆ ತಂಗಿದ್ದರು. ಜೂನ್‌ನಲ್ಲಿ ದೇವರಾಜ್ ವಿರುದ್ಧ ಆತ ಕಿರುಕುಳ ನೀಡಿದ ಬಗ್ಗೆ ಆಕೆ ದೂರು ನೀಡಿದ್ದಳು. ಇತ್ತೀಚೆಗೆ ಅವರು ಮತ್ತೆ ಅವನನ್ನು ಭೇಟಿಯಾಗಲು ಪ್ರಾರಂಭಿಸಿದ್ದರು. ಇದರಿಂದಾಗಿ ಕುಟುಂಬ ಸದಸ್ಯರು ನಿನ್ನೆ ಅವಳನ್ನು ಪ್ರಶ್ನಿಸಿದ ನಂತರ ರಾತ್ರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ" ಎಂದು ಅವರು ಹೇಳಿದರು.

- Advertisement -
- Advertisement -

ತೆಲುಗು ದೂರದರ್ಶನ ನಟಿ ಕೊಂಡಪಲ್ಲಿ ಶ್ರಾವಣಿ ಅವರು ಹೈದರಾಬಾದ್ ಅವರ ನಿವಾಸದಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಸ್ಆರ್ ನಗರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ವಿ ನರಸಿಂಹ ರೆಡ್ಡಿ ಹೇಳಿದ್ದಾರೆ.

ಮಂಗಳವಾರ ರಾತ್ರಿ 9 ರಿಂದ 10 ರ ನಡುವೆ ಈ ಘಟನೆ ನಡೆದಿದೆ ಎಂದು ವಿ ನರಸಿಂಹ ರೆಡ್ಡಿ ದೂರವಾಣಿ ಮೂಲಕ ಎಎನ್‌ಐ ಜೊತೆ ಮಾತನಾಡುತ್ತಾ ಹೇಳಿದರು ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.

“ಕೊಂಡಪಲ್ಲಿ ಶ್ರಾವಣಿ ಅವರು ಹೈದರಾಬಾದ್ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ನಿನ್ನೆ ರಾತ್ರಿ 9 ರಿಂದ ರಾತ್ರಿ 10 ರ ನಡುವೆ ಅವರು ತಮ್ಮ ಮಲಗುವ ಕೋಣೆಯೊಳಗೆ ಹೋಗಿ ಎಸ್.ಆರ್.ನಗರದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡಿದ್ದಾರೆ. ಅವರ ಕುಟುಂಬ ಸದಸ್ಯರು ಸಹ ಮನೆಯಲ್ಲಿದ್ದರು” ಎಂದು ಅವರು ಹೇಳಿದರು.

ಇದನ್ನೂ ಓದಿ: ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!

“ನಟಿ ಈ ಹಿಂದೆ ದೇವರಾಜ್ ಎಂಬ ವ್ಯಕ್ತಿಯೊಂದಿಗೆ ತಂಗಿದ್ದರು. ಜೂನ್‌ನಲ್ಲಿ ದೇವರಾಜ್ ವಿರುದ್ಧ ಆತ ಕಿರುಕುಳ ನೀಡಿದ ಬಗ್ಗೆ ಆಕೆ ದೂರು ನೀಡಿದ್ದಳು. ಇತ್ತೀಚೆಗೆ ಅವರು ಮತ್ತೆ ಅವನನ್ನು ಭೇಟಿಯಾಗಲು ಪ್ರಾರಂಭಿಸಿದ್ದರು. ಇದರಿಂದಾಗಿ ಕುಟುಂಬ ಸದಸ್ಯರು ನಿನ್ನೆ ಅವಳನ್ನು ಪ್ರಶ್ನಿಸಿದ ನಂತರ ರಾತ್ರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಅವರು ಹೇಳಿದರು.

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ದೇವರಾಜ್ ವಿರುದ್ಧ ಆತ್ಮಹತ್ಯೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ದೇವರಾಜ್ ನನ್ನು ಇನ್ನೂ ಬಂಧಿಸಲಾಗಿಲ್ಲ, ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ವೈದ್ಯ ಆತ್ಮಹತ್ಯೆ:‌ ಮೈಸೂರು ಜಿಲ್ಲಾ ಪಂಚಾಯಿತಿ‌ ಅಧಿಕಾರಿ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...