ತೆಲುಗು ದೂರದರ್ಶನ ನಟಿ ಕೊಂಡಪಲ್ಲಿ ಶ್ರಾವಣಿ ಅವರು ಹೈದರಾಬಾದ್ ಅವರ ನಿವಾಸದಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಸ್ಆರ್ ನಗರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ವಿ ನರಸಿಂಹ ರೆಡ್ಡಿ ಹೇಳಿದ್ದಾರೆ.
ಮಂಗಳವಾರ ರಾತ್ರಿ 9 ರಿಂದ 10 ರ ನಡುವೆ ಈ ಘಟನೆ ನಡೆದಿದೆ ಎಂದು ವಿ ನರಸಿಂಹ ರೆಡ್ಡಿ ದೂರವಾಣಿ ಮೂಲಕ ಎಎನ್ಐ ಜೊತೆ ಮಾತನಾಡುತ್ತಾ ಹೇಳಿದರು ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.
“ಕೊಂಡಪಲ್ಲಿ ಶ್ರಾವಣಿ ಅವರು ಹೈದರಾಬಾದ್ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ನಿನ್ನೆ ರಾತ್ರಿ 9 ರಿಂದ ರಾತ್ರಿ 10 ರ ನಡುವೆ ಅವರು ತಮ್ಮ ಮಲಗುವ ಕೋಣೆಯೊಳಗೆ ಹೋಗಿ ಎಸ್.ಆರ್.ನಗರದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡಿದ್ದಾರೆ. ಅವರ ಕುಟುಂಬ ಸದಸ್ಯರು ಸಹ ಮನೆಯಲ್ಲಿದ್ದರು” ಎಂದು ಅವರು ಹೇಳಿದರು.
ಇದನ್ನೂ ಓದಿ: ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!
“ನಟಿ ಈ ಹಿಂದೆ ದೇವರಾಜ್ ಎಂಬ ವ್ಯಕ್ತಿಯೊಂದಿಗೆ ತಂಗಿದ್ದರು. ಜೂನ್ನಲ್ಲಿ ದೇವರಾಜ್ ವಿರುದ್ಧ ಆತ ಕಿರುಕುಳ ನೀಡಿದ ಬಗ್ಗೆ ಆಕೆ ದೂರು ನೀಡಿದ್ದಳು. ಇತ್ತೀಚೆಗೆ ಅವರು ಮತ್ತೆ ಅವನನ್ನು ಭೇಟಿಯಾಗಲು ಪ್ರಾರಂಭಿಸಿದ್ದರು. ಇದರಿಂದಾಗಿ ಕುಟುಂಬ ಸದಸ್ಯರು ನಿನ್ನೆ ಅವಳನ್ನು ಪ್ರಶ್ನಿಸಿದ ನಂತರ ರಾತ್ರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಅವರು ಹೇಳಿದರು.
ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ದೇವರಾಜ್ ವಿರುದ್ಧ ಆತ್ಮಹತ್ಯೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ದೇವರಾಜ್ ನನ್ನು ಇನ್ನೂ ಬಂಧಿಸಲಾಗಿಲ್ಲ, ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ.
ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:
ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ
ಕರ್ನಾಟಕ ಆರೋಗ್ಯ ಸಹಾಯವಾಣಿ: 104
ಇದನ್ನೂ ಓದಿ: ವೈದ್ಯ ಆತ್ಮಹತ್ಯೆ: ಮೈಸೂರು ಜಿಲ್ಲಾ ಪಂಚಾಯಿತಿ ಅಧಿಕಾರಿ ವಿರುದ್ಧ ಎಫ್ಐಆರ್