Homeಮುಖಪುಟಸೀತಾ ದೇವಿಗಾಗಿ ರಾಮಮಂದಿರಕ್ಕಿಂತ ದೊಡ್ಡ ಭವ್ಯ ಮಂದಿರ ನಿರ್ಮಾಣ - ಚಿರಾಗ್ ಪಾಸ್ವಾನ್

ಸೀತಾ ದೇವಿಗಾಗಿ ರಾಮಮಂದಿರಕ್ಕಿಂತ ದೊಡ್ಡ ಭವ್ಯ ಮಂದಿರ ನಿರ್ಮಾಣ – ಚಿರಾಗ್ ಪಾಸ್ವಾನ್

'ಮಹಿಳಾ ಸಬಲೀಕರಣದ ಬಗ್ಗೆ ನಾವು ತುಂಬಾ ಮಾತನಾಡುತ್ತೇವೆ. ಮಹಿಳಾ ಸಬಲೀಕರಣದ ಸಂಕೇತವಾದ ಸೀತಾ ದೇವಿಗಾಗಿ, ಅಯೋಧ್ಯೆಯ ರಾಮ್ ಮಂದಿರಕ್ಕಿಂತ ದೊಡ್ಡದಾದ ದೇವಾಲಯವನ್ನು ಬಿಹಾರದಲ್ಲಿ ನಿರ್ಮಿಸಬೇಕೆಂದು ನಾನು ಬಯಸುತ್ತೇನೆ'

- Advertisement -
- Advertisement -

ಬಿಹಾರ ಚುನಾವಣಾ ಪ್ರಚರದಲ್ಲಿರುವ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್, ಬಿಹಾರದ ಸೀತಮಾರ್ಹಿಯಲ್ಲಿ ರಾಮಮಂದಿರಕ್ಕಿಂತ ದೊಡ್ಡ ಭವ್ಯ ಸೀತಾ ಮಂದಿರ ನಿರ್ಮಾಣ ಮಾಡಲಾಗುವುದು. ಸೀತಾ ದೇವಿಯಿಲ್ಲದೆ ಭಗವಾನ್ ರಾಮ ಅಪೂರ್ಣ ಎಂದಿದ್ದಾರೆ.

1990ರ ದಶಕದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯ ರಥಯಾತ್ರೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬಿಜೆಪಿಯ ಯಶಸ್ವಿ ಅಭಿಯಾನವಾಗಿತ್ತು. ಈಗ ಅದನ್ನೇ ಚಿರಾಗ್ ಪಾಸ್ವಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಸೀತಾಮರ್ಹಿಯನ್ನು ಮಾತೆ ಸೀತಾ ದೇವಿಯ ಜನ್ಮಸ್ಥಳವೆಂದು ನಂಬಲಾಗಿದೆ.

“ದೇವಾಲಯವು ಎಲ್ಲಾ ಮೂಲಸೌಕರ್ಯಗಳ ಯೋಜನೆಯೊಂದಿಗೆ ನಿಮಾಣವಾಗಲಿದೆ. “ಸೀತಾ ದೇವಿಯಿಲ್ಲದೆ ಭಗವಾನ್ ರಾಮ ಅಪೂರ್ಣ. ಆದ್ದರಿಂದ, ಅಯೋಧ್ಯೆಯ ರಾಮ ದೇವಾಲಯ ಮತ್ತು ಸೀತಾಮರ್ಹಿಯನ್ನು ಸಂಪರ್ಕಿಸುವ ಕಾರಿಡಾರ್ ಯೋಜನೆ ಕೂಡ ಮಾಡಲಾಗುವುದು” ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಈ ಭರವಸೆ ತನ್ನ ಚುನಾವಣಾ ಪ್ರಣಾಳಿಕೆಯ ಭಾಗವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

‘ಮಹಿಳಾ ಸಬಲೀಕರಣದ ಬಗ್ಗೆ ನಾವು ತುಂಬಾ ಮಾತನಾಡುತ್ತೇವೆ. ಮಹಿಳಾ ಸಬಲೀಕರಣದ ಸಂಕೇತವಾದ ಸೀತಾ ದೇವಿಗಾಗಿ, ಅಯೋಧ್ಯೆಯ ರಾಮ್ ಮಂದಿರಕ್ಕಿಂತ ದೊಡ್ಡದಾದ ದೇವಾಲಯವನ್ನು ಬಿಹಾರದಲ್ಲಿ ನಿರ್ಮಿಸಬೇಕೆಂದು ನಾನು ಬಯಸುತ್ತೇನೆ’ ಎಂದು ಬಿಹಾರದ ಸೀತಮಾರ್ಹಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದಾರೆ.

ಈ ಹಿಂದೆ ಏಪ್ರಿಲ್‌ನಲ್ಲಿ ಬಿಹಾರದ ಪುರಾಣ ಧಾಮ್‌ನಲ್ಲಿರುವ ಹಳೆಯ ಸೀತಾ ದೇವಾಲಯದ ಸುತ್ತ ವಾಯುವಿಹಾರವನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದರು. ಈಗ ಅದಕ್ಕಿಂತ ಮುಂದೆ ಹೋಗಿರುವ ಚಿರಾಗ್ ಪಾಸ್ವಾನ್ ರಾಮಮಂದಿರಕ್ಕಿಂತ ಭವ್ಯ ಮಂದಿರವನ್ನು ಸೀತಾಮಾತೆಗಾಗಿ ಕಟ್ಟಲಾಗುವುದು ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು

ಡಿಸೆಂಬರ್ 6, 1992 ರಂದು, ಅಯೋಧ್ಯೆಯಲ್ಲಿ ರಾಮನ ಜನ್ಮಸ್ಥಳದ ಮೇಲೆ ಮಸೀದಿ ಕಟ್ಟಲಾಗಿದೆ ಎಂದು, ಕರ ಸೇವಕರು 16 ನೇ ಶತಮಾನದಲ್ಲಿ ಮೊಘಲ್ ಚಕ್ರವರ್ತಿ ಬಾಬರ್ ನಿರ್ಮಿಸಿದನೆಂದು ನಂಬಲಾಗಿದ್ದ ಬಾಬರಿ ಮಸೀದಿಯನ್ನು ಧ್ವಂಸ ಮಾಡಿದರು. ಆ ನಂತರದ ಹಿಂಸಾಚಾರದಲ್ಲಿ 2,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಸುಪ್ರೀಂಕೋರ್ಟ್ ತೀರ್ಪು ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ನಿಡಿದ ಹಿನ್ನೆಲೆ, ಈಗ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಚಿರಾಗ್ ಪಾಸ್ವಾನ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರನ್ನು ಬೆಂಬಲಿಸದ ಬಿಜೆಪಿ ಮತದಾರರಿಂದಲೂ ಮತಗಳನ್ನು ಕೋರಿ ಇಂದು ತಮ್ಮ ಅಭಿಯಾನವನ್ನು ನಡೆಸಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಚಿರಾಗ್ ನೇತೃತ್ವದ ಎಲ್‌ಜೆಪಿ, 243 ಸದಸ್ಯರ ವಿಧಾನಸಭೆಗೆ 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಅಕ್ಟೋಬರ್ 21ರಿಂದ ಚಿರಾಗ್ ಪ್ರಚಾರ ಆರಂಭಿಸಿದ್ದಾರೆ. ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಮತದಾನ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಹಿಳೆರಿಗೆ ಸಮಾನ ಅವಕಾಶವನ್ನು ಕಲ್ಪಿಸಿಕೊಟ್ಟ೧೨ನೆ ಶತಮಾನದ ಬಸವಾದಿ ಶರಣರು ಜಗತಿನ ಮೊಟ್ಟ ಮೊದಲನೆಯ ಸಂಸತ್ತಿನಲ್ಲಿ ಅದು ಬಸವಣ್ಣವರು ನಿರ್ಮಿಸಿದ ಅನುಅಭವ ಮಂಟಪ
    ವಿಶ್ವಕ್ಕೆ ಮಾದರಿ ಯಾದ ಅನುಭವ ಮಂಟಪ ನಿರ್ಮಾಣ ಮಾಡಿ .
    ಜಗತ್ತಿಗೆ ಬೆಳಕು ನೀಡಿದ ವಚನ ಸಾಹಿತ್ಯದ ಚಿಂತನೆ ಆಗ್ಬೇಕು ಮೊದಲು

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...