Homeಮುಖಪುಟಸೀತಾ ದೇವಿಗಾಗಿ ರಾಮಮಂದಿರಕ್ಕಿಂತ ದೊಡ್ಡ ಭವ್ಯ ಮಂದಿರ ನಿರ್ಮಾಣ - ಚಿರಾಗ್ ಪಾಸ್ವಾನ್

ಸೀತಾ ದೇವಿಗಾಗಿ ರಾಮಮಂದಿರಕ್ಕಿಂತ ದೊಡ್ಡ ಭವ್ಯ ಮಂದಿರ ನಿರ್ಮಾಣ – ಚಿರಾಗ್ ಪಾಸ್ವಾನ್

'ಮಹಿಳಾ ಸಬಲೀಕರಣದ ಬಗ್ಗೆ ನಾವು ತುಂಬಾ ಮಾತನಾಡುತ್ತೇವೆ. ಮಹಿಳಾ ಸಬಲೀಕರಣದ ಸಂಕೇತವಾದ ಸೀತಾ ದೇವಿಗಾಗಿ, ಅಯೋಧ್ಯೆಯ ರಾಮ್ ಮಂದಿರಕ್ಕಿಂತ ದೊಡ್ಡದಾದ ದೇವಾಲಯವನ್ನು ಬಿಹಾರದಲ್ಲಿ ನಿರ್ಮಿಸಬೇಕೆಂದು ನಾನು ಬಯಸುತ್ತೇನೆ'

- Advertisement -
- Advertisement -

ಬಿಹಾರ ಚುನಾವಣಾ ಪ್ರಚರದಲ್ಲಿರುವ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್, ಬಿಹಾರದ ಸೀತಮಾರ್ಹಿಯಲ್ಲಿ ರಾಮಮಂದಿರಕ್ಕಿಂತ ದೊಡ್ಡ ಭವ್ಯ ಸೀತಾ ಮಂದಿರ ನಿರ್ಮಾಣ ಮಾಡಲಾಗುವುದು. ಸೀತಾ ದೇವಿಯಿಲ್ಲದೆ ಭಗವಾನ್ ರಾಮ ಅಪೂರ್ಣ ಎಂದಿದ್ದಾರೆ.

1990ರ ದಶಕದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯ ರಥಯಾತ್ರೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬಿಜೆಪಿಯ ಯಶಸ್ವಿ ಅಭಿಯಾನವಾಗಿತ್ತು. ಈಗ ಅದನ್ನೇ ಚಿರಾಗ್ ಪಾಸ್ವಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಸೀತಾಮರ್ಹಿಯನ್ನು ಮಾತೆ ಸೀತಾ ದೇವಿಯ ಜನ್ಮಸ್ಥಳವೆಂದು ನಂಬಲಾಗಿದೆ.

“ದೇವಾಲಯವು ಎಲ್ಲಾ ಮೂಲಸೌಕರ್ಯಗಳ ಯೋಜನೆಯೊಂದಿಗೆ ನಿಮಾಣವಾಗಲಿದೆ. “ಸೀತಾ ದೇವಿಯಿಲ್ಲದೆ ಭಗವಾನ್ ರಾಮ ಅಪೂರ್ಣ. ಆದ್ದರಿಂದ, ಅಯೋಧ್ಯೆಯ ರಾಮ ದೇವಾಲಯ ಮತ್ತು ಸೀತಾಮರ್ಹಿಯನ್ನು ಸಂಪರ್ಕಿಸುವ ಕಾರಿಡಾರ್ ಯೋಜನೆ ಕೂಡ ಮಾಡಲಾಗುವುದು” ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಈ ಭರವಸೆ ತನ್ನ ಚುನಾವಣಾ ಪ್ರಣಾಳಿಕೆಯ ಭಾಗವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

‘ಮಹಿಳಾ ಸಬಲೀಕರಣದ ಬಗ್ಗೆ ನಾವು ತುಂಬಾ ಮಾತನಾಡುತ್ತೇವೆ. ಮಹಿಳಾ ಸಬಲೀಕರಣದ ಸಂಕೇತವಾದ ಸೀತಾ ದೇವಿಗಾಗಿ, ಅಯೋಧ್ಯೆಯ ರಾಮ್ ಮಂದಿರಕ್ಕಿಂತ ದೊಡ್ಡದಾದ ದೇವಾಲಯವನ್ನು ಬಿಹಾರದಲ್ಲಿ ನಿರ್ಮಿಸಬೇಕೆಂದು ನಾನು ಬಯಸುತ್ತೇನೆ’ ಎಂದು ಬಿಹಾರದ ಸೀತಮಾರ್ಹಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದಾರೆ.

ಈ ಹಿಂದೆ ಏಪ್ರಿಲ್‌ನಲ್ಲಿ ಬಿಹಾರದ ಪುರಾಣ ಧಾಮ್‌ನಲ್ಲಿರುವ ಹಳೆಯ ಸೀತಾ ದೇವಾಲಯದ ಸುತ್ತ ವಾಯುವಿಹಾರವನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದರು. ಈಗ ಅದಕ್ಕಿಂತ ಮುಂದೆ ಹೋಗಿರುವ ಚಿರಾಗ್ ಪಾಸ್ವಾನ್ ರಾಮಮಂದಿರಕ್ಕಿಂತ ಭವ್ಯ ಮಂದಿರವನ್ನು ಸೀತಾಮಾತೆಗಾಗಿ ಕಟ್ಟಲಾಗುವುದು ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು

ಡಿಸೆಂಬರ್ 6, 1992 ರಂದು, ಅಯೋಧ್ಯೆಯಲ್ಲಿ ರಾಮನ ಜನ್ಮಸ್ಥಳದ ಮೇಲೆ ಮಸೀದಿ ಕಟ್ಟಲಾಗಿದೆ ಎಂದು, ಕರ ಸೇವಕರು 16 ನೇ ಶತಮಾನದಲ್ಲಿ ಮೊಘಲ್ ಚಕ್ರವರ್ತಿ ಬಾಬರ್ ನಿರ್ಮಿಸಿದನೆಂದು ನಂಬಲಾಗಿದ್ದ ಬಾಬರಿ ಮಸೀದಿಯನ್ನು ಧ್ವಂಸ ಮಾಡಿದರು. ಆ ನಂತರದ ಹಿಂಸಾಚಾರದಲ್ಲಿ 2,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಸುಪ್ರೀಂಕೋರ್ಟ್ ತೀರ್ಪು ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ನಿಡಿದ ಹಿನ್ನೆಲೆ, ಈಗ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಚಿರಾಗ್ ಪಾಸ್ವಾನ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರನ್ನು ಬೆಂಬಲಿಸದ ಬಿಜೆಪಿ ಮತದಾರರಿಂದಲೂ ಮತಗಳನ್ನು ಕೋರಿ ಇಂದು ತಮ್ಮ ಅಭಿಯಾನವನ್ನು ನಡೆಸಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಚಿರಾಗ್ ನೇತೃತ್ವದ ಎಲ್‌ಜೆಪಿ, 243 ಸದಸ್ಯರ ವಿಧಾನಸಭೆಗೆ 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಅಕ್ಟೋಬರ್ 21ರಿಂದ ಚಿರಾಗ್ ಪ್ರಚಾರ ಆರಂಭಿಸಿದ್ದಾರೆ. ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಮತದಾನ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಹಿಳೆರಿಗೆ ಸಮಾನ ಅವಕಾಶವನ್ನು ಕಲ್ಪಿಸಿಕೊಟ್ಟ೧೨ನೆ ಶತಮಾನದ ಬಸವಾದಿ ಶರಣರು ಜಗತಿನ ಮೊಟ್ಟ ಮೊದಲನೆಯ ಸಂಸತ್ತಿನಲ್ಲಿ ಅದು ಬಸವಣ್ಣವರು ನಿರ್ಮಿಸಿದ ಅನುಅಭವ ಮಂಟಪ
    ವಿಶ್ವಕ್ಕೆ ಮಾದರಿ ಯಾದ ಅನುಭವ ಮಂಟಪ ನಿರ್ಮಾಣ ಮಾಡಿ .
    ಜಗತ್ತಿಗೆ ಬೆಳಕು ನೀಡಿದ ವಚನ ಸಾಹಿತ್ಯದ ಚಿಂತನೆ ಆಗ್ಬೇಕು ಮೊದಲು

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...