Homeಮುಖಪುಟಪುರುಷ ಭಕ್ತರು ಮೇಲಂಗಿ ತೆಗೆಯುವ ಪದ್ಧತಿ ಕೈಬಿಡಲು ದೇವಸ್ವಂ ಬೋರ್ಡ್ ಮುಂದಾಗಿದೆ : ಕೇರಳ ಸಿಎಂ...

ಪುರುಷ ಭಕ್ತರು ಮೇಲಂಗಿ ತೆಗೆಯುವ ಪದ್ಧತಿ ಕೈಬಿಡಲು ದೇವಸ್ವಂ ಬೋರ್ಡ್ ಮುಂದಾಗಿದೆ : ಕೇರಳ ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ದೇವಸ್ಥಾನಗಳಲ್ಲಿ ಪುರುಷ ಭಕ್ತರು ತಮ್ಮ ಮೇಲಂಗಿ ಕಳಚಿ ಒಳಹೋಗುವ ಪದ್ದತಿಯನ್ನು ಕೈಬಿಡಲು ದೇವಸ್ವಂ ಬೋರ್ಡ್ ಮುಂದಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ (ಜ.1) ತಿಳಿಸಿದ್ದಾರೆ.

ಸಮಾಜ ಸುಧಾರಕ ನಾರಾಯಣ ಗುರು ಅವರು ಸ್ಥಾಪಿಸಿರುವ ಪ್ರಸಿದ್ದ ಶಿವಗಿರಿ ಮಠದ ಸಚ್ಚಿದಾನಂದ ಸ್ವಾಮಿ ಮೇಲಂಗಿ ಕಳಚುವ ಪದ್ದತಿಯನ್ನು ವಿರೋಧಿಸಿದ ಬೆನ್ನಲ್ಲೇ ದೇವಸ್ವಂ ಮಂಡಳಿಗೆ ಸಂಬಂಧಿಸಿದಂತೆ ಸಿಎಂ ಹೇಳಿಕೆ ನೀಡಿದ್ದಾರೆ.

ಮಂಗಳವಾರ (ಡಿ.30) ಶಿವಗಿರಿ ತೀರ್ಥೋದ್ಭವ ಸಮಾವೇಶದಲ್ಲಿ ಮಾತನಾಡಿದ್ದ ಸಚ್ಚಿದಾನಂದ ಸ್ವಾಮಿಯವರು ಮೇಲಂಗಿ ಕಳಚುವ ಪದ್ಧತಿಯನ್ನು ಸಾಮಾಜಿಕ ಅನಿಷ್ಟ ಎಂದಿದ್ದರು. ಅದನ್ನು ನಿರ್ಮೂಲನೆ ಮಾಡುವಂತೆ ಕರೆ ನೀಡಿದ್ದರು.

ತೀರ್ಥೋದ್ಭವ ಸಮಾವೇಶವನ್ನು ಉದ್ಘಾಟನೆ ಮಾಡಿದ್ದ ಸಿಎಂ ಪಿಣರಾಯಿ ವಿಜಯನ್ ಅವರು ಸ್ವಾಮಿಯ ಮಾತಿಗೆ ಸಹಮತ ವ್ಯಕ್ತಪಡಿಸಿದ್ದು, ಮೇಲಂಗಿ ಕಳಚುವ ಪದ್ದತಿಯ ನಿರ್ಮೂಲನೆ ಸಾಮಾಜ ಸುಧಾರಣೆಯ ಮಹತ್ವದ ಹೆಜ್ಜೆ ಎಂದಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, “ದೇವಸ್ವಂ ಮಂಡಳಿಯ ಪ್ರತಿನಿಧಿಯೊಬ್ಬರು ನನ್ನನ್ನು ಭೇಟಿಯಾಗಿ ಮೇಲಂಗಿ ಕಳಚುವ ಪದ್ದತಿ ಕೈ ಬಿಡುವ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಇದು ಉತ್ತಮ ಯೋಚನೆ ಎಂದು ನಾನು ಹೇಳಿದ್ದೇನೆ” ಎಂದಿದ್ದಾರೆ. ಆದರೆ, ಯಾವ ದೇವಸ್ವಂ ಬೋರ್ಡ್ ಈ ನಿರ್ಧಾರವನ್ನು ಜಾರಿಗೆ ತರಲಿದೆ ಎಂಬುವುದನ್ನು ಸಿಎಂ ಸ್ಪಷ್ಟಪಡಿಸಿಲ್ಲ.

ಕೇರಳದಲ್ಲಿ ಗುರುವಾಯೂರ್, ತಿರುವಾಂಕೂರ್, ಮಲಬಾರ್, ಕೊಚ್ಚಿನ್ ಮತ್ತು ಕೂಡಲ್ಮಾಣಿಕ್ಯಂ ಎಂಬ ಐದು ಪ್ರಮುಖ ದೇವಸ್ವಂ ಬೋರ್ಡ್‌ಗಳಿವೆ. ಇವುಗಳು ಸುಮಾರು 3,000 ದೇವಾಲಯಗಳ ನಿರ್ವಹಣೆ ಮಾಡುತ್ತಿವೆ.

ಈ ವಿಚಾರದಲ್ಲಿ ಚರ್ಚೆಯಾಗಬೇಕು ಎಂಬ ಬಿಜೆಪಿ ನಾಯಕರ ಆಗ್ರಹದ ಕುರಿತು ಪ್ರತಿಕ್ರಿಯಿಸಿದ ಸಿಎಂ, “ಚರ್ಚೆಯಾಗಲಿ. ಆದರೆ, ನಿರ್ಧಾರ ತೆಗೆದುಕೊಳ್ಳುವುದು ಸರ್ಕಾರವಲ್ಲ, ದೇವಸ್ವಂ ಬೋರ್ಡ್” ಎಂದಿದ್ದಾರೆ.

ನಾರಾಯಣ ಗುರುಗಳಿಗೆ ಸಂಬಂಧಿಸಿದ ದೇವಸ್ಥಾನಗಳು ಮೇಲಂಗಿ ಕಳಚುವ ಪದ್ದತಿಯನ್ನು ಕೈಬಿಡಲಿದೆ ಎಂದು ಸಚ್ಚಿದಾನಂದ ಸ್ವಾಮಿ ತಿಳಿಸಿದ್ದಾರೆ.

ಬ್ರಾಹ್ಮಣರ ಜನಿವಾರ ಇದೆಯೇ ಎಂದು ಖಚಿತಪಡಿಸಿಕೊಳ್ಳಲು ದೇವಸ್ಥಾನಗಳಲ್ಲಿ ಪುರುಷರು ಮೇಲಂಗಿ ಕಳಚುವ ಪದ್ದತಿಯನ್ನು ಹಿಂದೆ ಜಾರಿಗೆ ತರಲಾಗಿದೆ. ಈ ಪದ್ದತಿ ನಾರಾಯಣ ಗುರುಗಳ ಉಪದೇಶಗಳಿಗೆ ವಿರುದ್ದವಾಗಿದೆ. ಆದರೆ, ಗುರುಗಳಿಗೆ ಸಂಬಂಧಿಸಿದ ಕೆಲ ದೇವಸ್ಥಾನಗಳಲ್ಲೇ ಈ ಪದ್ದತಿ ಚಾಲ್ತಿಯಲ್ಲಿದೆ. ಅದನ್ನು ಕೈ ಬಿಡಬೇಕು ಎಂದು ಸಚ್ಚಿದಾನಂದ ಸ್ವಾಮಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ : ದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...