Homeಮುಖಪುಟಪುರುಷ ಭಕ್ತರು ಮೇಲಂಗಿ ತೆಗೆಯುವ ಪದ್ಧತಿ ಕೈಬಿಡಲು ದೇವಸ್ವಂ ಬೋರ್ಡ್ ಮುಂದಾಗಿದೆ : ಕೇರಳ ಸಿಎಂ...

ಪುರುಷ ಭಕ್ತರು ಮೇಲಂಗಿ ತೆಗೆಯುವ ಪದ್ಧತಿ ಕೈಬಿಡಲು ದೇವಸ್ವಂ ಬೋರ್ಡ್ ಮುಂದಾಗಿದೆ : ಕೇರಳ ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ದೇವಸ್ಥಾನಗಳಲ್ಲಿ ಪುರುಷ ಭಕ್ತರು ತಮ್ಮ ಮೇಲಂಗಿ ಕಳಚಿ ಒಳಹೋಗುವ ಪದ್ದತಿಯನ್ನು ಕೈಬಿಡಲು ದೇವಸ್ವಂ ಬೋರ್ಡ್ ಮುಂದಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ (ಜ.1) ತಿಳಿಸಿದ್ದಾರೆ.

ಸಮಾಜ ಸುಧಾರಕ ನಾರಾಯಣ ಗುರು ಅವರು ಸ್ಥಾಪಿಸಿರುವ ಪ್ರಸಿದ್ದ ಶಿವಗಿರಿ ಮಠದ ಸಚ್ಚಿದಾನಂದ ಸ್ವಾಮಿ ಮೇಲಂಗಿ ಕಳಚುವ ಪದ್ದತಿಯನ್ನು ವಿರೋಧಿಸಿದ ಬೆನ್ನಲ್ಲೇ ದೇವಸ್ವಂ ಮಂಡಳಿಗೆ ಸಂಬಂಧಿಸಿದಂತೆ ಸಿಎಂ ಹೇಳಿಕೆ ನೀಡಿದ್ದಾರೆ.

ಮಂಗಳವಾರ (ಡಿ.30) ಶಿವಗಿರಿ ತೀರ್ಥೋದ್ಭವ ಸಮಾವೇಶದಲ್ಲಿ ಮಾತನಾಡಿದ್ದ ಸಚ್ಚಿದಾನಂದ ಸ್ವಾಮಿಯವರು ಮೇಲಂಗಿ ಕಳಚುವ ಪದ್ಧತಿಯನ್ನು ಸಾಮಾಜಿಕ ಅನಿಷ್ಟ ಎಂದಿದ್ದರು. ಅದನ್ನು ನಿರ್ಮೂಲನೆ ಮಾಡುವಂತೆ ಕರೆ ನೀಡಿದ್ದರು.

ತೀರ್ಥೋದ್ಭವ ಸಮಾವೇಶವನ್ನು ಉದ್ಘಾಟನೆ ಮಾಡಿದ್ದ ಸಿಎಂ ಪಿಣರಾಯಿ ವಿಜಯನ್ ಅವರು ಸ್ವಾಮಿಯ ಮಾತಿಗೆ ಸಹಮತ ವ್ಯಕ್ತಪಡಿಸಿದ್ದು, ಮೇಲಂಗಿ ಕಳಚುವ ಪದ್ದತಿಯ ನಿರ್ಮೂಲನೆ ಸಾಮಾಜ ಸುಧಾರಣೆಯ ಮಹತ್ವದ ಹೆಜ್ಜೆ ಎಂದಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, “ದೇವಸ್ವಂ ಮಂಡಳಿಯ ಪ್ರತಿನಿಧಿಯೊಬ್ಬರು ನನ್ನನ್ನು ಭೇಟಿಯಾಗಿ ಮೇಲಂಗಿ ಕಳಚುವ ಪದ್ದತಿ ಕೈ ಬಿಡುವ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಇದು ಉತ್ತಮ ಯೋಚನೆ ಎಂದು ನಾನು ಹೇಳಿದ್ದೇನೆ” ಎಂದಿದ್ದಾರೆ. ಆದರೆ, ಯಾವ ದೇವಸ್ವಂ ಬೋರ್ಡ್ ಈ ನಿರ್ಧಾರವನ್ನು ಜಾರಿಗೆ ತರಲಿದೆ ಎಂಬುವುದನ್ನು ಸಿಎಂ ಸ್ಪಷ್ಟಪಡಿಸಿಲ್ಲ.

ಕೇರಳದಲ್ಲಿ ಗುರುವಾಯೂರ್, ತಿರುವಾಂಕೂರ್, ಮಲಬಾರ್, ಕೊಚ್ಚಿನ್ ಮತ್ತು ಕೂಡಲ್ಮಾಣಿಕ್ಯಂ ಎಂಬ ಐದು ಪ್ರಮುಖ ದೇವಸ್ವಂ ಬೋರ್ಡ್‌ಗಳಿವೆ. ಇವುಗಳು ಸುಮಾರು 3,000 ದೇವಾಲಯಗಳ ನಿರ್ವಹಣೆ ಮಾಡುತ್ತಿವೆ.

ಈ ವಿಚಾರದಲ್ಲಿ ಚರ್ಚೆಯಾಗಬೇಕು ಎಂಬ ಬಿಜೆಪಿ ನಾಯಕರ ಆಗ್ರಹದ ಕುರಿತು ಪ್ರತಿಕ್ರಿಯಿಸಿದ ಸಿಎಂ, “ಚರ್ಚೆಯಾಗಲಿ. ಆದರೆ, ನಿರ್ಧಾರ ತೆಗೆದುಕೊಳ್ಳುವುದು ಸರ್ಕಾರವಲ್ಲ, ದೇವಸ್ವಂ ಬೋರ್ಡ್” ಎಂದಿದ್ದಾರೆ.

ನಾರಾಯಣ ಗುರುಗಳಿಗೆ ಸಂಬಂಧಿಸಿದ ದೇವಸ್ಥಾನಗಳು ಮೇಲಂಗಿ ಕಳಚುವ ಪದ್ದತಿಯನ್ನು ಕೈಬಿಡಲಿದೆ ಎಂದು ಸಚ್ಚಿದಾನಂದ ಸ್ವಾಮಿ ತಿಳಿಸಿದ್ದಾರೆ.

ಬ್ರಾಹ್ಮಣರ ಜನಿವಾರ ಇದೆಯೇ ಎಂದು ಖಚಿತಪಡಿಸಿಕೊಳ್ಳಲು ದೇವಸ್ಥಾನಗಳಲ್ಲಿ ಪುರುಷರು ಮೇಲಂಗಿ ಕಳಚುವ ಪದ್ದತಿಯನ್ನು ಹಿಂದೆ ಜಾರಿಗೆ ತರಲಾಗಿದೆ. ಈ ಪದ್ದತಿ ನಾರಾಯಣ ಗುರುಗಳ ಉಪದೇಶಗಳಿಗೆ ವಿರುದ್ದವಾಗಿದೆ. ಆದರೆ, ಗುರುಗಳಿಗೆ ಸಂಬಂಧಿಸಿದ ಕೆಲ ದೇವಸ್ಥಾನಗಳಲ್ಲೇ ಈ ಪದ್ದತಿ ಚಾಲ್ತಿಯಲ್ಲಿದೆ. ಅದನ್ನು ಕೈ ಬಿಡಬೇಕು ಎಂದು ಸಚ್ಚಿದಾನಂದ ಸ್ವಾಮಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ : ದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...