Homeಮುಖಪುಟಪುರುಷ ಭಕ್ತರು ಮೇಲಂಗಿ ತೆಗೆಯುವ ಪದ್ಧತಿ ಕೈಬಿಡಲು ದೇವಸ್ವಂ ಬೋರ್ಡ್ ಮುಂದಾಗಿದೆ : ಕೇರಳ ಸಿಎಂ...

ಪುರುಷ ಭಕ್ತರು ಮೇಲಂಗಿ ತೆಗೆಯುವ ಪದ್ಧತಿ ಕೈಬಿಡಲು ದೇವಸ್ವಂ ಬೋರ್ಡ್ ಮುಂದಾಗಿದೆ : ಕೇರಳ ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ದೇವಸ್ಥಾನಗಳಲ್ಲಿ ಪುರುಷ ಭಕ್ತರು ತಮ್ಮ ಮೇಲಂಗಿ ಕಳಚಿ ಒಳಹೋಗುವ ಪದ್ದತಿಯನ್ನು ಕೈಬಿಡಲು ದೇವಸ್ವಂ ಬೋರ್ಡ್ ಮುಂದಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ (ಜ.1) ತಿಳಿಸಿದ್ದಾರೆ.

ಸಮಾಜ ಸುಧಾರಕ ನಾರಾಯಣ ಗುರು ಅವರು ಸ್ಥಾಪಿಸಿರುವ ಪ್ರಸಿದ್ದ ಶಿವಗಿರಿ ಮಠದ ಸಚ್ಚಿದಾನಂದ ಸ್ವಾಮಿ ಮೇಲಂಗಿ ಕಳಚುವ ಪದ್ದತಿಯನ್ನು ವಿರೋಧಿಸಿದ ಬೆನ್ನಲ್ಲೇ ದೇವಸ್ವಂ ಮಂಡಳಿಗೆ ಸಂಬಂಧಿಸಿದಂತೆ ಸಿಎಂ ಹೇಳಿಕೆ ನೀಡಿದ್ದಾರೆ.

ಮಂಗಳವಾರ (ಡಿ.30) ಶಿವಗಿರಿ ತೀರ್ಥೋದ್ಭವ ಸಮಾವೇಶದಲ್ಲಿ ಮಾತನಾಡಿದ್ದ ಸಚ್ಚಿದಾನಂದ ಸ್ವಾಮಿಯವರು ಮೇಲಂಗಿ ಕಳಚುವ ಪದ್ಧತಿಯನ್ನು ಸಾಮಾಜಿಕ ಅನಿಷ್ಟ ಎಂದಿದ್ದರು. ಅದನ್ನು ನಿರ್ಮೂಲನೆ ಮಾಡುವಂತೆ ಕರೆ ನೀಡಿದ್ದರು.

ತೀರ್ಥೋದ್ಭವ ಸಮಾವೇಶವನ್ನು ಉದ್ಘಾಟನೆ ಮಾಡಿದ್ದ ಸಿಎಂ ಪಿಣರಾಯಿ ವಿಜಯನ್ ಅವರು ಸ್ವಾಮಿಯ ಮಾತಿಗೆ ಸಹಮತ ವ್ಯಕ್ತಪಡಿಸಿದ್ದು, ಮೇಲಂಗಿ ಕಳಚುವ ಪದ್ದತಿಯ ನಿರ್ಮೂಲನೆ ಸಾಮಾಜ ಸುಧಾರಣೆಯ ಮಹತ್ವದ ಹೆಜ್ಜೆ ಎಂದಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, “ದೇವಸ್ವಂ ಮಂಡಳಿಯ ಪ್ರತಿನಿಧಿಯೊಬ್ಬರು ನನ್ನನ್ನು ಭೇಟಿಯಾಗಿ ಮೇಲಂಗಿ ಕಳಚುವ ಪದ್ದತಿ ಕೈ ಬಿಡುವ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಇದು ಉತ್ತಮ ಯೋಚನೆ ಎಂದು ನಾನು ಹೇಳಿದ್ದೇನೆ” ಎಂದಿದ್ದಾರೆ. ಆದರೆ, ಯಾವ ದೇವಸ್ವಂ ಬೋರ್ಡ್ ಈ ನಿರ್ಧಾರವನ್ನು ಜಾರಿಗೆ ತರಲಿದೆ ಎಂಬುವುದನ್ನು ಸಿಎಂ ಸ್ಪಷ್ಟಪಡಿಸಿಲ್ಲ.

ಕೇರಳದಲ್ಲಿ ಗುರುವಾಯೂರ್, ತಿರುವಾಂಕೂರ್, ಮಲಬಾರ್, ಕೊಚ್ಚಿನ್ ಮತ್ತು ಕೂಡಲ್ಮಾಣಿಕ್ಯಂ ಎಂಬ ಐದು ಪ್ರಮುಖ ದೇವಸ್ವಂ ಬೋರ್ಡ್‌ಗಳಿವೆ. ಇವುಗಳು ಸುಮಾರು 3,000 ದೇವಾಲಯಗಳ ನಿರ್ವಹಣೆ ಮಾಡುತ್ತಿವೆ.

ಈ ವಿಚಾರದಲ್ಲಿ ಚರ್ಚೆಯಾಗಬೇಕು ಎಂಬ ಬಿಜೆಪಿ ನಾಯಕರ ಆಗ್ರಹದ ಕುರಿತು ಪ್ರತಿಕ್ರಿಯಿಸಿದ ಸಿಎಂ, “ಚರ್ಚೆಯಾಗಲಿ. ಆದರೆ, ನಿರ್ಧಾರ ತೆಗೆದುಕೊಳ್ಳುವುದು ಸರ್ಕಾರವಲ್ಲ, ದೇವಸ್ವಂ ಬೋರ್ಡ್” ಎಂದಿದ್ದಾರೆ.

ನಾರಾಯಣ ಗುರುಗಳಿಗೆ ಸಂಬಂಧಿಸಿದ ದೇವಸ್ಥಾನಗಳು ಮೇಲಂಗಿ ಕಳಚುವ ಪದ್ದತಿಯನ್ನು ಕೈಬಿಡಲಿದೆ ಎಂದು ಸಚ್ಚಿದಾನಂದ ಸ್ವಾಮಿ ತಿಳಿಸಿದ್ದಾರೆ.

ಬ್ರಾಹ್ಮಣರ ಜನಿವಾರ ಇದೆಯೇ ಎಂದು ಖಚಿತಪಡಿಸಿಕೊಳ್ಳಲು ದೇವಸ್ಥಾನಗಳಲ್ಲಿ ಪುರುಷರು ಮೇಲಂಗಿ ಕಳಚುವ ಪದ್ದತಿಯನ್ನು ಹಿಂದೆ ಜಾರಿಗೆ ತರಲಾಗಿದೆ. ಈ ಪದ್ದತಿ ನಾರಾಯಣ ಗುರುಗಳ ಉಪದೇಶಗಳಿಗೆ ವಿರುದ್ದವಾಗಿದೆ. ಆದರೆ, ಗುರುಗಳಿಗೆ ಸಂಬಂಧಿಸಿದ ಕೆಲ ದೇವಸ್ಥಾನಗಳಲ್ಲೇ ಈ ಪದ್ದತಿ ಚಾಲ್ತಿಯಲ್ಲಿದೆ. ಅದನ್ನು ಕೈ ಬಿಡಬೇಕು ಎಂದು ಸಚ್ಚಿದಾನಂದ ಸ್ವಾಮಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ : ದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...