Homeಮುಖಪುಟಕೊರೊನಾ ಸಂಕಷ್ಟದ ಆಪತ್ಬಾಂಧವ ನಟ ಸೋನು ಸೂದ್‌ಗಾಗಿ ದೇವಾಲಯ ಕಟ್ಟಿದ ಜನ!

ಕೊರೊನಾ ಸಂಕಷ್ಟದ ಆಪತ್ಬಾಂಧವ ನಟ ಸೋನು ಸೂದ್‌ಗಾಗಿ ದೇವಾಲಯ ಕಟ್ಟಿದ ಜನ!

“ಅವರು ತಮ್ಮ ಒಳ್ಳೆಯ ಕೆಲಸಗಳಿಂದ ದೇವರ ಸ್ಥಾನವನ್ನು ಪಡೆದುಕೊಂಡಿದ್ದರಿಂದ, ನಾವು ಸೋನು ಸೂದ್‌ಗಾಗಿ ದೇವಾಲಯವನ್ನು ನಿರ್ಮಿಸಿದ್ದೇವೆ. ಅವರು ನಮಗೆ ದೇವರು” ಎಂದು ಸ್ಥಳೀಯರು ಹೇಳಿದ್ದಾರೆ..

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಲ್ಲಿ ಕೇಂದ್ರ ಸರ್ಕಾರ ಏಕಾಏಕಿ ಹೇರಿದ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ಜನರ ನೆರವಿಗೆ ಧಾವಿಸಿದ ನಟ ಸೋನು ಸೂದ್ ಕಾರ್ಯಗಳಿಗೆ ಮೆಚ್ಚಿ ತೆಲಂಗಾಣದಲ್ಲಿ ದೇವಾಲಯ ನಿರ್ಮಿಸಲಾಗಿದೆ.

ಬಾಲಿವುಡ್ ನಟ ಸೋನು ಸೂದ್ ಅವರ ಮಾನವೀಯ ಕಾರ್ಯವನ್ನು ಗುರುತಿಸಿದ ತೆಲಂಗಾಣದ ಸಿದ್ದಿಪೇಟ್​​ನಲ್ಲಿರುವ ದುಬ್ಬಾ ತಾಂಡಾದ ಜನರು ತೆಲಂಗಾಣದ ಸಿದ್ದಿಪೇಟೆ ಜಿಲ್ಲಾ ಅಧಿಕಾರಿಗಳ ಸಹಾಯದಿಂದ ನಟನಿಗೆ ಗೌರವಾರ್ಥವಾಗಿ ದೇವಾಲಯ ಕಟ್ಟಿದ್ದಾರೆ.

ದೇವಾಲಯದಲ್ಲಿ ಸೋನು ಸೂದ್ ವಿಗ್ರಹ ಮಾಡಿದ ಶಿಲ್ಪಿ ಮತ್ತು ಸ್ಥಳೀಯ ಜನರು, ವಿಗ್ರಹಕ್ಕೆ ಆರತಿ ಮಾಡಿ ಉದ್ಘಾಟಿಸಿದ್ದಾರೆ. ತಾಂಡಾದ ಮಹಿಳೆಯರು ತಮ್ಮ ಸಾಂಪ್ರದಾಯಿಕ ಉಡುಪನ್ನು ಧರಿಸಿ ಜಾನಪದ ಗೀತೆಗಳನ್ನು ಹಾಡಿದ್ದಾರೆ.

ಇದನ್ನು ಓದಿ: ರೈತರು ನಡುಕ ಹುಟ್ಟಿಸುವ ಚಳಿಯಲ್ಲಿ ಕುಳಿತಿದ್ದಾರೆ; ಇನ್ನೆಷ್ಟು ದಿನ ಇದನ್ನು ನೋಡುತ್ತಿರಬೇಕು: ಸೋನು ಸೂದ್

ಕೊರೊನಾ ಸಾಂಕ್ರಾಮಿಕದ ಮಧ್ಯೆ ಸೂನು ಸೂದ್ ಸಾರ್ವಜನಿಕರಿಗಾಗಿ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಎಂದು ಜಿಲ್ಲಾ ಪರಿಷತ್ ಸದಸ್ಯ ಗಿರಿ ಕೊಂಡಾಲ್ ರೆಡ್ಡಿ ಹೇಳಿದ್ದಾರೆ.

“ಅವರು ತಮ್ಮ ಒಳ್ಳೆಯ ಕೆಲಸಗಳಿಂದ ದೇವರ ಸ್ಥಾನವನ್ನು ಪಡೆದುಕೊಂಡಿದ್ದರಿಂದ, ನಾವು ಸೋನು ಸೂದ್‌ಗಾಗಿ ದೇವಾಲಯ ನಿರ್ಮಿಸಿದ್ದೇವೆ. ಅವರು ನಮಗೆ ದೇವರು” ಎಂದು ಸ್ಥಳೀಯರು ಹೇಳುತ್ತಾರೆ.

ಇದನ್ನೂ ಓದಿ: ನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

ದೇವಾಲಯ ಕಟ್ಟಲು ಯೋಜನೆ ರೂಪಿಸಿದ್ದ ಗುಂಪಿನ ಭಾಗವಾಗಿದ್ದ ರಮೇಶ್ ಕುಮಾರ್ ಮಾತನಾಡಿ, ಸೋನು ಸೂದ್ ದೇಶದ 28 ರಾಜ್ಯಗಳ ಜನರಿಗೆ ಸಹಾಯ ಮಾಡಿದ್ದಾರೆ ಮತ್ತು ಅವರ ಮಾನವೀಯ ಕಾರ್ಯಗಳಿಗಾಗಿ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ. ಆದ್ದರಿಂದ, ನಮ್ಮ ಹಳ್ಳಿಯ ಪರವಾಗಿ, ನಾವು ಅವರಿಗೆ ದೇವಾಲಯವನ್ನು ನಿರ್ಮಿಸಲು ನಿರ್ಧರಿಸಿದ್ದೆವು. ದೇವರಂತೆ, ಸೋನು ಸೂದ್ ಅವರಿಗೂ ಪ್ರತಿನಿತ್ಯ ಪ್ರಾರ್ಥನೆ ಸಲ್ಲಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

ಲಾಕ್‌ಡೌನ್ ಸಂಕಷ್ಟದಲ್ಲಿ ತೊಂದರೆಗೊಳಗಾಗಿದ್ದ ವಲಸೆ ಕಾರ್ಮಿಕರಿಗೆ ನಟ ಸೋನುಸೂದ್ ಆಹಾರ ವಿತರಿಸಿದ್ದರು. ಬಸ್‌ಗಳು, ರೈಲುಗಳು ಮತ್ತು ಚಾರ್ಟರ್ಡ್ ವಿಮಾನಗಳ ಮೂಲಕ ಕಾರ್ಮಿಕರನ್ನು ತಮ್ಮ ತಮ್ಮ ಗ್ರಾಮಗಳಿಗೆ ತಲುಪಿಸಿದ್ದರು. ಮತ್ತೆ ನಿರುದ್ಯೋಗಿಗಳಿಗೆ ಇ-ಆಟೋಗಳನ್ನು ಉಡುಗೊರೆಯಾಗಿ ನೀಡುವುದಾಗಿ ಇತ್ತಿಚೆಗಷ್ಟೆ ಘೋಷಿಸಿದ್ದಾರೆ.

ಇಷ್ಟೇ ಅಲ್ಲದೆ, ಉತ್ತಮ ಜೀವನೋಪಾಯಕ್ಕಾಗಿ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟ ಸೋನು ಸೂದ್ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.


ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...