Homeಚಳವಳಿಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನದಾನಂ ಹೆಸರಿನಲ್ಲಿ ಬಡವರಿಗೆ ಉಚಿತ ಊಟ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ.

- Advertisement -
- Advertisement -

ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ನಾರಿಕುರುವ ಅಲೆಮಾರಿ ಮಹಿಳೆಗೆ ಊಟ ನಿರಾಕರಿಸಲಾಗಿತ್ತು. ಸರ್ಕಾರದ ವತಿಯಿಂದ ನಡೆಯುವ ದೇವಸ್ಥಾನದ ಅನ್ನ ಸಂತರ್ಪಣೆಯಲ್ಲಿ ನಮ್ಮ ಸಮುದಾಯಕ್ಕೆ ಪ್ರವೇಶವಿಲ್ಲ ಏಕೆ ಎಂದು ಆ ಮಹಿಳೆ ಪ್ರಶ್ನಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸರ್ಕಾರದ ಗಮನಕ್ಕೆ ಬಂದ ನಂತರ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಆ ಮಹಿಳೆಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಆ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದಾರೆ.

ಅಕ್ಟೋಬರ್ 29 ರಂದು ಸಚಿವ ಪಿ.ಕೆ ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್ ಬಾಲಾಜಿಯವರು ಸಹ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದರು. ಅಶ್ವಿನಿಯವರ ನಾರಿಕುರುವ ಅಲೆಮಾರಿ ಸಮುದಯಾದ ಹಲವು ಮಂದಿ ಭಾಗವಾಗಿಸಿದ್ದರು. ಆ ಮೂಲಕ ಜಾತಿ ತಾರತಮ್ಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ತಮಿಳುನಾಡು ಸರ್ಕಾರ ಸಾರಿದೆ.

ಒಂದು ಮಧ್ಯಾಹ್ನ ನಾವು ಊಟ ಮಾಡಲು ಸಾಲಿನಲ್ಲಿ ನಿಂತಿದ್ದೆವು. ಮೊದಲ ಪಂಕ್ತಿಗೆ ನಮಗೆ ಜಾಗ ಸಿಗಲಿಲ್ಲ. ಎರಡನೇ ಪಂಕ್ತಿಗೆ ಕುಳಿತಾಗ ದೇವಸ್ಥಾನದ ಒಬ್ಬ ವ್ಯಕ್ತಿ ಬಂದು ಅಲ್ಲಿಂದ ಹೊರಹೋಗುವಂತೆ ಹೇಳಿದರು. ಎಲ್ಲರೂ ಊಟ ಮಾಡಿ ಉಳಿದರೆ ದೇವಸ್ಥಾನದ ಹೊರಗೆ ನಿಮಗೆ ನೀಡುತ್ತೇವೆ, ದೇವಸ್ಥಾನದ ಹೊರಗೆ ಕಾಯಿರಿ ಎಂದು ನನ್ನ ಜೊತೆಗಿದ್ದ ನಮ್ಮ ಸಮುದಾಯದವರೆಲ್ಲರನ್ನು ಹೊರ ಕಳಿಸಿದ್ದರು ಎಂದು ಅಶ್ವಿನಿಯವರು ವಿಡಿಯೋದಲ್ಲಿ ಹೇಳಿದ್ದರು. ಇದು ನಿಮ್ಮ ಮದುವೆಯೆ ಉಳಿದರೆ ಕೊಡುತ್ತೇನೆ ಎಂದು ಹೇಳುವುದಕ್ಕೆ? ಇದು ಬಡವರಿಗೆಂದು ರಾಜ್ಯ ಸರ್ಕಾರ ಸ್ಥಾಪಿಸಿರುವ ದೇವಸ್ಥಾನದ ಊಟದ ಯೋಜನೆ. ನಾವು ಅವಿದ್ಯಾವಂತರಾದ ಕಾರಣಕ್ಕೆ ನಮಗೆ ಊಟ ನಿರಾಕರಿಸಲಾಗಿದೆ. ಒಂದು ದಿನ ನನ್ನ ಮಗ ಬೆಳೆದು ದೊಡ್ಡವನಾಗುತ್ತಾನೆ. ನಾವು ಅವನಿಗೆ ಉತ್ತಮ ಶಿಕ್ಷಣ ಕೊಡಿಸುತ್ತೇವೆ. ಎಷ್ಟು ದಿನ ಅವರು ಬದಲಾಗದೆ ಉಳಿಯುತ್ತಾರೆ ನಾವು ನೋಡುತ್ತೇವೆ ಎಂದು ಅಶ್ವಿನಿ ಹೇಳಿದ್ದರು.

ಅಶ್ವಿನಿ ಪೂಂಚೇರಿ ಗ್ರಾಮದ ನಾರಿಕುರುವ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆ ಸಮುದಾಯದ ಜನರು ಮಣಿಗಳು ಮತ್ತು ಆಭರಣಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ಈ ವಿಡಿಯೋ ಸಿಎಂ ಸ್ಟಾಲಿನ್ ಗಮನಕ್ಕೆ ಬಂದಾಗ ಆ ಮಹಿಳೆಯನ್ನು ಗುರುತಿಸುವಂತೆ ಮತ್ತು ತಾರತಮ್ಯವನ್ನು ಖಂಡಿಸಿ ಜಾಗೃತಿ ಮೂಡಿಸುವಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಆದೇಶಿಸಿದ್ದರು. ಅದರಂತೆ ಆ ಮಹಿಳೆ ಮತ್ತು ಸಮುದಾಯವನ್ನು ಗುರುತಿಸಿ ಅವರೊಂದಿಗೆ ದೇವಸ್ಥಾನದಲ್ಲಿ ಒಟ್ಟಿಗೆ ಊಟ ಮಾಡುವ ಮೂಲಕ ಮುಂದೆ ಇಂತಹ ಘಟನೆಗಳು ನಡೆಯದಂತೆ ತಮಿಳುನಾಡು ಸರ್ಕಾರ ಎಚ್ಚರಿಕೆ ನೀಡಿದೆ.

ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನದಾನಂ ಹೆಸರಿನಲ್ಲಿ ಬಡವರಿಗೆ ಉಚಿತ ಊಟ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ತಮಿಳುನಾಡಿನ 754 ದೇವಾಲಯಗಳಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ನೇತೃತ್ವದಲ್ಲಿ ಈ ಯೋಜನೆ ಜಾರಿಯಲ್ಲಿದೆ.

ತಾರತಮ್ಯಕ್ಕೊಳಗಾದ ಮಹಿಳೆಗೆ ನ್ಯಾಯ ದೊರಕಿಸಿದ ತಮಿಳನಾಡು ಸರ್ಕಾರದ ಈ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ಹರಿದುಬಂದಿದೆ. ಹಲವರು ಸರ್ಕಾರವನ್ನು ಶ್ಲಾಘಿಸಿದ್ದಾರೆ.

ಪತಿ ಅಥವಾ ಪೋಷಕರಿಂದ ಬೇರ್ಪಟ್ಟ ರಾಜ್ಯದ ಒಂಟಿ ಮಹಿಳೆಯರನ್ನು ‘ಕುಟುಂಬ’ ಎಂದು ಗುರುತಿಸಿ, ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ನೀಡಲಾಗುವುದು ಎಂದು ತಮಿಳುನಾಡು ಸರ್ಕಾರ ನಿನ್ನೆ ಘೋಷಿಸಿತ್ತು. ಇದಕ್ಕೂ ಹಲವುರ ಮೆಚ್ಚುಗೆ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಒಂಟಿ ಮಹಿಳೆಯನ್ನು ‘ಕುಟುಂಬ’ ಎಂದು ಗುರುತಿಸಿ ರೇಷನ್ ಕಾರ್ಡ್‌ ನೀಡಲಿರುವ ತಮಿಳುನಾಡು ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...