Homeಚಳವಳಿಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನದಾನಂ ಹೆಸರಿನಲ್ಲಿ ಬಡವರಿಗೆ ಉಚಿತ ಊಟ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ.

- Advertisement -
- Advertisement -

ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ನಾರಿಕುರುವ ಅಲೆಮಾರಿ ಮಹಿಳೆಗೆ ಊಟ ನಿರಾಕರಿಸಲಾಗಿತ್ತು. ಸರ್ಕಾರದ ವತಿಯಿಂದ ನಡೆಯುವ ದೇವಸ್ಥಾನದ ಅನ್ನ ಸಂತರ್ಪಣೆಯಲ್ಲಿ ನಮ್ಮ ಸಮುದಾಯಕ್ಕೆ ಪ್ರವೇಶವಿಲ್ಲ ಏಕೆ ಎಂದು ಆ ಮಹಿಳೆ ಪ್ರಶ್ನಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸರ್ಕಾರದ ಗಮನಕ್ಕೆ ಬಂದ ನಂತರ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಆ ಮಹಿಳೆಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಆ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದಾರೆ.

ಅಕ್ಟೋಬರ್ 29 ರಂದು ಸಚಿವ ಪಿ.ಕೆ ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್ ಬಾಲಾಜಿಯವರು ಸಹ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದರು. ಅಶ್ವಿನಿಯವರ ನಾರಿಕುರುವ ಅಲೆಮಾರಿ ಸಮುದಯಾದ ಹಲವು ಮಂದಿ ಭಾಗವಾಗಿಸಿದ್ದರು. ಆ ಮೂಲಕ ಜಾತಿ ತಾರತಮ್ಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ತಮಿಳುನಾಡು ಸರ್ಕಾರ ಸಾರಿದೆ.

ಒಂದು ಮಧ್ಯಾಹ್ನ ನಾವು ಊಟ ಮಾಡಲು ಸಾಲಿನಲ್ಲಿ ನಿಂತಿದ್ದೆವು. ಮೊದಲ ಪಂಕ್ತಿಗೆ ನಮಗೆ ಜಾಗ ಸಿಗಲಿಲ್ಲ. ಎರಡನೇ ಪಂಕ್ತಿಗೆ ಕುಳಿತಾಗ ದೇವಸ್ಥಾನದ ಒಬ್ಬ ವ್ಯಕ್ತಿ ಬಂದು ಅಲ್ಲಿಂದ ಹೊರಹೋಗುವಂತೆ ಹೇಳಿದರು. ಎಲ್ಲರೂ ಊಟ ಮಾಡಿ ಉಳಿದರೆ ದೇವಸ್ಥಾನದ ಹೊರಗೆ ನಿಮಗೆ ನೀಡುತ್ತೇವೆ, ದೇವಸ್ಥಾನದ ಹೊರಗೆ ಕಾಯಿರಿ ಎಂದು ನನ್ನ ಜೊತೆಗಿದ್ದ ನಮ್ಮ ಸಮುದಾಯದವರೆಲ್ಲರನ್ನು ಹೊರ ಕಳಿಸಿದ್ದರು ಎಂದು ಅಶ್ವಿನಿಯವರು ವಿಡಿಯೋದಲ್ಲಿ ಹೇಳಿದ್ದರು. ಇದು ನಿಮ್ಮ ಮದುವೆಯೆ ಉಳಿದರೆ ಕೊಡುತ್ತೇನೆ ಎಂದು ಹೇಳುವುದಕ್ಕೆ? ಇದು ಬಡವರಿಗೆಂದು ರಾಜ್ಯ ಸರ್ಕಾರ ಸ್ಥಾಪಿಸಿರುವ ದೇವಸ್ಥಾನದ ಊಟದ ಯೋಜನೆ. ನಾವು ಅವಿದ್ಯಾವಂತರಾದ ಕಾರಣಕ್ಕೆ ನಮಗೆ ಊಟ ನಿರಾಕರಿಸಲಾಗಿದೆ. ಒಂದು ದಿನ ನನ್ನ ಮಗ ಬೆಳೆದು ದೊಡ್ಡವನಾಗುತ್ತಾನೆ. ನಾವು ಅವನಿಗೆ ಉತ್ತಮ ಶಿಕ್ಷಣ ಕೊಡಿಸುತ್ತೇವೆ. ಎಷ್ಟು ದಿನ ಅವರು ಬದಲಾಗದೆ ಉಳಿಯುತ್ತಾರೆ ನಾವು ನೋಡುತ್ತೇವೆ ಎಂದು ಅಶ್ವಿನಿ ಹೇಳಿದ್ದರು.

ಅಶ್ವಿನಿ ಪೂಂಚೇರಿ ಗ್ರಾಮದ ನಾರಿಕುರುವ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆ ಸಮುದಾಯದ ಜನರು ಮಣಿಗಳು ಮತ್ತು ಆಭರಣಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ಈ ವಿಡಿಯೋ ಸಿಎಂ ಸ್ಟಾಲಿನ್ ಗಮನಕ್ಕೆ ಬಂದಾಗ ಆ ಮಹಿಳೆಯನ್ನು ಗುರುತಿಸುವಂತೆ ಮತ್ತು ತಾರತಮ್ಯವನ್ನು ಖಂಡಿಸಿ ಜಾಗೃತಿ ಮೂಡಿಸುವಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಆದೇಶಿಸಿದ್ದರು. ಅದರಂತೆ ಆ ಮಹಿಳೆ ಮತ್ತು ಸಮುದಾಯವನ್ನು ಗುರುತಿಸಿ ಅವರೊಂದಿಗೆ ದೇವಸ್ಥಾನದಲ್ಲಿ ಒಟ್ಟಿಗೆ ಊಟ ಮಾಡುವ ಮೂಲಕ ಮುಂದೆ ಇಂತಹ ಘಟನೆಗಳು ನಡೆಯದಂತೆ ತಮಿಳುನಾಡು ಸರ್ಕಾರ ಎಚ್ಚರಿಕೆ ನೀಡಿದೆ.

ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನದಾನಂ ಹೆಸರಿನಲ್ಲಿ ಬಡವರಿಗೆ ಉಚಿತ ಊಟ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ತಮಿಳುನಾಡಿನ 754 ದೇವಾಲಯಗಳಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ನೇತೃತ್ವದಲ್ಲಿ ಈ ಯೋಜನೆ ಜಾರಿಯಲ್ಲಿದೆ.

ತಾರತಮ್ಯಕ್ಕೊಳಗಾದ ಮಹಿಳೆಗೆ ನ್ಯಾಯ ದೊರಕಿಸಿದ ತಮಿಳನಾಡು ಸರ್ಕಾರದ ಈ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ಹರಿದುಬಂದಿದೆ. ಹಲವರು ಸರ್ಕಾರವನ್ನು ಶ್ಲಾಘಿಸಿದ್ದಾರೆ.

ಪತಿ ಅಥವಾ ಪೋಷಕರಿಂದ ಬೇರ್ಪಟ್ಟ ರಾಜ್ಯದ ಒಂಟಿ ಮಹಿಳೆಯರನ್ನು ‘ಕುಟುಂಬ’ ಎಂದು ಗುರುತಿಸಿ, ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ನೀಡಲಾಗುವುದು ಎಂದು ತಮಿಳುನಾಡು ಸರ್ಕಾರ ನಿನ್ನೆ ಘೋಷಿಸಿತ್ತು. ಇದಕ್ಕೂ ಹಲವುರ ಮೆಚ್ಚುಗೆ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಒಂಟಿ ಮಹಿಳೆಯನ್ನು ‘ಕುಟುಂಬ’ ಎಂದು ಗುರುತಿಸಿ ರೇಷನ್ ಕಾರ್ಡ್‌ ನೀಡಲಿರುವ ತಮಿಳುನಾಡು ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...