Homeಚಳವಳಿಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನದಾನಂ ಹೆಸರಿನಲ್ಲಿ ಬಡವರಿಗೆ ಉಚಿತ ಊಟ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ.

- Advertisement -
- Advertisement -

ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ನಾರಿಕುರುವ ಅಲೆಮಾರಿ ಮಹಿಳೆಗೆ ಊಟ ನಿರಾಕರಿಸಲಾಗಿತ್ತು. ಸರ್ಕಾರದ ವತಿಯಿಂದ ನಡೆಯುವ ದೇವಸ್ಥಾನದ ಅನ್ನ ಸಂತರ್ಪಣೆಯಲ್ಲಿ ನಮ್ಮ ಸಮುದಾಯಕ್ಕೆ ಪ್ರವೇಶವಿಲ್ಲ ಏಕೆ ಎಂದು ಆ ಮಹಿಳೆ ಪ್ರಶ್ನಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸರ್ಕಾರದ ಗಮನಕ್ಕೆ ಬಂದ ನಂತರ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಆ ಮಹಿಳೆಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಆ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದಾರೆ.

ಅಕ್ಟೋಬರ್ 29 ರಂದು ಸಚಿವ ಪಿ.ಕೆ ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್ ಬಾಲಾಜಿಯವರು ಸಹ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದರು. ಅಶ್ವಿನಿಯವರ ನಾರಿಕುರುವ ಅಲೆಮಾರಿ ಸಮುದಯಾದ ಹಲವು ಮಂದಿ ಭಾಗವಾಗಿಸಿದ್ದರು. ಆ ಮೂಲಕ ಜಾತಿ ತಾರತಮ್ಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ತಮಿಳುನಾಡು ಸರ್ಕಾರ ಸಾರಿದೆ.

ಒಂದು ಮಧ್ಯಾಹ್ನ ನಾವು ಊಟ ಮಾಡಲು ಸಾಲಿನಲ್ಲಿ ನಿಂತಿದ್ದೆವು. ಮೊದಲ ಪಂಕ್ತಿಗೆ ನಮಗೆ ಜಾಗ ಸಿಗಲಿಲ್ಲ. ಎರಡನೇ ಪಂಕ್ತಿಗೆ ಕುಳಿತಾಗ ದೇವಸ್ಥಾನದ ಒಬ್ಬ ವ್ಯಕ್ತಿ ಬಂದು ಅಲ್ಲಿಂದ ಹೊರಹೋಗುವಂತೆ ಹೇಳಿದರು. ಎಲ್ಲರೂ ಊಟ ಮಾಡಿ ಉಳಿದರೆ ದೇವಸ್ಥಾನದ ಹೊರಗೆ ನಿಮಗೆ ನೀಡುತ್ತೇವೆ, ದೇವಸ್ಥಾನದ ಹೊರಗೆ ಕಾಯಿರಿ ಎಂದು ನನ್ನ ಜೊತೆಗಿದ್ದ ನಮ್ಮ ಸಮುದಾಯದವರೆಲ್ಲರನ್ನು ಹೊರ ಕಳಿಸಿದ್ದರು ಎಂದು ಅಶ್ವಿನಿಯವರು ವಿಡಿಯೋದಲ್ಲಿ ಹೇಳಿದ್ದರು. ಇದು ನಿಮ್ಮ ಮದುವೆಯೆ ಉಳಿದರೆ ಕೊಡುತ್ತೇನೆ ಎಂದು ಹೇಳುವುದಕ್ಕೆ? ಇದು ಬಡವರಿಗೆಂದು ರಾಜ್ಯ ಸರ್ಕಾರ ಸ್ಥಾಪಿಸಿರುವ ದೇವಸ್ಥಾನದ ಊಟದ ಯೋಜನೆ. ನಾವು ಅವಿದ್ಯಾವಂತರಾದ ಕಾರಣಕ್ಕೆ ನಮಗೆ ಊಟ ನಿರಾಕರಿಸಲಾಗಿದೆ. ಒಂದು ದಿನ ನನ್ನ ಮಗ ಬೆಳೆದು ದೊಡ್ಡವನಾಗುತ್ತಾನೆ. ನಾವು ಅವನಿಗೆ ಉತ್ತಮ ಶಿಕ್ಷಣ ಕೊಡಿಸುತ್ತೇವೆ. ಎಷ್ಟು ದಿನ ಅವರು ಬದಲಾಗದೆ ಉಳಿಯುತ್ತಾರೆ ನಾವು ನೋಡುತ್ತೇವೆ ಎಂದು ಅಶ್ವಿನಿ ಹೇಳಿದ್ದರು.

ಅಶ್ವಿನಿ ಪೂಂಚೇರಿ ಗ್ರಾಮದ ನಾರಿಕುರುವ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆ ಸಮುದಾಯದ ಜನರು ಮಣಿಗಳು ಮತ್ತು ಆಭರಣಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ಈ ವಿಡಿಯೋ ಸಿಎಂ ಸ್ಟಾಲಿನ್ ಗಮನಕ್ಕೆ ಬಂದಾಗ ಆ ಮಹಿಳೆಯನ್ನು ಗುರುತಿಸುವಂತೆ ಮತ್ತು ತಾರತಮ್ಯವನ್ನು ಖಂಡಿಸಿ ಜಾಗೃತಿ ಮೂಡಿಸುವಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಆದೇಶಿಸಿದ್ದರು. ಅದರಂತೆ ಆ ಮಹಿಳೆ ಮತ್ತು ಸಮುದಾಯವನ್ನು ಗುರುತಿಸಿ ಅವರೊಂದಿಗೆ ದೇವಸ್ಥಾನದಲ್ಲಿ ಒಟ್ಟಿಗೆ ಊಟ ಮಾಡುವ ಮೂಲಕ ಮುಂದೆ ಇಂತಹ ಘಟನೆಗಳು ನಡೆಯದಂತೆ ತಮಿಳುನಾಡು ಸರ್ಕಾರ ಎಚ್ಚರಿಕೆ ನೀಡಿದೆ.

ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನದಾನಂ ಹೆಸರಿನಲ್ಲಿ ಬಡವರಿಗೆ ಉಚಿತ ಊಟ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ತಮಿಳುನಾಡಿನ 754 ದೇವಾಲಯಗಳಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ನೇತೃತ್ವದಲ್ಲಿ ಈ ಯೋಜನೆ ಜಾರಿಯಲ್ಲಿದೆ.

ತಾರತಮ್ಯಕ್ಕೊಳಗಾದ ಮಹಿಳೆಗೆ ನ್ಯಾಯ ದೊರಕಿಸಿದ ತಮಿಳನಾಡು ಸರ್ಕಾರದ ಈ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ಹರಿದುಬಂದಿದೆ. ಹಲವರು ಸರ್ಕಾರವನ್ನು ಶ್ಲಾಘಿಸಿದ್ದಾರೆ.

ಪತಿ ಅಥವಾ ಪೋಷಕರಿಂದ ಬೇರ್ಪಟ್ಟ ರಾಜ್ಯದ ಒಂಟಿ ಮಹಿಳೆಯರನ್ನು ‘ಕುಟುಂಬ’ ಎಂದು ಗುರುತಿಸಿ, ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ನೀಡಲಾಗುವುದು ಎಂದು ತಮಿಳುನಾಡು ಸರ್ಕಾರ ನಿನ್ನೆ ಘೋಷಿಸಿತ್ತು. ಇದಕ್ಕೂ ಹಲವುರ ಮೆಚ್ಚುಗೆ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಒಂಟಿ ಮಹಿಳೆಯನ್ನು ‘ಕುಟುಂಬ’ ಎಂದು ಗುರುತಿಸಿ ರೇಷನ್ ಕಾರ್ಡ್‌ ನೀಡಲಿರುವ ತಮಿಳುನಾಡು ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...