Homeಮುಖಪುಟಆಕಸ್ಮಿಕವಾಗಿ ಕಾಣಿಕೆ ಹುಂಡಿಗೆ ಬಿದ್ದ ವ್ಯಕ್ತಿಯ ಐಫೋನ್; ವಾಪಸ್ ಕೊಡಲು ನಿರಾಕರಿಸಿದ ದೇವಸ್ಥಾನ ಆಡಳಿತ ಮಂಡಳಿ

ಆಕಸ್ಮಿಕವಾಗಿ ಕಾಣಿಕೆ ಹುಂಡಿಗೆ ಬಿದ್ದ ವ್ಯಕ್ತಿಯ ಐಫೋನ್; ವಾಪಸ್ ಕೊಡಲು ನಿರಾಕರಿಸಿದ ದೇವಸ್ಥಾನ ಆಡಳಿತ ಮಂಡಳಿ

- Advertisement -
- Advertisement -

ತಮಿಳುನಾಡಿನ ದೇವಸ್ಥಾನವೊಂದರಲ್ಲಿ ಭಕ್ತರೊಬ್ಬರ ಐಫೋನ್ ಆಕಸ್ಮಿಕವಾಗಿ ಹುಂಡಿಗೆ ಬಿದ್ದಿದ್ದು, ತನ್ನ ಐಫೋನ್ ಅನ್ನು ಹಿಂದಿರುಗಿಸುವಂತೆ ಫೋನ್ ಮಾಲೀಕ ಮಾಡಿದ ಮನವಿಯನ್ನು ಆಡಳಿತ ಮಂಡಳಿ ನಿರಾಕರಿಸಿದೆ. ‘ಅದು ಈಗ ದೇವಸ್ಥಾನದ ಆಸ್ತಿಯಾಗಿದೆ’ ಎಂದು ಪ್ರತಿಪಾದಿಸಿದ್ದಾರೆ.

ಚೆನ್ನೈ ಬಳಿಯ ತಿರುಪೋರೂರಿನ ಅರುಲ್ಮಿಗು ಕಂದಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಸಲ್ಲಿಸುತ್ತಿದ್ದಾಗ ತನ್ನ ಐಫೋನ್ ಅಚಾತುರ್ಯದಿಂದ ಹುಂಡಿಗೆ ಬಿದ್ದಿರುವುದನ್ನು ದಿನೇಶ್ ದೇವಸ್ಥಾನ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದಾರೆ.

ಕುತೂಹಲಕಾರಿಯಾಗಿ, ದೇವಾಲಯದ ಆಡಳಿತವು ದಿನೇಶ್ ಅವರ ಆಪಲ್ ಫೋನ್‌ನ ಡೇಟಾವನ್ನು ಹಿಂಪಡೆಯಲು ಅನುಮತಿ ನೀಡಿತು. ಆದರೆ, ಫೋನ್ ಅನ್ನು ಹಿಂದಿರುಗಿಸಲು ನಿರಾಕರಿಸಿತು. ಆದರೂ ಫೋನ್ ವಾಪಸ್ ಕೊಡಿಸುವಂತೆ ಪಟ್ಟು ಹಿಡಿದ ದಿನೇಶ್ ಪಟ್ಟುಹಿಡಿದರು.

ಈ ವಿಷಯ ಸಚಿವ ಪಿ.ಕೆ.ಸೇಕರ್ ಬಾಬು ಅವರಿಗೆ ತಲುಪಿದ್ದು, ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಲ್ಲಿ ಯಾವುದೇ ವಸ್ತುವನ್ನು ಅದು ಉದ್ದೇಶಪೂರ್ವಕವಾಗಿ ಅಥವಾ ಆಕಸ್ಮಿಕವಾಗಿ ಹಾಕಿದರೂ ಅದು ದೇವರ ಖಾತೆಯ ಭಾಗವಾಗುತ್ತದೆ ಎಂದು ಹೇಳಿದರು.

“ದೇವಸ್ಥಾನಗಳ ಆಚರಣೆಗಳು ಮತ್ತು ಸಂಪ್ರದಾಯಗಳ ಪ್ರಕಾರ, ದೇಣಿಗೆ ಪೆಟ್ಟಿಗೆಯಲ್ಲಿ ನೀಡುವ ಕಾಣಿಕೆಯನ್ನು ದೇವರ ಆಸ್ತಿ ಎಂದು ಪರಿಗಣಿಸಲಾಗುತ್ತದೆ. ಅಂತಹ ಕಾಣಿಕೆಗಳನ್ನು ಹಿಂತಿರುಗಿಸಲು ನಿಯಮಗಳು ನಮಗೆ ಅನುಮತಿಸುವುದಿಲ್ಲ” ಎಂದು ಸಚಿವರು ವಿವರಿಸಿದರು.

ದೇವಾಲಯದ ನಿರ್ಮಾಣ ಮತ್ತು ಜೀರ್ಣೋದ್ಧಾರ ಯೋಜನೆಗಳ ಪರಿಶೀಲನೆಯ ಸಂದರ್ಭದಲ್ಲಿ ಬಾಬು ಅವರು, ಭಕ್ತಾಧಿಗೆ ಪರಿಹಾರ ನೀಡುವ ಸಾಧ್ಯತೆಯನ್ನು ಅನ್ವೇಷಿಸಲು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದರು.

ಇಂತಹುದೇ ಘಟನೆಯಲ್ಲಿ ಕೇರಳದ ಅಲಪ್ಪುಳದ ಭಕ್ತೆಯೊಬ್ಬಳು ಆಕಸ್ಮಿಕವಾಗಿ ತನ್ನ 1.75 ಕೆಜಿ ಚಿನ್ನದ ಸರವನ್ನು ಪಳನಿಯ ಶ್ರೀ ದಂಡಾಯುಧಪಾಣಿ ಸ್ವಾಮಿ ದೇವಸ್ಥಾನದ ಕಾಣಿಕೆ ಡಬ್ಬಿಗೆ ಎಸೆದಿದ್ದಾಳೆ. ಕೊರಳಲ್ಲಿದ್ದ ತುಳಸಿ ಮಾಲೆ ತೆಗೆಯುತ್ತಿದ್ದಾಗ ಕಾಣಿಕೆ ಪೆಟ್ಟಿಗೆಗೆ ಸರ ಜಾರಿತು.

ಆ ಸಂದರ್ಭದಲ್ಲಿ, ಆಕೆಯ ಹಣಕಾಸಿನ ಅಡಚಣೆಯನ್ನು ಪರಿಗಣಿಸಿ ಮತ್ತು ಸಿಸಿಟಿವಿ ದೃಶ್ಯಗಳ ಮೂಲಕ ಘಟನೆಯನ್ನು ಪರಿಶೀಲಿಸಿದ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ತಮ್ಮ ವೈಯಕ್ತಿಕ ವೆಚ್ಚದಲ್ಲಿ ಸಮಾನ ಮೌಲ್ಯದ ಹೊಸ ಚಿನ್ನದ ಸರವನ್ನು ಖರೀದಿಸಿ ಅವರಿಗೆ ಹಿಂದಿರುಗಿಸಿದರು.

ಇದನ್ನೂ ಓದಿ; ‘ಸಶಸ್ತ್ರ ಹೋರಾಟ ಬ್ರಿಟಿಷರನ್ನು ಹೊರಹಾಕಿತು..’; ವಿವಾದ ಹುಟ್ಟುಹಾಕಿದ ಬಿಹಾರ ರಾಜ್ಯಪಾಲರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...