Homeಮುಖಪುಟಆಕಸ್ಮಿಕವಾಗಿ ಕಾಣಿಕೆ ಹುಂಡಿಗೆ ಬಿದ್ದ ವ್ಯಕ್ತಿಯ ಐಫೋನ್; ವಾಪಸ್ ಕೊಡಲು ನಿರಾಕರಿಸಿದ ದೇವಸ್ಥಾನ ಆಡಳಿತ ಮಂಡಳಿ

ಆಕಸ್ಮಿಕವಾಗಿ ಕಾಣಿಕೆ ಹುಂಡಿಗೆ ಬಿದ್ದ ವ್ಯಕ್ತಿಯ ಐಫೋನ್; ವಾಪಸ್ ಕೊಡಲು ನಿರಾಕರಿಸಿದ ದೇವಸ್ಥಾನ ಆಡಳಿತ ಮಂಡಳಿ

- Advertisement -
- Advertisement -

ತಮಿಳುನಾಡಿನ ದೇವಸ್ಥಾನವೊಂದರಲ್ಲಿ ಭಕ್ತರೊಬ್ಬರ ಐಫೋನ್ ಆಕಸ್ಮಿಕವಾಗಿ ಹುಂಡಿಗೆ ಬಿದ್ದಿದ್ದು, ತನ್ನ ಐಫೋನ್ ಅನ್ನು ಹಿಂದಿರುಗಿಸುವಂತೆ ಫೋನ್ ಮಾಲೀಕ ಮಾಡಿದ ಮನವಿಯನ್ನು ಆಡಳಿತ ಮಂಡಳಿ ನಿರಾಕರಿಸಿದೆ. ‘ಅದು ಈಗ ದೇವಸ್ಥಾನದ ಆಸ್ತಿಯಾಗಿದೆ’ ಎಂದು ಪ್ರತಿಪಾದಿಸಿದ್ದಾರೆ.

ಚೆನ್ನೈ ಬಳಿಯ ತಿರುಪೋರೂರಿನ ಅರುಲ್ಮಿಗು ಕಂದಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಸಲ್ಲಿಸುತ್ತಿದ್ದಾಗ ತನ್ನ ಐಫೋನ್ ಅಚಾತುರ್ಯದಿಂದ ಹುಂಡಿಗೆ ಬಿದ್ದಿರುವುದನ್ನು ದಿನೇಶ್ ದೇವಸ್ಥಾನ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದಾರೆ.

ಕುತೂಹಲಕಾರಿಯಾಗಿ, ದೇವಾಲಯದ ಆಡಳಿತವು ದಿನೇಶ್ ಅವರ ಆಪಲ್ ಫೋನ್‌ನ ಡೇಟಾವನ್ನು ಹಿಂಪಡೆಯಲು ಅನುಮತಿ ನೀಡಿತು. ಆದರೆ, ಫೋನ್ ಅನ್ನು ಹಿಂದಿರುಗಿಸಲು ನಿರಾಕರಿಸಿತು. ಆದರೂ ಫೋನ್ ವಾಪಸ್ ಕೊಡಿಸುವಂತೆ ಪಟ್ಟು ಹಿಡಿದ ದಿನೇಶ್ ಪಟ್ಟುಹಿಡಿದರು.

ಈ ವಿಷಯ ಸಚಿವ ಪಿ.ಕೆ.ಸೇಕರ್ ಬಾಬು ಅವರಿಗೆ ತಲುಪಿದ್ದು, ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಲ್ಲಿ ಯಾವುದೇ ವಸ್ತುವನ್ನು ಅದು ಉದ್ದೇಶಪೂರ್ವಕವಾಗಿ ಅಥವಾ ಆಕಸ್ಮಿಕವಾಗಿ ಹಾಕಿದರೂ ಅದು ದೇವರ ಖಾತೆಯ ಭಾಗವಾಗುತ್ತದೆ ಎಂದು ಹೇಳಿದರು.

“ದೇವಸ್ಥಾನಗಳ ಆಚರಣೆಗಳು ಮತ್ತು ಸಂಪ್ರದಾಯಗಳ ಪ್ರಕಾರ, ದೇಣಿಗೆ ಪೆಟ್ಟಿಗೆಯಲ್ಲಿ ನೀಡುವ ಕಾಣಿಕೆಯನ್ನು ದೇವರ ಆಸ್ತಿ ಎಂದು ಪರಿಗಣಿಸಲಾಗುತ್ತದೆ. ಅಂತಹ ಕಾಣಿಕೆಗಳನ್ನು ಹಿಂತಿರುಗಿಸಲು ನಿಯಮಗಳು ನಮಗೆ ಅನುಮತಿಸುವುದಿಲ್ಲ” ಎಂದು ಸಚಿವರು ವಿವರಿಸಿದರು.

ದೇವಾಲಯದ ನಿರ್ಮಾಣ ಮತ್ತು ಜೀರ್ಣೋದ್ಧಾರ ಯೋಜನೆಗಳ ಪರಿಶೀಲನೆಯ ಸಂದರ್ಭದಲ್ಲಿ ಬಾಬು ಅವರು, ಭಕ್ತಾಧಿಗೆ ಪರಿಹಾರ ನೀಡುವ ಸಾಧ್ಯತೆಯನ್ನು ಅನ್ವೇಷಿಸಲು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದರು.

ಇಂತಹುದೇ ಘಟನೆಯಲ್ಲಿ ಕೇರಳದ ಅಲಪ್ಪುಳದ ಭಕ್ತೆಯೊಬ್ಬಳು ಆಕಸ್ಮಿಕವಾಗಿ ತನ್ನ 1.75 ಕೆಜಿ ಚಿನ್ನದ ಸರವನ್ನು ಪಳನಿಯ ಶ್ರೀ ದಂಡಾಯುಧಪಾಣಿ ಸ್ವಾಮಿ ದೇವಸ್ಥಾನದ ಕಾಣಿಕೆ ಡಬ್ಬಿಗೆ ಎಸೆದಿದ್ದಾಳೆ. ಕೊರಳಲ್ಲಿದ್ದ ತುಳಸಿ ಮಾಲೆ ತೆಗೆಯುತ್ತಿದ್ದಾಗ ಕಾಣಿಕೆ ಪೆಟ್ಟಿಗೆಗೆ ಸರ ಜಾರಿತು.

ಆ ಸಂದರ್ಭದಲ್ಲಿ, ಆಕೆಯ ಹಣಕಾಸಿನ ಅಡಚಣೆಯನ್ನು ಪರಿಗಣಿಸಿ ಮತ್ತು ಸಿಸಿಟಿವಿ ದೃಶ್ಯಗಳ ಮೂಲಕ ಘಟನೆಯನ್ನು ಪರಿಶೀಲಿಸಿದ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ತಮ್ಮ ವೈಯಕ್ತಿಕ ವೆಚ್ಚದಲ್ಲಿ ಸಮಾನ ಮೌಲ್ಯದ ಹೊಸ ಚಿನ್ನದ ಸರವನ್ನು ಖರೀದಿಸಿ ಅವರಿಗೆ ಹಿಂದಿರುಗಿಸಿದರು.

ಇದನ್ನೂ ಓದಿ; ‘ಸಶಸ್ತ್ರ ಹೋರಾಟ ಬ್ರಿಟಿಷರನ್ನು ಹೊರಹಾಕಿತು..’; ವಿವಾದ ಹುಟ್ಟುಹಾಕಿದ ಬಿಹಾರ ರಾಜ್ಯಪಾಲರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...