Homeಮುಖಪುಟಆಕಸ್ಮಿಕವಾಗಿ ಕಾಣಿಕೆ ಹುಂಡಿಗೆ ಬಿದ್ದ ವ್ಯಕ್ತಿಯ ಐಫೋನ್; ವಾಪಸ್ ಕೊಡಲು ನಿರಾಕರಿಸಿದ ದೇವಸ್ಥಾನ ಆಡಳಿತ ಮಂಡಳಿ

ಆಕಸ್ಮಿಕವಾಗಿ ಕಾಣಿಕೆ ಹುಂಡಿಗೆ ಬಿದ್ದ ವ್ಯಕ್ತಿಯ ಐಫೋನ್; ವಾಪಸ್ ಕೊಡಲು ನಿರಾಕರಿಸಿದ ದೇವಸ್ಥಾನ ಆಡಳಿತ ಮಂಡಳಿ

- Advertisement -
- Advertisement -

ತಮಿಳುನಾಡಿನ ದೇವಸ್ಥಾನವೊಂದರಲ್ಲಿ ಭಕ್ತರೊಬ್ಬರ ಐಫೋನ್ ಆಕಸ್ಮಿಕವಾಗಿ ಹುಂಡಿಗೆ ಬಿದ್ದಿದ್ದು, ತನ್ನ ಐಫೋನ್ ಅನ್ನು ಹಿಂದಿರುಗಿಸುವಂತೆ ಫೋನ್ ಮಾಲೀಕ ಮಾಡಿದ ಮನವಿಯನ್ನು ಆಡಳಿತ ಮಂಡಳಿ ನಿರಾಕರಿಸಿದೆ. ‘ಅದು ಈಗ ದೇವಸ್ಥಾನದ ಆಸ್ತಿಯಾಗಿದೆ’ ಎಂದು ಪ್ರತಿಪಾದಿಸಿದ್ದಾರೆ.

ಚೆನ್ನೈ ಬಳಿಯ ತಿರುಪೋರೂರಿನ ಅರುಲ್ಮಿಗು ಕಂದಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಸಲ್ಲಿಸುತ್ತಿದ್ದಾಗ ತನ್ನ ಐಫೋನ್ ಅಚಾತುರ್ಯದಿಂದ ಹುಂಡಿಗೆ ಬಿದ್ದಿರುವುದನ್ನು ದಿನೇಶ್ ದೇವಸ್ಥಾನ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದಾರೆ.

ಕುತೂಹಲಕಾರಿಯಾಗಿ, ದೇವಾಲಯದ ಆಡಳಿತವು ದಿನೇಶ್ ಅವರ ಆಪಲ್ ಫೋನ್‌ನ ಡೇಟಾವನ್ನು ಹಿಂಪಡೆಯಲು ಅನುಮತಿ ನೀಡಿತು. ಆದರೆ, ಫೋನ್ ಅನ್ನು ಹಿಂದಿರುಗಿಸಲು ನಿರಾಕರಿಸಿತು. ಆದರೂ ಫೋನ್ ವಾಪಸ್ ಕೊಡಿಸುವಂತೆ ಪಟ್ಟು ಹಿಡಿದ ದಿನೇಶ್ ಪಟ್ಟುಹಿಡಿದರು.

ಈ ವಿಷಯ ಸಚಿವ ಪಿ.ಕೆ.ಸೇಕರ್ ಬಾಬು ಅವರಿಗೆ ತಲುಪಿದ್ದು, ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಲ್ಲಿ ಯಾವುದೇ ವಸ್ತುವನ್ನು ಅದು ಉದ್ದೇಶಪೂರ್ವಕವಾಗಿ ಅಥವಾ ಆಕಸ್ಮಿಕವಾಗಿ ಹಾಕಿದರೂ ಅದು ದೇವರ ಖಾತೆಯ ಭಾಗವಾಗುತ್ತದೆ ಎಂದು ಹೇಳಿದರು.

“ದೇವಸ್ಥಾನಗಳ ಆಚರಣೆಗಳು ಮತ್ತು ಸಂಪ್ರದಾಯಗಳ ಪ್ರಕಾರ, ದೇಣಿಗೆ ಪೆಟ್ಟಿಗೆಯಲ್ಲಿ ನೀಡುವ ಕಾಣಿಕೆಯನ್ನು ದೇವರ ಆಸ್ತಿ ಎಂದು ಪರಿಗಣಿಸಲಾಗುತ್ತದೆ. ಅಂತಹ ಕಾಣಿಕೆಗಳನ್ನು ಹಿಂತಿರುಗಿಸಲು ನಿಯಮಗಳು ನಮಗೆ ಅನುಮತಿಸುವುದಿಲ್ಲ” ಎಂದು ಸಚಿವರು ವಿವರಿಸಿದರು.

ದೇವಾಲಯದ ನಿರ್ಮಾಣ ಮತ್ತು ಜೀರ್ಣೋದ್ಧಾರ ಯೋಜನೆಗಳ ಪರಿಶೀಲನೆಯ ಸಂದರ್ಭದಲ್ಲಿ ಬಾಬು ಅವರು, ಭಕ್ತಾಧಿಗೆ ಪರಿಹಾರ ನೀಡುವ ಸಾಧ್ಯತೆಯನ್ನು ಅನ್ವೇಷಿಸಲು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದರು.

ಇಂತಹುದೇ ಘಟನೆಯಲ್ಲಿ ಕೇರಳದ ಅಲಪ್ಪುಳದ ಭಕ್ತೆಯೊಬ್ಬಳು ಆಕಸ್ಮಿಕವಾಗಿ ತನ್ನ 1.75 ಕೆಜಿ ಚಿನ್ನದ ಸರವನ್ನು ಪಳನಿಯ ಶ್ರೀ ದಂಡಾಯುಧಪಾಣಿ ಸ್ವಾಮಿ ದೇವಸ್ಥಾನದ ಕಾಣಿಕೆ ಡಬ್ಬಿಗೆ ಎಸೆದಿದ್ದಾಳೆ. ಕೊರಳಲ್ಲಿದ್ದ ತುಳಸಿ ಮಾಲೆ ತೆಗೆಯುತ್ತಿದ್ದಾಗ ಕಾಣಿಕೆ ಪೆಟ್ಟಿಗೆಗೆ ಸರ ಜಾರಿತು.

ಆ ಸಂದರ್ಭದಲ್ಲಿ, ಆಕೆಯ ಹಣಕಾಸಿನ ಅಡಚಣೆಯನ್ನು ಪರಿಗಣಿಸಿ ಮತ್ತು ಸಿಸಿಟಿವಿ ದೃಶ್ಯಗಳ ಮೂಲಕ ಘಟನೆಯನ್ನು ಪರಿಶೀಲಿಸಿದ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ತಮ್ಮ ವೈಯಕ್ತಿಕ ವೆಚ್ಚದಲ್ಲಿ ಸಮಾನ ಮೌಲ್ಯದ ಹೊಸ ಚಿನ್ನದ ಸರವನ್ನು ಖರೀದಿಸಿ ಅವರಿಗೆ ಹಿಂದಿರುಗಿಸಿದರು.

ಇದನ್ನೂ ಓದಿ; ‘ಸಶಸ್ತ್ರ ಹೋರಾಟ ಬ್ರಿಟಿಷರನ್ನು ಹೊರಹಾಕಿತು..’; ವಿವಾದ ಹುಟ್ಟುಹಾಕಿದ ಬಿಹಾರ ರಾಜ್ಯಪಾಲರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...