Homeಕರ್ನಾಟಕಬೆಂಗಳೂರು: ಅರ್ಚಕನಿಂದ ಬಾಲಕಿ ಮೇಲೆ ಅತ್ಯಾಚಾರ, ಟ್ವಿಟರ್‌ನಲ್ಲಿ ಭಾರಿ ಆಕ್ರೋಶ

ಬೆಂಗಳೂರು: ಅರ್ಚಕನಿಂದ ಬಾಲಕಿ ಮೇಲೆ ಅತ್ಯಾಚಾರ, ಟ್ವಿಟರ್‌ನಲ್ಲಿ ಭಾರಿ ಆಕ್ರೋಶ

’ಕಾಲ್ಪನಿಕ ಚಿತ್ರಗಳಲ್ಲಿ ಹೀಗೆ ತೋರಿಸುವುದನ್ನು ವಿರೋಧಿಸುವವರು ನಿಜ ಜೀವನದಲ್ಲಿ ನಡೆಯುವ ಇಂತಹ ಘಟನೆಗಳ ಬಗ್ಗೆ ಜಾಣ ಕುರುಡು ಪ್ರದರ್ಶಿಸುತ್ತಾರೆ’

- Advertisement -
- Advertisement -

ಬೆಂಗಳೂರಿನ ಉತ್ತರ ಹೊರವಲಯದಲ್ಲಿರುವ ದೇವನಹಳ್ಳಿಯಲ್ಲಿ ದೇವಾಲಯದ ಬಳಿ ಆಟವಾಡುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಅರ್ಚಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸದ್ಯ, 62 ವರ್ಷದ ಆರೋಪಿ ಅರ್ಚಕ ವೆಂಕಟರಮಣಪ್ಪನನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆದರೆ ಟ್ವಿಟರ್‌ನಲ್ಲಿ #RapistPoojary  ಮತ್ತು #bangaloreasifa ಎಂಬ ಹ್ಯಾಶ್‌ಟ್ಯಾಗ್‌ನಳು ಟ್ರೆಂಡಿಂಗ್‌ನಲ್ಲಿವೆ.

ಟ್ವಿಟರ್‌ನಲ್ಲಿ ಹಲವು ಮಂದಿ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದಾರೆ.

ರಕ್ಷಿತ್ ಶಿವರಾಂ ಎನ್ನುವ ಪೇಜ್‌ನಿಂದ ಸಂಸದೆ ಶೋಭಾ ಕರಂದ್ಲಾಜ್ಜೆ ಅವರ ಚಿತ್ರವನ್ನು ಟ್ಯಾಗ್ ಮಾಡಿ, ಈ ಅತ್ಯಾಚಾರವನ್ನು ಖಂಡಿಸುವಿರಾ..? ಎಲ್ಲಿದ್ದಿರಿ ಶೋಭಾ ಕರಂದ್ಲಾಜೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ದೇವಸ್ಥಾನದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅರ್ಚಕ

ಭರತ್.ಪಿ. ಎನ್ನುವವರು ತೇಜಸ್ವಿ ಸೂಯ್ ಅವರ ಹಳೆಯ ಟ್ವೀಟ್‌ಗಳ ಫೋಟೋಗಳನ್ನು ಹಾಕಿ ಅತ್ಯಾಚಾರವನ್ನು ಹೇಗೆ ನೊಡಲಾಗುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ 2014ರಲ್ಲಿ ತೀರ್ಥಹಳ್ಳಿಯಲ್ಲಿ ನಡೆದಿದ್ದ ಅತ್ಯಾಚಾರ ಸಂದರ್ಭದಲ್ಲಿ ಬಳಸಿದ್ದ ಟ್ವೀಟ್‌ಗಳನ್ನು ಮತ್ತೆ ಬಳಸಿ ವ್ಯಂಗ್ಯವಾಡಿದ್ದಾರೆ.

’ದೇವಾಲಯದಲ್ಲಿ ನಡೆದ ಅತ್ಯಾಚಾರವನ್ನು ನಂಬಲು ಸಾಧ್ಯವಿಲ್ಲ, ಇದನ್ನೂ ಯಾರು ಸಮರ್ಥಿಸುವಿರಿ..? ಎಂದು ಮತ್ತೊಂದು ಟ್ವಿಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

ದೇವಾಲಯದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದ ಸಂತ್ರಸ್ತ ಮಗು ಆಸೀಫಾ ಪ್ರಕರಣದ ಜೊತೆಗೆ ಈ ಘಟನೆಯನ್ನು ಹೋಲಿಸುವ ಪ್ರಯತ್ನ ಟ್ವಿಟರ್‌ನಲ್ಲಿ ಮಾಡಲಾಗಿದೆ.

ಇದನ್ನೂ ಓದಿ: ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ಬೆಂಗಳೂರು ಆಸೀಫಾ ಎಂದು ಕರೆದು, ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ನ್ಯಾಯ ಬೇಕೆಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಆಗ್ರಹಿಸಿದ್ದಾರೆ.

ಮತ್ತೊಬ್ಬ ಟ್ವಿಟರ್‌ ಬಳಕೆದಾರರು, ಅತ್ಯಾಚಾರ ಆರೋಪಿ ಅರ್ಚಕನನ್ನು ನೇಣಿಗೇರಿಸಬೇಕು ಎಂದು ಆಗ್ರಹಿಸಿದ್ದಾರೆ.

’ಅಂದು ಆಸೀಫಾ, ಇಂದು ಐಶ್ವರ್ಯ ಆಗಿರಬಹುದು, ನಾಳೆ ಆಲಿಶಾಗೆ ಕೂಡ ಇದೇ ರೀತಿ ನಡೆಯಬಹುದು’ ಎಂದು ಭಿತ್ತಿಪತ್ರವನ್ನು ಹಂಚಿಕೊಂಡಿದ್ದಾರೆ.

ಮತ್ತೊಬ್ಬ ನೆಟ್ಟಿಗರು, ಇತ್ತಿಚೆಗೆ ‘ಎ ಸೂಟಬಲ್ ಬಾಯ್’ ಎನ್ನುವ ವೆಬ್ ಸೀರೀಸ್‌ನ ದೃಶ್ಯವೊಂದರಲ್ಲಿ ದೇವಸ್ಥಾನದ ಆವರಣದಲ್ಲಿ ಯುವಕ-ಯುವತಿ ಚುಂಬಿಸುತ್ತಿರುವ ದೃಶ್ಯವಿದೆ ಎನ್ನುವ ಕಾರಣಕ್ಕೆ “ಬಾಯ್ಕಾಟ್ ನೆಟ್‌ಫ್ಲಿಕ್ಸ್”‌ ಟ್ರೆಂಡಿಂಗ್ ಮಾಡಿದ್ದನ್ನು ನೆನಪಿಸಿದ್ದಾರೆ.

ಕಾಲ್ಪನಿಕ ಚಿತ್ರಗಳಲ್ಲಿ ಹೀಗೆ ತೋರಿಸುವುದನ್ನು ವಿರೋಧಿಸುವವರು ನಿಜ ಜೀವನದಲ್ಲಿ ಇಂತಹ ಘಟನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸದೇ ಜಾಣ ಕುರುಡು ಪ್ರದರ್ಶಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ಹೈದರಾಬಾದ್: ಅತಿಕ್ರಮಣ ಪ್ರವೇಶ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....