Homeಮುಖಪುಟಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

ಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

- Advertisement -
- Advertisement -

ತಮ್ಮ ಸಂಘಟನೆಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಅವರ ಕಾರ್ಯಾಚರಣೆಗಳಿಗೆ ಆರ್ಥಿಕ ನೆರವು ನೀಡಲು ನಿರಾಕರಿಸಿದ ಕಾರಣಕ್ಕೆ ತೆಲಂಗಾಣದ ಚಿಲ್ಕೂರ್ ಬಾಲಾಜಿ ದೇವಾಲಯದ ಪ್ರಧಾನ ಅರ್ಚಕ ರಂಗನಾಥನ್ ಅವರ ಮೇಲೆ ತೀವ್ರ ಬಲಪಂಥೀಯ ಹಿಂದುತ್ವ ಗುಂಪು ಹಲ್ಲೆ ನಡೆಸಿದೆ ಎಂದು ಸೌತ್‌ ಫಸ್ಟ್‌ ವರದಿ ಮಾಡಿದೆ. ಸಂಘಟನೆಗೆ ಚಂದಾ ನೀಡದ

‘ರಾಮ ರಾಜ್ಯಂ’ ಎಂದು ಕರೆದುಕೊಳ್ಳುವ ಮತ್ತು ಪೌರಾಣಿಕ ಇಕ್ಷ್ವಾಕು ಕುಲದ ವಂಶಸ್ಥರು ಎಂದು ಹೇಳಿಕೊಳ್ಳುವ ದುಷ್ಕರ್ಮಿಗಳ ಗುಂಪು, ಹಿಂದೂ ಹೊಸ ವರ್ಷದ ವೇಳೆಗೆ ‘ರಾಮ ರಾಜ್ಯ’ದ ತಮ್ಮ ಕಾರ್ಯಕ್ರಮಕ್ಕೆ ಸಹಾಯ ಮಾಡಲು ಒತ್ತಾಯಿಸಿತ್ತು, ಅದಕ್ಕೆ ನಿರಾಕರಿಸಿದ್ದ ಅವರನ್ನು ಅವರ ನಿವಾಸದಲ್ಲೆ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಫೆಬ್ರವರಿ 7 ರಂದು ತೆಲಂಗಾಣದ ಮೊಯಿನಾಬಾದ್‌ನಲ್ಲಿ ಈ ದಾಳಿ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ. ಸಂಘಟನೆಗೆ ಚಂದಾ ನೀಡದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ವೀಡಿಯೊ ರೆಕಾರ್ಡಿಂಗ್‌ನಲ್ಲಿ ದಾಳಿಕೋರರು ಅರ್ಚಕ ತಮ್ಮ “ಸೇನೆ”ಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಹಣಕಾಸಿನ ನೆರವು ನೀಡಲು ನಿರಾಕರಿಸಿದ ನಂತರ ಅವರನ್ನು ನಿಂದಿಸಿ ಹಲ್ಲೆ ನಡೆಸುತ್ತಿರುವುದನ್ನು ದಾಖಲಾಗಿದೆ. ಹಿಂದೂ ಸಂಪ್ರದಾಯ ಮತ್ತು ತಮ್ಮ ಗುಂಪಿನ ಗುರುತಿನ ಬಗ್ಗೆ ಅರ್ಚಕರಿಗೆ ಜ್ಞಾನವಿಲ್ಲ ಎಂದು ಆರೋಪಿಸಿ ಅವರು ಅವರನ್ನು ಕೆಣಕಿದ್ದಾರೆ.

“ಶ್ರೀ ಚಿಲ್ಕೂರು ಬಾಲಾಜಿ ದೇವತೆಯ ಅರ್ಚಕನೂ ಆಗಿರುವ ನನ್ನ ಮಗ ಶ್ರೀ ರಂಗರಾಜನ್ ಅವರನ್ನು ಅವರು ಗಂಭೀರವಾಗಿ ನಿಂದಿಸಿದರು. ನಮ್ಮ ಮನೆಯಲ್ಲೆ ಅವರಿಗೆ ಥಳಿಸಲಾಯಿತು ಎಂದು ರಂಗನಾಥನ್ ಅವರ ತಂದೆ ಸೌಂದರರಾಜನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊಯಿನಾಬಾದ್ ಪೊಲೀಸರು ಸಂಘಟನೆಯ ನಾಯಕ ವೀರ ರಾಘವ ರೆಡ್ಡಿಯನ್ನು ಬಂಧಿಸಿದ್ದಾರೆ. “ಆರೋಪಿಯ ವಿರುದ್ಧ ಈ ಹಿಂದೆಯು ಪ್ರಕರಣ ದಾಖಲಾಗಿತ್ತು. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅದಕ್ಕೂ ಮೊದಲು ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅವರ ಮೇಲೆ ಪ್ರಕರಣ ದಾಖಲಾಗಿತ್ತು” ಎಂದು ಪೊಲೀಸರು ಸೌತ್ ಫಸ್ಟ್‌ಗೆ ತಿಳಿಸಿದ್ದಾರೆ.

ಹಿಂದೂ ಮಹಾಕಾವ್ಯ ರಾಮಾಯಣದ ನಾಯಕನ ರಾಜ್ಯವಾದ ರಾಮರಾಜ್ಯವನ್ನು “ಪುನಃ ಸ್ಥಾಪಿಸುವ” ಉಗ್ರಗಾಮಿ ದೃಷ್ಟಿಕೋನವನ್ನು ಈ ಸಂಘಟನೆ ಪ್ರತಿಪಾದಿಸುತ್ತದೆ. “ದೇಶದ ಪ್ರಸ್ತುತ ಕ್ರಿಮಿನಲ್ ನ್ಯಾಯ ವ್ಯವಸ್ಥೆಗಳು ದುಷ್ಟವಾಗಿದ್ದು, ಅಶಿಸ್ತುಬದ್ಧವಾಗಿವೆ. ಅಲ್ಲದೆ, ಶ್ರೀಮಂತ ಅಪರಾಧಿಗಳನ್ನು ಮಾತ್ರ ರಕ್ಷಿಸುತ್ತಿವೆ ಮತ್ತು ಈ ಪ್ರಕ್ರಿಯೆಯಲ್ಲಿ ಯಾವುದೇ ಧರ್ಮವು ಕಂಡುಬರುವುದಿಲ್ಲ” ಎಂದು ಸಂಘಟನೆಯ ಕಿರುಪುಸ್ತಕ ಹೇಳುತ್ತದೆ ಎಂದು ವರದಿಯಾಗಿದೆ.

ಈ ಗುಂಪು ಪ್ರತ್ಯೇಕ ನಾಗರಿಕ ವ್ಯವಸ್ಥೆ, ಸೈನ್ಯ ಮತ್ತು ಕಾನೂನು ತಂಡವನ್ನು ರೂಪಿಸುತ್ತದೆ. ಅವರ ವೆಬ್‌ಸೈಟ್ ಜಾತಿ ಪ್ರಾಬಲ್ಯವನ್ನು ಉತ್ತೇಜಿಸುವ ವೀಡಿಯೊಗಳನ್ನು ಒಳಗೊಂಡಿದ್ದು, ರಾಮಾಯಣ ಮತ್ತು ಭಗವದ್ಗೀತೆಯ ವ್ಯಾಖ್ಯಾನಗಳ ಮೂಲಕ ಇಕ್ಷ್ವಾಕುಗಳನ್ನು ವಿಶ್ವ ಮಾಲೀಕರೆಂದು ಘೋಷಿಸುತ್ತದೆ. ತಮ್ಮ ಮಾರ್ಗಗಳನ್ನು ಬದಲಾಯಿಸದ ನ್ಯಾಯಾಧೀಶರ, ನಾಗರಿಕರ ಬಂಧನ ಮಾಡುವುದಾಗಿ ಅವರು ಬೆದರಿಕೆ ಹಾಕುತ್ತಾರೆ.

ದುಷ್ಟರನ್ನು ಶಿಕ್ಷಿಸುವುದು, ಗೋವುಗಳನ್ನು ರಕ್ಷಿಸುವುದು, ಇಕ್ಷ್ವಾಕು ಮತ್ತು ಭರತ ಕುಲಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು, ದೇವಾಲಯದ ಆಸ್ತಿಗಳನ್ನು ಮರಳಿ ಪಡೆಯುವುದು ಮತ್ತು ಆರು ಹಿಂದೂ ಪಂಗಡಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು ಅವರ ಉದ್ದೇಶಗಳಲ್ಲಿ ಸೇರಿವೆ. ಗುಂಪಿನ ಚಟುವಟಿಕೆಗಳ ಸಂಪೂರ್ಣ ವ್ಯಾಪ್ತಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸೌತ್ ಫಸ್ಟ್‌ ವರದಿ ಮಾಡಿದೆ.

ಇದನ್ನೂಓದಿ:  ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...