Homeಮುಖಪುಟಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

ಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

- Advertisement -
- Advertisement -

ತಮ್ಮ ಸಂಘಟನೆಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಅವರ ಕಾರ್ಯಾಚರಣೆಗಳಿಗೆ ಆರ್ಥಿಕ ನೆರವು ನೀಡಲು ನಿರಾಕರಿಸಿದ ಕಾರಣಕ್ಕೆ ತೆಲಂಗಾಣದ ಚಿಲ್ಕೂರ್ ಬಾಲಾಜಿ ದೇವಾಲಯದ ಪ್ರಧಾನ ಅರ್ಚಕ ರಂಗನಾಥನ್ ಅವರ ಮೇಲೆ ತೀವ್ರ ಬಲಪಂಥೀಯ ಹಿಂದುತ್ವ ಗುಂಪು ಹಲ್ಲೆ ನಡೆಸಿದೆ ಎಂದು ಸೌತ್‌ ಫಸ್ಟ್‌ ವರದಿ ಮಾಡಿದೆ. ಸಂಘಟನೆಗೆ ಚಂದಾ ನೀಡದ

‘ರಾಮ ರಾಜ್ಯಂ’ ಎಂದು ಕರೆದುಕೊಳ್ಳುವ ಮತ್ತು ಪೌರಾಣಿಕ ಇಕ್ಷ್ವಾಕು ಕುಲದ ವಂಶಸ್ಥರು ಎಂದು ಹೇಳಿಕೊಳ್ಳುವ ದುಷ್ಕರ್ಮಿಗಳ ಗುಂಪು, ಹಿಂದೂ ಹೊಸ ವರ್ಷದ ವೇಳೆಗೆ ‘ರಾಮ ರಾಜ್ಯ’ದ ತಮ್ಮ ಕಾರ್ಯಕ್ರಮಕ್ಕೆ ಸಹಾಯ ಮಾಡಲು ಒತ್ತಾಯಿಸಿತ್ತು, ಅದಕ್ಕೆ ನಿರಾಕರಿಸಿದ್ದ ಅವರನ್ನು ಅವರ ನಿವಾಸದಲ್ಲೆ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಫೆಬ್ರವರಿ 7 ರಂದು ತೆಲಂಗಾಣದ ಮೊಯಿನಾಬಾದ್‌ನಲ್ಲಿ ಈ ದಾಳಿ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ. ಸಂಘಟನೆಗೆ ಚಂದಾ ನೀಡದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ವೀಡಿಯೊ ರೆಕಾರ್ಡಿಂಗ್‌ನಲ್ಲಿ ದಾಳಿಕೋರರು ಅರ್ಚಕ ತಮ್ಮ “ಸೇನೆ”ಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಹಣಕಾಸಿನ ನೆರವು ನೀಡಲು ನಿರಾಕರಿಸಿದ ನಂತರ ಅವರನ್ನು ನಿಂದಿಸಿ ಹಲ್ಲೆ ನಡೆಸುತ್ತಿರುವುದನ್ನು ದಾಖಲಾಗಿದೆ. ಹಿಂದೂ ಸಂಪ್ರದಾಯ ಮತ್ತು ತಮ್ಮ ಗುಂಪಿನ ಗುರುತಿನ ಬಗ್ಗೆ ಅರ್ಚಕರಿಗೆ ಜ್ಞಾನವಿಲ್ಲ ಎಂದು ಆರೋಪಿಸಿ ಅವರು ಅವರನ್ನು ಕೆಣಕಿದ್ದಾರೆ.

“ಶ್ರೀ ಚಿಲ್ಕೂರು ಬಾಲಾಜಿ ದೇವತೆಯ ಅರ್ಚಕನೂ ಆಗಿರುವ ನನ್ನ ಮಗ ಶ್ರೀ ರಂಗರಾಜನ್ ಅವರನ್ನು ಅವರು ಗಂಭೀರವಾಗಿ ನಿಂದಿಸಿದರು. ನಮ್ಮ ಮನೆಯಲ್ಲೆ ಅವರಿಗೆ ಥಳಿಸಲಾಯಿತು ಎಂದು ರಂಗನಾಥನ್ ಅವರ ತಂದೆ ಸೌಂದರರಾಜನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊಯಿನಾಬಾದ್ ಪೊಲೀಸರು ಸಂಘಟನೆಯ ನಾಯಕ ವೀರ ರಾಘವ ರೆಡ್ಡಿಯನ್ನು ಬಂಧಿಸಿದ್ದಾರೆ. “ಆರೋಪಿಯ ವಿರುದ್ಧ ಈ ಹಿಂದೆಯು ಪ್ರಕರಣ ದಾಖಲಾಗಿತ್ತು. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅದಕ್ಕೂ ಮೊದಲು ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅವರ ಮೇಲೆ ಪ್ರಕರಣ ದಾಖಲಾಗಿತ್ತು” ಎಂದು ಪೊಲೀಸರು ಸೌತ್ ಫಸ್ಟ್‌ಗೆ ತಿಳಿಸಿದ್ದಾರೆ.

ಹಿಂದೂ ಮಹಾಕಾವ್ಯ ರಾಮಾಯಣದ ನಾಯಕನ ರಾಜ್ಯವಾದ ರಾಮರಾಜ್ಯವನ್ನು “ಪುನಃ ಸ್ಥಾಪಿಸುವ” ಉಗ್ರಗಾಮಿ ದೃಷ್ಟಿಕೋನವನ್ನು ಈ ಸಂಘಟನೆ ಪ್ರತಿಪಾದಿಸುತ್ತದೆ. “ದೇಶದ ಪ್ರಸ್ತುತ ಕ್ರಿಮಿನಲ್ ನ್ಯಾಯ ವ್ಯವಸ್ಥೆಗಳು ದುಷ್ಟವಾಗಿದ್ದು, ಅಶಿಸ್ತುಬದ್ಧವಾಗಿವೆ. ಅಲ್ಲದೆ, ಶ್ರೀಮಂತ ಅಪರಾಧಿಗಳನ್ನು ಮಾತ್ರ ರಕ್ಷಿಸುತ್ತಿವೆ ಮತ್ತು ಈ ಪ್ರಕ್ರಿಯೆಯಲ್ಲಿ ಯಾವುದೇ ಧರ್ಮವು ಕಂಡುಬರುವುದಿಲ್ಲ” ಎಂದು ಸಂಘಟನೆಯ ಕಿರುಪುಸ್ತಕ ಹೇಳುತ್ತದೆ ಎಂದು ವರದಿಯಾಗಿದೆ.

ಈ ಗುಂಪು ಪ್ರತ್ಯೇಕ ನಾಗರಿಕ ವ್ಯವಸ್ಥೆ, ಸೈನ್ಯ ಮತ್ತು ಕಾನೂನು ತಂಡವನ್ನು ರೂಪಿಸುತ್ತದೆ. ಅವರ ವೆಬ್‌ಸೈಟ್ ಜಾತಿ ಪ್ರಾಬಲ್ಯವನ್ನು ಉತ್ತೇಜಿಸುವ ವೀಡಿಯೊಗಳನ್ನು ಒಳಗೊಂಡಿದ್ದು, ರಾಮಾಯಣ ಮತ್ತು ಭಗವದ್ಗೀತೆಯ ವ್ಯಾಖ್ಯಾನಗಳ ಮೂಲಕ ಇಕ್ಷ್ವಾಕುಗಳನ್ನು ವಿಶ್ವ ಮಾಲೀಕರೆಂದು ಘೋಷಿಸುತ್ತದೆ. ತಮ್ಮ ಮಾರ್ಗಗಳನ್ನು ಬದಲಾಯಿಸದ ನ್ಯಾಯಾಧೀಶರ, ನಾಗರಿಕರ ಬಂಧನ ಮಾಡುವುದಾಗಿ ಅವರು ಬೆದರಿಕೆ ಹಾಕುತ್ತಾರೆ.

ದುಷ್ಟರನ್ನು ಶಿಕ್ಷಿಸುವುದು, ಗೋವುಗಳನ್ನು ರಕ್ಷಿಸುವುದು, ಇಕ್ಷ್ವಾಕು ಮತ್ತು ಭರತ ಕುಲಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು, ದೇವಾಲಯದ ಆಸ್ತಿಗಳನ್ನು ಮರಳಿ ಪಡೆಯುವುದು ಮತ್ತು ಆರು ಹಿಂದೂ ಪಂಗಡಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು ಅವರ ಉದ್ದೇಶಗಳಲ್ಲಿ ಸೇರಿವೆ. ಗುಂಪಿನ ಚಟುವಟಿಕೆಗಳ ಸಂಪೂರ್ಣ ವ್ಯಾಪ್ತಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸೌತ್ ಫಸ್ಟ್‌ ವರದಿ ಮಾಡಿದೆ.

ಇದನ್ನೂಓದಿ:  ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...