Homeಮುಖಪುಟಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

ಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

- Advertisement -
- Advertisement -

ತಮ್ಮ ಸಂಘಟನೆಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಅವರ ಕಾರ್ಯಾಚರಣೆಗಳಿಗೆ ಆರ್ಥಿಕ ನೆರವು ನೀಡಲು ನಿರಾಕರಿಸಿದ ಕಾರಣಕ್ಕೆ ತೆಲಂಗಾಣದ ಚಿಲ್ಕೂರ್ ಬಾಲಾಜಿ ದೇವಾಲಯದ ಪ್ರಧಾನ ಅರ್ಚಕ ರಂಗನಾಥನ್ ಅವರ ಮೇಲೆ ತೀವ್ರ ಬಲಪಂಥೀಯ ಹಿಂದುತ್ವ ಗುಂಪು ಹಲ್ಲೆ ನಡೆಸಿದೆ ಎಂದು ಸೌತ್‌ ಫಸ್ಟ್‌ ವರದಿ ಮಾಡಿದೆ. ಸಂಘಟನೆಗೆ ಚಂದಾ ನೀಡದ

‘ರಾಮ ರಾಜ್ಯಂ’ ಎಂದು ಕರೆದುಕೊಳ್ಳುವ ಮತ್ತು ಪೌರಾಣಿಕ ಇಕ್ಷ್ವಾಕು ಕುಲದ ವಂಶಸ್ಥರು ಎಂದು ಹೇಳಿಕೊಳ್ಳುವ ದುಷ್ಕರ್ಮಿಗಳ ಗುಂಪು, ಹಿಂದೂ ಹೊಸ ವರ್ಷದ ವೇಳೆಗೆ ‘ರಾಮ ರಾಜ್ಯ’ದ ತಮ್ಮ ಕಾರ್ಯಕ್ರಮಕ್ಕೆ ಸಹಾಯ ಮಾಡಲು ಒತ್ತಾಯಿಸಿತ್ತು, ಅದಕ್ಕೆ ನಿರಾಕರಿಸಿದ್ದ ಅವರನ್ನು ಅವರ ನಿವಾಸದಲ್ಲೆ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಫೆಬ್ರವರಿ 7 ರಂದು ತೆಲಂಗಾಣದ ಮೊಯಿನಾಬಾದ್‌ನಲ್ಲಿ ಈ ದಾಳಿ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ. ಸಂಘಟನೆಗೆ ಚಂದಾ ನೀಡದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ವೀಡಿಯೊ ರೆಕಾರ್ಡಿಂಗ್‌ನಲ್ಲಿ ದಾಳಿಕೋರರು ಅರ್ಚಕ ತಮ್ಮ “ಸೇನೆ”ಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಹಣಕಾಸಿನ ನೆರವು ನೀಡಲು ನಿರಾಕರಿಸಿದ ನಂತರ ಅವರನ್ನು ನಿಂದಿಸಿ ಹಲ್ಲೆ ನಡೆಸುತ್ತಿರುವುದನ್ನು ದಾಖಲಾಗಿದೆ. ಹಿಂದೂ ಸಂಪ್ರದಾಯ ಮತ್ತು ತಮ್ಮ ಗುಂಪಿನ ಗುರುತಿನ ಬಗ್ಗೆ ಅರ್ಚಕರಿಗೆ ಜ್ಞಾನವಿಲ್ಲ ಎಂದು ಆರೋಪಿಸಿ ಅವರು ಅವರನ್ನು ಕೆಣಕಿದ್ದಾರೆ.

“ಶ್ರೀ ಚಿಲ್ಕೂರು ಬಾಲಾಜಿ ದೇವತೆಯ ಅರ್ಚಕನೂ ಆಗಿರುವ ನನ್ನ ಮಗ ಶ್ರೀ ರಂಗರಾಜನ್ ಅವರನ್ನು ಅವರು ಗಂಭೀರವಾಗಿ ನಿಂದಿಸಿದರು. ನಮ್ಮ ಮನೆಯಲ್ಲೆ ಅವರಿಗೆ ಥಳಿಸಲಾಯಿತು ಎಂದು ರಂಗನಾಥನ್ ಅವರ ತಂದೆ ಸೌಂದರರಾಜನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊಯಿನಾಬಾದ್ ಪೊಲೀಸರು ಸಂಘಟನೆಯ ನಾಯಕ ವೀರ ರಾಘವ ರೆಡ್ಡಿಯನ್ನು ಬಂಧಿಸಿದ್ದಾರೆ. “ಆರೋಪಿಯ ವಿರುದ್ಧ ಈ ಹಿಂದೆಯು ಪ್ರಕರಣ ದಾಖಲಾಗಿತ್ತು. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅದಕ್ಕೂ ಮೊದಲು ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅವರ ಮೇಲೆ ಪ್ರಕರಣ ದಾಖಲಾಗಿತ್ತು” ಎಂದು ಪೊಲೀಸರು ಸೌತ್ ಫಸ್ಟ್‌ಗೆ ತಿಳಿಸಿದ್ದಾರೆ.

ಹಿಂದೂ ಮಹಾಕಾವ್ಯ ರಾಮಾಯಣದ ನಾಯಕನ ರಾಜ್ಯವಾದ ರಾಮರಾಜ್ಯವನ್ನು “ಪುನಃ ಸ್ಥಾಪಿಸುವ” ಉಗ್ರಗಾಮಿ ದೃಷ್ಟಿಕೋನವನ್ನು ಈ ಸಂಘಟನೆ ಪ್ರತಿಪಾದಿಸುತ್ತದೆ. “ದೇಶದ ಪ್ರಸ್ತುತ ಕ್ರಿಮಿನಲ್ ನ್ಯಾಯ ವ್ಯವಸ್ಥೆಗಳು ದುಷ್ಟವಾಗಿದ್ದು, ಅಶಿಸ್ತುಬದ್ಧವಾಗಿವೆ. ಅಲ್ಲದೆ, ಶ್ರೀಮಂತ ಅಪರಾಧಿಗಳನ್ನು ಮಾತ್ರ ರಕ್ಷಿಸುತ್ತಿವೆ ಮತ್ತು ಈ ಪ್ರಕ್ರಿಯೆಯಲ್ಲಿ ಯಾವುದೇ ಧರ್ಮವು ಕಂಡುಬರುವುದಿಲ್ಲ” ಎಂದು ಸಂಘಟನೆಯ ಕಿರುಪುಸ್ತಕ ಹೇಳುತ್ತದೆ ಎಂದು ವರದಿಯಾಗಿದೆ.

ಈ ಗುಂಪು ಪ್ರತ್ಯೇಕ ನಾಗರಿಕ ವ್ಯವಸ್ಥೆ, ಸೈನ್ಯ ಮತ್ತು ಕಾನೂನು ತಂಡವನ್ನು ರೂಪಿಸುತ್ತದೆ. ಅವರ ವೆಬ್‌ಸೈಟ್ ಜಾತಿ ಪ್ರಾಬಲ್ಯವನ್ನು ಉತ್ತೇಜಿಸುವ ವೀಡಿಯೊಗಳನ್ನು ಒಳಗೊಂಡಿದ್ದು, ರಾಮಾಯಣ ಮತ್ತು ಭಗವದ್ಗೀತೆಯ ವ್ಯಾಖ್ಯಾನಗಳ ಮೂಲಕ ಇಕ್ಷ್ವಾಕುಗಳನ್ನು ವಿಶ್ವ ಮಾಲೀಕರೆಂದು ಘೋಷಿಸುತ್ತದೆ. ತಮ್ಮ ಮಾರ್ಗಗಳನ್ನು ಬದಲಾಯಿಸದ ನ್ಯಾಯಾಧೀಶರ, ನಾಗರಿಕರ ಬಂಧನ ಮಾಡುವುದಾಗಿ ಅವರು ಬೆದರಿಕೆ ಹಾಕುತ್ತಾರೆ.

ದುಷ್ಟರನ್ನು ಶಿಕ್ಷಿಸುವುದು, ಗೋವುಗಳನ್ನು ರಕ್ಷಿಸುವುದು, ಇಕ್ಷ್ವಾಕು ಮತ್ತು ಭರತ ಕುಲಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು, ದೇವಾಲಯದ ಆಸ್ತಿಗಳನ್ನು ಮರಳಿ ಪಡೆಯುವುದು ಮತ್ತು ಆರು ಹಿಂದೂ ಪಂಗಡಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು ಅವರ ಉದ್ದೇಶಗಳಲ್ಲಿ ಸೇರಿವೆ. ಗುಂಪಿನ ಚಟುವಟಿಕೆಗಳ ಸಂಪೂರ್ಣ ವ್ಯಾಪ್ತಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸೌತ್ ಫಸ್ಟ್‌ ವರದಿ ಮಾಡಿದೆ.

ಇದನ್ನೂಓದಿ:  ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....