Homeಮುಖಪುಟಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

ಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

- Advertisement -
- Advertisement -

ತಮ್ಮ ಸಂಘಟನೆಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಅವರ ಕಾರ್ಯಾಚರಣೆಗಳಿಗೆ ಆರ್ಥಿಕ ನೆರವು ನೀಡಲು ನಿರಾಕರಿಸಿದ ಕಾರಣಕ್ಕೆ ತೆಲಂಗಾಣದ ಚಿಲ್ಕೂರ್ ಬಾಲಾಜಿ ದೇವಾಲಯದ ಪ್ರಧಾನ ಅರ್ಚಕ ರಂಗನಾಥನ್ ಅವರ ಮೇಲೆ ತೀವ್ರ ಬಲಪಂಥೀಯ ಹಿಂದುತ್ವ ಗುಂಪು ಹಲ್ಲೆ ನಡೆಸಿದೆ ಎಂದು ಸೌತ್‌ ಫಸ್ಟ್‌ ವರದಿ ಮಾಡಿದೆ. ಸಂಘಟನೆಗೆ ಚಂದಾ ನೀಡದ

‘ರಾಮ ರಾಜ್ಯಂ’ ಎಂದು ಕರೆದುಕೊಳ್ಳುವ ಮತ್ತು ಪೌರಾಣಿಕ ಇಕ್ಷ್ವಾಕು ಕುಲದ ವಂಶಸ್ಥರು ಎಂದು ಹೇಳಿಕೊಳ್ಳುವ ದುಷ್ಕರ್ಮಿಗಳ ಗುಂಪು, ಹಿಂದೂ ಹೊಸ ವರ್ಷದ ವೇಳೆಗೆ ‘ರಾಮ ರಾಜ್ಯ’ದ ತಮ್ಮ ಕಾರ್ಯಕ್ರಮಕ್ಕೆ ಸಹಾಯ ಮಾಡಲು ಒತ್ತಾಯಿಸಿತ್ತು, ಅದಕ್ಕೆ ನಿರಾಕರಿಸಿದ್ದ ಅವರನ್ನು ಅವರ ನಿವಾಸದಲ್ಲೆ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಫೆಬ್ರವರಿ 7 ರಂದು ತೆಲಂಗಾಣದ ಮೊಯಿನಾಬಾದ್‌ನಲ್ಲಿ ಈ ದಾಳಿ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ. ಸಂಘಟನೆಗೆ ಚಂದಾ ನೀಡದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ವೀಡಿಯೊ ರೆಕಾರ್ಡಿಂಗ್‌ನಲ್ಲಿ ದಾಳಿಕೋರರು ಅರ್ಚಕ ತಮ್ಮ “ಸೇನೆ”ಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಹಣಕಾಸಿನ ನೆರವು ನೀಡಲು ನಿರಾಕರಿಸಿದ ನಂತರ ಅವರನ್ನು ನಿಂದಿಸಿ ಹಲ್ಲೆ ನಡೆಸುತ್ತಿರುವುದನ್ನು ದಾಖಲಾಗಿದೆ. ಹಿಂದೂ ಸಂಪ್ರದಾಯ ಮತ್ತು ತಮ್ಮ ಗುಂಪಿನ ಗುರುತಿನ ಬಗ್ಗೆ ಅರ್ಚಕರಿಗೆ ಜ್ಞಾನವಿಲ್ಲ ಎಂದು ಆರೋಪಿಸಿ ಅವರು ಅವರನ್ನು ಕೆಣಕಿದ್ದಾರೆ.

“ಶ್ರೀ ಚಿಲ್ಕೂರು ಬಾಲಾಜಿ ದೇವತೆಯ ಅರ್ಚಕನೂ ಆಗಿರುವ ನನ್ನ ಮಗ ಶ್ರೀ ರಂಗರಾಜನ್ ಅವರನ್ನು ಅವರು ಗಂಭೀರವಾಗಿ ನಿಂದಿಸಿದರು. ನಮ್ಮ ಮನೆಯಲ್ಲೆ ಅವರಿಗೆ ಥಳಿಸಲಾಯಿತು ಎಂದು ರಂಗನಾಥನ್ ಅವರ ತಂದೆ ಸೌಂದರರಾಜನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊಯಿನಾಬಾದ್ ಪೊಲೀಸರು ಸಂಘಟನೆಯ ನಾಯಕ ವೀರ ರಾಘವ ರೆಡ್ಡಿಯನ್ನು ಬಂಧಿಸಿದ್ದಾರೆ. “ಆರೋಪಿಯ ವಿರುದ್ಧ ಈ ಹಿಂದೆಯು ಪ್ರಕರಣ ದಾಖಲಾಗಿತ್ತು. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅದಕ್ಕೂ ಮೊದಲು ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅವರ ಮೇಲೆ ಪ್ರಕರಣ ದಾಖಲಾಗಿತ್ತು” ಎಂದು ಪೊಲೀಸರು ಸೌತ್ ಫಸ್ಟ್‌ಗೆ ತಿಳಿಸಿದ್ದಾರೆ.

ಹಿಂದೂ ಮಹಾಕಾವ್ಯ ರಾಮಾಯಣದ ನಾಯಕನ ರಾಜ್ಯವಾದ ರಾಮರಾಜ್ಯವನ್ನು “ಪುನಃ ಸ್ಥಾಪಿಸುವ” ಉಗ್ರಗಾಮಿ ದೃಷ್ಟಿಕೋನವನ್ನು ಈ ಸಂಘಟನೆ ಪ್ರತಿಪಾದಿಸುತ್ತದೆ. “ದೇಶದ ಪ್ರಸ್ತುತ ಕ್ರಿಮಿನಲ್ ನ್ಯಾಯ ವ್ಯವಸ್ಥೆಗಳು ದುಷ್ಟವಾಗಿದ್ದು, ಅಶಿಸ್ತುಬದ್ಧವಾಗಿವೆ. ಅಲ್ಲದೆ, ಶ್ರೀಮಂತ ಅಪರಾಧಿಗಳನ್ನು ಮಾತ್ರ ರಕ್ಷಿಸುತ್ತಿವೆ ಮತ್ತು ಈ ಪ್ರಕ್ರಿಯೆಯಲ್ಲಿ ಯಾವುದೇ ಧರ್ಮವು ಕಂಡುಬರುವುದಿಲ್ಲ” ಎಂದು ಸಂಘಟನೆಯ ಕಿರುಪುಸ್ತಕ ಹೇಳುತ್ತದೆ ಎಂದು ವರದಿಯಾಗಿದೆ.

ಈ ಗುಂಪು ಪ್ರತ್ಯೇಕ ನಾಗರಿಕ ವ್ಯವಸ್ಥೆ, ಸೈನ್ಯ ಮತ್ತು ಕಾನೂನು ತಂಡವನ್ನು ರೂಪಿಸುತ್ತದೆ. ಅವರ ವೆಬ್‌ಸೈಟ್ ಜಾತಿ ಪ್ರಾಬಲ್ಯವನ್ನು ಉತ್ತೇಜಿಸುವ ವೀಡಿಯೊಗಳನ್ನು ಒಳಗೊಂಡಿದ್ದು, ರಾಮಾಯಣ ಮತ್ತು ಭಗವದ್ಗೀತೆಯ ವ್ಯಾಖ್ಯಾನಗಳ ಮೂಲಕ ಇಕ್ಷ್ವಾಕುಗಳನ್ನು ವಿಶ್ವ ಮಾಲೀಕರೆಂದು ಘೋಷಿಸುತ್ತದೆ. ತಮ್ಮ ಮಾರ್ಗಗಳನ್ನು ಬದಲಾಯಿಸದ ನ್ಯಾಯಾಧೀಶರ, ನಾಗರಿಕರ ಬಂಧನ ಮಾಡುವುದಾಗಿ ಅವರು ಬೆದರಿಕೆ ಹಾಕುತ್ತಾರೆ.

ದುಷ್ಟರನ್ನು ಶಿಕ್ಷಿಸುವುದು, ಗೋವುಗಳನ್ನು ರಕ್ಷಿಸುವುದು, ಇಕ್ಷ್ವಾಕು ಮತ್ತು ಭರತ ಕುಲಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು, ದೇವಾಲಯದ ಆಸ್ತಿಗಳನ್ನು ಮರಳಿ ಪಡೆಯುವುದು ಮತ್ತು ಆರು ಹಿಂದೂ ಪಂಗಡಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು ಅವರ ಉದ್ದೇಶಗಳಲ್ಲಿ ಸೇರಿವೆ. ಗುಂಪಿನ ಚಟುವಟಿಕೆಗಳ ಸಂಪೂರ್ಣ ವ್ಯಾಪ್ತಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸೌತ್ ಫಸ್ಟ್‌ ವರದಿ ಮಾಡಿದೆ.

ಇದನ್ನೂಓದಿ:  ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...