Homeಮುಖಪುಟಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

ಸಂಘಟನೆಗೆ ಚಂದಾ ನೀಡದ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ದುಷ್ಕರ್ಮಿಗಳು

- Advertisement -
- Advertisement -

ತಮ್ಮ ಸಂಘಟನೆಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಅವರ ಕಾರ್ಯಾಚರಣೆಗಳಿಗೆ ಆರ್ಥಿಕ ನೆರವು ನೀಡಲು ನಿರಾಕರಿಸಿದ ಕಾರಣಕ್ಕೆ ತೆಲಂಗಾಣದ ಚಿಲ್ಕೂರ್ ಬಾಲಾಜಿ ದೇವಾಲಯದ ಪ್ರಧಾನ ಅರ್ಚಕ ರಂಗನಾಥನ್ ಅವರ ಮೇಲೆ ತೀವ್ರ ಬಲಪಂಥೀಯ ಹಿಂದುತ್ವ ಗುಂಪು ಹಲ್ಲೆ ನಡೆಸಿದೆ ಎಂದು ಸೌತ್‌ ಫಸ್ಟ್‌ ವರದಿ ಮಾಡಿದೆ. ಸಂಘಟನೆಗೆ ಚಂದಾ ನೀಡದ

‘ರಾಮ ರಾಜ್ಯಂ’ ಎಂದು ಕರೆದುಕೊಳ್ಳುವ ಮತ್ತು ಪೌರಾಣಿಕ ಇಕ್ಷ್ವಾಕು ಕುಲದ ವಂಶಸ್ಥರು ಎಂದು ಹೇಳಿಕೊಳ್ಳುವ ದುಷ್ಕರ್ಮಿಗಳ ಗುಂಪು, ಹಿಂದೂ ಹೊಸ ವರ್ಷದ ವೇಳೆಗೆ ‘ರಾಮ ರಾಜ್ಯ’ದ ತಮ್ಮ ಕಾರ್ಯಕ್ರಮಕ್ಕೆ ಸಹಾಯ ಮಾಡಲು ಒತ್ತಾಯಿಸಿತ್ತು, ಅದಕ್ಕೆ ನಿರಾಕರಿಸಿದ್ದ ಅವರನ್ನು ಅವರ ನಿವಾಸದಲ್ಲೆ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಫೆಬ್ರವರಿ 7 ರಂದು ತೆಲಂಗಾಣದ ಮೊಯಿನಾಬಾದ್‌ನಲ್ಲಿ ಈ ದಾಳಿ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ. ಸಂಘಟನೆಗೆ ಚಂದಾ ನೀಡದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ವೀಡಿಯೊ ರೆಕಾರ್ಡಿಂಗ್‌ನಲ್ಲಿ ದಾಳಿಕೋರರು ಅರ್ಚಕ ತಮ್ಮ “ಸೇನೆ”ಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಮತ್ತು ಹಣಕಾಸಿನ ನೆರವು ನೀಡಲು ನಿರಾಕರಿಸಿದ ನಂತರ ಅವರನ್ನು ನಿಂದಿಸಿ ಹಲ್ಲೆ ನಡೆಸುತ್ತಿರುವುದನ್ನು ದಾಖಲಾಗಿದೆ. ಹಿಂದೂ ಸಂಪ್ರದಾಯ ಮತ್ತು ತಮ್ಮ ಗುಂಪಿನ ಗುರುತಿನ ಬಗ್ಗೆ ಅರ್ಚಕರಿಗೆ ಜ್ಞಾನವಿಲ್ಲ ಎಂದು ಆರೋಪಿಸಿ ಅವರು ಅವರನ್ನು ಕೆಣಕಿದ್ದಾರೆ.

“ಶ್ರೀ ಚಿಲ್ಕೂರು ಬಾಲಾಜಿ ದೇವತೆಯ ಅರ್ಚಕನೂ ಆಗಿರುವ ನನ್ನ ಮಗ ಶ್ರೀ ರಂಗರಾಜನ್ ಅವರನ್ನು ಅವರು ಗಂಭೀರವಾಗಿ ನಿಂದಿಸಿದರು. ನಮ್ಮ ಮನೆಯಲ್ಲೆ ಅವರಿಗೆ ಥಳಿಸಲಾಯಿತು ಎಂದು ರಂಗನಾಥನ್ ಅವರ ತಂದೆ ಸೌಂದರರಾಜನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊಯಿನಾಬಾದ್ ಪೊಲೀಸರು ಸಂಘಟನೆಯ ನಾಯಕ ವೀರ ರಾಘವ ರೆಡ್ಡಿಯನ್ನು ಬಂಧಿಸಿದ್ದಾರೆ. “ಆರೋಪಿಯ ವಿರುದ್ಧ ಈ ಹಿಂದೆಯು ಪ್ರಕರಣ ದಾಖಲಾಗಿತ್ತು. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅದಕ್ಕೂ ಮೊದಲು ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅವರ ಮೇಲೆ ಪ್ರಕರಣ ದಾಖಲಾಗಿತ್ತು” ಎಂದು ಪೊಲೀಸರು ಸೌತ್ ಫಸ್ಟ್‌ಗೆ ತಿಳಿಸಿದ್ದಾರೆ.

ಹಿಂದೂ ಮಹಾಕಾವ್ಯ ರಾಮಾಯಣದ ನಾಯಕನ ರಾಜ್ಯವಾದ ರಾಮರಾಜ್ಯವನ್ನು “ಪುನಃ ಸ್ಥಾಪಿಸುವ” ಉಗ್ರಗಾಮಿ ದೃಷ್ಟಿಕೋನವನ್ನು ಈ ಸಂಘಟನೆ ಪ್ರತಿಪಾದಿಸುತ್ತದೆ. “ದೇಶದ ಪ್ರಸ್ತುತ ಕ್ರಿಮಿನಲ್ ನ್ಯಾಯ ವ್ಯವಸ್ಥೆಗಳು ದುಷ್ಟವಾಗಿದ್ದು, ಅಶಿಸ್ತುಬದ್ಧವಾಗಿವೆ. ಅಲ್ಲದೆ, ಶ್ರೀಮಂತ ಅಪರಾಧಿಗಳನ್ನು ಮಾತ್ರ ರಕ್ಷಿಸುತ್ತಿವೆ ಮತ್ತು ಈ ಪ್ರಕ್ರಿಯೆಯಲ್ಲಿ ಯಾವುದೇ ಧರ್ಮವು ಕಂಡುಬರುವುದಿಲ್ಲ” ಎಂದು ಸಂಘಟನೆಯ ಕಿರುಪುಸ್ತಕ ಹೇಳುತ್ತದೆ ಎಂದು ವರದಿಯಾಗಿದೆ.

ಈ ಗುಂಪು ಪ್ರತ್ಯೇಕ ನಾಗರಿಕ ವ್ಯವಸ್ಥೆ, ಸೈನ್ಯ ಮತ್ತು ಕಾನೂನು ತಂಡವನ್ನು ರೂಪಿಸುತ್ತದೆ. ಅವರ ವೆಬ್‌ಸೈಟ್ ಜಾತಿ ಪ್ರಾಬಲ್ಯವನ್ನು ಉತ್ತೇಜಿಸುವ ವೀಡಿಯೊಗಳನ್ನು ಒಳಗೊಂಡಿದ್ದು, ರಾಮಾಯಣ ಮತ್ತು ಭಗವದ್ಗೀತೆಯ ವ್ಯಾಖ್ಯಾನಗಳ ಮೂಲಕ ಇಕ್ಷ್ವಾಕುಗಳನ್ನು ವಿಶ್ವ ಮಾಲೀಕರೆಂದು ಘೋಷಿಸುತ್ತದೆ. ತಮ್ಮ ಮಾರ್ಗಗಳನ್ನು ಬದಲಾಯಿಸದ ನ್ಯಾಯಾಧೀಶರ, ನಾಗರಿಕರ ಬಂಧನ ಮಾಡುವುದಾಗಿ ಅವರು ಬೆದರಿಕೆ ಹಾಕುತ್ತಾರೆ.

ದುಷ್ಟರನ್ನು ಶಿಕ್ಷಿಸುವುದು, ಗೋವುಗಳನ್ನು ರಕ್ಷಿಸುವುದು, ಇಕ್ಷ್ವಾಕು ಮತ್ತು ಭರತ ಕುಲಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು, ದೇವಾಲಯದ ಆಸ್ತಿಗಳನ್ನು ಮರಳಿ ಪಡೆಯುವುದು ಮತ್ತು ಆರು ಹಿಂದೂ ಪಂಗಡಗಳಿಗೆ ಸೇರಿದ ಭೂಮಿಯನ್ನು ಮರಳಿ ಪಡೆಯುವುದು ಅವರ ಉದ್ದೇಶಗಳಲ್ಲಿ ಸೇರಿವೆ. ಗುಂಪಿನ ಚಟುವಟಿಕೆಗಳ ಸಂಪೂರ್ಣ ವ್ಯಾಪ್ತಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸೌತ್ ಫಸ್ಟ್‌ ವರದಿ ಮಾಡಿದೆ.

ಇದನ್ನೂಓದಿ:  ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...