Homeಮುಖಪುಟಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

ಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ದೇವಾಲಯ ಹಾಗೂ ಟ್ರಸ್ಟ್‌ಗಳು ಹೈಕೋರ್ಟ್‌ ಮೊರೆ ಹೋಗಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.

ಠಾಕೂರ್ ರಂಗ್ಜಿ ಮಹಾರಾಜ್ ವಿರಾಜ್‌ಮಾನ್‌ ಮಂದಿರ ಟ್ರಸ್ಟ್ ಯೋಗಿ ಸರ್ಕಾರದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಡೆದಿದೆ. ಈ ವೇಳೆ, ದೇವಾಲಯಗಳು ಮತ್ತು ಟ್ರಸ್ಟ್‌ಗಳು ಬಾಕಿ ಹಣ ಬಿಡುಗಡೆ ಕೋರಿ ನ್ಯಾಯಾಲಯದ ಮೊರೆ ಹೋಗುವಂತಾಗಿರುವ ಬಗ್ಗೆ ಅಲಹಾಬಾದ್‌ ಹೈಕೋರ್ಟ್‌ ತೀವ್ರ ಬೇಸರ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್‌ವಾಲ್‌ ಅವರು ಇದೇ ವೇಳೆ ಸೂಚಿಸಿದ್ದಾರೆ.

ಕೇವಲ ಒಂದೆರಡು ವರ್ಷದ ಪ್ರಶ್ನೆಯಲ್ಲ, ಕಳೆದ ನಾಲ್ಕು ವರ್ಷಗಳಿಂದ ಕನಿಷ್ಠ ಒಂಬತ್ತು ವೃಂದಾವನದ ದೇವಾಲಯಗಳಿಗೆ ಪಾವತಿಯಾಗಬೇಕಿದ್ದ ಹಣ ತಲುಪದೇ ಇರುವುದನ್ನು ನ್ಯಾಯಾಲಯ ಗಮನಿಸಿದೆ. ಹೀಗಾಗಿ ಕಳೆದ ನಾಲ್ಕು ವರ್ಷಗಳಿಂದ ವೃಂದಾವನದ ಕನಿಷ್ಠ ಒಂಬತ್ತು ದೇವಾಲಯಗಳಿಗೆ ವಾರ್ಷಿಕ ಅನುದಾನ ಪಾವತಿಸದ ಬಗ್ಗೆ ವಿವರಣೆ ನೀಡುವಂತೆ ಉತ್ತರ ಪ್ರದೇಶದ ಕಂದಾಯ ಮಂಡಳಿಯ ಕಾರ್ಯದರ್ಶಿಗೆ ಸಮನ್ಸ್ ಜಾರಿ ಮಾಡಿದೆ.

ಸರ್ಕಾರಿ ಅಧಿಕಾರಿಗಳಿಂದ ಬಾಕಿ ಮೊತ್ತ ಪಡೆಯಲು ದೇವಾಲಯದ ಅಧಿಕಾರಿಗಳು ಅಲೆದಾಡುತ್ತಿರುವುದು ವಿಚಿತ್ರವಾಗಿದೆ ಎಂದು ನ್ಯಾಯಾಲಯ ಹೇಳಿದೆ.

“ರಾಜ್ಯ ಸರ್ಕಾರದಿಂದ ಬಾಕಿ ಮೊತ್ತ ಪಡೆಯುವುದಕ್ಕಾಗಿ ದೇವಾಲಯಗಳು ಮತ್ತು ಟ್ರಸ್ಟ್‌ಗಳು ನ್ಯಾಯಾಲಯದ ಬಾಗಿಲು ತಟ್ಟಬೇಕಿರುವುದು ನ್ಯಾಯಾಲಯಕ್ಕೆ ನೋವುಂಟು ಮಾಡಿದೆ. ರಾಜ್ಯದ ಖಜಾನೆಯಿಂದ ದೇವಾಲಯದ ಖಾತೆಗೆ ಈ ಹಣ ಸ್ವಯಂಚಾಲಿತವಾಗಿ ಸಂದಾಯವಾಗಬೇಕಿತ್ತು”ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ.

ತಂತ್ರಜ್ಞಾನದ ಈ ಆಧುನಿಕ ಯುಗದಲ್ಲಿ ಹಣಕಾಸು ವರ್ಷ ಪ್ರಾರಂಭವಾದ ಕೂಡಲೇ ಸರ್ಕಾರ ಸ್ವಯಂಚಾಲಿತವಾಗಿ ಹಣವನ್ನು ದೇವಾಲಯಗಳಿಗೆ ವರ್ಗಾಯಿಸಬೇಕು ಎಂದು ಅದು ನಿರ್ದೇಶನ ನೀಡಿದೆ.

ಉತ್ತರ ಪ್ರದೇಶ ಜಮೀನ್ದಾರಿ ಪದ್ದತಿ ನಿರ್ಮೂಲನೆ ಮತ್ತು ಭೂ ಸುಧಾರಣಾ ಕಾಯಿದೆಯ ಸೆಕ್ಷನ್ 99ರ ಅನ್ವಯ ಮಥುರಾದ ಜಿಲ್ಲಾಧಿಕಾರಿ ಮತ್ತು ಅದರ ಹಿರಿಯ ಖಜಾನೆ ಅಧಿಕಾರಿ ವರ್ಷಾಶನ ಪಾವತಿಸಲು ನಿರ್ದೇಶಿಸುವಂತೆ ಕೋರಿ ಠಾಕೂರ್ ರಂಗ್‌ಜೀ ಮಹಾರಾಜ್ ವಿರಾಜ್‌ಮಾನ್‌ ಮಂದಿರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ.

ಒಂಭತ್ತು ದೇವಸ್ಥಾನಗಳಿಗೆ ಬಿಡುಗಡೆಯಾಗಬೇಕಾದ ₹9,125,07ವಾರ್ಷಿಕ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಅರ್ಜಿದಾರರು ಮನವಿ ಮಾಡಿದರು. ಇದಕ್ಕೆ ಕಂದಾಯ ಮಂಡಳಿಯು ಅನುಮತಿ ನೀಡದಿರುವುದೇ ಕಾರಣ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರವು ತಾನು ₹2,23,199 ಹಣ ಸಂದಾಯ ಮಾಡಿದ್ದು, ಬಾಕಿ ₹6,89,308 ಹಣ ಸಂದಾಯ ಮಾಡಬೇಕಿದೆ ಎಂದು ಹೇಳಿದೆ.

ಇದೇ ವೇಳೆ, ನ್ಯಾಯಾಲಯವು ಅರ್ಜಿದಾರರ ವಿಷಯದಲ್ಲಿ 2020ರಿಂದ 2023ರ ಅವಧಿಯಲ್ಲಿ ಬಿಡುಗಡೆ ಮಾಡಬೇಕಾದ ₹3,52,080 ಹಣವನ್ನು ಬಿಡುಗಡೆ ಮಾಡದೆ ಇರುವುದನ್ನು ಗಮನಿಸಿತು. ಹಣಕಾಸಿನ ಅಲಭ್ಯತೆಯ ಕಾರಣದಿಂದಾಗಿ ಹಣ ಬಿಡುಗಡೆ ಸಾಧ್ಯವಾಗಿಲ್ಲ ಎನ್ನುವ ಕಂದಾಯ ಮಂಡಳಿಯ ಉತ್ತರ ಬಗ್ಗೆ ನ್ಯಾಯಾಲಯ ಇದೇ ವೇಳೆ ಆಶ್ಚರ್ಯ ವ್ಯಕ್ತಪಡಿಸಿತು.

ಹೀಗಾಗಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ ನ್ಯಾಯಾಲಯ ಪ್ರಕರಣವನ್ನು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ವರ್ಗಾಯಿಸಿತು. ಪ್ರಕರಣದ ವಿಚಾರಣೆಯು ಮಾರ್ಚ್ 20ರಂದು ನಡೆಯಲಿದೆ.

ಇದನ್ನೂ ಓದಿ : ‘ಕೆಫೆ ಸ್ಫೋಟದ ಹಿಂದೆ ತಮಿಳರು’ ಹೇಳಿಕೆ: ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು, ಮಧುರೈನಲ್ಲಿ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...