Homeಮುಖಪುಟಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

ಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ದೇವಾಲಯ ಹಾಗೂ ಟ್ರಸ್ಟ್‌ಗಳು ಹೈಕೋರ್ಟ್‌ ಮೊರೆ ಹೋಗಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.

ಠಾಕೂರ್ ರಂಗ್ಜಿ ಮಹಾರಾಜ್ ವಿರಾಜ್‌ಮಾನ್‌ ಮಂದಿರ ಟ್ರಸ್ಟ್ ಯೋಗಿ ಸರ್ಕಾರದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಡೆದಿದೆ. ಈ ವೇಳೆ, ದೇವಾಲಯಗಳು ಮತ್ತು ಟ್ರಸ್ಟ್‌ಗಳು ಬಾಕಿ ಹಣ ಬಿಡುಗಡೆ ಕೋರಿ ನ್ಯಾಯಾಲಯದ ಮೊರೆ ಹೋಗುವಂತಾಗಿರುವ ಬಗ್ಗೆ ಅಲಹಾಬಾದ್‌ ಹೈಕೋರ್ಟ್‌ ತೀವ್ರ ಬೇಸರ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್‌ವಾಲ್‌ ಅವರು ಇದೇ ವೇಳೆ ಸೂಚಿಸಿದ್ದಾರೆ.

ಕೇವಲ ಒಂದೆರಡು ವರ್ಷದ ಪ್ರಶ್ನೆಯಲ್ಲ, ಕಳೆದ ನಾಲ್ಕು ವರ್ಷಗಳಿಂದ ಕನಿಷ್ಠ ಒಂಬತ್ತು ವೃಂದಾವನದ ದೇವಾಲಯಗಳಿಗೆ ಪಾವತಿಯಾಗಬೇಕಿದ್ದ ಹಣ ತಲುಪದೇ ಇರುವುದನ್ನು ನ್ಯಾಯಾಲಯ ಗಮನಿಸಿದೆ. ಹೀಗಾಗಿ ಕಳೆದ ನಾಲ್ಕು ವರ್ಷಗಳಿಂದ ವೃಂದಾವನದ ಕನಿಷ್ಠ ಒಂಬತ್ತು ದೇವಾಲಯಗಳಿಗೆ ವಾರ್ಷಿಕ ಅನುದಾನ ಪಾವತಿಸದ ಬಗ್ಗೆ ವಿವರಣೆ ನೀಡುವಂತೆ ಉತ್ತರ ಪ್ರದೇಶದ ಕಂದಾಯ ಮಂಡಳಿಯ ಕಾರ್ಯದರ್ಶಿಗೆ ಸಮನ್ಸ್ ಜಾರಿ ಮಾಡಿದೆ.

ಸರ್ಕಾರಿ ಅಧಿಕಾರಿಗಳಿಂದ ಬಾಕಿ ಮೊತ್ತ ಪಡೆಯಲು ದೇವಾಲಯದ ಅಧಿಕಾರಿಗಳು ಅಲೆದಾಡುತ್ತಿರುವುದು ವಿಚಿತ್ರವಾಗಿದೆ ಎಂದು ನ್ಯಾಯಾಲಯ ಹೇಳಿದೆ.

“ರಾಜ್ಯ ಸರ್ಕಾರದಿಂದ ಬಾಕಿ ಮೊತ್ತ ಪಡೆಯುವುದಕ್ಕಾಗಿ ದೇವಾಲಯಗಳು ಮತ್ತು ಟ್ರಸ್ಟ್‌ಗಳು ನ್ಯಾಯಾಲಯದ ಬಾಗಿಲು ತಟ್ಟಬೇಕಿರುವುದು ನ್ಯಾಯಾಲಯಕ್ಕೆ ನೋವುಂಟು ಮಾಡಿದೆ. ರಾಜ್ಯದ ಖಜಾನೆಯಿಂದ ದೇವಾಲಯದ ಖಾತೆಗೆ ಈ ಹಣ ಸ್ವಯಂಚಾಲಿತವಾಗಿ ಸಂದಾಯವಾಗಬೇಕಿತ್ತು”ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ.

ತಂತ್ರಜ್ಞಾನದ ಈ ಆಧುನಿಕ ಯುಗದಲ್ಲಿ ಹಣಕಾಸು ವರ್ಷ ಪ್ರಾರಂಭವಾದ ಕೂಡಲೇ ಸರ್ಕಾರ ಸ್ವಯಂಚಾಲಿತವಾಗಿ ಹಣವನ್ನು ದೇವಾಲಯಗಳಿಗೆ ವರ್ಗಾಯಿಸಬೇಕು ಎಂದು ಅದು ನಿರ್ದೇಶನ ನೀಡಿದೆ.

ಉತ್ತರ ಪ್ರದೇಶ ಜಮೀನ್ದಾರಿ ಪದ್ದತಿ ನಿರ್ಮೂಲನೆ ಮತ್ತು ಭೂ ಸುಧಾರಣಾ ಕಾಯಿದೆಯ ಸೆಕ್ಷನ್ 99ರ ಅನ್ವಯ ಮಥುರಾದ ಜಿಲ್ಲಾಧಿಕಾರಿ ಮತ್ತು ಅದರ ಹಿರಿಯ ಖಜಾನೆ ಅಧಿಕಾರಿ ವರ್ಷಾಶನ ಪಾವತಿಸಲು ನಿರ್ದೇಶಿಸುವಂತೆ ಕೋರಿ ಠಾಕೂರ್ ರಂಗ್‌ಜೀ ಮಹಾರಾಜ್ ವಿರಾಜ್‌ಮಾನ್‌ ಮಂದಿರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ.

ಒಂಭತ್ತು ದೇವಸ್ಥಾನಗಳಿಗೆ ಬಿಡುಗಡೆಯಾಗಬೇಕಾದ ₹9,125,07ವಾರ್ಷಿಕ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಅರ್ಜಿದಾರರು ಮನವಿ ಮಾಡಿದರು. ಇದಕ್ಕೆ ಕಂದಾಯ ಮಂಡಳಿಯು ಅನುಮತಿ ನೀಡದಿರುವುದೇ ಕಾರಣ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರವು ತಾನು ₹2,23,199 ಹಣ ಸಂದಾಯ ಮಾಡಿದ್ದು, ಬಾಕಿ ₹6,89,308 ಹಣ ಸಂದಾಯ ಮಾಡಬೇಕಿದೆ ಎಂದು ಹೇಳಿದೆ.

ಇದೇ ವೇಳೆ, ನ್ಯಾಯಾಲಯವು ಅರ್ಜಿದಾರರ ವಿಷಯದಲ್ಲಿ 2020ರಿಂದ 2023ರ ಅವಧಿಯಲ್ಲಿ ಬಿಡುಗಡೆ ಮಾಡಬೇಕಾದ ₹3,52,080 ಹಣವನ್ನು ಬಿಡುಗಡೆ ಮಾಡದೆ ಇರುವುದನ್ನು ಗಮನಿಸಿತು. ಹಣಕಾಸಿನ ಅಲಭ್ಯತೆಯ ಕಾರಣದಿಂದಾಗಿ ಹಣ ಬಿಡುಗಡೆ ಸಾಧ್ಯವಾಗಿಲ್ಲ ಎನ್ನುವ ಕಂದಾಯ ಮಂಡಳಿಯ ಉತ್ತರ ಬಗ್ಗೆ ನ್ಯಾಯಾಲಯ ಇದೇ ವೇಳೆ ಆಶ್ಚರ್ಯ ವ್ಯಕ್ತಪಡಿಸಿತು.

ಹೀಗಾಗಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ ನ್ಯಾಯಾಲಯ ಪ್ರಕರಣವನ್ನು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ವರ್ಗಾಯಿಸಿತು. ಪ್ರಕರಣದ ವಿಚಾರಣೆಯು ಮಾರ್ಚ್ 20ರಂದು ನಡೆಯಲಿದೆ.

ಇದನ್ನೂ ಓದಿ : ‘ಕೆಫೆ ಸ್ಫೋಟದ ಹಿಂದೆ ತಮಿಳರು’ ಹೇಳಿಕೆ: ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು, ಮಧುರೈನಲ್ಲಿ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...