Homeಮುಖಪುಟದೇವಾಲಯಗಳು ಮಾನಸಿಕ ಗುಲಾಮಗಿರಿಗೆ ದಾರಿ, ಶಾಲೆಗಳು ಬೆಳಕಿನ ಮಾರ್ಗ: ಬಿಹಾರ ಸಚಿವ

ದೇವಾಲಯಗಳು ಮಾನಸಿಕ ಗುಲಾಮಗಿರಿಗೆ ದಾರಿ, ಶಾಲೆಗಳು ಬೆಳಕಿನ ಮಾರ್ಗ: ಬಿಹಾರ ಸಚಿವ

- Advertisement -
- Advertisement -

ದೇವಾಲಯಗಳು ಮಾನಸಿಕ ಗುಲಾಮಗಿರಿಗೆ ದಾರಿ, ಶಾಲೆಗಳು ಜೀವನಕ್ಕೆ ಬೆಳಕನ್ನು ಚೆಲ್ಲುವ ಮಾರ್ಗವಾಗಿದೆ ಎಂದು ಬಿಹಾರದ ಶಿಕ್ಷಣ ಸಚಿವ ಪ್ರೊ.ಚಂದ್ರಶೇಖರ್ ಅವರು ಹೇಳಿದ್ದು, ಆರ್‌ಜೆಡಿ ಪಕ್ಷದ ಶಾಸಕ ಫತೇ ಬಹದ್ದೂರ್ ಸಿಂಗ್ ಅವರ ಹೇಳಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ರೋಹ್ತಾಸ್ ಜಿಲ್ಲೆಯ ಡೆಹ್ರಿಯಲ್ಲಿ ಸಾಮಾಜ ಸುಧಾರಕಿ ಮತ್ತು ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರೊ.ಚಂದ್ರಶೇಖರ್, ಆರ್‌ಜೆಡಿ ಶಾಸಕ ಫತೇಹ್ ಅವರಿಗೆ ಬೆಂಬವನ್ನು ಸೂಚಿಸಿ ದೇವಸ್ಥಾನವು ‘ಮಾನಸಿಕ ಗುಲಾಮಗಿರಿ’ಗೆ ಮಾರ್ಗವಾಗಿದೆ, ಶಾಲೆಗಳು ಜೀವನದ ದಾರಿಗೆ ಬೆಳಕನ್ನು ತೋರಿಸುತ್ತವೆ ಎಂದು ಹೇಳಿದ್ದಾರೆ.

ಹುಸಿ ಹಿಂದುತ್ವ ಮತ್ತು ಹುಸಿ ಹಿಂದುತ್ವವಾದದ ಬಗ್ಗೆ ಜನರು ಜಾಗರೂಕರಾಗಿರಬೇಕು. ಅಯೋಧ್ಯೆಯ ರಾಮ ಮಂದಿರದ ತಾಣವು ಶೋಷಣೆಯ ತಾಣವಾಗಿದ್ದು, ನಿರ್ದಿಷ್ಟ ಸಮುದಾಯದ ಕೆಲವರು ಅದರ ಮೂಲಕ ತಮ್ಮ ಜೇಬು ತುಂಬಿಸಿಕೊಳ್ಳಲು ಸಂಚು ರೂಪಿಸಿದ್ದಾರೆ ಎಂದು ಹೇಳಿದ್ದಾರೆ. ರಾಮನು ಎಲ್ಲರಲ್ಲಿಯೂ ಮತ್ತು ಎಲ್ಲೆಡೆಯೂ ನೆಲೆಸಿದ್ದಾನೆ. ಅವನನ್ನು ಹುಡುಕಲು ಎಲ್ಲಿಯೂ ಅಥವಾ ಯಾವುದೇ ದೇವಾಲಯಕ್ಕೆ ಹೋಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ನೀವು ಗಾಯಗೊಂಡರೆ ಎಲ್ಲಿಗೆ ಹೋಗುತ್ತೀರಿ? ದೇವಾಲಯಕ್ಕೆ ಅಥವಾ ಆಸ್ಪತ್ರೆಗೆ ? ಒಂದು ವೇಳೆ ನೀವು ಶಿಕ್ಷಣ ಪಡೆಯಲು, ಅಧಿಕಾರಿ, ಶಾಸಕ ಅಥವಾ ಸಂಸದನಾಗಲು ಬಯಸಿದರೆ, ದೇವಾಲಯಕ್ಕೆ ಹೋಗುತ್ತೀರಾ ? ಅಥವಾ ಶಾಲೆಗೆ ಹೋಗುತ್ತೀರಾ? ಎಂದು ಸಾವಿತ್ರಿ ಬಾಯಿ ಪುಲೆ ಪ್ರಶ್ನಿಸಿದ್ದರು. ಇದನ್ನೇ ಫತೇಹ್ ಬಹಾದೂರ್ ಸಿಂಗ್ ಹೇಳಿದ್ದಾರೆ ಎಂದು ಪ್ರೊ.ಚಂದ್ರಶೇಖರ್ ಹೇಳಿದ್ದಾರೆ.

ಸಿಂಗ್ ಹೇಳಿಕೆಯನ್ನು ವಿರೋಧಿಸುತ್ತಿರುವವರು ಅವರ ನಾಲಿಗೆ ಕತ್ತರಿಸಲು 10 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಮಹಾಭಾರತವನ್ನು ಉಲ್ಲೇಖಿಸಿದ ಅವರು ಈಗ ಏಕಲವ್ಯನ ಮಕ್ಕಳು ಹೆಬ್ಬೆರಳು ನೀಡಲಾರರು. ಯಾವುದೇ ದೇವಸ್ಥಾನಗಳು ನಿಮ್ಮ ಮಕ್ಕಳನ್ನು ಜವಾನನಿಂದ ಕಲೆಕ್ಟರ್‌ ಆಗಿ ಪರಿವರ್ತಿಸುವುದಿಲ್ಲ, ಪುಸ್ತಕ, ಲೇಖನಿ, ಶಾಲೆ, ಶಿಕ್ಷಣದಿಂದ ಮಾತ್ರವೇ ನಿಮ್ಮ ಮಕ್ಕಳನ್ನು ಪರಿವರ್ತಿಸಲು ಸಾಧ್ಯ. ಆದ್ದರಿಂದ ಅಕ್ಷತೆಯನ್ನು ನೀಡುವವರನ್ನು ಬಿಟ್ಟು ಅಂಬೇಡ್ಕರ್‌ ಅವರ ತತ್ವಗಳನ್ನು ಅನುಸರಿಸಿ ಎಂದು ಹೇಳಿದ್ದಾರೆ.

ಜೆಡಿಯು ರಾಷ್ಟ್ರೀಯ ವಕ್ತಾರ ಕೆಸಿ ತ್ಯಾಗಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಮಮಂದಿರ ಮತ್ತು ರಾಮಲಾಲ ಪ್ರತಿಷ್ಠಾಪನಾ ಸಮಾರಂಭದ ವಿರುದ್ಧ ನೀಡಿರುವ ಹೇಳಿಕೆಗಳಿಂದ ಬಿಜೆಪಿಗೆ ಲಾಭವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವಿರೋಧ ಪಕ್ಷವಾದ INDIA ಮೈತ್ರಿಕೂಟದ ಮಿತ್ರಪಕ್ಷಗಳು ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದ್ದಾರೆ.

ಇದನ್ನು ಓದಿ: ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...