Homeಮುಖಪುಟದೇವಾಲಯಗಳು ಮಾನಸಿಕ ಗುಲಾಮಗಿರಿಗೆ ದಾರಿ, ಶಾಲೆಗಳು ಬೆಳಕಿನ ಮಾರ್ಗ: ಬಿಹಾರ ಸಚಿವ

ದೇವಾಲಯಗಳು ಮಾನಸಿಕ ಗುಲಾಮಗಿರಿಗೆ ದಾರಿ, ಶಾಲೆಗಳು ಬೆಳಕಿನ ಮಾರ್ಗ: ಬಿಹಾರ ಸಚಿವ

- Advertisement -
- Advertisement -

ದೇವಾಲಯಗಳು ಮಾನಸಿಕ ಗುಲಾಮಗಿರಿಗೆ ದಾರಿ, ಶಾಲೆಗಳು ಜೀವನಕ್ಕೆ ಬೆಳಕನ್ನು ಚೆಲ್ಲುವ ಮಾರ್ಗವಾಗಿದೆ ಎಂದು ಬಿಹಾರದ ಶಿಕ್ಷಣ ಸಚಿವ ಪ್ರೊ.ಚಂದ್ರಶೇಖರ್ ಅವರು ಹೇಳಿದ್ದು, ಆರ್‌ಜೆಡಿ ಪಕ್ಷದ ಶಾಸಕ ಫತೇ ಬಹದ್ದೂರ್ ಸಿಂಗ್ ಅವರ ಹೇಳಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ರೋಹ್ತಾಸ್ ಜಿಲ್ಲೆಯ ಡೆಹ್ರಿಯಲ್ಲಿ ಸಾಮಾಜ ಸುಧಾರಕಿ ಮತ್ತು ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರೊ.ಚಂದ್ರಶೇಖರ್, ಆರ್‌ಜೆಡಿ ಶಾಸಕ ಫತೇಹ್ ಅವರಿಗೆ ಬೆಂಬವನ್ನು ಸೂಚಿಸಿ ದೇವಸ್ಥಾನವು ‘ಮಾನಸಿಕ ಗುಲಾಮಗಿರಿ’ಗೆ ಮಾರ್ಗವಾಗಿದೆ, ಶಾಲೆಗಳು ಜೀವನದ ದಾರಿಗೆ ಬೆಳಕನ್ನು ತೋರಿಸುತ್ತವೆ ಎಂದು ಹೇಳಿದ್ದಾರೆ.

ಹುಸಿ ಹಿಂದುತ್ವ ಮತ್ತು ಹುಸಿ ಹಿಂದುತ್ವವಾದದ ಬಗ್ಗೆ ಜನರು ಜಾಗರೂಕರಾಗಿರಬೇಕು. ಅಯೋಧ್ಯೆಯ ರಾಮ ಮಂದಿರದ ತಾಣವು ಶೋಷಣೆಯ ತಾಣವಾಗಿದ್ದು, ನಿರ್ದಿಷ್ಟ ಸಮುದಾಯದ ಕೆಲವರು ಅದರ ಮೂಲಕ ತಮ್ಮ ಜೇಬು ತುಂಬಿಸಿಕೊಳ್ಳಲು ಸಂಚು ರೂಪಿಸಿದ್ದಾರೆ ಎಂದು ಹೇಳಿದ್ದಾರೆ. ರಾಮನು ಎಲ್ಲರಲ್ಲಿಯೂ ಮತ್ತು ಎಲ್ಲೆಡೆಯೂ ನೆಲೆಸಿದ್ದಾನೆ. ಅವನನ್ನು ಹುಡುಕಲು ಎಲ್ಲಿಯೂ ಅಥವಾ ಯಾವುದೇ ದೇವಾಲಯಕ್ಕೆ ಹೋಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ನೀವು ಗಾಯಗೊಂಡರೆ ಎಲ್ಲಿಗೆ ಹೋಗುತ್ತೀರಿ? ದೇವಾಲಯಕ್ಕೆ ಅಥವಾ ಆಸ್ಪತ್ರೆಗೆ ? ಒಂದು ವೇಳೆ ನೀವು ಶಿಕ್ಷಣ ಪಡೆಯಲು, ಅಧಿಕಾರಿ, ಶಾಸಕ ಅಥವಾ ಸಂಸದನಾಗಲು ಬಯಸಿದರೆ, ದೇವಾಲಯಕ್ಕೆ ಹೋಗುತ್ತೀರಾ ? ಅಥವಾ ಶಾಲೆಗೆ ಹೋಗುತ್ತೀರಾ? ಎಂದು ಸಾವಿತ್ರಿ ಬಾಯಿ ಪುಲೆ ಪ್ರಶ್ನಿಸಿದ್ದರು. ಇದನ್ನೇ ಫತೇಹ್ ಬಹಾದೂರ್ ಸಿಂಗ್ ಹೇಳಿದ್ದಾರೆ ಎಂದು ಪ್ರೊ.ಚಂದ್ರಶೇಖರ್ ಹೇಳಿದ್ದಾರೆ.

ಸಿಂಗ್ ಹೇಳಿಕೆಯನ್ನು ವಿರೋಧಿಸುತ್ತಿರುವವರು ಅವರ ನಾಲಿಗೆ ಕತ್ತರಿಸಲು 10 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಮಹಾಭಾರತವನ್ನು ಉಲ್ಲೇಖಿಸಿದ ಅವರು ಈಗ ಏಕಲವ್ಯನ ಮಕ್ಕಳು ಹೆಬ್ಬೆರಳು ನೀಡಲಾರರು. ಯಾವುದೇ ದೇವಸ್ಥಾನಗಳು ನಿಮ್ಮ ಮಕ್ಕಳನ್ನು ಜವಾನನಿಂದ ಕಲೆಕ್ಟರ್‌ ಆಗಿ ಪರಿವರ್ತಿಸುವುದಿಲ್ಲ, ಪುಸ್ತಕ, ಲೇಖನಿ, ಶಾಲೆ, ಶಿಕ್ಷಣದಿಂದ ಮಾತ್ರವೇ ನಿಮ್ಮ ಮಕ್ಕಳನ್ನು ಪರಿವರ್ತಿಸಲು ಸಾಧ್ಯ. ಆದ್ದರಿಂದ ಅಕ್ಷತೆಯನ್ನು ನೀಡುವವರನ್ನು ಬಿಟ್ಟು ಅಂಬೇಡ್ಕರ್‌ ಅವರ ತತ್ವಗಳನ್ನು ಅನುಸರಿಸಿ ಎಂದು ಹೇಳಿದ್ದಾರೆ.

ಜೆಡಿಯು ರಾಷ್ಟ್ರೀಯ ವಕ್ತಾರ ಕೆಸಿ ತ್ಯಾಗಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಮಮಂದಿರ ಮತ್ತು ರಾಮಲಾಲ ಪ್ರತಿಷ್ಠಾಪನಾ ಸಮಾರಂಭದ ವಿರುದ್ಧ ನೀಡಿರುವ ಹೇಳಿಕೆಗಳಿಂದ ಬಿಜೆಪಿಗೆ ಲಾಭವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವಿರೋಧ ಪಕ್ಷವಾದ INDIA ಮೈತ್ರಿಕೂಟದ ಮಿತ್ರಪಕ್ಷಗಳು ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದ್ದಾರೆ.

ಇದನ್ನು ಓದಿ: ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...