Homeಮುಖಪುಟದೇವಾಲಯಗಳು ಮಾನಸಿಕ ಗುಲಾಮಗಿರಿಗೆ ದಾರಿ, ಶಾಲೆಗಳು ಬೆಳಕಿನ ಮಾರ್ಗ: ಬಿಹಾರ ಸಚಿವ

ದೇವಾಲಯಗಳು ಮಾನಸಿಕ ಗುಲಾಮಗಿರಿಗೆ ದಾರಿ, ಶಾಲೆಗಳು ಬೆಳಕಿನ ಮಾರ್ಗ: ಬಿಹಾರ ಸಚಿವ

- Advertisement -
- Advertisement -

ದೇವಾಲಯಗಳು ಮಾನಸಿಕ ಗುಲಾಮಗಿರಿಗೆ ದಾರಿ, ಶಾಲೆಗಳು ಜೀವನಕ್ಕೆ ಬೆಳಕನ್ನು ಚೆಲ್ಲುವ ಮಾರ್ಗವಾಗಿದೆ ಎಂದು ಬಿಹಾರದ ಶಿಕ್ಷಣ ಸಚಿವ ಪ್ರೊ.ಚಂದ್ರಶೇಖರ್ ಅವರು ಹೇಳಿದ್ದು, ಆರ್‌ಜೆಡಿ ಪಕ್ಷದ ಶಾಸಕ ಫತೇ ಬಹದ್ದೂರ್ ಸಿಂಗ್ ಅವರ ಹೇಳಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ರೋಹ್ತಾಸ್ ಜಿಲ್ಲೆಯ ಡೆಹ್ರಿಯಲ್ಲಿ ಸಾಮಾಜ ಸುಧಾರಕಿ ಮತ್ತು ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರೊ.ಚಂದ್ರಶೇಖರ್, ಆರ್‌ಜೆಡಿ ಶಾಸಕ ಫತೇಹ್ ಅವರಿಗೆ ಬೆಂಬವನ್ನು ಸೂಚಿಸಿ ದೇವಸ್ಥಾನವು ‘ಮಾನಸಿಕ ಗುಲಾಮಗಿರಿ’ಗೆ ಮಾರ್ಗವಾಗಿದೆ, ಶಾಲೆಗಳು ಜೀವನದ ದಾರಿಗೆ ಬೆಳಕನ್ನು ತೋರಿಸುತ್ತವೆ ಎಂದು ಹೇಳಿದ್ದಾರೆ.

ಹುಸಿ ಹಿಂದುತ್ವ ಮತ್ತು ಹುಸಿ ಹಿಂದುತ್ವವಾದದ ಬಗ್ಗೆ ಜನರು ಜಾಗರೂಕರಾಗಿರಬೇಕು. ಅಯೋಧ್ಯೆಯ ರಾಮ ಮಂದಿರದ ತಾಣವು ಶೋಷಣೆಯ ತಾಣವಾಗಿದ್ದು, ನಿರ್ದಿಷ್ಟ ಸಮುದಾಯದ ಕೆಲವರು ಅದರ ಮೂಲಕ ತಮ್ಮ ಜೇಬು ತುಂಬಿಸಿಕೊಳ್ಳಲು ಸಂಚು ರೂಪಿಸಿದ್ದಾರೆ ಎಂದು ಹೇಳಿದ್ದಾರೆ. ರಾಮನು ಎಲ್ಲರಲ್ಲಿಯೂ ಮತ್ತು ಎಲ್ಲೆಡೆಯೂ ನೆಲೆಸಿದ್ದಾನೆ. ಅವನನ್ನು ಹುಡುಕಲು ಎಲ್ಲಿಯೂ ಅಥವಾ ಯಾವುದೇ ದೇವಾಲಯಕ್ಕೆ ಹೋಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ನೀವು ಗಾಯಗೊಂಡರೆ ಎಲ್ಲಿಗೆ ಹೋಗುತ್ತೀರಿ? ದೇವಾಲಯಕ್ಕೆ ಅಥವಾ ಆಸ್ಪತ್ರೆಗೆ ? ಒಂದು ವೇಳೆ ನೀವು ಶಿಕ್ಷಣ ಪಡೆಯಲು, ಅಧಿಕಾರಿ, ಶಾಸಕ ಅಥವಾ ಸಂಸದನಾಗಲು ಬಯಸಿದರೆ, ದೇವಾಲಯಕ್ಕೆ ಹೋಗುತ್ತೀರಾ ? ಅಥವಾ ಶಾಲೆಗೆ ಹೋಗುತ್ತೀರಾ? ಎಂದು ಸಾವಿತ್ರಿ ಬಾಯಿ ಪುಲೆ ಪ್ರಶ್ನಿಸಿದ್ದರು. ಇದನ್ನೇ ಫತೇಹ್ ಬಹಾದೂರ್ ಸಿಂಗ್ ಹೇಳಿದ್ದಾರೆ ಎಂದು ಪ್ರೊ.ಚಂದ್ರಶೇಖರ್ ಹೇಳಿದ್ದಾರೆ.

ಸಿಂಗ್ ಹೇಳಿಕೆಯನ್ನು ವಿರೋಧಿಸುತ್ತಿರುವವರು ಅವರ ನಾಲಿಗೆ ಕತ್ತರಿಸಲು 10 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಮಹಾಭಾರತವನ್ನು ಉಲ್ಲೇಖಿಸಿದ ಅವರು ಈಗ ಏಕಲವ್ಯನ ಮಕ್ಕಳು ಹೆಬ್ಬೆರಳು ನೀಡಲಾರರು. ಯಾವುದೇ ದೇವಸ್ಥಾನಗಳು ನಿಮ್ಮ ಮಕ್ಕಳನ್ನು ಜವಾನನಿಂದ ಕಲೆಕ್ಟರ್‌ ಆಗಿ ಪರಿವರ್ತಿಸುವುದಿಲ್ಲ, ಪುಸ್ತಕ, ಲೇಖನಿ, ಶಾಲೆ, ಶಿಕ್ಷಣದಿಂದ ಮಾತ್ರವೇ ನಿಮ್ಮ ಮಕ್ಕಳನ್ನು ಪರಿವರ್ತಿಸಲು ಸಾಧ್ಯ. ಆದ್ದರಿಂದ ಅಕ್ಷತೆಯನ್ನು ನೀಡುವವರನ್ನು ಬಿಟ್ಟು ಅಂಬೇಡ್ಕರ್‌ ಅವರ ತತ್ವಗಳನ್ನು ಅನುಸರಿಸಿ ಎಂದು ಹೇಳಿದ್ದಾರೆ.

ಜೆಡಿಯು ರಾಷ್ಟ್ರೀಯ ವಕ್ತಾರ ಕೆಸಿ ತ್ಯಾಗಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಮಮಂದಿರ ಮತ್ತು ರಾಮಲಾಲ ಪ್ರತಿಷ್ಠಾಪನಾ ಸಮಾರಂಭದ ವಿರುದ್ಧ ನೀಡಿರುವ ಹೇಳಿಕೆಗಳಿಂದ ಬಿಜೆಪಿಗೆ ಲಾಭವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವಿರೋಧ ಪಕ್ಷವಾದ INDIA ಮೈತ್ರಿಕೂಟದ ಮಿತ್ರಪಕ್ಷಗಳು ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದ್ದಾರೆ.

ಇದನ್ನು ಓದಿ: ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...