Homeಮುಖಪುಟಹೊಸ ಗೌಪ್ಯತಾ ನೀತಿಗೆ ತಾತ್ಕಾಲಿಕ ತಡೆ: ಹೈಕೋರ್ಟ್‌ನಲ್ಲಿ ವಾಟ್ಸಪ್

ಹೊಸ ಗೌಪ್ಯತಾ ನೀತಿಗೆ ತಾತ್ಕಾಲಿಕ ತಡೆ: ಹೈಕೋರ್ಟ್‌ನಲ್ಲಿ ವಾಟ್ಸಪ್

- Advertisement -
- Advertisement -

‘ಡೇಟಾ ಪ್ರೊಟೆಕ್ಷನ್ ಮಸೂದೆ’ ಜಾರಿಗೆ ಬರುವ ತನಕ ತಾತ್ಕಾಲಿಕವಾಗಿ ಗೌಪ್ಯತಾ ನೀತಿಯನ್ನು ತಡೆಹಿಡಿಯಲು ನಿರ್ಧರಿಸಿದೆ ಎಂದು ವಾಟ್ಸಪ್ ಶುಕ್ರವಾರ ತನ್ನ ಗೌಪ್ಯತಾ ನೀತಿಯ ಬಗ್ಗೆ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ವಾಟ್ಸಪ್‌ನ ಹೊಸ ಗೌಪ್ಯತಾ ನೀತಿಯು, ವಾಟ್ಸಪ್‌ನಲ್ಲಿ ನಾವು ನಡೆಸಿದ ಕೆಲವು ಸಂಭಾಷಣೆಗಳನ್ನು ಫೇಸ್‌ಬುಕ್‌ನಲ್ಲಿ ಜಾಹಿರಾತಿಗೆ ಬಳಸಲು ಅನುಮತಿ ನೀಡುತ್ತದೆ.

ಏಕ ನ್ಯಾಯಾಧೀಶರ ಆದೇಶದ ವಿರುದ್ಧ ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ನ್ಯಾಯಪೀಠ ಫೇಸ್‌ಬುಕ್ ಮತ್ತು ವಾಟ್ಸಾಪ್ ಮೇಲ್ಮನವಿ ವಿಚಾರಣೆ ನಡೆಸಿತು. ಏಕ ನ್ಯಾಯಾಧೀಶರ ಪೀಠವು, ವಾಟ್ಸಾಪ್‌ನ ಹೊಸ ನೀತಿಯ ಬಗ್ಗೆ ತನಿಖೆ ನಡೆಸಲು ನಿರ್ದೇಶಿಸುವ ಭಾರತದ ‘ನಿಯಂತ್ರಕ ಸ್ಪರ್ಧಾ ಆಯೋಗ’ (ಸಿಸಿಐ)ದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿತ್ತು.

ವಾಟ್ಸಾಪ್ ಪರವಾಗಿ ಹಾಜರಾದ ವಕೀಲ ಹರೀಶ್ ಸಾಲ್ವೆ ಅವರು “ಹೊಸ ಗೌಪ್ಯತಾ ನೀತಿಯನ್ನು ಸ್ಥಗಿತಗೊಳಿಸಲು ಸರ್ಕಾರ ಕೇಳಿ ಕೊಂಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ – ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

‘ಡೇಟಾ ಸಂರಕ್ಷಣಾ ಮಸೂದೆ’ ಬರುವವರೆಗೆ ನಾವು ಹೊಸ ಗೌಪ್ಯತಾ ನೀತಿಯನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳಿದ್ದೇವೆ. ಮಸೂದೆಯು ಯಾವಾಗ ಹೊರಬರುತ್ತದೆ ಎಂದು ನಮಗೆ ತಿಳಿದಿಲ್ಲ. ನಾವು ಇದನ್ನು ಸ್ವಲ್ಪ ಸಮಯದವರೆಗೆ ಮಾಡುವುದಿಲ್ಲ ಎಂದು ಹರೀಶ್‌ ನ್ಯಾಯಾಲಯಕ್ಕೆ ಹೇಳಿದ್ದಾರೆ.

“ನಾವು ಹೊಸ ಗೌಪ್ಯತಾ ನೀತಿಯನ್ನು ತಡೆಹಿಡಿಯಲು ಸ್ವಯಂಪ್ರೇರಣೆಯಿಂದ ಒಪ್ಪಿದ್ದೇವೆ. ಅದನ್ನು ಒಪ್ಪಿಕೊಳ್ಳಲೆ ಬೇಕು ಎಂದು ಬಳಕೆದಾದರನ್ನು ಒತ್ತಾಯಿಸುವುದಿಲ್ಲ” ಎಂದು ಹರೀಶ್ ಸಾಲ್ವೆ ವಾಟ್ಸಪ್‌ ಪರವಾಗಿ ಹೇಳಿದ್ದಾರೆ.

ಭಾರತದಲ್ಲಿ 53 ಕೋಟಿ ಬಳಕೆದಾರರನ್ನು ವಾಟ್ಸ್‌ಪ್‌ ಹೊಂದಿದ್ದು, ಅದು ತನ್ನ ಬಳಕೆದಾರರ ಡೇಟಾವನ್ನು ತನ್ನ ಮಾತೃಸಂಸ್ಥೆ ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುತ್ತಿದೆ ಎಂಬ ಬಗ್ಗೆ ಬಳಕೆದಾರರು ಕಳವಳ ವ್ಯಕ್ತಪಡಿಸಿದ್ದರು. ಇದರಿಂದಾಗಿ ಹೊಸ ಗೌಪ್ಯತಾ ನೀತಿಯನ್ನು ಪರಿಚಯಿಸಿದ ನಂತರ ವಾಟ್ಸಪ್‌ ತೀವ್ರ ಹಿನ್ನಡೆ ಅನುಭವಿಸಿತ್ತು. ಹಲವಾರು ಬಳಕೆದಾರರು ಸಿಗ್ನಲ್ ಮತ್ತು ಟೆಲಿಗ್ರಾಮ್‌ನಂತಹ ಅಪ್ಲಿಕೇಶನ್‌ಗಳಿಗೆ ತೆರಳಿದ್ದರು.

ಈ ಹಿಂದೆ ಆಪ್‌ ಬಳಸಬೇಕೆಂದರೆ ತನ್ನ ಹೊಸ ನೀತಿಯನ್ನು ಕಡ್ಡಾಯವಾಗಿ ಒಪ್ಪಿಕೊಳ್ಳಬೇಕು ಎಂದು ವಾಟ್ಸಪ್‌ ಹೇಳಿತ್ತು. ಆದರೆ ನಂತರ ಅದರಿಂದ ಹಿಂದೆ ಸರಿದಿತ್ತು. ಆದರೆ ಹೊಸ ಗೌಪ್ಯತಾ ನೀತಿಯನ್ನು ಒಪ್ಪಿಕೊಳ್ಳುವಂತೆ ಅದು ನೋಟಿಫಿಕೇಷನ್‌ ಕಳುಹಿಸುತ್ತಲೆ ಇದೆ.

ಈ ನೋಟಿಫಿಕೇಷನ್‌ ವಿರುದ್ದ ಸರ್ಕಾರವು ಹೊಸ ಅಫಿಡವಿಟ್ ಕೂಡಾ ಸಲ್ಲಿಸಿತ್ತು. ವಾಟ್ಸಪ್ ಕುತಂತ್ರದಿಂದ ತನ್ನ ಗೌಪ್ಯತಾ ನೀತಿಗೆ ಒಪ್ಪಿಗೆ ಪಡೆಯುತ್ತಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...