Homeಮುಖಪುಟಹೊಸ ಗೌಪ್ಯತಾ ನೀತಿಗೆ ತಾತ್ಕಾಲಿಕ ತಡೆ: ಹೈಕೋರ್ಟ್‌ನಲ್ಲಿ ವಾಟ್ಸಪ್

ಹೊಸ ಗೌಪ್ಯತಾ ನೀತಿಗೆ ತಾತ್ಕಾಲಿಕ ತಡೆ: ಹೈಕೋರ್ಟ್‌ನಲ್ಲಿ ವಾಟ್ಸಪ್

- Advertisement -
- Advertisement -

‘ಡೇಟಾ ಪ್ರೊಟೆಕ್ಷನ್ ಮಸೂದೆ’ ಜಾರಿಗೆ ಬರುವ ತನಕ ತಾತ್ಕಾಲಿಕವಾಗಿ ಗೌಪ್ಯತಾ ನೀತಿಯನ್ನು ತಡೆಹಿಡಿಯಲು ನಿರ್ಧರಿಸಿದೆ ಎಂದು ವಾಟ್ಸಪ್ ಶುಕ್ರವಾರ ತನ್ನ ಗೌಪ್ಯತಾ ನೀತಿಯ ಬಗ್ಗೆ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ವಾಟ್ಸಪ್‌ನ ಹೊಸ ಗೌಪ್ಯತಾ ನೀತಿಯು, ವಾಟ್ಸಪ್‌ನಲ್ಲಿ ನಾವು ನಡೆಸಿದ ಕೆಲವು ಸಂಭಾಷಣೆಗಳನ್ನು ಫೇಸ್‌ಬುಕ್‌ನಲ್ಲಿ ಜಾಹಿರಾತಿಗೆ ಬಳಸಲು ಅನುಮತಿ ನೀಡುತ್ತದೆ.

ಏಕ ನ್ಯಾಯಾಧೀಶರ ಆದೇಶದ ವಿರುದ್ಧ ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ನ್ಯಾಯಪೀಠ ಫೇಸ್‌ಬುಕ್ ಮತ್ತು ವಾಟ್ಸಾಪ್ ಮೇಲ್ಮನವಿ ವಿಚಾರಣೆ ನಡೆಸಿತು. ಏಕ ನ್ಯಾಯಾಧೀಶರ ಪೀಠವು, ವಾಟ್ಸಾಪ್‌ನ ಹೊಸ ನೀತಿಯ ಬಗ್ಗೆ ತನಿಖೆ ನಡೆಸಲು ನಿರ್ದೇಶಿಸುವ ಭಾರತದ ‘ನಿಯಂತ್ರಕ ಸ್ಪರ್ಧಾ ಆಯೋಗ’ (ಸಿಸಿಐ)ದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿತ್ತು.

ವಾಟ್ಸಾಪ್ ಪರವಾಗಿ ಹಾಜರಾದ ವಕೀಲ ಹರೀಶ್ ಸಾಲ್ವೆ ಅವರು “ಹೊಸ ಗೌಪ್ಯತಾ ನೀತಿಯನ್ನು ಸ್ಥಗಿತಗೊಳಿಸಲು ಸರ್ಕಾರ ಕೇಳಿ ಕೊಂಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ – ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

‘ಡೇಟಾ ಸಂರಕ್ಷಣಾ ಮಸೂದೆ’ ಬರುವವರೆಗೆ ನಾವು ಹೊಸ ಗೌಪ್ಯತಾ ನೀತಿಯನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳಿದ್ದೇವೆ. ಮಸೂದೆಯು ಯಾವಾಗ ಹೊರಬರುತ್ತದೆ ಎಂದು ನಮಗೆ ತಿಳಿದಿಲ್ಲ. ನಾವು ಇದನ್ನು ಸ್ವಲ್ಪ ಸಮಯದವರೆಗೆ ಮಾಡುವುದಿಲ್ಲ ಎಂದು ಹರೀಶ್‌ ನ್ಯಾಯಾಲಯಕ್ಕೆ ಹೇಳಿದ್ದಾರೆ.

“ನಾವು ಹೊಸ ಗೌಪ್ಯತಾ ನೀತಿಯನ್ನು ತಡೆಹಿಡಿಯಲು ಸ್ವಯಂಪ್ರೇರಣೆಯಿಂದ ಒಪ್ಪಿದ್ದೇವೆ. ಅದನ್ನು ಒಪ್ಪಿಕೊಳ್ಳಲೆ ಬೇಕು ಎಂದು ಬಳಕೆದಾದರನ್ನು ಒತ್ತಾಯಿಸುವುದಿಲ್ಲ” ಎಂದು ಹರೀಶ್ ಸಾಲ್ವೆ ವಾಟ್ಸಪ್‌ ಪರವಾಗಿ ಹೇಳಿದ್ದಾರೆ.

ಭಾರತದಲ್ಲಿ 53 ಕೋಟಿ ಬಳಕೆದಾರರನ್ನು ವಾಟ್ಸ್‌ಪ್‌ ಹೊಂದಿದ್ದು, ಅದು ತನ್ನ ಬಳಕೆದಾರರ ಡೇಟಾವನ್ನು ತನ್ನ ಮಾತೃಸಂಸ್ಥೆ ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುತ್ತಿದೆ ಎಂಬ ಬಗ್ಗೆ ಬಳಕೆದಾರರು ಕಳವಳ ವ್ಯಕ್ತಪಡಿಸಿದ್ದರು. ಇದರಿಂದಾಗಿ ಹೊಸ ಗೌಪ್ಯತಾ ನೀತಿಯನ್ನು ಪರಿಚಯಿಸಿದ ನಂತರ ವಾಟ್ಸಪ್‌ ತೀವ್ರ ಹಿನ್ನಡೆ ಅನುಭವಿಸಿತ್ತು. ಹಲವಾರು ಬಳಕೆದಾರರು ಸಿಗ್ನಲ್ ಮತ್ತು ಟೆಲಿಗ್ರಾಮ್‌ನಂತಹ ಅಪ್ಲಿಕೇಶನ್‌ಗಳಿಗೆ ತೆರಳಿದ್ದರು.

ಈ ಹಿಂದೆ ಆಪ್‌ ಬಳಸಬೇಕೆಂದರೆ ತನ್ನ ಹೊಸ ನೀತಿಯನ್ನು ಕಡ್ಡಾಯವಾಗಿ ಒಪ್ಪಿಕೊಳ್ಳಬೇಕು ಎಂದು ವಾಟ್ಸಪ್‌ ಹೇಳಿತ್ತು. ಆದರೆ ನಂತರ ಅದರಿಂದ ಹಿಂದೆ ಸರಿದಿತ್ತು. ಆದರೆ ಹೊಸ ಗೌಪ್ಯತಾ ನೀತಿಯನ್ನು ಒಪ್ಪಿಕೊಳ್ಳುವಂತೆ ಅದು ನೋಟಿಫಿಕೇಷನ್‌ ಕಳುಹಿಸುತ್ತಲೆ ಇದೆ.

ಈ ನೋಟಿಫಿಕೇಷನ್‌ ವಿರುದ್ದ ಸರ್ಕಾರವು ಹೊಸ ಅಫಿಡವಿಟ್ ಕೂಡಾ ಸಲ್ಲಿಸಿತ್ತು. ವಾಟ್ಸಪ್ ಕುತಂತ್ರದಿಂದ ತನ್ನ ಗೌಪ್ಯತಾ ನೀತಿಗೆ ಒಪ್ಪಿಗೆ ಪಡೆಯುತ್ತಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...