Homeಮುಖಪುಟಹೊಸ ಗೌಪ್ಯತಾ ನೀತಿಗೆ ತಾತ್ಕಾಲಿಕ ತಡೆ: ಹೈಕೋರ್ಟ್‌ನಲ್ಲಿ ವಾಟ್ಸಪ್

ಹೊಸ ಗೌಪ್ಯತಾ ನೀತಿಗೆ ತಾತ್ಕಾಲಿಕ ತಡೆ: ಹೈಕೋರ್ಟ್‌ನಲ್ಲಿ ವಾಟ್ಸಪ್

- Advertisement -
- Advertisement -

‘ಡೇಟಾ ಪ್ರೊಟೆಕ್ಷನ್ ಮಸೂದೆ’ ಜಾರಿಗೆ ಬರುವ ತನಕ ತಾತ್ಕಾಲಿಕವಾಗಿ ಗೌಪ್ಯತಾ ನೀತಿಯನ್ನು ತಡೆಹಿಡಿಯಲು ನಿರ್ಧರಿಸಿದೆ ಎಂದು ವಾಟ್ಸಪ್ ಶುಕ್ರವಾರ ತನ್ನ ಗೌಪ್ಯತಾ ನೀತಿಯ ಬಗ್ಗೆ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ವಾಟ್ಸಪ್‌ನ ಹೊಸ ಗೌಪ್ಯತಾ ನೀತಿಯು, ವಾಟ್ಸಪ್‌ನಲ್ಲಿ ನಾವು ನಡೆಸಿದ ಕೆಲವು ಸಂಭಾಷಣೆಗಳನ್ನು ಫೇಸ್‌ಬುಕ್‌ನಲ್ಲಿ ಜಾಹಿರಾತಿಗೆ ಬಳಸಲು ಅನುಮತಿ ನೀಡುತ್ತದೆ.

ಏಕ ನ್ಯಾಯಾಧೀಶರ ಆದೇಶದ ವಿರುದ್ಧ ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ನ್ಯಾಯಪೀಠ ಫೇಸ್‌ಬುಕ್ ಮತ್ತು ವಾಟ್ಸಾಪ್ ಮೇಲ್ಮನವಿ ವಿಚಾರಣೆ ನಡೆಸಿತು. ಏಕ ನ್ಯಾಯಾಧೀಶರ ಪೀಠವು, ವಾಟ್ಸಾಪ್‌ನ ಹೊಸ ನೀತಿಯ ಬಗ್ಗೆ ತನಿಖೆ ನಡೆಸಲು ನಿರ್ದೇಶಿಸುವ ಭಾರತದ ‘ನಿಯಂತ್ರಕ ಸ್ಪರ್ಧಾ ಆಯೋಗ’ (ಸಿಸಿಐ)ದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿತ್ತು.

ವಾಟ್ಸಾಪ್ ಪರವಾಗಿ ಹಾಜರಾದ ವಕೀಲ ಹರೀಶ್ ಸಾಲ್ವೆ ಅವರು “ಹೊಸ ಗೌಪ್ಯತಾ ನೀತಿಯನ್ನು ಸ್ಥಗಿತಗೊಳಿಸಲು ಸರ್ಕಾರ ಕೇಳಿ ಕೊಂಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ – ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

‘ಡೇಟಾ ಸಂರಕ್ಷಣಾ ಮಸೂದೆ’ ಬರುವವರೆಗೆ ನಾವು ಹೊಸ ಗೌಪ್ಯತಾ ನೀತಿಯನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳಿದ್ದೇವೆ. ಮಸೂದೆಯು ಯಾವಾಗ ಹೊರಬರುತ್ತದೆ ಎಂದು ನಮಗೆ ತಿಳಿದಿಲ್ಲ. ನಾವು ಇದನ್ನು ಸ್ವಲ್ಪ ಸಮಯದವರೆಗೆ ಮಾಡುವುದಿಲ್ಲ ಎಂದು ಹರೀಶ್‌ ನ್ಯಾಯಾಲಯಕ್ಕೆ ಹೇಳಿದ್ದಾರೆ.

“ನಾವು ಹೊಸ ಗೌಪ್ಯತಾ ನೀತಿಯನ್ನು ತಡೆಹಿಡಿಯಲು ಸ್ವಯಂಪ್ರೇರಣೆಯಿಂದ ಒಪ್ಪಿದ್ದೇವೆ. ಅದನ್ನು ಒಪ್ಪಿಕೊಳ್ಳಲೆ ಬೇಕು ಎಂದು ಬಳಕೆದಾದರನ್ನು ಒತ್ತಾಯಿಸುವುದಿಲ್ಲ” ಎಂದು ಹರೀಶ್ ಸಾಲ್ವೆ ವಾಟ್ಸಪ್‌ ಪರವಾಗಿ ಹೇಳಿದ್ದಾರೆ.

ಭಾರತದಲ್ಲಿ 53 ಕೋಟಿ ಬಳಕೆದಾರರನ್ನು ವಾಟ್ಸ್‌ಪ್‌ ಹೊಂದಿದ್ದು, ಅದು ತನ್ನ ಬಳಕೆದಾರರ ಡೇಟಾವನ್ನು ತನ್ನ ಮಾತೃಸಂಸ್ಥೆ ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುತ್ತಿದೆ ಎಂಬ ಬಗ್ಗೆ ಬಳಕೆದಾರರು ಕಳವಳ ವ್ಯಕ್ತಪಡಿಸಿದ್ದರು. ಇದರಿಂದಾಗಿ ಹೊಸ ಗೌಪ್ಯತಾ ನೀತಿಯನ್ನು ಪರಿಚಯಿಸಿದ ನಂತರ ವಾಟ್ಸಪ್‌ ತೀವ್ರ ಹಿನ್ನಡೆ ಅನುಭವಿಸಿತ್ತು. ಹಲವಾರು ಬಳಕೆದಾರರು ಸಿಗ್ನಲ್ ಮತ್ತು ಟೆಲಿಗ್ರಾಮ್‌ನಂತಹ ಅಪ್ಲಿಕೇಶನ್‌ಗಳಿಗೆ ತೆರಳಿದ್ದರು.

ಈ ಹಿಂದೆ ಆಪ್‌ ಬಳಸಬೇಕೆಂದರೆ ತನ್ನ ಹೊಸ ನೀತಿಯನ್ನು ಕಡ್ಡಾಯವಾಗಿ ಒಪ್ಪಿಕೊಳ್ಳಬೇಕು ಎಂದು ವಾಟ್ಸಪ್‌ ಹೇಳಿತ್ತು. ಆದರೆ ನಂತರ ಅದರಿಂದ ಹಿಂದೆ ಸರಿದಿತ್ತು. ಆದರೆ ಹೊಸ ಗೌಪ್ಯತಾ ನೀತಿಯನ್ನು ಒಪ್ಪಿಕೊಳ್ಳುವಂತೆ ಅದು ನೋಟಿಫಿಕೇಷನ್‌ ಕಳುಹಿಸುತ್ತಲೆ ಇದೆ.

ಈ ನೋಟಿಫಿಕೇಷನ್‌ ವಿರುದ್ದ ಸರ್ಕಾರವು ಹೊಸ ಅಫಿಡವಿಟ್ ಕೂಡಾ ಸಲ್ಲಿಸಿತ್ತು. ವಾಟ್ಸಪ್ ಕುತಂತ್ರದಿಂದ ತನ್ನ ಗೌಪ್ಯತಾ ನೀತಿಗೆ ಒಪ್ಪಿಗೆ ಪಡೆಯುತ್ತಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...